‘ಆಪರೇಷನ್ ಸಿಂಧೂರ್’ ಚಿತ್ರಕ್ಕೆ ಸಿಕ್ಕರು ಹೀರೋ; ಬಾಲಿವುಡ್ ನಟನಿಗೆ ಆಫರ್

‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹೊಸ ಚಿತ್ರ ‘ಆಪರೇಷನ್ ಸಿಂಧೂರ್’ ಘೋಷಿಸಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಆಧಾರಿತ ಈ ಚಿತ್ರಕ್ಕೆ ಭೂಷಣ್ ಕುಮಾರ್ ಜೊತೆ ನಿರ್ಮಿಸುತ್ತಿದ್ದಾರೆ. ದೇಶಭಕ್ತಿ ಚಿತ್ರಗಳತ್ತ ಒಲವು ತೋರಿಸುತ್ತಿರುವ ವರುಣ್ ಧವನ್ ಈ ಚಿತ್ರದ ನಾಯಕರಾಗುವ ಸಾಧ್ಯತೆ ಇದೆ.

‘ಆಪರೇಷನ್ ಸಿಂಧೂರ್’ ಚಿತ್ರಕ್ಕೆ ಸಿಕ್ಕರು ಹೀರೋ; ಬಾಲಿವುಡ್ ನಟನಿಗೆ ಆಫರ್
ವರುಣ್ ಧವನ್

Updated on: Apr 14, 2026 | 7:50 AM

2022ರಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಮತ್ತು 2025ರಲ್ಲಿ ‘ದಿ ಬೆಂಗಾಲ್ ಫೈಲ್ಸ್’ ಮೂಲಕ ಸುದ್ದಿ ಆದ ವಿವೇಕ್ ಅಗ್ನಿಹೋತ್ರಿ ಹೊಸ ಸಿನಿಮಾ ಮಾಡುತ್ತಿದ್ದಾರೆ. ಅದಕ್ಕೆ ‘ಆಪರೇಷನ್ ಸಿಂಧೂರ್’ ಎಂದು ಹೆಸರು ಇಟ್ಟಿದ್ದಾರೆ. ಈ ಚಿತ್ರವು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಆಧರಿಸಿದೆ. ವಿವೇಕ್ ಅವರು ಭೂಷಣ್ ಕುಮಾರ್ ಜೊತೆ ಸೇರಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ವರುಣ್ ಧವನ್ (Varun Dhawan) ಹೀರೋ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇತ್ತೀಚೆಗೆ ರಿಲೀಸ್ ಆದ ‘ಬಾರ್ಡರ್ 2’ ಸಿನಿಮಾ ಮೂಲಕ ವರುಣ್ ಧವನ್ ದೇಶಭಕ್ತಿ ಚಿತ್ರಗಳನ್ನು ತಾವು ಮಾಡಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಅಂದಿನಿಂದ, ಅವರಿಗೆ ಈ ರೀತಿಯ ಸಿನಿಮಾಗಳ ಆಫರ್‌ಗಳು ಬರುತ್ತಿವೆಯಂತೆ. ಆದಾಗ್ಯೂ, ನಟ ತಮ್ಮ ಮುಂದಿನ ಸಿನಿಮಾ ಆಯ್ಕೆ ಬಗ್ಗೆ ತರಾತುರಿ ತೋರಿಸುತ್ತಿಲ್ಲ.

ಈಗ ವರುಣ್ ಧವನ್ ‘ಆಪರೇಷನ್ ಸಿಂಧೂರ್’ ಚಿತ್ರಕ್ಕಾಗಿ ವಿವೇಕ್ ಅಗ್ನಿಹೋತ್ರಿ ಮತ್ತು ಭೂಷಣ್ ಕುಮಾರ್ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಈ ಸಿನಿಮಾ ಕಥೆಯು ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯಿಂದ ಪ್ರೇರಿತವಾಗಿದೆ. ಚಿತ್ರ ಘೋಷಣೆಯಾದಾಗಿನಿಂದ, ಅದರ ತಾರಾಗಣದ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇತ್ತು. ಈಗ ‘ಆಪರೇಷನ್ ಸಿಂಧೂರ್’ನಲ್ಲಿ ವರುಣ್ ಧವನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಬಹುದು ಎಂದು ವರದಿಯಾಗಿದೆ.

‘ಆಪರೇಷನ್ ಸಿಂಧೂರ್’ ಪಾತ್ರವನ್ನು ವರುಣ್ ಧವನ್ ಅವರಿಗೆ ನೀಡಲಾಗಿದ್ದು, ಅವರು ನಾಯಕನ ಪಾತ್ರದಲ್ಲಿ ನಟಿಸಲು ಆಸಕ್ತಿ ವ್ಯಕ್ತಪಡಿಸಿದ್ದಾರೆ ಎಂದು ಬಾಲಿವುಡ್ ಹಂಗಾಮ ವರದಿ ಮಾಡಿದೆ. ವರುಣ್​​ಗೆ ಕಥೆ ಇಷ್ಟವಾಗಿದೆ ಎನ್ನಲಾಗಿದೆ. ವರುಣ್ ಧವನ್ ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

ಇದನ್ನೂ ಓದಿ: ಭೂಗತ ಲೋಕದಿಂದ ಬೆದರಿಕೆ: ಭಯಾನಕ ಅನುಭವ ಬಿಚ್ಚಿಟ್ಟ ನಟ ವರುಣ್ ಧವನ್

ವರುಣ್ ಧವನ್ ತಮ್ಮ ಮಗಳು ಲಾರಾ ಜೊತೆ ಸಮಯ ಕಳೆಯಲು ನಟನೆಯಿಂದ ವಿರಾಮ ತೆಗೆದುಕೊಂಡಿದ್ದಾರೆ ಎಂದು ವರದಿ ಆಗಿದೆ. ಅವರು ಈಗ ಚಿತ್ರಗಳಿಗೆ ಸಹಿ ಹಾಕಿ ಕೆಲಸಕ್ಕೆ ಮರಳಲು ಸಿದ್ಧರಾಗಿದ್ದಾರೆ. ವರುಣ್ ಪ್ರಸ್ತುತ ತಮ್ಮ ‘ಹೇ ಜವಾನಿ ತೋ ಇಷ್ಕ್ ಹೋನಾ ಹೇ’ ಚಿತ್ರದ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಮೇ 22ರಂದು ಬಿಡುಗಡೆಯಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us