AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಸ್ಕರ್​’ ಮೂಲಕ ‘ದಿ ವ್ಯಾಕ್ಸಿನ್ ವಾರ್​’ ಚಿತ್ರಕ್ಕೆ ವಿಶೇಷ ಗೌರವ; ವಿವೇಕ್​ ಅಗ್ನಿಹೋತ್ರಿ ಗುಡ್​ ನ್ಯೂಸ್​

‘ದಿ ಅಕಾಡೆಮಿ ಆಫ್​ ಮೋಷನ್​ ಪಿಕ್ಚರ್​ ಆರ್ಟ್ಸ್​ ಆ್ಯಂಡ್​ ಸೈನ್ಸ್​’ ಸಂಸ್ಥೆಯು ಗಮನಾರ್ಹ ಸಿನಿಮಾಗಳ ಸ್ಕ್ರಿಪ್ಟ್​ಗಳನ್ನು ಸಂಗ್ರಹಿಸಿ, ಲೈಬ್ರರಿಯಲ್ಲಿ ಇಡುತ್ತದೆ. ಅಂಥ ಚಿತ್ರಗಳ ಸಾಲಿಗೆ ‘ದಿ ವ್ಯಾಕ್ಸಿನ್​ ವಾರ್​’ ಕೂಡ ಸೇರಿರುವುದು ವಿಶೇಷ. ಈ ಸುದ್ದಿಯನ್ನು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡು ವಿವೇಕ್​ ಅಗ್ನಿಹೋತ್ರಿ ಸಂಭ್ರಮಿಸಿದ್ದಾರೆ.

‘ಆಸ್ಕರ್​’ ಮೂಲಕ ‘ದಿ ವ್ಯಾಕ್ಸಿನ್ ವಾರ್​’ ಚಿತ್ರಕ್ಕೆ ವಿಶೇಷ ಗೌರವ; ವಿವೇಕ್​ ಅಗ್ನಿಹೋತ್ರಿ ಗುಡ್​ ನ್ಯೂಸ್​
ದಿ ವ್ಯಾಕ್ಸಿನ್​ ವಾರ್​
ಮದನ್​ ಕುಮಾರ್​
|

Updated on: Oct 12, 2023 | 3:12 PM

Share

ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ಬಹಳ ನಿರೀಕ್ಷೆ ಇಟ್ಟುಕೊಂಡು ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ (The Vaccine War) ಮಾಡಿದರು. ಸೆಪ್ಟೆಂಬರ್​ 28ರಂದು ಈ ಸಿನಿಮಾ ಬಿಡುಗಡೆ ಆಯಿತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಈ ಚಿತ್ರಕ್ಕೆ ಕಲೆಕ್ಷನ್​ ಆಗಲಿಲ್ಲ. ಹಾಗಂತ ವಿವೇಕ್​ ಅಗ್ನಿಹೋತ್ರಿ ಅವರು ತೀರಾ ಬೇಸರ ಮಾಡಿಕೊಳ್ಳುವ ಅಗತ್ಯ ಇಲ್ಲ. ಯಾಕೆಂದರೆ, ಈಗ ಈ ಸಿನಿಮಾಗೆ ‘ಆಸ್ಕರ್​’ (Oscar) ಕಡೆಯಿಂದ ವಿಶೇಷ ಮನ್ನಣೆ ಸಿಕ್ಕಿದೆ. ಆ ಸುದ್ದಿಯನ್ನು ಸ್ವತಃ ವಿವೇಕ್​ ಅಗ್ನಿಹೋತ್ರಿ ಅವರು ಹಂಚಿಕೊಂಡಿದ್ದಾರೆ. ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾದ ಸ್ಕ್ರಿಪ್ಟ್​ ಕಳಿಸಿಕೊಡುವಂತೆ ಅಕಾಡೆಮಿ ಕಡೆಯಿಂದ ಸಂದೇಶ ಬಂದಿದೆ. ಇದು ಚಿತ್ರತಂಡದ ಸಂಸತಕ್ಕೆ ಕಾರಣ ಆಗಿದೆ.

ಆಸ್ಕರ್​ ಪ್ರಶಸ್ತಿ ನೀಡುವ ‘ದಿ ಅಕಾಡೆಮಿ ಆಫ್​ ಮೋಷನ್​ ಪಿಕ್ಚರ್​ ಆರ್ಟ್ಸ್​ ಆ್ಯಂಡ್​ ಸೈನ್ಸ್​’ ಸಂಸ್ಥೆಯು ಕೆಲವು ಗಮನಾರ್ಹ ಸಿನಿಮಾಗಳ ಸ್ಕ್ರಿಪ್ಟ್​ಗಳನ್ನು ಸಂಗ್ರಹಿಸುತ್ತದೆ. ಆ ರೀತಿ ಸಂಗ್ರಹಿಸಿದ ಚಿತ್ರಕಥೆಯನ್ನು ಲೈಬ್ರರಿಯಲ್ಲಿ ಇಡಲಾಗುತ್ತದೆ. ಅಂಥ ಸಿನಿಮಾಗಳ ಸಾಲಿಗೆ ‘ದಿ ವ್ಯಾಕ್ಸಿನ್​ ವಾರ್​’ ಚಿತ್ರ ಕೂಡ ಸೇರಿರುವುದು ವಿಶೇಷ. ತಮ್ಮ ಸಿನಿಮಾಗೆ ಈ ರೀತಿಯ ಮನ್ನಣೆ ಸಿಕ್ಕಿದ್ದನ್ನು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡು ವಿವೇಕ್​ ಅಗ್ನಿಹೋತ್ರಿ ಸಂಭ್ರಮಿಸಿದ್ದಾರೆ.

ಕೊವಿಡ್​-19 ಹಾವಳಿ ಮಿತಿ ಮೀರಿದ ಸಂದರ್ಭದಲ್ಲಿ ಭಾರತವು ಸ್ವತಂತ್ರವಾಗಿ ವ್ಯಾಕ್ಸಿನ್​ ಕಂಡು ಹಿಡಿದ ಕಥೆಯನ್ನು ಇಟ್ಟುಕೊಂಡು ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ ತಯಾರಾಗಿದೆ. ಈ ಸಿನಿಮಾ ಮೂಲಕ ವಿಜ್ಞಾನಿಗಳಿಗೆ ಗೌರವ ಸಲ್ಲಿಸಲಾಗಿದೆ. ವಿವೇಕ್​ ಅಗ್ನಿಹೋತ್ರಿ ಅವರ ಪತ್ನಿ ಪಲ್ಲವಿ ಜೋಶಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಪಾತ್ರವರ್ಗದಲ್ಲಿ ನಾನಾ ಪಾಟೇಕರ್​, ಸಪ್ತಮಿ ಗೌಡ, ಪಲ್ಲವಿ ಜೋಶಿ, ಗಿರಿಜಾ ಓಕ್​, ರೈಮಾ ಸೇನ್​ ಸೇರಿದಂತೆ ಹಲವರು ನಟಿಸಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ​ ಈ ಸಿನಿಮಾ ಹಿಟ್​ ಆಗದಿದ್ದರೂ ಕೂಡ ಆಸ್ಕರ್​ ಸಂಸ್ಥೆಯಿಂದ ಗೌರವ ಸಿಕ್ಕಿರುವುದಕ್ಕೆ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

‘ದಿ ವ್ಯಾಕ್ಸಿನ್​ ವಾರ್​’ ಕಳಪೆ ಕಲೆಕ್ಷನ್​; ಚಿತ್ರಮಂದಿರದ ಎದುರು ಜನರ ಪ್ರತಿಭಟನೆ: ವಿಡಿಯೋ ವೈರಲ್​

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ವಿವೇಕ್​ ಅಗ್ನಿಹೋತ್ರಿ ಅವರ ಹವಾ ಹೆಚ್ಚಿತು. ದೇಶಾದ್ಯಂತ ಅವರು ಜನಪ್ರಿಯತೆ ಪಡೆದರು. ಆ ಸಿನಿಮಾದ ಅಭೂತಪೂರ್ವ ಗೆಲುವಿನ ಬಳಿಕ ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ ಕೈಗೆತ್ತಿಕೊಂಡಿದ್ದರಿಂದ ಭಾರಿ ನಿರೀಕ್ಷೆ ಸೃಷ್ಟಿ ಆಗಿತ್ತು. ಆದರೆ ಎಲ್ಲರ ನಿರೀಕ್ಷೆ ತಲೆ ಕೆಳಗಾಯಿತು. 2022ರಲ್ಲಿ ಬಿಡುಗಡೆ ಆಗಿದ್ದ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ ಬರೋಬ್ಬರಿ 252 ಕೋಟಿ ರೂಪಾಯಿ ಗಳಿಸಿದ್ದರೆ, 2023ರಲ್ಲಿ ತೆರೆಕಂಡ ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ ಕೇವಲ 5.50 ಕೋಟಿ ರೂಪಾಯಿಗೆ ಆಟ ಮುಗಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು