AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಲ್ಲವೂ ಮುಗಿದಂತೆ ಅನಿಸಿತ್ತು’: ಸಲ್ಲು ಜೊತೆಗಿನ ದ್ವೇಷದ ದಿನಗಳನ್ನು ನೆನೆದ್ರಾ ವಿವೆಕ್ ಒಬೆರಾಯ್?

ತಮ್ಮ ಹೊಸ ವೆಬ್ ಸರಣಿಯ ಪ್ರಚಾರದ ವೇಳೆ ಮಾತನಾಡಿರುವ ವಿವೇಕ್ ಒಬೆರಾಯ್, ಸಲ್ಮಾನ್ ಖಾನ್ ಜೊತೆಗಿನ ಜಗಳದ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ.

‘ಎಲ್ಲವೂ ಮುಗಿದಂತೆ ಅನಿಸಿತ್ತು’: ಸಲ್ಲು ಜೊತೆಗಿನ ದ್ವೇಷದ ದಿನಗಳನ್ನು ನೆನೆದ್ರಾ ವಿವೆಕ್ ಒಬೆರಾಯ್?
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.|

Updated on: Jan 13, 2024 | 6:57 PM

Share

ಒಂದು ಕಾಲದಲ್ಲಿ ನಟಿ ಐಶ್ವರ್ಯಾ ರೈ (Aishwarya Rai) ಮತ್ತು ನಟ ವಿವೇಕ್ ಒಬೆರಾಯ್ (Vivek Oberoi) ನಡುವಿನ ಸಂಬಂಧವು ಸಾಕಷ್ಟು ಚರ್ಚೆಯಾಗಿತ್ತು. ನಟ ಸಲ್ಮಾನ್ ಖಾನ್ ಅವರೊಂದಿಗೆ ಇದ್ದ ಸಂಬಂಧ ಮುರಿದುಬಿದ್ದ ನಂತರ ವಿವೇಕ್ ಅವರು ಐಶ್ವರ್ಯಾ ಅವರ ಜೀವನವನ್ನು ಪ್ರವೇಶಿಸಿದರು. ಈ ಕಾರಣಕ್ಕೆ ವಿವೇಕ್ ಮೇಲೆ ಸಲ್ಮಾನ್ ಖಾನ್ ಸಾಕಷ್ಟು ದ್ವೇಷ ಸಾಧಿಸಿದರು. ಇದರಿಂದ ವಿವೇಕ್‌ಗೆ ತುಂಬಾ ನಷ್ಟವಾಯಿತು. ಅದಕ್ಕಾಗಿ ವಿವೇಕ್ ಭಾರೀ ಬೆಲೆ ತೆರಬೇಕಾಯಿತು. ಅವರು ಆಫರ್ ಕಳೆದುಕೊಂಡರು. ಈಗ ಅವರ ವೃತ್ತಿಜೀವನವು ಮತ್ತೆ ಟ್ರ್ಯಾಕ್ಗೆ ಮರಳುತ್ತಿದೆ. ಅವರು ‘ಇಂಡಿಯನ್ ಪೊಲೀಸ್ ಫೋರ್ಸ್’ ವೆಬ್ ಸರಣಿಯಲ್ಲಿ ನಟಿಸುತ್ತಿದ್ದಾರೆ. ಜನವರಿ 19ಕ್ಕೆ ಇದು ರಿಲೀಸ್ ಆಗುತ್ತಿದ್ದು, ಇದಕ್ಕಾಗಿ ಸಾಕಷ್ಟು ಕಡೆಗಳಲ್ಲಿ ಸಂದರ್ಶನ ನೀಡುತ್ತಿದ್ದಾರೆ.

‘ಇಂಡಿಯನ್ ಪೊಲೀಸ್ ಫೋರ್ಸ್’ ವೆಬ್ ಸರಣಿಯ ಮೂಲಕ ವಿವೇಕ್ ಮತ್ತೆ ಜನಪ್ರಿಯತೆ ಪಡೆಯುವ ಉದ್ದೇಶ ಇಟ್ಟುಕೊಂಡಿದ್ದಾರೆ. ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ವಿವೇಕ್ ಹಿಂದೆ ನಡೆದ ಘಟನೆಯ ಬಗ್ಗೆ ಮಾತನಾಡಿದ್ದಾರೆ. ಹಲವು ವಿಚಾರಗಳ ಬಗ್ಗೆ ಅವರು ಮಾತನಾಡಿದ್ದಾರೆ. ‘ಈಗ ನೀವು ಎದುರಿಸುತ್ತಿರುವ ಹಲವು ಸನ್ನಿವೇಶಗಳನ್ನು ನಾನು ಎದುರಿಸಿದ್ದೇನೆ. ಶಾಲೆ, ಕಾಲೇಜು ಅಥವಾ ಕೆಲಸ ಮಾಡುವ ಸ್ಥಳದಲ್ಲಿ ನಿಮಗೆ ಹಲವು ಘಟನೆಗಳು ನಡೆಯುತ್ತವೆ. ಜನರು ಯಾವಾಗಲೂ ನಿಮ್ಮನ್ನು ಟ್ರೋಲ್ ಮಾಡುತ್ತಾರೆ. ಇದು ನಿಮ್ಮ ಮೇಲೆ ಪರಿಣಾಮ ಬೀರುತ್ತದೆ. ಆದರೆ ಸಂಭವಿಸುವ ಎಲ್ಲಾ ಘಟನೆಗಳಿಂದ ನೀವು ಬೇಸರ ಮಾಡಿಕೊಳ್ಳಬೇಕೇ? ಅದು ಸಂಪೂರ್ಣವಾಗಿ ನಿಮ್ಮ ಕೈಯಲ್ಲಿದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ:ಕಾರು ಅಪಘಾತ, ಕೃಷ್ಣ ಮೃಗ ಹತ್ಯೆ; ಸಲ್ಮಾನ್ ಖಾನ್ ಮಾಡಿಕೊಂಡ ವಿವಾದಗಳು ಒಂದೆರಡಲ್ಲ

‘ನನ್ನನ್ನು ದ್ವೇಷಿಸುವ ಅನೇಕ ಜನರಿದ್ದರು. ಆದರೆ ನಾನು ಅದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಆಗ ನನಗೆ ಬೇಸರವಾಯಿತು. ಎಲ್ಲವೂ ಮುಗಿದಂತೆ ಅನಿಸಿತು.. ಆದರೆ ನಂತರ ನಾನು ಚೇತರಿಸಿಕೊಂಡೆ. ಇನ್ನು ಮುಂದೆ ನನ್ನನ್ನು ನಾನು ನೋಯಿಸಿಕೊಳ್ಳಬಾರದು ಎಂದು ನಿರ್ಧರಿಸಿದೆ’ ಎಂದು ವಿವೇಕ್​ ಹೇಳಿದ್ದಾರೆ. ಈ ಮೊದಲು ‘ಕಾಫಿ ವಿತ್ ಕರಣ್’ ಕಾರ್ಯಕ್ರಮದಲ್ಲಿ ವಿವೇಕ್ ಆಗಮಿಸಿದ್ದರು. ಈ ವೇಳೆ ನಟಿ ಐಶ್ವರ್ಯಾ ರೈ ಜೊತೆಗಿನ ಸಂಬಂಧವನ್ನು ವಿವೇಕ್ ಖಚಿತಪಡಿಸಿದ್ದರು. ಆದರೆ ಈ ಬಗ್ಗೆ ಐಶ್ವರ್ಯಾ ರೈ ಯಾವುದೇ ಹೇಳಿಕೆ ನೀಡಿರಲಿಲ್ಲ.

ಐಶ್ವರ್ಯಾ ಅವರ ಹೆಸರು ಮೊದಲು ಸಲ್ಮಾನ್ ಖಾನ್ ಮತ್ತು ನಂತರ ವಿವೇಕ್ ಒಬೆರಾಯ್ ಜೊತೆ ಲಿಂಕ್ ಆಗಿತ್ತು. ನಂತರ ನಟ ಅಭಿಷೇಕ್ ಬಚ್ಚನ್ ಅವರು ಐಶ್ವರ್ಯಾ ರೈ ಅವರ ಜೀವನದಲ್ಲಿ ಪ್ರವೇಶಿಸಿದರು. ಹಲವು ವರ್ಷಗಳ ಕಾಲ ಪರಸ್ಪರ ಡೇಟಿಂಗ್ ಮಾಡಿದ ನಂತರ ಐಶ್ವರ್ಯಾ ಮತ್ತು ಅಭಿಷೇಕ್ 2007ರಲ್ಲಿ ವಿವಾಹವಾದರು. ಮದುವೆಯ ನಂತರ, ಐಶ್ವರ್ಯಾ 2011ರಲ್ಲಿ ಮಗಳಿಗೆ ಜನ್ಮನೀಡಿದರು. ಮಗಳಿಗೆ ಆರಾಧ್ಯ ಬಚ್ಚನ್‌ ಎಂದು ಹೆಸರು ಇಡಲಾಗಿದೆ. ಇತ್ತೀಚೆಗೆ ಐಶ್ವರ್ಯಾ ರೈ ಅವರು ವಿಚ್ಛೇದ ಪಡೆಯುತ್ತಾರೆ ಎಂದು ಸುದ್ದಿ ಆಗುತ್ತಿದೆ. ಆದರೆ, ಇದನ್ನು ಐಶ್ವರ್ಯಾ ರೈ ಅವರು ಪದೇ ಪದೇ ಸುಳ್ಳು ಎಂದು ಸಾಬೀತು ಮಾಡುತ್ತಿದ್ದಾರೆ.

ಇಂಡಿಯನ್ ಪೊಲೀಸ್ ಫೋರ್ಸ್ ಬಗ್ಗೆ

‘ಇಂಡಿಯನ್ ಪೊಲೀಸ್ ಫೋರ್ಸ್’ ಸೀರಿಸ್​ಗೆ ರೋಹಿತ್ ಶೆಟ್ಟಿ ನಿರ್ದೇಶನ ಮಾಡುತ್ತಿದ್ದಾರೆ. ಅವರ ನಿರ್ದೇಶನದ ಮೊದಲ ಸೀರಿಸ್ ಇದು. ಇದರಲ್ಲಿ ಸಿದ್ದಾರ್ಥ್ ಮಲ್ಹೋತ್ರ, ಶಿಲ್ಪಾ ಶೆಟ್ಟಿ, ವಿವೆಕ್ ಒಬೆರಾಯ್ ಮೊದಲಾದವರು ನಟಿಸಿದ್ದಾರೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಜನವರಿ 19ರಂದು ಈ ಸೀರಿಸ್ ರಿಲೀಸ್ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ