AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಗೆಟಿವ್ ವಿಮರ್ಶೆ ಮಧ್ಯೆಯೂ ಭಾರೀ ಗಳಿಕೆ ಮಾಡಿದ ‘ವಾರ್ 2’; ಕೈ ಕೊಟ್ಟ ಹಿಂದಿ ಮಂದಿ

‘ವಾರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಮೊತ್ತ ಗಳಿಸಿದೆ. ಆದರೆ, ಟೀಕಾಕಾರರಿಂದ ಭಾರೀ ಟೀಕೆಗೆ ಒಳಗಾಗಿದೆ. ಹೃತಿಕ್ ರೋಷನ್ ಮತ್ತು ಜೂನಿಯರ್ ಎನ್ಟಿಆರ್ ಅಭಿನಯದ ಈ ಚಿತ್ರದಲ್ಲಿ ಕಥಾವಸ್ತುವಿನ ಕೊರತೆಯೇ ನಕಾರಾತ್ಮಕ ವಿಮರ್ಶೆಗಳಿಗೆ ಕಾರಣ ಎನ್ನಲಾಗಿದೆ. ಆದರೂ, ತಾರಾಗಣ ಮತ್ತು ಹೈಪ್‌ನಿಂದಾಗಿ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡಿದೆ.

ನೆಗೆಟಿವ್ ವಿಮರ್ಶೆ ಮಧ್ಯೆಯೂ ಭಾರೀ ಗಳಿಕೆ ಮಾಡಿದ ‘ವಾರ್ 2’; ಕೈ ಕೊಟ್ಟ ಹಿಂದಿ ಮಂದಿ
ವಾರ್ 2
ರಾಜೇಶ್ ದುಗ್ಗುಮನೆ
|

Updated on: Aug 15, 2025 | 7:29 AM

Share

‘ವಾರ್ 2’ ಸಿನಿಮಾದಲ್ಲಿ (War 2 Collection) ಹೃತಿಕ್ ರೋಷನ್, ಜೂನಿಯರ್ ಎನ್​ಟಿಆರ್ ಹಾಗೂ ಕಿಯಾರಾ ಅಡ್ವಾಣಿ ನಟಿಸಿದ್ದಾರೆ. ಈ ಸಿನಿಮಾ ಸೂಪರ್ ಹಿಟ್ ಆಗಲಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಅಲ್ಲಾಗಿದ್ದೇ ಬೇರೆ. ಚಿತ್ರ ಎಲ್ಲ ಕಡೆಗಳಿಂದ ಹೀನಾಯ ವಿಮರ್ಶೆ ಪಡೆದಿದೆ. ಆದಾಗ್ಯೂ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಅಬ್ಬರದ ಗಳಿಕೆ ಮಾಡುತ್ತಿದೆ. ಇದಕ್ಕೆ ಕಾರಣ ಚಿತ್ರದ ಹೈಪ್ ಹಾಗೂ ಸಿನಿಮಾದಲ್ಲಿರೋ ತಾರಾಗಣ.

ಹೃತಿಕ್ ರೋಷನ್ ಅವರು ‘ವಾರ್’ ಚಿತ್ರದಲ್ಲಿ ನಟಿಸಿದ್ದರು. ಅದರ ಮುಂದುವರಿದ ಭಾಗ ಆಗಿ ‘ವಾರ್ 2’ ಸಿನಿಮಾ ಮೂಡಿ ಬಂದಿದೆ. ಈ ಚಿತ್ರಕ್ಕೆ ದಕ್ಷಿಣದ ಖ್ಯಾತ ಹೀರೋ ಜೂನಿಯರ್ ಎನ್​ಟಿಆರ್ ನಟಿಸಿದ್ದಾರೆ. ಇದರಿಂದ ಸಿನಿಮಾಗೆ ಮೈಲೇಜ್ ಸಿಗಬಹುದು ಎಂದು ಊಹಿಸಲಾಗಿತ್ತು. ಆದರೆ, ಚಿತ್ರದಲ್ಲಿ ಕಥೆಯೇ ಇಲ್ಲ. ಇದು ತಂಡದ ಹಿನ್ನಡೆಗೆ ಕಾರಣ ಆಗಿದೆ.

ಇದನ್ನೂ ಓದಿ
Image
ರಜನಿ ಅಬ್ಬರಕ್ಕೆ ಬಾಕ್ಸ್ ಆಫೀಸ್ ಉಡೀಸ್; ‘ಕೂಲಿ’ ಮೊದಲ ದಿನದ ಗಳಿಕೆ ಎಷ್ಟು?
Image
ಗೌತಮ್ ಕೈಯಲ್ಲಿ ತಾಯಿಯ ಹಿಸ್ಟರಿ; ದುರ್ಗಾಗೆ ಬಂತು ಅಕ್ಕನ ನೆನಪು
Image
20 ದಿನಕ್ಕೆ ‘ಕಾಟೇರ’ ಕಲೆಕ್ಷನ್ ದಾಖಲೆ ಮುರಿದ ‘ಸು ಫ್ರಮ್ ಸೋ’
Image
ಶ್ವಾನಗಳ ವಿಚಾರದಲ್ಲಿ ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ರಾಜ್ ಹೇಳೋದೇನು?

ವಾರ್ 2 ವಿಮರ್ಶೆ ಟ್ವೀಟ್

ಈ ಚಿತ್ರ ಮೊದಲ ದಿನ ಬರೋಬ್ಬರಿ 52 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ಒಳ್ಳೆಯ ಓಪನಿಂಗ್. ಆದರೆ, ಇದು ಹಿಂದಿ ಹಾಗೂ ತೆಲುಗು ಭಾಷೆಯಿಂದ ಆದ ಗಳಿಕೆ. ಈ ಸಿನಿಮಾಗೆ ಹಿಂದಿಯಲ್ಲಿ 29 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಬಾಲಿವುಡ್ ದೃಷ್ಟಿಯಿಂದ ಇದು ಕಡಿಮೆಯೇ. ಆದರೆ, ತೆಲುಗು ಮಂದಿ ಚಿತ್ರದ ಕೈ ಹಿಡಿದ್ದಾರೆ. ತೆಲುಗಿನಿಂದ ಈ ಚಿತ್ರಕ್ಕೆ 23 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಜೂನಿಯರ್ ಎನ್​ಟಿಆರ್​ ಸಿನಿಮಾದಲ್ಲಿರೋದು ಸಹಕಾರಿ ಆಗಿದೆ.

ಇದನ್ನೂ ಓದಿ: ರಜನಿಕಾಂತ್ ಅಬ್ಬರಕ್ಕೆ ಬಾಕ್ಸ್ ಆಫೀಸ್ ಉಡೀಸ್; ‘ಕೂಲಿ’ ಮೊದಲ ದಿನದ ಗಳಿಕೆ ಎಷ್ಟು?

‘ವಾರ್ 2’ ಸಿನಿಮಾ ವಿಮರ್ಶೆಯಲ್ಲಿ ಸೋತಿದೆ. ಚಿತ್ರದಲ್ಲಿ ಗಟ್ಟಿ ಕಥೆ ಇಲ್ಲ ಕೇವಲ ಆ್ಯಕ್ಷನ್ ಅಬ್ಬರ ಎಂದು ಅನೇಕರು ಹೇಳಿದ್ದಾರೆ. ಎರಡು ಸ್ಟಾರ್​ ಹೀರೋಗಳು ಇದ್ದ ಹೊರತಾಗಿಯೂ ಸಿನಿಮಾ ವಿಮರ್ಶೆಯಲ್ಲಿ ಸೋತಿದೆ. ನಿರ್ದೇಶಕ ಅಯಾನ್ ಮುಖರ್ಜಿ ಅವರು ನಿರ್ದೇಶನದಲ್ಲಿ ಸೋತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ