AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಗೆಟಿವ್ ವಿಮರ್ಶೆ ಮಧ್ಯೆಯೂ ಭಾರೀ ಗಳಿಕೆ ಮಾಡಿದ ‘ವಾರ್ 2’; ಕೈ ಕೊಟ್ಟ ಹಿಂದಿ ಮಂದಿ

‘ವಾರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಮೊತ್ತ ಗಳಿಸಿದೆ. ಆದರೆ, ಟೀಕಾಕಾರರಿಂದ ಭಾರೀ ಟೀಕೆಗೆ ಒಳಗಾಗಿದೆ. ಹೃತಿಕ್ ರೋಷನ್ ಮತ್ತು ಜೂನಿಯರ್ ಎನ್ಟಿಆರ್ ಅಭಿನಯದ ಈ ಚಿತ್ರದಲ್ಲಿ ಕಥಾವಸ್ತುವಿನ ಕೊರತೆಯೇ ನಕಾರಾತ್ಮಕ ವಿಮರ್ಶೆಗಳಿಗೆ ಕಾರಣ ಎನ್ನಲಾಗಿದೆ. ಆದರೂ, ತಾರಾಗಣ ಮತ್ತು ಹೈಪ್‌ನಿಂದಾಗಿ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡಿದೆ.

ನೆಗೆಟಿವ್ ವಿಮರ್ಶೆ ಮಧ್ಯೆಯೂ ಭಾರೀ ಗಳಿಕೆ ಮಾಡಿದ ‘ವಾರ್ 2’; ಕೈ ಕೊಟ್ಟ ಹಿಂದಿ ಮಂದಿ
ವಾರ್ 2
ರಾಜೇಶ್ ದುಗ್ಗುಮನೆ
|

Updated on: Aug 15, 2025 | 7:29 AM

Share

‘ವಾರ್ 2’ ಸಿನಿಮಾದಲ್ಲಿ (War 2 Collection) ಹೃತಿಕ್ ರೋಷನ್, ಜೂನಿಯರ್ ಎನ್​ಟಿಆರ್ ಹಾಗೂ ಕಿಯಾರಾ ಅಡ್ವಾಣಿ ನಟಿಸಿದ್ದಾರೆ. ಈ ಸಿನಿಮಾ ಸೂಪರ್ ಹಿಟ್ ಆಗಲಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಅಲ್ಲಾಗಿದ್ದೇ ಬೇರೆ. ಚಿತ್ರ ಎಲ್ಲ ಕಡೆಗಳಿಂದ ಹೀನಾಯ ವಿಮರ್ಶೆ ಪಡೆದಿದೆ. ಆದಾಗ್ಯೂ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಅಬ್ಬರದ ಗಳಿಕೆ ಮಾಡುತ್ತಿದೆ. ಇದಕ್ಕೆ ಕಾರಣ ಚಿತ್ರದ ಹೈಪ್ ಹಾಗೂ ಸಿನಿಮಾದಲ್ಲಿರೋ ತಾರಾಗಣ.

ಹೃತಿಕ್ ರೋಷನ್ ಅವರು ‘ವಾರ್’ ಚಿತ್ರದಲ್ಲಿ ನಟಿಸಿದ್ದರು. ಅದರ ಮುಂದುವರಿದ ಭಾಗ ಆಗಿ ‘ವಾರ್ 2’ ಸಿನಿಮಾ ಮೂಡಿ ಬಂದಿದೆ. ಈ ಚಿತ್ರಕ್ಕೆ ದಕ್ಷಿಣದ ಖ್ಯಾತ ಹೀರೋ ಜೂನಿಯರ್ ಎನ್​ಟಿಆರ್ ನಟಿಸಿದ್ದಾರೆ. ಇದರಿಂದ ಸಿನಿಮಾಗೆ ಮೈಲೇಜ್ ಸಿಗಬಹುದು ಎಂದು ಊಹಿಸಲಾಗಿತ್ತು. ಆದರೆ, ಚಿತ್ರದಲ್ಲಿ ಕಥೆಯೇ ಇಲ್ಲ. ಇದು ತಂಡದ ಹಿನ್ನಡೆಗೆ ಕಾರಣ ಆಗಿದೆ.

ಇದನ್ನೂ ಓದಿ
Image
ರಜನಿ ಅಬ್ಬರಕ್ಕೆ ಬಾಕ್ಸ್ ಆಫೀಸ್ ಉಡೀಸ್; ‘ಕೂಲಿ’ ಮೊದಲ ದಿನದ ಗಳಿಕೆ ಎಷ್ಟು?
Image
ಗೌತಮ್ ಕೈಯಲ್ಲಿ ತಾಯಿಯ ಹಿಸ್ಟರಿ; ದುರ್ಗಾಗೆ ಬಂತು ಅಕ್ಕನ ನೆನಪು
Image
20 ದಿನಕ್ಕೆ ‘ಕಾಟೇರ’ ಕಲೆಕ್ಷನ್ ದಾಖಲೆ ಮುರಿದ ‘ಸು ಫ್ರಮ್ ಸೋ’
Image
ಶ್ವಾನಗಳ ವಿಚಾರದಲ್ಲಿ ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ರಾಜ್ ಹೇಳೋದೇನು?

ವಾರ್ 2 ವಿಮರ್ಶೆ ಟ್ವೀಟ್

ಈ ಚಿತ್ರ ಮೊದಲ ದಿನ ಬರೋಬ್ಬರಿ 52 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ಒಳ್ಳೆಯ ಓಪನಿಂಗ್. ಆದರೆ, ಇದು ಹಿಂದಿ ಹಾಗೂ ತೆಲುಗು ಭಾಷೆಯಿಂದ ಆದ ಗಳಿಕೆ. ಈ ಸಿನಿಮಾಗೆ ಹಿಂದಿಯಲ್ಲಿ 29 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಬಾಲಿವುಡ್ ದೃಷ್ಟಿಯಿಂದ ಇದು ಕಡಿಮೆಯೇ. ಆದರೆ, ತೆಲುಗು ಮಂದಿ ಚಿತ್ರದ ಕೈ ಹಿಡಿದ್ದಾರೆ. ತೆಲುಗಿನಿಂದ ಈ ಚಿತ್ರಕ್ಕೆ 23 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಜೂನಿಯರ್ ಎನ್​ಟಿಆರ್​ ಸಿನಿಮಾದಲ್ಲಿರೋದು ಸಹಕಾರಿ ಆಗಿದೆ.

ಇದನ್ನೂ ಓದಿ: ರಜನಿಕಾಂತ್ ಅಬ್ಬರಕ್ಕೆ ಬಾಕ್ಸ್ ಆಫೀಸ್ ಉಡೀಸ್; ‘ಕೂಲಿ’ ಮೊದಲ ದಿನದ ಗಳಿಕೆ ಎಷ್ಟು?

‘ವಾರ್ 2’ ಸಿನಿಮಾ ವಿಮರ್ಶೆಯಲ್ಲಿ ಸೋತಿದೆ. ಚಿತ್ರದಲ್ಲಿ ಗಟ್ಟಿ ಕಥೆ ಇಲ್ಲ ಕೇವಲ ಆ್ಯಕ್ಷನ್ ಅಬ್ಬರ ಎಂದು ಅನೇಕರು ಹೇಳಿದ್ದಾರೆ. ಎರಡು ಸ್ಟಾರ್​ ಹೀರೋಗಳು ಇದ್ದ ಹೊರತಾಗಿಯೂ ಸಿನಿಮಾ ವಿಮರ್ಶೆಯಲ್ಲಿ ಸೋತಿದೆ. ನಿರ್ದೇಶಕ ಅಯಾನ್ ಮುಖರ್ಜಿ ಅವರು ನಿರ್ದೇಶನದಲ್ಲಿ ಸೋತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ