AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ.ಎನ್​ಟಿಆರ್ ಜೊತೆ ಸೇರಿ ಸಿನಿಮಾ ಪ್ರಚಾರ ಮಾಡಬೇಡಿ; ಹೃತಿಕ್​ಗೆ ಸೂಚಿಸಿದ ನಿರ್ಮಾಣ ಸಂಸ್ಥೆ

ಯಶ್ ರಾಜ್ ಫಿಲ್ಮ್ಸ್ ನಿರ್ಮಿಸಿರುವ ‘ವಾರ್ 2’ ಚಿತ್ರದಲ್ಲಿ ಹೃತಿಕ್ ರೋಷನ್ ಮತ್ತು ಜೂನಿಯರ್ ಎನ್​ಟಿಆರ್ ಅವರನ್ನು ನಟಿಸಿದ್ದಾರೆ. ಇಬ್ಬರೂ ಒಟ್ಟಿಗೆ ಸಿನಿಮಾ ಪ್ರಚಾರ ಮಾಡೋದಿಲ್ಲ. ಈ ಆಲೋಚನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರದ ಪ್ರಚಾರಕ್ಕೆ ಈ ವಿಧಾನ ಪರಿಣಾಮಕಾರಿಯೇ ಎಂಬುದು ಚರ್ಚೆಗೆ ಗ್ರಾಸವಾಗಿದೆ.

ಜೂ.ಎನ್​ಟಿಆರ್ ಜೊತೆ ಸೇರಿ ಸಿನಿಮಾ ಪ್ರಚಾರ ಮಾಡಬೇಡಿ; ಹೃತಿಕ್​ಗೆ ಸೂಚಿಸಿದ ನಿರ್ಮಾಣ ಸಂಸ್ಥೆ
ಹೃತಿಕ್-ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on:Jul 02, 2025 | 9:56 PM

Share

ದೊಡ್ಡ ಸಿನಿಮಾಗಳು ರಿಲೀಸ್ ಆಗುತ್ತವೆ ಎಂದರೆ ಅದಕ್ಕೆ ಹೆಚ್ಚಿನ ಪ್ರಚಾರ ನೀಡಲು ತಂಡದವರು ನಾನಾ ಕಸರತ್ತು ಮಾಡುತ್ತಾರೆ. ಅಲ್ಲದೆ, ಈ ಚಿತ್ರದಲ್ಲಿ ಅಪರೂಪದ ಕಲಾವಿದರ ಸಮಾಗಮ ಆಗಿದೆ ಎಂದರೆ ಅವರು ಆದಷ್ಟು ಒಟ್ಟಿಗೆ ಕಾಣಿಸಿಕೊಳ್ಳದಂತೆ ನೋಡಿಕೊಳ್ಳಲಾಗುತ್ತದೆ. ಈ ಮೊದಲು ‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಒಟ್ಟಾಗಿ ನಟಿಸಿದ್ದರು. ಈ ವೇಳೆ ಅವರು ಯಾವುದೇ ಜಾಹೀರಾತುಗಳಲ್ಲಿ ನಟಿಸಿದಂತೆ ಷರತ್ತು ಹಾಕಲಾಗಿತ್ತು. ಈಗ ವಾರ್ 2’ ( war 2) ಮುಖ್ಯಭೂಮಿಕೆಯಲ್ಲಿ ಇರೋರಿಗೂ ಇದೇ ರೀತಿಯ ಷರತ್ತು ಹಾಕಲಾಗಿದೆ.

ಯಶ್ ರಾಜ್ ಫಿಲ್ಮ್ಸ್ ಇತ್ತೀಚೆಗೆ ಸ್ಪೈ ಯೂನಿವರ್ಸ್ ಸಿನಿಮಾಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಈ ಬಾರಿ ಅವರು ‘ವಾರ್ 2’ ಸಿನಿಮಾ ಮೂಲಕ ಬರಲು ರೆಡಿ ಆಗಿದ್ದಾರೆ. ಹೃತಿಕ್ ರೋಷನ್ ಹಾಗೂ ಜೂನಿಯರ್ ಎನ್​ಟಿಆರ್ ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆಯಲ್ಲಿ ಇದ್ದಾರೆ. ಆದರೆ, ಪ್ರಚಾರದ ವೇಳೆ ಇವರು ಒಟ್ಟಾಗಿ ಕಾಣಿಸೋದಿಲ್ಲ. ಏಕೆಂದರೆ ಇಬ್ಬರಿಗೂ ಪ್ರತ್ಯೇಕವಾಗಿ ಸಿನಿಮಾ ಪ್ರಚಾರ ಮಾಡುವಂತೆ ಸೂಚಿಸಲಾಗಿದೆ.

‘ವಾರ್ 2’ ಚಿತ್ರದಲ್ಲಿ ಜೂನಿಯರ್ ಎನ್​ಟಿಆರ್ ಹಾಗೂ ಹೃತಿಕ್ ರೋಷನ್ ಮುಖಾಮುಖಿ ಆಗೋದು ಗೊತ್ತೇ ಇದೆ. ಸುದ್ದಿಗೋಷ್ಠಿಯಲ್ಲಿ, ಸಂದರ್ಶನದಲ್ಲಿ ಇವರನ್ನು ಪದೇ ಪದೇ ನೋಡಿದರೆ ಈ ಜೋಡಿ ಮೇಲೆ ಅಷ್ಟು ಕ್ರೇಜ್ ಉಳಿದುಕೊಳ್ಳೋದಿಲ್ಲ ಎಂಬುದು ನಿರ್ಮಾಣ ಸಂಸ್ಥೆಯ ನಂಬಿಕೆ. ಈ ಕಾರಣದಿಂದಲೇ ತೆರೆಮೇಲೆ ಇವರನ್ನು ಮೊದಲ ಬಾರಿಗೆ ನೋಡಲಿ ಎಂದು ಯಶ್ ರಾಜ್ ಫಿಲ್ಮ್ಸ್ ಬಯಸುತ್ತಿದೆ.

ಇದನ್ನೂ ಓದಿ
Image
‘ನಾನು ಫಾತಿಮಾಗೆ ಲವರ್, ತಂದೆ ಎರಡೂ ಅಲ್ಲ’; ಆಮಿರ್ ಖಾನ್ ನೇರ ಮಾತು
Image
ನೀಲಿ ತಾರೆಯ ಅನುಮಾನಾಸ್ಪದ ಸಾವು; ಶವ ಸಂಸ್ಕಾರಕ್ಕೆ ಹಣ ಕೇಳಿದ ಕುಟುಂಬ
Image
ಲವ್ ಇನ್ ದಿ ಏರ್; ಮಗುವಿನಂತೆ ಯಶ್​​ನ ತಬ್ಬಿ ಕುಳಿತ ರಾಧಿಕಾ ಪಂಡಿತ್
Image
‘ಸಿತಾರೆ ಜಮೀನ್ ಪರ್​​’: ಆಮಿರ್ ಖಾನ್ ರಿಮೇಕ್ ಮಾಡಿದ್ದೇಕೆ? ಉತ್ತರಿಸಿದ ನಟ

ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ. ಅಭಿಮಾನಿಗಳು ಈ ಐಡಿಯಾಗೆ ಅಸಮಾಧಾನ ಹೊರಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರನ್ನು ನೋಡೋದಕ್ಕೂ, ಸಿನಿಮಾದಲ್ಲಿ ನೋಡೋದಕ್ಕೂ ಸಾಕಷ್ಟು ವ್ಯತ್ಯಾಸ ಇದೆ ಎಂಬ ಅಭಿಪ್ರಾಯವನ್ನು ಕೆಲವರು ಹೊರಹಾಕಿದ್ದಾರೆ. ಇನ್ನೂ ಕೆಲವರು ಅತೀ ಬುದ್ಧಿವಂತಿಕೆ ತೋರಿಸಿದರೆ ಈ ರೀತಿ ಆಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇವರನ್ನು ಒಟ್ಟಿಗೆ ತೆರಮೇಲೆ ತಂದರೆ ಚಿತ್ರಕ್ಕೆ ಮತ್ತಷ್ಟು ಪ್ರಚಾರ ಸಿಗಲಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ಇದನ್ನೂ ಓದಿ:ಅಂದು ಬಿಕಿನಿ, ಇಂದು ಗನ್; ‘ವಾರ್ 2’ ಸಿನಿಮಾದಲ್ಲಿ ಕಿಯಾರಾ ಹೊಸ ಅವತಾರ

2019ರ ‘ವಾರ್’ ಚಿತ್ರದ ಮುಂದುವರಿದ ಭಾಗವಾಗಿ ‘ವಾರ್ 2’ ರಿಲೀಸ್ ಆಗುತ್ತಿದೆ. ಆಗಸ್ಟ್ 14ರಂದು ಚಿತ್ರ ಬಿಡುಗಡೆ ಕಾಣಲಿದೆ. ಅಯಾನ್ ಮುಖರ್ಜಿ ನಿರ್ದೇಶನ ಚಿತ್ರಕ್ಕೆ ಇದೆ. ಕಿಯಾರಾ ಅಡ್ವಾಣಿ ಚಿತ್ರಕ್ಕೆ ನಾಯಕಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:52 pm, Wed, 2 July 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು