AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃತಿಕ್ ಜೊತೆ ಹೋಲಿಕೆ ಮಾಡಬೇಡಿ: ಅಭಿಮಾನಿಗಳಿಗೆ ಜ್ಯೂನಿಯರ್ ಎನ್​ಟಿಆರ್​ ಸಲಹೆ

ಇಬ್ಬರು ಸ್ಟಾರ್ ಹೀರೋಗಳು ಒಂದೇ ಸಿನಿಮಾದಲ್ಲಿ ನಟಿಸಿದಾಗ ಅಭಿಮಾನಿಗಳು ಹೋಲಿಕೆ ಮಾಡುತ್ತಾರೆ. ಇದರಿಂದ ಫ್ಯಾನ್ಸ್ ವಾರ್ ಶುರುವಾಗುತ್ತದೆ. ಆ ರೀತಿ ಆಗದಿರಲಿ ಎಂದು ಜೂನಿಯರ್ ಎನ್​ಟಿಆರ್ ಕಿವಿಮಾತು ಹೇಳಿದ್ದಾರೆ. ‘ವಾರ್ 2’ ಸಿನಿಮಾದಲ್ಲಿ ನಟಿಸಿರುವ ಹೃತಿಕ್ ರೋಷನ್ ಜೊತೆ ತಮ್ಮನ್ನು ಹೋಲಿಸಬಾರದು ಎಂದು ಅವರು ಹೇಳಿದ್ದಾರೆ.

ಹೃತಿಕ್ ಜೊತೆ ಹೋಲಿಕೆ ಮಾಡಬೇಡಿ: ಅಭಿಮಾನಿಗಳಿಗೆ ಜ್ಯೂನಿಯರ್ ಎನ್​ಟಿಆರ್​ ಸಲಹೆ
Hrithik Roshan, Jr Ntr
ಮದನ್​ ಕುಮಾರ್​
|

Updated on: Aug 11, 2025 | 5:39 PM

Share

ಟಾಲಿವುಡ್ ಸ್ಟಾರ್ ನಟ ಜೂನಿಯರ್ ಎನ್​ಟಿಆರ್ ಅವರು ‘ವಾರ್ 2’ (War 2) ಸಿನಿಮಾದಲ್ಲಿ ಬಾಲಿವುಡ್ ಹೀರೋ ಹೃತಿಕ್ ರೋಷನ್ (Hrithik Roshan) ಜೊತೆ ತೆರೆ ಹಂಚಿಕೊಂಡಿದ್ದಾರೆ. ಆಗಸ್ಟ್ 14ರಂದು ಈ ಸಿನಿಮಾ ವಿಶ್ವಾದ್ಯಂತ ಅದ್ದೂರಿಯಾಗಿ ತೆರೆಕಾಣಲಿದೆ. ಈಗಾಗಲೇ ಟ್ರೇಲರ್ ಮತ್ತು ಹಾಡುಗಳು ಸಖತ್ ಹೈಪ್ ಸೃಷ್ಟಿ ಮಾಡಿವೆ. ‘ಜನಾಬ್-ಏ-ಆಲಿ’ ಹಾಡಿನಲ್ಲಿ ಹೃತಿಕ್ ರೋಷನ್ ಮತ್ತು ಜೂನಿಯರ್ ಎನ್​ಟಿಆರ್ (Jr NTR) ಅವರು ಜೊತೆಯಾಗಿ ಡ್ಯಾನ್ಸ್ ಮಾಡಿದ್ದಾರೆ. ಇಬ್ಬರ ನಡುವೆ ಅಭಿಮಾನಿಗಳು ಹೋಲಿಕೆ ಮಾಡುತ್ತಿದ್ದಾರೆ. ಅಂಥವರಿಗೆ ಜೂನಿಯರ್ ಎನ್​ಟಿಆರ್​ ಅವರು ಒಂದು ಸಲಹೆ ನೀಡಿದ್ದಾರೆ.

ಹೈದರಾಬಾದ್​​ನಲ್ಲಿ ‘ವಾರ್ 2’ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ಅದ್ದೂರಿಯಾಗಿ ನಡೆದಿದೆ. ಇದರಲ್ಲಿ ಹೃತಿಕ್ ರೋಷನ್, ಜೂನಿಯರ್ ಎನ್​ಟಿಆರ್ ಭಾಗಿ ಆಗಿದ್ದರು. ಈ ವೇಳೆ ಮಾತನಾಡಿದ ಜೂನಿಯರ್ ಎನ್​ಟಿಆರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿರುವ ಒಂದು ವಿಷಯದ ಬಗ್ಗೆ ಪ್ರಸ್ತಾಪಿಸಿದರು.

‘ಜನಾಬ್​-ಏ-ಆಲಿ ಹಾಡಿನಲ್ಲಿ ಯಾರು ಚೆನ್ನಾಗಿ ಡ್ಯಾನ್ಸ್ ಮಾಡಿದ್ದಾರೆ ಅಂತ ಹೋಲಿಕೆ ಮಾಡಿದರೆ ಅದು ಅಭಿಮಾನಿಗಳ ದಾರಿ ತಪ್ಪಿಸುತ್ತದೆ. ಈ ಹಾಡಿನಲ್ಲಿ ಇಬ್ಬರು ಉತ್ತಮ ಡ್ಯಾನ್ಸರ್​​ಗಳು ಪರಸ್ಪರ ಪೂರಕವಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಬಿಂಬಿತ ಆಗುತ್ತಿರವಂತೆ ಇದು ಮುಖಾಮುಖಿ ಅಲ್ಲ. ಈ ಹಾಡನ್ನು ನೀವೆಲ್ಲರೂ ಎಂಜಾಯ್ ಮಾಡಬೇಕು. ಹೃತಿಕ್ ರೋಷನ್ ಅವರು ಈ ದೇಶದ ಶ್ರೇಷ್ಠ ಡ್ಯಾನ್ಸರ್​​ಗಳಲ್ಲಿ ಒಬ್ಬರು’ ಎಂದು ಜೂನಿಯರ್ ಎನ್​ಟಿಆರ್​ ಹೇಳಿದ್ದಾರೆ.

ಇದನ್ನೂ ಓದಿ
Image
ಜೂ ಎನ್​ಟಿಆರ್ ದೇಹತೂಕ ಇಳಿಸಿಕೊಳ್ಳಲು ಕಾರಣ ಯಾರು?
Image
ಜೂ.ಎನ್​ಟಿಆರ್ ಎಷ್ಟು ಶ್ರೀಮಂತ ಅನ್ನೋದು ಗೊತ್ತಾ? ಇಲ್ಲಿದೆ ಆಸ್ತಿ ವಿವರ
Image
ಸೆಕ್ಯೂರಿಟಿ ಒದ್ದು ಓಡಿಸ್ತಾರೆ: ಫ್ಯಾನ್ಸ್ ಮೇಲೆ ಜೂನಿಯರ್ ಎನ್​ಟಿಆರ್ ಗರಂ
Image
ಜೂ ಎನ್​ಟಿಆರ್ ಧರ್ಮದ ಬಗ್ಗೆ ಚರ್ಚೆ, ಮೊಹಮ್ಮದ್ ಶರೀಫ್ ಖಾನ್ ಯಾರು?

ಇದೇ ವೇದಿಕೆಯಲ್ಲಿ ಹೃತಿಕ್ ರೋಷನ್ ಅವರು ಜೂನಿಯರ್ ಎನ್​ಟಿಆರ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು. ‘ತಾರಕ್, ನಾನು ನಿಮ್ಮನ್ನು ಕೇವಲ ಗಮನಿಸಿಲ್ಲ. ನಿಮ್ಮಿಂದ ಕಲಿತಿದ್ದೇನೆ. ನನ್ನ ಸಾಕಷ್ಟು ಗುಣಗಳನ್ನು ನಾನು ತಾರಕ್ ಅವರಲ್ಲಿ ನೋಡುತ್ತೇನೆ. 25 ವರ್ಷಗಳಲ್ಲಿ ನಮ್ಮಿಬ್ಬರ ಜರ್ನಿ ಒಂದೇ ರೀತಿ ಇತ್ತು’ ಎಂದಿದ್ದಾರೆ ಹೃತಿಕ್ ರೋಷನ್.

ಇದನ್ನೂ ಓದಿ: ‘ವಾರ್ 2’ Vs ‘ಕೂಲಿ’: ಬುಕ್​ ಮೈ ಶೋನಲ್ಲಿ ಯಾರಿಗೆ ಹೆಚ್ಚಿದೆ ಬೆಂಬಲ?

‘ಜೂನಿಯರ್ ಎನ್​ಟಿಆರ್​ ಅವರು ತುಂಬಾ ಬದ್ಧತೆ ಇರುವ ನಟ. ಕೆಲಸದ ಬಗ್ಗೆ ತುಂಬಾ ನೈತಿಕತೆ ಹೊಂದಿದ್ದಾರೆ. ಒನ್ ಟೇಕ್, ಫೈನಲ್ ಟೇಕ್ ಸ್ಟಾರ್ ಅವರು. ಅವರು ಶಾಟ್ ಹೇಗೆ ಬಂದಿದೆ ಎಂಬುದನ್ನು ಪರಿಶೀಲಿಸುವುದೂ ಇಲ್ಲ. ಯಾಕೆಂದರೆ, ಚೆನ್ನಾಗಿ ನಟಿಸಿದ್ದೇನೆ ಎಂಬುದು ಅವರಿಗೆ ಗೊತ್ತಿರುತ್ತದೆ’ ಎಂದು ಹೃತಿಕ್ ರೋಷನ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು