AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವೇ ವಾರಗಳಲ್ಲಿ ಪೂರ್ಣಗೊಳ್ಳಲಿದೆ ‘ವಾರ್ 2’; ಈ ವರ್ಷವೇ ಬರಲಿದೆ ಸಿನಿಮಾ?

ಸಿದ್ದಾರ್ಥ್ ಆನಂದ್ ನಿರ್ದೇಶನದ ‘ವಾರ್’ ಸಿನಿಮಾ ಸೂಪರ್ ಹಿಟ್ ಆಯಿತು. ‘ವಾರ್ 2’ ಚಿತ್ರದಲ್ಲಿ ಹೃತಿಕ್​ ಜೊತೆ ಜೂನಿಯರ್ ಎನ್​ಟಿಆರ್ ಸೇರಿಕೊಳ್ಳುತ್ತಿದ್ದಾರೆ. ಇದರಿಂದ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡುವಂತೆ ಆಗಿದೆ. ಸಿನಿಮಾ ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದ್ದರೂ ಇದಕ್ಕೆ ಕಡಿಮೆ ದಿನಗಳ ಶೂಟಿಂಗ್ ನಿಗದಿ ಮಾಡಲಾಗಿದೆ.

ಕೆಲವೇ ವಾರಗಳಲ್ಲಿ ಪೂರ್ಣಗೊಳ್ಳಲಿದೆ ‘ವಾರ್ 2’; ಈ ವರ್ಷವೇ ಬರಲಿದೆ ಸಿನಿಮಾ?
ಜೂನಿಯರ್ ಎನ್​ಟಿಆರ್-ಹೃತಿಕ್
ರಾಜೇಶ್ ದುಗ್ಗುಮನೆ
|

Updated on: Mar 13, 2024 | 2:58 PM

Share

ಬಿಗ್ ಬಜೆಟ್ ಸಿನಿಮಾ ಎಂದಾಗ ಕನಿಷ್ಠ ಒಂದು ವರ್ಷ ಶೂಟಿಂಗ್ ನಡೆಯುತ್ತದೆ. ನಾನಾ ಲೊಕೇಷನ್​ಗಳಿಗೆ ತೆರಳಿ ಚಿತ್ರೀಕರಣ ಮಾಡಲಾಗುತ್ತದೆ. ಆದರೆ, ‘ವಾರ್ 2’ ಸಿನಿಮಾ (War 2 Movie) ಈ ವಿಚಾರದಲ್ಲಿ ಭಿನ್ನವಾಗಿದೆ. ಅಯಾನ್ ಮುಖರ್ಜಿ ನಿರ್ದೇಶನದ ಈ ಸಿನಿಮಾದ ಶೂಟಿಂಗ್​ಗೆ ಕೇವಲ 60 ದಿನ ನಿಗದಿ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಹೀಗಾಗಿ 2024ರಲ್ಲೇ ಸಿನಿಮಾ ರಿಲೀಸ್ ಆದರೂ ಅಚ್ಚರಿ ಏನಿಲ್ಲ ಎನ್ನುತ್ತಿವೆ ಮೂಲಗಳು. ಈ ವಿಚಾರ ಕೇಳಿ ಜೂನಿಯರ್ ಎನ್​ಟಿಆರ್ ಹಾಗೂ ಹೃತಿಕ್ ಫ್ಯಾನ್ಸ್ ಖುಷಿಯಾಗಿದ್ದಾರೆ.

ಸಿದ್ದಾರ್ಥ್ ಆನಂದ್ ನಿರ್ದೇಶನದ ‘ವಾರ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಲ್ಲಿ ಟೈಗರ್ ಶ್ರಾಫ್ ಪಾತ್ರ ಕೊನೆಯಾಗಿದೆ. ‘ವಾರ್ 2’ ಚಿತ್ರದಲ್ಲಿ ಹೃತಿಕ್​ ಜೊತೆ ಜೂನಿಯರ್ ಎನ್​ಟಿಆರ್ ಸೇರಿಕೊಳ್ಳುತ್ತಿದ್ದಾರೆ. ಇದರಿಂದ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡುವಂತೆ ಆಗಿದೆ. ಸಿನಿಮಾ ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದ್ದರೂ ಇದಕ್ಕೆ ಕಡಿಮೆ ದಿನಗಳ ಶೂಟಿಂಗ್ ನಿಗದಿ ಮಾಡಲಾಗಿದೆ.

ಜೂನಿಯರ್​ ಎನ್​ಟಿಆರ್ ಹಾಗೂ ಹೃತಿಕ್ ರೋಷನ್ ಅವರಿಂದ 60 ದಿನಗಳ ಕಾಲ್​ಶೀಟ್​ನ ಅಯಾನ್ ಮುಖರ್ಜಿ ಪಡೆದಿದ್ದಾರೆ. 30 ದಿನಗಳ ಕಾಲ ಇವರ ಕಾಂಬಿನೇಷನ್ ದೃಶ್ಯಗಳ ಶೂಟಿಂಗ್ ಇರಲಿದೆ. ಇನ್ನು 30 ದಿನ ಪ್ರತ್ಯೇಕವಾಗಿ ಇವರ ಭಾಗದ ದೃಶ್ಯದ ಶೂಟ್ ನಡೆಯಲಿದೆ ಎಂದು ತಿಳಿದು ಬಂದಿದೆ. ಹೃತಿಕ್ ರೋಷನ್ ಭಾಗದ ಶೂಟಿಂಗ್ ಜೂನ್​ನಲ್ಲಿ ಪೂರ್ಣಗೊಂಡರೆ, ಜೂನಿಯರ್​ ಎನ್​ಟಿಆರ್ ಭಾಗದ ಚಿತ್ರೀಕರಣ ಜುಲೈನಲ್ಲಿ ಪೂರ್ಣಗೊಳ್ಳಲಿದೆ. ಬಹುತೇಕ ಚಿತ್ರೀಕರಣ ಸ್ಟುಡಿಯೋದಲ್ಲೇ ನಡೆಯಲಿದೆ.

ಇದನ್ನೂ ಓದಿ: ‘ವಾರ್ 2’ ಚಿತ್ರದಲ್ಲಿ ಇರಲ್ಲ ಯಾವುದೇ ವಿಶೇಷ ಅತಿಥಿ ಪಾತ್ರ; ಸೋಲಿನಿಂದ ಬುದ್ಧಿ ಕಲಿತ ನಿರ್ಮಾಪಕರು

ಅಯಾನ್ ಮುಖರ್ಜಿ ಅವರು ಸಂಪೂರ್ಣವಾಗಿ ಪ್ಲ್ಯಾನಿಂಗ್ ಮಾಡಿ ಶೂಟಿಂಗ್​ಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಅವರು ಸ್ಕ್ರಿಪ್ಟ್ ಕೆಲಸಕ್ಕಾಗಿ ಸಾಕಷ್ಟು ಸಮಯ ಹೂಡಿಕೆ ಮಾಡಿದ್ದಾರೆ. ಈ ಕಾರಣದಿಂದ ಶೂಟಿಂಗ್ ಮತ್ತಷ್ಟು ಸುಲಭವಾಗಲಿದೆ ಎಂದು ಊಹಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ