AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ತಡೆ ನೀಡಿ ಎಂದು ಸಲ್ಲಿಕೆ ಆಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್​ ನಕಾರ

‘ದಿ ಕೇರಳ ಸ್ಟೋರಿ ಸಿನಿಮಾ ದ್ವೇಷ ಪೂರಿತ ಸಂಭಾಷಣೆಗಳನ್ನು ಒಳಗೊಂಡಿದೆ. ಇದೊಂದು ಪ್ರೊಪೊಗಾಂಡ ಸಿನಿಮಾ’ ಎಂದು ವಕೀಲ ನಿಜಾಮ್ ಪಾಷಾ ವಾದಿಸಿದ್ದಾರೆ.  

‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ತಡೆ ನೀಡಿ ಎಂದು ಸಲ್ಲಿಕೆ ಆಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್​ ನಕಾರ
ಅದಾ ಶರ್ಮಾ
ರಾಜೇಶ್ ದುಗ್ಗುಮನೆ
|

Updated on: May 02, 2023 | 12:47 PM

Share

‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಮೇ 5ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾದ ಟ್ರೇಲರ್ ಈಗಾಗಲೇ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಸಿನಿಮಾಗೆ ತಡೆ ನೀಡುವಂತೆ ಕೋರಿ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಅರ್ಜಿ ವಿಚಾರಣೆ ಮಾಡಲು ಕೋರ್ಟ್ ನಿರಾಕರಿಸಿದೆ. ‘ದಿ ಕೇರಳ ಸ್ಟೋರಿ’ ಸಿನಿಮಾ ವಿರೋಧ ಮಾಡುವವರಿಗೆ ಇದರಿಂದ ಹಿನ್ನಡೆ ಉಂಟಾಗಿದೆ. ಸುದಿಪ್ತೋ ಸೇನ್ ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಅದಾ ಶರ್ಮಾ ಅವರು ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ.

ನ್ಯಾಯಮೂರ್ತಿಗಳಾದ ಕೆಎಂ ಜೊಸೆಫ್ ಮತ್ತು ಬಿವಿ ನಾಗರತ್ನ ಅವರನ್ನೊಳಗೊಂಡ ಪೀಠ ಅರ್ಜಿ ವಿಚಾರಣೆಯನ್ನು ನಿರಾಕರಿಸಿದೆ. ವಕೀಲರಾದ ಕಪಿಲ್ ಸಿಬಾಲ್ ಹಾಗೂ ನಿಜಾಮ್ ಪಾಶಾಗೆ ಈ ಕುರಿತು ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಮಾಡಲು ಪೀಠ ಸೂಚನೆ ನೀಡಿದೆ. ‘ದಿ ಕೇರಳ ಸ್ಟೋರಿ ಸಿನಿಮಾ ದ್ವೇಷ ಪೂರಿತ ಸಂಭಾಷಣೆಗಳನ್ನು ಒಳಗೊಂಡಿದೆ. ಇದೊಂದು ಪ್ರೊಪೊಗಾಂಡ ಸಿನಿಮಾ’ ಎಂದು ವಕೀಲ ನಿಜಾಮ್ ಪಾಷಾ ವಾದಿಸಿದ್ದಾರೆ.

‘ದ್ವೇಷದ ಭಾಷಣಗಳಲ್ಲಿ ವೈವಿಧ್ಯತೆ ಇದೆ. ಈ ಚಿತ್ರವನ್ನು ಸೆನ್ಸಾರ್ ಮಂಡಳಿಯವರು ನೋಡಿದ್ದಾರೆ ಮತ್ತು ಅಲ್ಲಿಂದ ಪ್ರಮಾಣಪತ್ರ ಸಿಕ್ಕಿದೆ. ನೀವು ಸಿನಿಮಾನ ರಿಲೀಸ್​ನ ಚಾಲೆಂಜ್ ಮಾಡಬೇಕು ಎಂದರೆ ಸೆನ್ಸಾರ್  ಪ್ರಕ್ರಿಯೆಯನ್ನು ಪ್ರಶ್ನೆ ಮಾಡಬೇಕು’ ಎಂದು ಕೋರ್ಟ್ ಹೇಳಿದೆ.

‘ನೀವು ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಮಾಡಬೇಕು’ ಎಂದು ನ್ಯಾಯಮೂರ್ತಿ ನಾಗರತ್ನ ಅವರು ವಕೀಲರಾದ ಪಾಶಾಗೆ ಸೂಚಿಸಿದರು. ‘ನಮಗೆ ಸಮಯದ ಅಭಾವ ಇದೆ. ಸಿನಿಮಾ ಶುಕ್ರವಾರ ರಿಲೀಸ್ ಆಗುತ್ತಿದೆ’ ಎಂದು ಪಾಶಾ ಹೇಳಿದರು. ‘ಹಾಗಾದರೆ ಮುಂದಿನ ದಿನಗಳಲ್ಲಿ ಎಲ್ಲರೂ ಸುಪ್ರೀಂಕೋರ್ಟ್​ಗೆ ಮೊದಲು ಬರುತ್ತಾರೆ’ ಎಂದು ನಾಗರತ್ನ ಅಭಿಪ್ರಾಯಪಟ್ಟರು.

‘ದಿ ಕೇರಳ ಸ್ಟೋರಿ’ ನೈಜ ಘಟನೆ ಆಧಾರಿತವಾಗಿದ್ದು ಎಂದು ನಿರ್ದೇಶಕರು ಹೇಳಿದ್ದಾರೆ. 2022ರಲ್ಲಿ ರಿಲೀಸ್ ಆದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಹಿಟ್ ಆಯಿತು. ಕಾಶ್ಮೀರಿ ಪಂಡಿತರ ವಲಸೆ ಮತ್ತು ಅವರ ಹತ್ಯೆಯನ್ನು ಆಧರಿಸಿ ಈ ಸಿನಿಮಾ ಸಿದ್ಧಗೊಂಡಿತ್ತು. ಈಗ ಮತ್ತೊಂದು ನೈಜ ಘಟನೆ ಆಧಾರಿತ ಸಿನಿಮಾ ಬರುತ್ತಿದ್ದು ಇದನ್ನು ಪ್ರೇಕ್ಷಕರು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ’ ಟ್ರೇಲರ್ ವಿರುದ್ಧ ಅಸಮಾಧಾನಗೊಂಡ ಕೇರಳ ಸಿಎಂ; ಚಿತ್ರಕ್ಕೆ ಬೀಳಲಿದೆ ತಡೆ?

ಮೇ 5ರಂದು ‘ದಿ ಕೇರಳ ಸ್ಟೋರಿ’ ರಿಲೀಸ್ ಆಗುತ್ತಿದೆ. ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ಕನ್ನಡದಲ್ಲಿ ಸಿನಿಮಾ ಏಕೆ ರಿಲೀಸ್ ಆಗುತ್ತಿಲ್ಲ ಎನ್ನುವ ಪ್ರಶ್ನೆಯನ್ನು ಅನೇಕರು ಎತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ