AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan Death Threat: ‘ಏಪ್ರಿಲ್ 30ಕ್ಕೆ ಸಲ್ಮಾನ್ ಖಾನ್​ನ ಮುಗಿಸ್ತೀವಿ’; ಸಲ್ಲುಗೆ ಬಂತು ಮತ್ತೊಂದು ಬೆದರಿಕೆ ಕರೆ

ಲಾರೆನ್ಸ್ ಬಿಷ್ಣೋಯ್ ದೊಡ್ಡ ಗ್ಯಾಂಗ್​​ಸ್ಟರ್​. ಗಾಯಕ ಸಿಧು ಮೂಸೇವಾಲ ಕೊಲೆಯ ಹಿಂದೆ ಈತನ ಕೈವಾಡ ಇದೆ ಎನ್ನಲಾಗಿದೆ. ಈಗ ಸಲ್ಮಾನ್​ನ ಕೊಲ್ಲಲು ಲಾರೆನ್ಸ್ ಪ್ಲ್ಯಾನ್ ಮಾಡಿಕೊಂಡಿದ್ದಾನೆ.

Salman Khan Death Threat: ‘ಏಪ್ರಿಲ್ 30ಕ್ಕೆ ಸಲ್ಮಾನ್ ಖಾನ್​ನ  ಮುಗಿಸ್ತೀವಿ’; ಸಲ್ಲುಗೆ ಬಂತು ಮತ್ತೊಂದು ಬೆದರಿಕೆ ಕರೆ
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
|

Updated on: Apr 11, 2023 | 11:54 AM

Share

ಸಲ್ಮಾನ್ ಖಾನ್ ಅವರಿಗೆ ಇತ್ತೀಚೆಗೆ ಬಿಟ್ಟೂ ಬಿಡದೆ ಕೊಲೆ ಬೆದರಿಕೆ ಎದುರಾಗುತ್ತಿದೆ. ಸಲ್ಮಾನ್ ಖಾನ್ (Salman Khan) ಅವರನ್ನು ಮುಗಿಸಲು ಲಾರೆನ್ಸ್ ಬಿಷ್ಣೋಯ್ ತಂಡದವರು ಪ್ಲ್ಯಾನ್ ರೂಪಿಸಿದ್ದಾರೆ. ಸಲ್ಲುಗೆ ಪೊಲೀಸರು ಬಿಗಿ ಭದ್ರತೆ ನೀಡಿದ್ದಾರೆ. ಹೋದಲ್ಲಿ ಬಂದಲ್ಲಿ ಅವರನ್ನು ಕಾಯುತ್ತಿದ್ದಾರೆ. ಮನೆ ಬಳಿ ಅಭಿಮಾನಿಗಳು ನೆರೆಯದಂತೆ ನೋಡಿಕೊಳ್ಳುತ್ತಿದ್ದಾರೆ. ಹೀಗಿರುವಾಗಲೇ ಸಲ್ಮಾನ್ ಖಾನ್ಗೆ ಮತ್ತೊಂದು ಬೆದರಿಕೆ ಕರೆ ಬಂದಿದೆ. ಏಪ್ರಿಲ್ 30ರಂದು ಸಲ್ಮಾನ್ ಖಾನ್ ಅವರನ್ನು ಕೊಲೆ ಮಾಡುವುದಾಗಿ ರಾಕಿ ಹೆಸರಿನ ವ್ಯಕ್ತಿ ಕರೆ ಮಾಡಿದ್ದಾನೆ. ಸಲ್ಲುಗೆ ಇದರಿಂದ ಮತ್ತಷ್ಟು ಸಂಕಟ ಎದುರಾಗಿದೆ.

ಲಾರೆನ್ಸ್ ಬಿಷ್ಣೋಯ್ ದೊಡ್ಡ ಗ್ಯಾಂಗ್​​ಸ್ಟರ್​. ಗಾಯಕ ಸಿಧು ಮೂಸೇವಾಲ ಕೊಲೆಯ ಹಿಂದೆ ಈತನ ಕೈವಾಡ ಇದೆ ಎನ್ನಲಾಗಿದೆ. ಈಗ ಸಲ್ಮಾನ್​ನ ಕೊಲ್ಲಲು ಲಾರೆನ್ಸ್ ಪ್ಲ್ಯಾನ್ ಮಾಡಿಕೊಂಡಿದ್ದಾನೆ. ಇದಕ್ಕೆ ಕಾರಣ ಕೃಷ್ಣ ಮೃಗವನ್ನು ಸಲ್ಮಾನ್ ಖಾನ್ ಬೇಟೆ ಆಡಿದ್ದು. ಬಿಷ್ಣೋಯ್ ಸಮುದಾಯದವರಿಗೆ ಕೃಷ್ಣ ಮೃಗ ದೇವರ ಸಮಾನ. ಅದನ್ನೇ ಸಲ್ಲು ಹತ್ಯೆ ಮಾಡಿದ್ದರಿಂದ ಲಾರೆನ್ಸ್​​ಗೆ ದ್ವೇಷ ಹುಟ್ಟಿದೆ. ಈ ಮೊದಲು ಸಲ್ಲುನ ಕೊಲ್ಲಲು ಪ್ಲ್ಯಾನ್ ನಡೆದಿತ್ತು. ಹೀಗಿರುವಾಗಲೇ ಸಲ್ಲುಗೆ ಹೊಸ ಬೆದರಿಕೆ ಕರೆ ಬಂದಿದೆ.

ಇದನ್ನೂ ಓದಿ: ಪಂಚೆ ಎತ್ತಿಕಟ್ಟಿ ಕುಣಿದ ಸಲ್ಮಾನ್​ ಖಾನ್​, ರಾಮ್​ ಚರಣ್​, ವೆಂಕಟೇಶ್​; ಧೂಳೆಬ್ಬಿಸಿದ ‘ಯೆಂಟಮ್ಮಾ’ ಹಾಡು

ಸೋಮವಾರ (ಏಪ್ರಿಲ್ 10) ರಾತ್ರಿ 9 ಗಂಟೆ ಸುಮಾರಿಗೆ ಮುಂಬೈ ಪೊಲೀಸರ ಕಂಟ್ರೋಲ್​ ರೂಂಗೆ ಕರೆ ಬಂದಿದೆ. ಏಪ್ರಿಲ್ 30ರಂದು ಸಲ್ಲುನ ಹತ್ಯೆ ಮಾಡಲಾಗುವುದು ಎಂದು ಕರೆಯಲ್ಲಿ ಹೇಳಲಾಗಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ. ಸದ್ಯ ಪ್ರಕರಣದಲ್ಲಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: 40 ಪರ್ಸೆಂಟ್​ ಡೀಲ್​ಗೆ ಒಪ್ಪಿಕೊಂಡ ಶಾರುಖ್​, ಸಲ್ಮಾನ್​? ಭರ್ಜರಿ ಲಾಭ ಮಾಡಲು ಸಜ್ಜಾದ ನಟರು

ಪ್ರಾಥಮಿಕ ತನಿಖೆ ಪ್ರಕಾರ ರಾಕಿ ಎಂಬಾತ ಜೋದ್​​ಪುರದವನು. ಈತನಿಗೂ ಲಾರೆನ್ಸ್​ ಬಿಷ್ಣೋಯ್ ಗುಂಪಿಗೂ ಸಂಬಂಧ ಇದೆಯೇ ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ಕರೆಯಿಂದ ಸ್ಟಾರ್ ನಟನಿಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ.

 ಭದ್ರತೆ ದೃಷ್ಟಿಯಿಂದ ಹೊಸ ಕಾರು ಖರೀದಿಸಿದ ಸಲ್ಲು

ಸಲ್ಮಾನ್​ ಖಾನ್​ ಅವರು ತಮ್ಮ ಭದ್ರತೆ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಇತ್ತೀಚೆಗೆ ಅವರು ಹೊಸ ಬುಲೆಟ್​ಪ್ರೂಫ್​ ಕಾರು ಖರೀದಿಸಿದ್ದಾರೆ ಎಂದು ವರದಿ ಆಗಿದೆ. ನಿಸಾನ್​ ಪಟ್ರೋಲ್​ ಎಸ್​ಯುವಿ ಕಾರಿಗೆ ಅವರು ಬರೋಬ್ಬರಿ 2 ಕೋಟಿ ರೂಪಾಯಿ ನೀಡಿದ್ದಾರೆ. ಇತ್ತೀಚೆಗೆ ‘ನೀತಾ ಮುಕೇಶ್​​ ಅಂಬಾನಿ ಕಲ್ಚರಲ್​ ಸೆಂಟರ್​’ ಉದ್ಘಾಟನೆಗೆ ಇದೇ ಕಾರಿನಲ್ಲಿ ಸಲ್ಮಾನ್​ ಖಾನ್​ ಆಗಮಿಸಿದ್ದರು. ಭದ್ರತೆಯ ಜೊತೆಗೆ ಹಲವು ಐಷಾರಾಮಿ ಸೌಲಭ್ಯಗಳು ಈ ಕಾರಿನಲ್ಲಿ ಇವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್