Salman Khan Death Threat: ‘ಏಪ್ರಿಲ್ 30ಕ್ಕೆ ಸಲ್ಮಾನ್ ಖಾನ್​ನ ಮುಗಿಸ್ತೀವಿ’; ಸಲ್ಲುಗೆ ಬಂತು ಮತ್ತೊಂದು ಬೆದರಿಕೆ ಕರೆ

ಲಾರೆನ್ಸ್ ಬಿಷ್ಣೋಯ್ ದೊಡ್ಡ ಗ್ಯಾಂಗ್​​ಸ್ಟರ್​. ಗಾಯಕ ಸಿಧು ಮೂಸೇವಾಲ ಕೊಲೆಯ ಹಿಂದೆ ಈತನ ಕೈವಾಡ ಇದೆ ಎನ್ನಲಾಗಿದೆ. ಈಗ ಸಲ್ಮಾನ್​ನ ಕೊಲ್ಲಲು ಲಾರೆನ್ಸ್ ಪ್ಲ್ಯಾನ್ ಮಾಡಿಕೊಂಡಿದ್ದಾನೆ.

Salman Khan Death Threat: ‘ಏಪ್ರಿಲ್ 30ಕ್ಕೆ ಸಲ್ಮಾನ್ ಖಾನ್​ನ  ಮುಗಿಸ್ತೀವಿ’; ಸಲ್ಲುಗೆ ಬಂತು ಮತ್ತೊಂದು ಬೆದರಿಕೆ ಕರೆ
ಸಲ್ಮಾನ್ ಖಾನ್

Updated on: Apr 11, 2023 | 11:54 AM

ಸಲ್ಮಾನ್ ಖಾನ್ ಅವರಿಗೆ ಇತ್ತೀಚೆಗೆ ಬಿಟ್ಟೂ ಬಿಡದೆ ಕೊಲೆ ಬೆದರಿಕೆ ಎದುರಾಗುತ್ತಿದೆ. ಸಲ್ಮಾನ್ ಖಾನ್ (Salman Khan) ಅವರನ್ನು ಮುಗಿಸಲು ಲಾರೆನ್ಸ್ ಬಿಷ್ಣೋಯ್ ತಂಡದವರು ಪ್ಲ್ಯಾನ್ ರೂಪಿಸಿದ್ದಾರೆ. ಸಲ್ಲುಗೆ ಪೊಲೀಸರು ಬಿಗಿ ಭದ್ರತೆ ನೀಡಿದ್ದಾರೆ. ಹೋದಲ್ಲಿ ಬಂದಲ್ಲಿ ಅವರನ್ನು ಕಾಯುತ್ತಿದ್ದಾರೆ. ಮನೆ ಬಳಿ ಅಭಿಮಾನಿಗಳು ನೆರೆಯದಂತೆ ನೋಡಿಕೊಳ್ಳುತ್ತಿದ್ದಾರೆ. ಹೀಗಿರುವಾಗಲೇ ಸಲ್ಮಾನ್ ಖಾನ್ಗೆ ಮತ್ತೊಂದು ಬೆದರಿಕೆ ಕರೆ ಬಂದಿದೆ. ಏಪ್ರಿಲ್ 30ರಂದು ಸಲ್ಮಾನ್ ಖಾನ್ ಅವರನ್ನು ಕೊಲೆ ಮಾಡುವುದಾಗಿ ರಾಕಿ ಹೆಸರಿನ ವ್ಯಕ್ತಿ ಕರೆ ಮಾಡಿದ್ದಾನೆ. ಸಲ್ಲುಗೆ ಇದರಿಂದ ಮತ್ತಷ್ಟು ಸಂಕಟ ಎದುರಾಗಿದೆ.

ಲಾರೆನ್ಸ್ ಬಿಷ್ಣೋಯ್ ದೊಡ್ಡ ಗ್ಯಾಂಗ್​​ಸ್ಟರ್​. ಗಾಯಕ ಸಿಧು ಮೂಸೇವಾಲ ಕೊಲೆಯ ಹಿಂದೆ ಈತನ ಕೈವಾಡ ಇದೆ ಎನ್ನಲಾಗಿದೆ. ಈಗ ಸಲ್ಮಾನ್​ನ ಕೊಲ್ಲಲು ಲಾರೆನ್ಸ್ ಪ್ಲ್ಯಾನ್ ಮಾಡಿಕೊಂಡಿದ್ದಾನೆ. ಇದಕ್ಕೆ ಕಾರಣ ಕೃಷ್ಣ ಮೃಗವನ್ನು ಸಲ್ಮಾನ್ ಖಾನ್ ಬೇಟೆ ಆಡಿದ್ದು. ಬಿಷ್ಣೋಯ್ ಸಮುದಾಯದವರಿಗೆ ಕೃಷ್ಣ ಮೃಗ ದೇವರ ಸಮಾನ. ಅದನ್ನೇ ಸಲ್ಲು ಹತ್ಯೆ ಮಾಡಿದ್ದರಿಂದ ಲಾರೆನ್ಸ್​​ಗೆ ದ್ವೇಷ ಹುಟ್ಟಿದೆ. ಈ ಮೊದಲು ಸಲ್ಲುನ ಕೊಲ್ಲಲು ಪ್ಲ್ಯಾನ್ ನಡೆದಿತ್ತು. ಹೀಗಿರುವಾಗಲೇ ಸಲ್ಲುಗೆ ಹೊಸ ಬೆದರಿಕೆ ಕರೆ ಬಂದಿದೆ.

ಇದನ್ನೂ ಓದಿ: ಪಂಚೆ ಎತ್ತಿಕಟ್ಟಿ ಕುಣಿದ ಸಲ್ಮಾನ್​ ಖಾನ್​, ರಾಮ್​ ಚರಣ್​, ವೆಂಕಟೇಶ್​; ಧೂಳೆಬ್ಬಿಸಿದ ‘ಯೆಂಟಮ್ಮಾ’ ಹಾಡು

ಸೋಮವಾರ (ಏಪ್ರಿಲ್ 10) ರಾತ್ರಿ 9 ಗಂಟೆ ಸುಮಾರಿಗೆ ಮುಂಬೈ ಪೊಲೀಸರ ಕಂಟ್ರೋಲ್​ ರೂಂಗೆ ಕರೆ ಬಂದಿದೆ. ಏಪ್ರಿಲ್ 30ರಂದು ಸಲ್ಲುನ ಹತ್ಯೆ ಮಾಡಲಾಗುವುದು ಎಂದು ಕರೆಯಲ್ಲಿ ಹೇಳಲಾಗಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ. ಸದ್ಯ ಪ್ರಕರಣದಲ್ಲಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: 40 ಪರ್ಸೆಂಟ್​ ಡೀಲ್​ಗೆ ಒಪ್ಪಿಕೊಂಡ ಶಾರುಖ್​, ಸಲ್ಮಾನ್​? ಭರ್ಜರಿ ಲಾಭ ಮಾಡಲು ಸಜ್ಜಾದ ನಟರು

ಪ್ರಾಥಮಿಕ ತನಿಖೆ ಪ್ರಕಾರ ರಾಕಿ ಎಂಬಾತ ಜೋದ್​​ಪುರದವನು. ಈತನಿಗೂ ಲಾರೆನ್ಸ್​ ಬಿಷ್ಣೋಯ್ ಗುಂಪಿಗೂ ಸಂಬಂಧ ಇದೆಯೇ ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ಕರೆಯಿಂದ ಸ್ಟಾರ್ ನಟನಿಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ.

 ಭದ್ರತೆ ದೃಷ್ಟಿಯಿಂದ ಹೊಸ ಕಾರು ಖರೀದಿಸಿದ ಸಲ್ಲು

ಸಲ್ಮಾನ್​ ಖಾನ್​ ಅವರು ತಮ್ಮ ಭದ್ರತೆ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಇತ್ತೀಚೆಗೆ ಅವರು ಹೊಸ ಬುಲೆಟ್​ಪ್ರೂಫ್​ ಕಾರು ಖರೀದಿಸಿದ್ದಾರೆ ಎಂದು ವರದಿ ಆಗಿದೆ. ನಿಸಾನ್​ ಪಟ್ರೋಲ್​ ಎಸ್​ಯುವಿ ಕಾರಿಗೆ ಅವರು ಬರೋಬ್ಬರಿ 2 ಕೋಟಿ ರೂಪಾಯಿ ನೀಡಿದ್ದಾರೆ. ಇತ್ತೀಚೆಗೆ ‘ನೀತಾ ಮುಕೇಶ್​​ ಅಂಬಾನಿ ಕಲ್ಚರಲ್​ ಸೆಂಟರ್​’ ಉದ್ಘಾಟನೆಗೆ ಇದೇ ಕಾರಿನಲ್ಲಿ ಸಲ್ಮಾನ್​ ಖಾನ್​ ಆಗಮಿಸಿದ್ದರು. ಭದ್ರತೆಯ ಜೊತೆಗೆ ಹಲವು ಐಷಾರಾಮಿ ಸೌಲಭ್ಯಗಳು ಈ ಕಾರಿನಲ್ಲಿ ಇವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us