AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajpal Yadav: 26,000 ರೂ. ನೀಡಿ ಹೇರ್​ಕಟ್​ ಮಾಡಿಸಿಕೊಂಡಿದ್ದ ರಾಜ್​ಪಾಲ್​ ಯಾದವ್​; ಹಾಸ್ಯ ನಟನ ಪ್ರಯತ್ನವೆಲ್ಲ ನೀರಲ್ಲಿ ಹೋಮ

ದುಬಾರಿ ಮೊತ್ತಕ್ಕೆ ಹೇರ್​ಕಟ್​ ಮಾಡಿಸಿಕೊಂಡ ರಾಜ್​ಪಾಲ್​ ಯಾದವ್​ ಅವರು ನಿರ್ದೇಶಕ ಪ್ರಿಯದರ್ಶನ್​ರನ್ನು ಭೇಟಿ ಮಾಡಲು ತೆರಳಿದ್ದರು. ಆದರೆ ಅಲ್ಲಿ ಆಗಿದ್ದೇ ಬೇರೆ.

Rajpal Yadav: 26,000 ರೂ. ನೀಡಿ ಹೇರ್​ಕಟ್​ ಮಾಡಿಸಿಕೊಂಡಿದ್ದ ರಾಜ್​ಪಾಲ್​ ಯಾದವ್​; ಹಾಸ್ಯ ನಟನ ಪ್ರಯತ್ನವೆಲ್ಲ ನೀರಲ್ಲಿ ಹೋಮ
ರಾಜ್​ಪಾಲ್​ ಯಾದವ್​
ಮದನ್​ ಕುಮಾರ್​
|

Updated on: Jun 27, 2023 | 5:03 PM

Share

ಬಾಲಿವುಡ್​ನಲ್ಲಿ ನಟ ರಾಜ್​ಪಾಲ್​ (Rajpal Yadav) ಯಾದವ್​ ಅವರು ಬಹುಬೇಡಿಕೆಯ ಕಾಮಿಡಿಯನ್​ ಆಗಿ ಗುರುತಿಸಿಕೊಂಡಿದ್ದಾರೆ. ಅವರ ಹಾಸ್ಯಕ್ಕೆ ನಗದೇ ಇರುವ ಪ್ರೇಕ್ಷಕರೇ ಇಲ್ಲ. ಹಲವಾರು ಸಿನಿಮಾಗಳಲ್ಲಿ ಕಾಮಿಡಿ ಪಾತ್ರ ಮಾಡುವ ಮೂಲಕ ರಾಜ್​ಪಾಲ್​ ಯಾದವ್​ ಅವರು ಮನರಂಜನೆ ನೀಡಿದ್ದಾರೆ. ಅನೇಕ ಸ್ಟಾರ್​ ಕಲಾವಿದರ ಜೊತೆ ಅವರು ತೆರೆಹಂಚಿಕೊಂಡಿದ್ದಾರೆ. 2006ರಲ್ಲಿ ತೆರೆಕಂಡ ‘ಚುಪ್​ ಚುಪ್​ ಕೆ’ (Chup Chup Ke) ಸಿನಿಮಾವನ್ನು ಪ್ರೇಕ್ಷಕರು ಈಗಲೂ ನೋಡಿ ಎಂಜಾಯ್​ ಮಾಡುತ್ತಾರೆ. ಅಷ್ಟರಮಟ್ಟಿಗೆ ಹಾಸ್ಯಮಯವಾಗಿ ಮೂಡಿಬಂದಿತ್ತು ರಾಜ್​ಪಾಲ್​ ಯಾದವ್​ ಅವರ ಪಾತ್ರ. ಅಚ್ಚರಿ ಎಂದರೆ ಈ ಚಿತ್ರದ ಶೂಟಿಂಗ್​ ಶುರುವಾಗುವುದಕ್ಕೂ ಮುನ್ನ ಅವರು ಬರೋಬ್ಬರಿ 26 ಸಾವಿರ ರೂಪಾಯಿ ನೀಡಿ ಹೇರ್​ಕಟ್​ (Haircut) ಮಾಡಿಸಿಕೊಂಡಿದ್ದರು!

ಆಲಿಮ್​ ಹಕೀಂ ಅವರು ಮುಂಬೈನಲ್ಲಿ ಸೆಲೆಬ್ರಿಟಿ ಹೇರ್​ ಸ್ಟೈಲಿಸ್ಟ್​ ಆಗಿ ಫೇಮಸ್​. ಯಶ್​ ಕೂಡ ಅವರ ಬಳಿ ಹೇರ್​ ಕಟ್​ ಮಾಡಿಸಿಕೊಂಡು ಸುದ್ದಿ ಆಗಿದ್ದರು. ಹಲವು ವರ್ಷಗಳ ಹಿಂದೆ ರಾಜ್​ಪಾಲ್​ ಯಾದವ್​ ಅವರು ಆಲಿಮ್​ ಹಕೀಂ ಅವರ ಸಲೂನ್​ಗೆ ಭೇಟಿ ನೀಡಿದ್ದರು. 26 ಸಾವಿರ ರೂಪಾಯಿ ನೀಡಿ ಅವರು ಸ್ಟೈಲಿಶ್​ ಆಗಿ ಹೇರ್​ಕಟ್​ ಮಾಡಿಸಿದ್ದರು. ಆ ಸಂದರ್ಭದಲ್ಲಿ ‘ಚುಪ್ ಚುಪ್​ ಕೆ’ ಸಿನಿಮಾದಲ್ಲಿ ನಟಿಸುವ ಆಫರ್​ ಬಂತು. ಕೂಡಲೇ ನಿರ್ದೇಶಕ ಪ್ರಿಯದರ್ಶನ್​ ಅವರನ್ನು ಭೇಟಿ ಮಾಡಲು ರಾಜ್​ಪಾಲ್​ ಯಾದವ್​ ತೆರಳಿದರು. ಆದರೆ ಅಲ್ಲಿ ಆಗಿದ್ದೇ ಬೇರೆ.

ಇದನ್ನೂ ಓದಿ: ಕಾಮಿಡಿ ಕಿಲಾಡಿಗಳ ‘ಆನ್​ಲೈನ್ ಮದುವೆ, ಆಫ್​ಲೈನ್ ಶೋಭನ’

‘ಶೂಟಿಂಗ್​ಗಾಗಿ ನಾನು ಗೋವಾಗೆ ತೆರಳಿದೆ. ನನ್ನ ಹೇರ್​ಕಟ್​ ಬಗ್ಗೆ ನನಗೆ ಬಹಳ ಆತ್ಮವಿಶ್ವಾಸ ಇತ್ತು. ಆದರೆ ನಿರ್ದೇಶಕ ಪ್ರಿಯದರ್ಶನ್​ ಅವರಿಗೆ ಅದು ಕಿಂಚಿತ್ತೂ ಇಷ್ಟ ಆಗಲಿಲ್ಲ. ಸಹಾಯಕರನ್ನು ಕರೆದು ನನ್ನ ಕೂದಲು ಕಟ್​ ಮಾಡಿಸಿದರು’ ಎಂದಿದ್ದಾರೆ ರಾಜ್​ಪಾಲ್​ ಯಾದವ್​. ಅಲ್ಲಿಗೆ ಆಲಿಮ್​ ಹಕೀಂ ಮಾಡಿದ್ದ ಹೇರ್​ ಕಟ್ ಪೂರ್ತಿ​ ನೀರಲ್ಲಿ ಹೋಮ ಮಾಡಿದಂತೆ ಆಯಿತು. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಚಾರವನ್ನು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸಂಜು ಬಸಯ್ಯ

‘ಚುಪ್​ ಚುಪ್​ ಕೆ’ ಸಿನಿಮಾದಲ್ಲಿ ರಾಜ್​ಪಾಲ್​ ಯಾದವ್​ ಅವರನ್ನು ನೋಡಿದ ಬಳಿಕ ಆಲಿಮ್​ ಹಕೀಂ ಅವರಿಗೆ ಶಾಕ್​ ಆಯಿತು. ಹಾಗಾಗಿ ಅವರು 26 ಸಾವಿರ ರೂಪಾಯಿ ತೆಗೆದುಕೊಳ್ಳಲು ನಿರಾಕರಿಸಿದರು. ರಾಜ್​​ಪಾಲ್​ ಯಾದವ್​ ಅವರು ಅನೇಕ ಬಾರಿ ಒತ್ತಾಯಿಸಿದರೂ ಕೂಡ ಆಲಿಮ್​ ಹಕೀಂ ಅವರು ಹಣ ಪಡೆದುಕೊಳ್ಳಲಿಲ್ಲ. ಆ ಫನ್ನಿ ಘಟನೆಯನ್ನು ರಾಜ್​ಪಾಲ್​ ಯಾವದ್​ ಅವರು ನೆನಪಿಸಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು