AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಂಕಿ ಸಿನಿಮಾದಲ್ಲಿ ಏನಿರಲಿದೆ?’ ಅಭಿಮಾನಿ ಪ್ರಶ್ನೆಗೆ ಉತ್ತರಿಸಿದ ಶಾರುಖ್ ಖಾನ್

ಶಾರುಖ್ ಖಾನ್ ಅಭಿಮಾನಿ ಬಳಗ ದೊಡ್ಡದಿದೆ. ಸಮಯ ಸಿಕ್ಕಾಗ ಅವರು ಟ್ವಿಟರ್​ನಲ್ಲಿ #AskSRK ಸೆಷನ್ ನಡೆಸುತ್ತಾರೆ. ಅಭಿಮಾನಿಗಳು ತಮ್ಮಿಷ್ಟದ ಪ್ರಶ್ನೆ ಮುಂದಿಡಬಹುದು. ಇದಕ್ಕೆ ಶಾರುಖ್ ಖಾನ್ ಉತ್ತರಿಸುವ ಪ್ರಯತ್ನ ಮಾಡುತ್ತಾರೆ. ಅವರಿಗೆ ಹಲವು ರೀತಿಯ ಪ್ರಶ್ನೆಗಳು ಎದುರಾಗುತ್ತವೆ. ಆ ಪೈಕಿ ‘ಡಂಕಿ’ ಸಿನಿಮಾ ಬಗ್ಗೆಯೂ ಪ್ರಶ್ನೆ ಕೇಳಲಾಗಿದೆ.

‘ಡಂಕಿ ಸಿನಿಮಾದಲ್ಲಿ ಏನಿರಲಿದೆ?’ ಅಭಿಮಾನಿ ಪ್ರಶ್ನೆಗೆ ಉತ್ತರಿಸಿದ ಶಾರುಖ್ ಖಾನ್
ಶಾರುಖ್
ರಾಜೇಶ್ ದುಗ್ಗುಮನೆ
|

Updated on:Sep 23, 2023 | 9:11 AM

Share

ನಟ ಶಾರುಖ್ ಖಾನ್ (Shah Rukh Khan) ಹಾಗೂ ನಿರ್ದೇಶಕ ರಾಜ್​ಕುಮಾರ್ ಹಿರಾನಿ ‘ಡಂಕಿ’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ ಎಂದಾಗಲೇ ಸಾಕಷ್ಟು ಕುತೂಹಲ ಮೂಡಿತ್ತು. ಈಗ ಶಾರುಖ್ ಖಾನ್ ನಟನೆಯ ‘ಪಠಾಣ್’ ಹಾಗೂ ‘ಜವಾನ್’ (Jawan Movie) ಸಿನಿಮಾ ಹಿಟ್ ಆದ ಬಳಿಕ ‘ಡಂಕಿ’ ಚಿತ್ರದ ಬಗ್ಗೆ ಇರುವ ನಿರೀಕ್ಷೆ ದ್ವಿಗುಣವಾಗಿದೆ. ಈ ಚಿತ್ರದಲ್ಲಿ ಏನೆಲ್ಲ ಇರಲಿದೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಅಭಿಮಾನಿಗಳಿಂದ ಈ ಬಗ್ಗೆ ಪ್ರಶ್ನೆ ಎದುರಾಗಿದೆ. ಇದಕ್ಕೆ ತಮ್ಮದೇ ಸ್ಟೈಲ್​ನಲ್ಲಿ ಶಾರುಖ್ ಉತ್ತರ ನೀಡಿದ್ದಾರೆ.

ಶಾರುಖ್ ಖಾನ್ ಅಭಿಮಾನಿ ಬಳಗ ದೊಡ್ಡದಿದೆ. ಸಮಯ ಸಿಕ್ಕಾಗ ಅವರು ಟ್ವಿಟರ್​ನಲ್ಲಿ #AskSRK ಸೆಷನ್ ನಡೆಸುತ್ತಾರೆ. ಅಭಿಮಾನಿಗಳು ತಮ್ಮಿಷ್ಟದ ಪ್ರಶ್ನೆ ಮುಂದಿಡಬಹುದು. ಇದಕ್ಕೆ ಶಾರುಖ್ ಖಾನ್ ಉತ್ತರಿಸುವ ಪ್ರಯತ್ನ ಮಾಡುತ್ತಾರೆ. ಅವರಿಗೆ ಹಲವು ರೀತಿಯ ಪ್ರಶ್ನೆಗಳು ಎದುರಾಗುತ್ತವೆ. ಆ ಪೈಕಿ ‘ಡಂಕಿ’ ಸಿನಿಮಾ ಬಗ್ಗೆಯೂ ಪ್ರಶ್ನೆ ಕೇಳಲಾಗಿದೆ.

‘ಮಾಸ್, ಕ್ಲಾಸ್ ಎಲ್ಲಾ ಆಯ್ತು. ಡಂಕಿ ಸಿನಿಮಾದಲ್ಲಿ ಅಂಥದ್ದೇನಿರಲಿದೆ’ ಎಂದು ಅಭಿಮಾನಿಯೋರ್ವ ಕೇಳಿದ್ದಾನೆ. ಇದಕ್ಕೆ ಶಾರುಖ್ ಖಾನ್ ಅವರ ಉತ್ತರ ಸಖತ್ ಫನ್ನಿ ಆಗಿತ್ತು. ‘ಡಂಕಿ ಚಿತ್ರದಲ್ಲಿ ರಾಜ್​ಕುಮಾರ್ ಹಿರಾನಿ ಇದ್ದಾರೆ. ಮತ್ತಿನ್ನೇನು ಬೇಕು’ ಎಂದು ಶಾರುಖ್ ಕೇಳಿದ್ದಾರೆ.

ಶಾರುಖ್ ಖಾನ್ ಅವರ ಈ ಉತ್ತರವನ್ನು ಅನೇಕರು ಒಪ್ಪಿಕೊಂಡಿದ್ದಾರೆ. ರಾಜ್​ಕುಮಾರ್ ಹಿರಾನಿ ಅವರು ತಮ್ಮ ವೃತ್ತಿ ಜೀವನದಲ್ಲಿ ಆಗೊಂದು ಈಗೊಂದು ಸಿನಿಮಾ ಮಾಡುತ್ತಾರೆ. ಪ್ರತಿ ಚಿತ್ರಕ್ಕೆ ಅವರು ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಾರೆ. ಪರ್ಫೆಕ್ಟ್ ಸ್ಕ್ರಿಪ್ಟ್ ರೆಡಿ ಮಾಡಿ ಅಖಾಡಕ್ಕೆ ಇಳಿಯುತ್ತಾರೆ. ಅವರು ಸಿನಿಮಾ ಮಾಡಿದರೆ ಯಶಸ್ಸು ಖಚಿತ ಅನ್ನೋದು ಹಲವರ ಅಭಿಪ್ರಾಯ. ಇದು ಸಾಬೀತಾಗಿದೆ ಕೂಡ. ‘ಡಂಕಿ’ ಸಿನಿಮಾದಲ್ಲಿ ರೊಮ್ಯಾನ್ಸ್, ಕಾಮಿಡಿ, ಸೆಂಟಿಮೆಂಟ್ ಇರಲಿದೆ ಎಂದು ಈ ಮೊದಲು ರಾಜ್​ಕುಮಾರ್ ಹಿರಾನಿ ತಿಳಿಸಿದ್ದರು.

ಇದನ್ನೂ ಓದಿ: ಶಾರುಖ್ ಖಾನ್ ಬಳಿ ಇರುವ ಐಶಾರಾಮಿ ಕಾರುಗಳು ಯಾವುವು? ಇಲ್ಲಿದೆ ಮಾಹಿತಿ

ಶಾರುಖ್ ಖಾನ್ ಅವರು ‘ಡಂಕಿ’ ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರದ ಕಲೆಕ್ಷನ್ ಸಾವಿರ ಕೋಟಿ ರೂಪಾಯಿ ಗಡಿ ತಲುಪವ ಸಮೀಪದಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:34 am, Sat, 23 September 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು