AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಖಾನ್ ನಿಜವಾದ ಆಸ್ತಿ ಎಷ್ಟು ಸಾವಿರ ಕೋಟಿ? ಅಧಿಕೃತ ಮಾಹಿತಿಯೇ ಸಿಕ್ತು

Shah Rukh Khan: ಶಾರುಖ್ ಖಾನ್, ಭಾರತದ ಅತ್ಯಂತ ಶ್ರೀಮಂತ ನಟರಲ್ಲಿ ಒಬ್ಬರು. ಅವರ ಆಸ್ತಿಯ ಬಗ್ಗೆ ಊಹಾಪೋಹಗಳು ಆಗಾಗ್ಗೆ ಹರಿದಾಡುತ್ತಲೇ ಇರುತ್ತವೆ. ಇದೀಗ ಶಾರುಖ್ ಖಾನ್​ರ ಆಸ್ತಿ ಮೌಲ್ಯದ ಅಧಿಕೃತ ಮಾಹಿತಿ ಲಭ್ಯವಾಗಿದೆ.

ಶಾರುಖ್ ಖಾನ್ ನಿಜವಾದ ಆಸ್ತಿ ಎಷ್ಟು ಸಾವಿರ ಕೋಟಿ? ಅಧಿಕೃತ ಮಾಹಿತಿಯೇ ಸಿಕ್ತು
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 30, 2024 | 6:48 PM

Share

ಬಾಲಿವುಡ್ ನಟ ಶಾರುಖ್ ಖಾನ್ ಅವರು ಬಾಲಿವುಡ್ನ ಕಿಂಗ್ ಖಾನ್. ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ಶಾರುಖ್ ಖಾನ್ ಅವರು ಸಿನಿಮಾಗಳ ಜೊತೆಗೆ ಸಾಕಷ್ಟು ಉದ್ಯಮಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಕಾರಣಕ್ಕೆ ಅವರು ಭಾರತದ ಶ್ರೀಮಂತ ನಟ ಎನಿಸಿಕೊಂಡಿದ್ದಾರೆ. ಈ ಬಾರಿಯ ಹುರುನ್ ಶ್ರೀಮಂತರ ಪಟ್ಟಿಯಲ್ಲಿ ಅವರಿಗೆ ಸ್ಥಾನ ಸಿಕ್ಕಿದೆ. ಶಾರುಖ್ ಖಾನ್ ಅವರ ಆಸ್ತಿ ಈ ಮೊದಲು 6,300 ಕೋಟಿ ರೂಪಾಯಿ ಆಗಿತ್ತು. ಅದು ಈಗ 7,300 ಕೋಟಿ ರೂಪಾಯಿಗೂ ಹೆಚ್ಚಿದೆ.

ಶಾರುಖ್ ಖಾನ್ ಅವರು ಸಿನಿಮಾಗಳಿಗೆ ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಕಳೆದ ವರ್ಷ ಅವರ ನಟನೆಯ ‘ಪಠಾಣ್’, ‘ಜವಾನ್’ ಹಾಗೂ ‘ಡಂಕಿ’ ಸಿನಿಮಾ ರಿಲೀಸ್ ಆದವು. ಮೂರು ಚಿತ್ರಗಳಿಂದ ಆದ ಬಿಸ್ನೆಸ್ 2,500 ಕೋಟಿ ರೂಪಾಯಿಗೂ ಅಧಿಕ. ಇದರ ಜೊತೆಗೆ ಅವರು ಹಲವು ಉದ್ಯಮಗಳಲ್ಲಿ, ರಿಯಲ್ ಎಸ್ಟೇಟ್ಗಳಲ್ಲಿ ಹೂಡಿಕೆ ಮಾಡಿದ್ದಾರೆ. ಐಪಿಎಲ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ರೆಡ್ ಚಿಲ್ಲಿಸ್ ಎಂಟರ್ಟೇನ್ಮೆಂಟ್ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಇದರಿಂದ ಅವರ ಆಸ್ತಿ ಹೆಚ್ಚುತ್ತಿದೆ.

ಇದನ್ನೂ ಓದಿ:‘ಪಠಾಣ್’ ಗೆದ್ದ ಖುಷಿಯಲ್ಲಿ ಜಾನ್ ಅಬ್ರಹಾಂ ಕೇಳಿದ್ದೆಲ್ಲ ಕೊಡಿಸಿದ್ದ ಶಾರುಖ್ ಖಾನ್

ಸೋಶಿಯಲ್ ಮೀಡಿಯಾದಲ್ಲೂ ಶಾರುಖ್ಗೆ ದೊಡ್ಡ ಹಿಂಬಾಲಕರ ಸಂಖ್ಯೆ ಇದೆ. ಅವರಿಗೆ ಟ್ವಿಟರ್ನಲ್ಲಿ 4.41 ಕೋಟಿ ಫಾಲೋವರ್ಸ್ ಇದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಪವರ್ಫುಲ್ ವ್ಯಕ್ತಿ ಎನಿಸಿಕೊಳ್ಳಲು ಇದು ಕೂಡ ಒಂದು ಕಾರಣ. ಆರಂಭದಲ್ಲಿ ಶಾರುಖ್ ಖಾನ್ ಅವರು ಸಾಕಷ್ಟು ಏರಿಳಿತ ಕಂಡರು. ಈಗ ಅವರಿಗೆ ಸಾಕಷ್ಟು ಹಣ ಇದೆ.

ಶಾರುಖ್ ಖಾನ್ ಅವರ ಬಳಿ ಹಲವು ಸಿನಿಮಾಗಳು ಇವೆ. ‘ಟೈಗರ್ vs ಪಠಾಣ್’ ಸಿನಿಮಾದಲ್ಲಿ ನಟಿಸಬೇಕಿದೆ. ಈ ಚಿತ್ರದಲ್ಲಿ ಸಲ್ಮಾನ್ ಖಾನ್ ಅವರು ನಟಿಸುತ್ತಿದ್ದಾರೆ. ಇದರ ಜೊತೆಗೆ ‘ಕಿಂಗ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಅವರ ಮಗಳು ಸುಹಾನಾ ಖಾನ್ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಸುಜಯ್ ಘೋಷ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಅಭಿಷೇಕ್ ಬಚ್ಚನ್ ವಿಲನ್ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ಅಭಿಷೇಕ್ ಬಚ್ಚನ್ಗೆ ಗೆಲುವು ಸಿಕ್ಕಿಲ್ಲ. ಈ ಕಾರಣಕ್ಕೆ ಅವರು ವಿಲನ್ ಆಗುತ್ತಿದ್ದಾರೆ ಎನ್ನಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್