Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಖಾನ್ ನಿಜವಾದ ಆಸ್ತಿ ಎಷ್ಟು ಸಾವಿರ ಕೋಟಿ? ಅಧಿಕೃತ ಮಾಹಿತಿಯೇ ಸಿಕ್ತು

Shah Rukh Khan: ಶಾರುಖ್ ಖಾನ್, ಭಾರತದ ಅತ್ಯಂತ ಶ್ರೀಮಂತ ನಟರಲ್ಲಿ ಒಬ್ಬರು. ಅವರ ಆಸ್ತಿಯ ಬಗ್ಗೆ ಊಹಾಪೋಹಗಳು ಆಗಾಗ್ಗೆ ಹರಿದಾಡುತ್ತಲೇ ಇರುತ್ತವೆ. ಇದೀಗ ಶಾರುಖ್ ಖಾನ್​ರ ಆಸ್ತಿ ಮೌಲ್ಯದ ಅಧಿಕೃತ ಮಾಹಿತಿ ಲಭ್ಯವಾಗಿದೆ.

ಶಾರುಖ್ ಖಾನ್ ನಿಜವಾದ ಆಸ್ತಿ ಎಷ್ಟು ಸಾವಿರ ಕೋಟಿ? ಅಧಿಕೃತ ಮಾಹಿತಿಯೇ ಸಿಕ್ತು
Follow us
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.

Updated on: Aug 30, 2024 | 6:48 PM

ಬಾಲಿವುಡ್ ನಟ ಶಾರುಖ್ ಖಾನ್ ಅವರು ಬಾಲಿವುಡ್ನ ಕಿಂಗ್ ಖಾನ್. ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ಶಾರುಖ್ ಖಾನ್ ಅವರು ಸಿನಿಮಾಗಳ ಜೊತೆಗೆ ಸಾಕಷ್ಟು ಉದ್ಯಮಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಕಾರಣಕ್ಕೆ ಅವರು ಭಾರತದ ಶ್ರೀಮಂತ ನಟ ಎನಿಸಿಕೊಂಡಿದ್ದಾರೆ. ಈ ಬಾರಿಯ ಹುರುನ್ ಶ್ರೀಮಂತರ ಪಟ್ಟಿಯಲ್ಲಿ ಅವರಿಗೆ ಸ್ಥಾನ ಸಿಕ್ಕಿದೆ. ಶಾರುಖ್ ಖಾನ್ ಅವರ ಆಸ್ತಿ ಈ ಮೊದಲು 6,300 ಕೋಟಿ ರೂಪಾಯಿ ಆಗಿತ್ತು. ಅದು ಈಗ 7,300 ಕೋಟಿ ರೂಪಾಯಿಗೂ ಹೆಚ್ಚಿದೆ.

ಶಾರುಖ್ ಖಾನ್ ಅವರು ಸಿನಿಮಾಗಳಿಗೆ ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಕಳೆದ ವರ್ಷ ಅವರ ನಟನೆಯ ‘ಪಠಾಣ್’, ‘ಜವಾನ್’ ಹಾಗೂ ‘ಡಂಕಿ’ ಸಿನಿಮಾ ರಿಲೀಸ್ ಆದವು. ಮೂರು ಚಿತ್ರಗಳಿಂದ ಆದ ಬಿಸ್ನೆಸ್ 2,500 ಕೋಟಿ ರೂಪಾಯಿಗೂ ಅಧಿಕ. ಇದರ ಜೊತೆಗೆ ಅವರು ಹಲವು ಉದ್ಯಮಗಳಲ್ಲಿ, ರಿಯಲ್ ಎಸ್ಟೇಟ್ಗಳಲ್ಲಿ ಹೂಡಿಕೆ ಮಾಡಿದ್ದಾರೆ. ಐಪಿಎಲ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ರೆಡ್ ಚಿಲ್ಲಿಸ್ ಎಂಟರ್ಟೇನ್ಮೆಂಟ್ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಇದರಿಂದ ಅವರ ಆಸ್ತಿ ಹೆಚ್ಚುತ್ತಿದೆ.

ಇದನ್ನೂ ಓದಿ:‘ಪಠಾಣ್’ ಗೆದ್ದ ಖುಷಿಯಲ್ಲಿ ಜಾನ್ ಅಬ್ರಹಾಂ ಕೇಳಿದ್ದೆಲ್ಲ ಕೊಡಿಸಿದ್ದ ಶಾರುಖ್ ಖಾನ್

ಸೋಶಿಯಲ್ ಮೀಡಿಯಾದಲ್ಲೂ ಶಾರುಖ್ಗೆ ದೊಡ್ಡ ಹಿಂಬಾಲಕರ ಸಂಖ್ಯೆ ಇದೆ. ಅವರಿಗೆ ಟ್ವಿಟರ್ನಲ್ಲಿ 4.41 ಕೋಟಿ ಫಾಲೋವರ್ಸ್ ಇದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಪವರ್ಫುಲ್ ವ್ಯಕ್ತಿ ಎನಿಸಿಕೊಳ್ಳಲು ಇದು ಕೂಡ ಒಂದು ಕಾರಣ. ಆರಂಭದಲ್ಲಿ ಶಾರುಖ್ ಖಾನ್ ಅವರು ಸಾಕಷ್ಟು ಏರಿಳಿತ ಕಂಡರು. ಈಗ ಅವರಿಗೆ ಸಾಕಷ್ಟು ಹಣ ಇದೆ.

ಶಾರುಖ್ ಖಾನ್ ಅವರ ಬಳಿ ಹಲವು ಸಿನಿಮಾಗಳು ಇವೆ. ‘ಟೈಗರ್ vs ಪಠಾಣ್’ ಸಿನಿಮಾದಲ್ಲಿ ನಟಿಸಬೇಕಿದೆ. ಈ ಚಿತ್ರದಲ್ಲಿ ಸಲ್ಮಾನ್ ಖಾನ್ ಅವರು ನಟಿಸುತ್ತಿದ್ದಾರೆ. ಇದರ ಜೊತೆಗೆ ‘ಕಿಂಗ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಅವರ ಮಗಳು ಸುಹಾನಾ ಖಾನ್ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಸುಜಯ್ ಘೋಷ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಅಭಿಷೇಕ್ ಬಚ್ಚನ್ ವಿಲನ್ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ಅಭಿಷೇಕ್ ಬಚ್ಚನ್ಗೆ ಗೆಲುವು ಸಿಕ್ಕಿಲ್ಲ. ಈ ಕಾರಣಕ್ಕೆ ಅವರು ವಿಲನ್ ಆಗುತ್ತಿದ್ದಾರೆ ಎನ್ನಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ