AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಶೋದಾ’ ಚಿತ್ರದ ಮೊದಲನೇ ದಿನದ ಬಾಕ್ಸ್​ ಆಫೀಸ್​ ಕಲೆಕ್ಷನ್​ ಎಷ್ಟು?

ಸಮಂತಾ ನಟನೆಯ ‘ಯಶೋದಾ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಎಲ್ಲರಿಂದ ಮೆಚ್ಚುಗೆ ಪಡೆದುಕೊಂಡಿದೆ. ಈ ಚಿತ್ರ ಮೊದಲನೆಯ ದಿನವೇ ಭರ್ಜರಿ ಓಪನಿಂಗ್​ ಪಡೆದುಕೊಂಡಿದೆ. ಭಾರತ ಮತ್ತು ವಿದೇಶದಲ್ಲಿ ಸಿನಿಮಾ ಉತ್ತಮ ಕಮಾಯಿ ಮಾಡಿದೆ.

‘ಯಶೋದಾ' ಚಿತ್ರದ ಮೊದಲನೇ ದಿನದ ಬಾಕ್ಸ್​ ಆಫೀಸ್​ ಕಲೆಕ್ಷನ್​ ಎಷ್ಟು?
ಸಮಂತಾ
TV9 Web
| Edited By: |

Updated on: Nov 12, 2022 | 3:53 PM

Share

ಸಮಂತಾ(samantha) ರುತ್​ ಪ್ರಭು ಅವರ ‘ಯಶೋದಾ‘ (yashoda) ಸಿನಿಮಾ ಶುಕ್ರವಾರ(ನವೆಂಬರ್ 11) ಬಿಡುಗಡೆಯಾಗಿದ್ದು, ಬಾಕ್ಸ್ ಆಫೀಸ್ ಪಂಡಿತರ ಪ್ರಕಾರ ಚಿತ್ರ ಮೊದಲನೇ ದಿನವೇ ಅಂದಾಜು 3.5 ಕೋಟಿ ರೂಪಾಯಿ ಗಳಿಸಿದೆ. ‘ಪೊನ್ನಿಯಿನ್ ಸೆಲ್ವನ್​-1’ ಮತ್ತು ‘ಕಾಂತಾರ’ ರೀತಿ ‘ಯಶೋದಾ’ ಸಿನಿಮಾ ಮುಂದಿನ ದಿನಗಳಲ್ಲಿ ಒಳ್ಳೆಯ ಕಲೆಕ್ಷನ್ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮಾರ್ವೆಲ್ ಸ್ಟುಡಿಯೋಸ್​ನ ‘ಬ್ಲ್ಯಾಕ್​ ಪ್ಯಾಂಥರ್: ವಕಾಂಡ ಫಾರೆವರ್’​ ಸಿನಿಮಾ ಕೂಡ ರಿಲೀಸ್ ಆಗಿದ್ದು, ಭರ್ಜರಿ ಸ್ಪರ್ಧೆ ಉಂಟಾಗಿದೆ.

ಇನ್ನು ಈ ಚಿತ್ರಕ್ಕೆ ಸಿಗುತ್ತಿರುವ ಉತ್ತಮ ಪ್ರತಿಕ್ರಿಯೆಯಿಂದ ಸಮಂತಾ ಅವರು ಟ್ವಿಟರ್​ನಲ್ಲಿ ಧನ್ಯವಾದ ಅರ್ಪಿಸಿದ್ದಾರೆ. ‘ಈ ಬಾರಿ ಎಂದಿಗಿಂತಲೂ ಹೆಚ್ಚು ನಾನು ನಿಮ್ಮ ಬೆಂಬಲಕ್ಕಾಗಿ ಪ್ರಾರ್ಥಿಸುತ್ತೇನೆ, ಬಿಡುಗಡೆಯ ಸಂದರ್ಭದಲ್ಲಿ ನೀವು ನನ್ನ ಮತ್ತು ಯಶೋದಾ ಚಿತ್ರದ ಮೇಲೆ ತೋರಿದ ಪ್ರೀತಿಗೆ ನಾನು ಚಿರಋಣಿಯಾಗಿದ್ದೇನೆ. ನೀವು ನನ್ನ ಕುಟುಂಬ, ಈ ಸಿನಿಮಾವನ್ನು ನೋಡಿ ಆನಂದಿಸುತ್ತೀರಿ ಎಂದು ಭಾವಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:‘ಸಿನಿಮಾ ಸಖತ್ ಥ್ರಿಲ್ಲಿಂಗ್ ಆಗಿದೆ’; ಸಮಂತಾ ನಟನೆಯ ‘ಯಶೋದಾ’ ನೋಡಿ ಮೆಚ್ಚಿಕೊಂಡ ಫ್ಯಾನ್ಸ್

ಸಮಂತಾ ಅವರ ಅನಾರೋಗ್ಯದ ಮಧ್ಯೆಯು ‘ಯಶೋದಾ’ ಸಿನಿಮಾ ರಿಲೀಸ್​ ಆಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ. ‘ಯಶೋದಾ’ ಸಿನಿಮಾವನ್ನು ಹರಿ ಶಂಕರ್​ ಮತ್ತು ಹರೀಶ್ ಇಬ್ಬರೂ ಸೇರಿ ನಿರ್ದೇಶನ ಮಾಡಿದ್ದು, ಶಿವಲೆಂಕ ಕೃಷ್ಣ ಪ್ರಸಾದ್​ ಬಂಡವಾಳ ಹೂಡಿದ್ದಾರೆ. ಉನ್ನಿ ಮುಕುಂದನ್​, ವರಲಕ್ಷ್ಮಿ ಶರತ್​ಕುಮಾರ್​, ರಾವ್​ ರಮೇಶ್​ ಮತ್ತು ಮುರಳಿ ಶರ್ಮಾ ಅವರು ನಟಿಸಿದ್ದು, ಮಣಿ ಶರ್ಮಾ ಅವರ ಸಂಗೀತ ಸಂಯೋಜನೆ ಮಾಡಿದ್ದಾರೆ.

ಇನ್ನಷ್ಟು ಮನರಂಜನಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?