AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಶೋದಾ’ ಚಿತ್ರದ ಮೊದಲನೇ ದಿನದ ಬಾಕ್ಸ್​ ಆಫೀಸ್​ ಕಲೆಕ್ಷನ್​ ಎಷ್ಟು?

ಸಮಂತಾ ನಟನೆಯ ‘ಯಶೋದಾ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಎಲ್ಲರಿಂದ ಮೆಚ್ಚುಗೆ ಪಡೆದುಕೊಂಡಿದೆ. ಈ ಚಿತ್ರ ಮೊದಲನೆಯ ದಿನವೇ ಭರ್ಜರಿ ಓಪನಿಂಗ್​ ಪಡೆದುಕೊಂಡಿದೆ. ಭಾರತ ಮತ್ತು ವಿದೇಶದಲ್ಲಿ ಸಿನಿಮಾ ಉತ್ತಮ ಕಮಾಯಿ ಮಾಡಿದೆ.

‘ಯಶೋದಾ' ಚಿತ್ರದ ಮೊದಲನೇ ದಿನದ ಬಾಕ್ಸ್​ ಆಫೀಸ್​ ಕಲೆಕ್ಷನ್​ ಎಷ್ಟು?
ಸಮಂತಾ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 12, 2022 | 3:53 PM

Share

ಸಮಂತಾ(samantha) ರುತ್​ ಪ್ರಭು ಅವರ ‘ಯಶೋದಾ‘ (yashoda) ಸಿನಿಮಾ ಶುಕ್ರವಾರ(ನವೆಂಬರ್ 11) ಬಿಡುಗಡೆಯಾಗಿದ್ದು, ಬಾಕ್ಸ್ ಆಫೀಸ್ ಪಂಡಿತರ ಪ್ರಕಾರ ಚಿತ್ರ ಮೊದಲನೇ ದಿನವೇ ಅಂದಾಜು 3.5 ಕೋಟಿ ರೂಪಾಯಿ ಗಳಿಸಿದೆ. ‘ಪೊನ್ನಿಯಿನ್ ಸೆಲ್ವನ್​-1’ ಮತ್ತು ‘ಕಾಂತಾರ’ ರೀತಿ ‘ಯಶೋದಾ’ ಸಿನಿಮಾ ಮುಂದಿನ ದಿನಗಳಲ್ಲಿ ಒಳ್ಳೆಯ ಕಲೆಕ್ಷನ್ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮಾರ್ವೆಲ್ ಸ್ಟುಡಿಯೋಸ್​ನ ‘ಬ್ಲ್ಯಾಕ್​ ಪ್ಯಾಂಥರ್: ವಕಾಂಡ ಫಾರೆವರ್’​ ಸಿನಿಮಾ ಕೂಡ ರಿಲೀಸ್ ಆಗಿದ್ದು, ಭರ್ಜರಿ ಸ್ಪರ್ಧೆ ಉಂಟಾಗಿದೆ.

ಇನ್ನು ಈ ಚಿತ್ರಕ್ಕೆ ಸಿಗುತ್ತಿರುವ ಉತ್ತಮ ಪ್ರತಿಕ್ರಿಯೆಯಿಂದ ಸಮಂತಾ ಅವರು ಟ್ವಿಟರ್​ನಲ್ಲಿ ಧನ್ಯವಾದ ಅರ್ಪಿಸಿದ್ದಾರೆ. ‘ಈ ಬಾರಿ ಎಂದಿಗಿಂತಲೂ ಹೆಚ್ಚು ನಾನು ನಿಮ್ಮ ಬೆಂಬಲಕ್ಕಾಗಿ ಪ್ರಾರ್ಥಿಸುತ್ತೇನೆ, ಬಿಡುಗಡೆಯ ಸಂದರ್ಭದಲ್ಲಿ ನೀವು ನನ್ನ ಮತ್ತು ಯಶೋದಾ ಚಿತ್ರದ ಮೇಲೆ ತೋರಿದ ಪ್ರೀತಿಗೆ ನಾನು ಚಿರಋಣಿಯಾಗಿದ್ದೇನೆ. ನೀವು ನನ್ನ ಕುಟುಂಬ, ಈ ಸಿನಿಮಾವನ್ನು ನೋಡಿ ಆನಂದಿಸುತ್ತೀರಿ ಎಂದು ಭಾವಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:‘ಸಿನಿಮಾ ಸಖತ್ ಥ್ರಿಲ್ಲಿಂಗ್ ಆಗಿದೆ’; ಸಮಂತಾ ನಟನೆಯ ‘ಯಶೋದಾ’ ನೋಡಿ ಮೆಚ್ಚಿಕೊಂಡ ಫ್ಯಾನ್ಸ್

ಸಮಂತಾ ಅವರ ಅನಾರೋಗ್ಯದ ಮಧ್ಯೆಯು ‘ಯಶೋದಾ’ ಸಿನಿಮಾ ರಿಲೀಸ್​ ಆಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ. ‘ಯಶೋದಾ’ ಸಿನಿಮಾವನ್ನು ಹರಿ ಶಂಕರ್​ ಮತ್ತು ಹರೀಶ್ ಇಬ್ಬರೂ ಸೇರಿ ನಿರ್ದೇಶನ ಮಾಡಿದ್ದು, ಶಿವಲೆಂಕ ಕೃಷ್ಣ ಪ್ರಸಾದ್​ ಬಂಡವಾಳ ಹೂಡಿದ್ದಾರೆ. ಉನ್ನಿ ಮುಕುಂದನ್​, ವರಲಕ್ಷ್ಮಿ ಶರತ್​ಕುಮಾರ್​, ರಾವ್​ ರಮೇಶ್​ ಮತ್ತು ಮುರಳಿ ಶರ್ಮಾ ಅವರು ನಟಿಸಿದ್ದು, ಮಣಿ ಶರ್ಮಾ ಅವರ ಸಂಗೀತ ಸಂಯೋಜನೆ ಮಾಡಿದ್ದಾರೆ.

ಇನ್ನಷ್ಟು ಮನರಂಜನಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!