AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾ-ಹೃತಿಕ್ ಮಧ್ಯೆ ನಡೆದಿತ್ತು ಕೀಳು ಮಟ್ಟದ ಫೈಟ್; ಕಾರಣವಾಗಿದ್ದು ಆ ಒಂದು ಪದ

Kangana Ranaut: ನಟಿ ಕಂಗನಾ ರನೌತ್ ಹುಟ್ಟುಹಬ್ಬ ಇಂದು. ನಟಯ ವೃತ್ತಿ ಜೀವನ ಬಹಳ ಏಳು-ಬೀಳುಗಳನ್ನು ಕಂಡಿದೆ. ಖಾಸಗಿ ಬದುಕು ಸಹ ಸಾಕಷ್ಟು ಏರಿಳಿತಗಳನ್ನು ಕಂಡಿದೆ. ಕಂಗನಾ ಹಾಗೂ ಹೃತಿಕ್ ರೋಷನ್ ನಡುವೆ ದೊಡ್ಡ ಮಟ್ಟದ ವಿವಾದವೇ ಆಗಿತ್ತು. ಪ್ರಕರಣ ಈಗಲೂ ನ್ಯಾಯಾಲಯದಲ್ಲಿದೆ. ಅಷ್ಟಕ್ಕೂ ಇಬ್ಬರ ನಡುವೆ ಜಗಳಕ್ಕೆ ಕಾರಣವಾದ ಅಂಶವೇನು?

ಕಂಗನಾ-ಹೃತಿಕ್ ಮಧ್ಯೆ ನಡೆದಿತ್ತು ಕೀಳು ಮಟ್ಟದ ಫೈಟ್; ಕಾರಣವಾಗಿದ್ದು ಆ ಒಂದು ಪದ
Kangana Ranaut Hrithik
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.|

Updated on: Mar 23, 2025 | 4:02 PM

Share

ಕಂಗನಾ ರಣಾವತ್ ಹಾಗೂ ಹೃತಿಕ್ ರೋಷನ್ ಅವರು ಬಾಲಿವುಡ್​ನಲ್ಲಿ ಫೇಮಸ್ ಆಗಿದ್ದಾರೆ. ಇಬ್ಬರೂ ‘ಕೈಟ್’, ‘ಕ್ರಿಶ್ 3’ ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಇವರ ಮಧ್ಯೆ ಶೂಟ್ ವೇಳೆ ಪ್ರೀತಿ ಮೂಡಿತ್ತು ಎಂದು ಹೇಳಲಾಗಿತ್ತು. ಆ ಬಳಿಕ ಬ್ರೇಕಪ್ ಕೂಡ ಆಯಿತು. ಸಂದರ್ಶನ ಒಂದರಲ್ಲಿ ಕಂಗನಾ ಅವರು ಹೃತಿಕ್​ಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು. ಇದರಿಂದ ಪರಿಸ್ಥಿತಿ ಗಂಭೀರವಾಯಿತು. ಚರ್ಚೆಗಳು ಜೋರಾಗಿ ಕೀಳು ಮಟ್ಟದ ಫೈಟ್ ಕೂಡ ಆಯಿತು. ಕಂಗನಾಗೆ ಇಂದು (ಮಾರ್ಚ್​ 23) ಜನ್ಮದಿನ. ಈ ವೇಳೆ ಆ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಅದು 2016ರ ಸಮಯ. ಕಂಗನಾ ರಣಾವತ್ ಅವರು ‘ಆಶಿಕಿ 3’ ಸಿನಿಮಾದಲ್ಲಿ ಹೃತಿಕ್​ಗೆ ಜೊತೆಯಾಗಿ ನಟಿಸಬೇಕಿತ್ತು. ಹೃತಿಕ್ ಇದ್ದಾರೆ ಎಂಬ ಕಾರಣದಿಂದಲೇ ಕಂಗನಾ ಅವರು ಈ ಪ್ರಾಜೆಕ್ಟ್​ನಿಂದ ದೂರ ಹೋದರೇ ಎಂದು ಕೇಳಲಾಯಿತು. ಈ ಪ್ರಶ್ನೆಗೆ ಉತ್ತರಿಸಿದ್ದ ಕಂಗನಾ, ‘ಮಾಜಿಗಳು (Ex) ಎಲ್ಲರ ಗಮನ ಸೆಳೆಯಲು ಸಿಲ್ಲಿ ಕೆಲಸಗಳನ್ನು ಮಾಡುತ್ತಾ ಇರುತ್ತಾರೆ’ ಎಂದು ಹೇಳಿದ್ದರು. ಈ ಮೂಲಕ ಹೃತಿಕ್​ನ ಎಕ್ಸ್ ಎಂದು ಕರೆದರು.

ಇದರಿಂದ ಸಿಟ್ಟಾದ ಹೃತಿಕ್ ರೋಷನ್ ಅವರು ಟ್ವಿಟರ್ ಮೂಲಕ ಕಂಗನಾ ವಿರುದ್ಧ ಪರೋಕ್ಷವಾಗಿ ಟಾಂಗ್ ಕೊಟ್ಟರು. ಆ ಬಳಿಕ ಕಂಗನಾ ರಣಾವತ್​ಗೆ ನೋಟಿಸ್ ಕಳುಹಿಸಿ, ಬಹಿರಂಗವಾಗಿ ಕ್ಷಮೆ ಕೇಳುವಂತೆ ಕೋರಿದರು. ಅಲ್ಲದೆ, 2014ರಲ್ಲಿ ಕಂಗನಾ ಅವರು 1,439 ಮೇಲ್​ಗಳನ್ನು ಕಳುಹಿಸಿದ್ದು, ಇವೆಲ್ಲವೂ ಬೇಸ್​ಲೆಸ್ ಆಗಿವೆ ಎಂದು ಹೃತಿಕ್ ಆರೋಪ ಮಾಡಿದ್ದರು. ಆದರೆ, ಇದನ್ನು ಕಂಗನಾ ಅಲ್ಲಗಳೆದರು.

ಇದನ್ನೂ ಓದಿ:ಹೋಟೆಲ್ ಉದ್ಯಮಕ್ಕೆ ಕಾಲಿಟ್ಟಿದ ಕಂಗನಾ ರನೌತ್, ಸಿನಿಮಾದಲ್ಲಿ ಲಾಸ್ ಕಾರಣವೇ?

ಕಂಗನಾ ಅವರು ಹೇಳುವ ಪ್ರಕಾರ ಹೃತಿಕ್ ಜೊತೆ ಅವರು ಡೇಟಿಂಗ್ ಮಾಡಿದ್ದರು. ವಿವಾಹ ವಿಚಾರ ಬಂದಾಗ ಹೃತಿಕ್ ಹೆದರಿದ್ದೂ ಅಲ್ಲದೆ, ಇದು ಸಾಧ್ಯವಿಲ್ಲ ಎಂದು ನೇರವಾಗಿ ಹೇಳಿದ್ದರಂತೆ. ಈ ವಿಚಾರದಲ್ಲಿ ಕಂಗನಾ ತಾವು ಸಂತ್ರಸ್ತೆ ಎಂದು ಹೇಳಿಕೊಂಡಿದ್ದರು. ಕಂಗನಾಗೆ ಈಗಲೂ ಹೃತಿಕ್ ರೋಷನ್ ಅವರನ್ನು ಕಂಡರೆ ಆಗುವುದಿಲ್ಲ. ಅವರ ವಿಚಾರ ಮಾತನಾಡಲು ಹೋಗುವುದಿಲ್ಲ. ಆ ವಿಚಾರ ಬಂದಾಗ ಅವರು ಮೌನ ತಾಳುತ್ತಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ