AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾ-ಹೃತಿಕ್ ಮಧ್ಯೆ ನಡೆದಿತ್ತು ಕೀಳು ಮಟ್ಟದ ಫೈಟ್; ಕಾರಣವಾಗಿದ್ದು ಆ ಒಂದು ಪದ

Kangana Ranaut: ನಟಿ ಕಂಗನಾ ರನೌತ್ ಹುಟ್ಟುಹಬ್ಬ ಇಂದು. ನಟಯ ವೃತ್ತಿ ಜೀವನ ಬಹಳ ಏಳು-ಬೀಳುಗಳನ್ನು ಕಂಡಿದೆ. ಖಾಸಗಿ ಬದುಕು ಸಹ ಸಾಕಷ್ಟು ಏರಿಳಿತಗಳನ್ನು ಕಂಡಿದೆ. ಕಂಗನಾ ಹಾಗೂ ಹೃತಿಕ್ ರೋಷನ್ ನಡುವೆ ದೊಡ್ಡ ಮಟ್ಟದ ವಿವಾದವೇ ಆಗಿತ್ತು. ಪ್ರಕರಣ ಈಗಲೂ ನ್ಯಾಯಾಲಯದಲ್ಲಿದೆ. ಅಷ್ಟಕ್ಕೂ ಇಬ್ಬರ ನಡುವೆ ಜಗಳಕ್ಕೆ ಕಾರಣವಾದ ಅಂಶವೇನು?

ಕಂಗನಾ-ಹೃತಿಕ್ ಮಧ್ಯೆ ನಡೆದಿತ್ತು ಕೀಳು ಮಟ್ಟದ ಫೈಟ್; ಕಾರಣವಾಗಿದ್ದು ಆ ಒಂದು ಪದ
Kangana Ranaut Hrithik
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 23, 2025 | 4:02 PM

Share

ಕಂಗನಾ ರಣಾವತ್ ಹಾಗೂ ಹೃತಿಕ್ ರೋಷನ್ ಅವರು ಬಾಲಿವುಡ್​ನಲ್ಲಿ ಫೇಮಸ್ ಆಗಿದ್ದಾರೆ. ಇಬ್ಬರೂ ‘ಕೈಟ್’, ‘ಕ್ರಿಶ್ 3’ ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಇವರ ಮಧ್ಯೆ ಶೂಟ್ ವೇಳೆ ಪ್ರೀತಿ ಮೂಡಿತ್ತು ಎಂದು ಹೇಳಲಾಗಿತ್ತು. ಆ ಬಳಿಕ ಬ್ರೇಕಪ್ ಕೂಡ ಆಯಿತು. ಸಂದರ್ಶನ ಒಂದರಲ್ಲಿ ಕಂಗನಾ ಅವರು ಹೃತಿಕ್​ಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು. ಇದರಿಂದ ಪರಿಸ್ಥಿತಿ ಗಂಭೀರವಾಯಿತು. ಚರ್ಚೆಗಳು ಜೋರಾಗಿ ಕೀಳು ಮಟ್ಟದ ಫೈಟ್ ಕೂಡ ಆಯಿತು. ಕಂಗನಾಗೆ ಇಂದು (ಮಾರ್ಚ್​ 23) ಜನ್ಮದಿನ. ಈ ವೇಳೆ ಆ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಅದು 2016ರ ಸಮಯ. ಕಂಗನಾ ರಣಾವತ್ ಅವರು ‘ಆಶಿಕಿ 3’ ಸಿನಿಮಾದಲ್ಲಿ ಹೃತಿಕ್​ಗೆ ಜೊತೆಯಾಗಿ ನಟಿಸಬೇಕಿತ್ತು. ಹೃತಿಕ್ ಇದ್ದಾರೆ ಎಂಬ ಕಾರಣದಿಂದಲೇ ಕಂಗನಾ ಅವರು ಈ ಪ್ರಾಜೆಕ್ಟ್​ನಿಂದ ದೂರ ಹೋದರೇ ಎಂದು ಕೇಳಲಾಯಿತು. ಈ ಪ್ರಶ್ನೆಗೆ ಉತ್ತರಿಸಿದ್ದ ಕಂಗನಾ, ‘ಮಾಜಿಗಳು (Ex) ಎಲ್ಲರ ಗಮನ ಸೆಳೆಯಲು ಸಿಲ್ಲಿ ಕೆಲಸಗಳನ್ನು ಮಾಡುತ್ತಾ ಇರುತ್ತಾರೆ’ ಎಂದು ಹೇಳಿದ್ದರು. ಈ ಮೂಲಕ ಹೃತಿಕ್​ನ ಎಕ್ಸ್ ಎಂದು ಕರೆದರು.

ಇದರಿಂದ ಸಿಟ್ಟಾದ ಹೃತಿಕ್ ರೋಷನ್ ಅವರು ಟ್ವಿಟರ್ ಮೂಲಕ ಕಂಗನಾ ವಿರುದ್ಧ ಪರೋಕ್ಷವಾಗಿ ಟಾಂಗ್ ಕೊಟ್ಟರು. ಆ ಬಳಿಕ ಕಂಗನಾ ರಣಾವತ್​ಗೆ ನೋಟಿಸ್ ಕಳುಹಿಸಿ, ಬಹಿರಂಗವಾಗಿ ಕ್ಷಮೆ ಕೇಳುವಂತೆ ಕೋರಿದರು. ಅಲ್ಲದೆ, 2014ರಲ್ಲಿ ಕಂಗನಾ ಅವರು 1,439 ಮೇಲ್​ಗಳನ್ನು ಕಳುಹಿಸಿದ್ದು, ಇವೆಲ್ಲವೂ ಬೇಸ್​ಲೆಸ್ ಆಗಿವೆ ಎಂದು ಹೃತಿಕ್ ಆರೋಪ ಮಾಡಿದ್ದರು. ಆದರೆ, ಇದನ್ನು ಕಂಗನಾ ಅಲ್ಲಗಳೆದರು.

ಇದನ್ನೂ ಓದಿ:ಹೋಟೆಲ್ ಉದ್ಯಮಕ್ಕೆ ಕಾಲಿಟ್ಟಿದ ಕಂಗನಾ ರನೌತ್, ಸಿನಿಮಾದಲ್ಲಿ ಲಾಸ್ ಕಾರಣವೇ?

ಕಂಗನಾ ಅವರು ಹೇಳುವ ಪ್ರಕಾರ ಹೃತಿಕ್ ಜೊತೆ ಅವರು ಡೇಟಿಂಗ್ ಮಾಡಿದ್ದರು. ವಿವಾಹ ವಿಚಾರ ಬಂದಾಗ ಹೃತಿಕ್ ಹೆದರಿದ್ದೂ ಅಲ್ಲದೆ, ಇದು ಸಾಧ್ಯವಿಲ್ಲ ಎಂದು ನೇರವಾಗಿ ಹೇಳಿದ್ದರಂತೆ. ಈ ವಿಚಾರದಲ್ಲಿ ಕಂಗನಾ ತಾವು ಸಂತ್ರಸ್ತೆ ಎಂದು ಹೇಳಿಕೊಂಡಿದ್ದರು. ಕಂಗನಾಗೆ ಈಗಲೂ ಹೃತಿಕ್ ರೋಷನ್ ಅವರನ್ನು ಕಂಡರೆ ಆಗುವುದಿಲ್ಲ. ಅವರ ವಿಚಾರ ಮಾತನಾಡಲು ಹೋಗುವುದಿಲ್ಲ. ಆ ವಿಚಾರ ಬಂದಾಗ ಅವರು ಮೌನ ತಾಳುತ್ತಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು