AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiara Advani: ‘ಮತ್ತೆ ನಮ್ಮ ಮನೆಗೆ ಕಾಲಿಡಬೇಡ’: ನಟಿ ಕಿಯಾರಾ ಅಡ್ವಾಣಿ ಹೀಗೆ ಎಚ್ಚರಿಕೆ ನೀಡಿದ್ದು ಯಾರಿಗೆ?

‘ನೀವೆಂದರೆ ನನಗೆ ಎಷ್ಟು ಇಷ್ಟ ಅಂತ ತೋರಿಸಲು ಹೀಗೆ ಮಾಡಿದೆ’ ಎಂದು ಆತ ಉತ್ತರಿಸಿದ್ದ. ‘ಇನ್ನೊಮ್ಮೆ ನಮ್ಮ ಮನೆಗೆ ಬರಬೇಡ’ ಎಂದು ವಾರ್ನಿಂಗ್​ ನೀಡಿ ಆತನನ್ನು ಕಳಿಸಿದ್ದರು ಕಿಯಾರಾ ಅಡ್ವಾಣಿ.

Kiara Advani: ‘ಮತ್ತೆ ನಮ್ಮ ಮನೆಗೆ ಕಾಲಿಡಬೇಡ’: ನಟಿ ಕಿಯಾರಾ ಅಡ್ವಾಣಿ ಹೀಗೆ ಎಚ್ಚರಿಕೆ ನೀಡಿದ್ದು ಯಾರಿಗೆ?
ಕಿಯಾರಾ ಅಡ್ವಾಣಿ
TV9 Web
| Edited By: |

Updated on: Jul 04, 2022 | 9:22 AM

Share

ನಟಿ ಕಿಯಾರಾ ಅಡ್ವಾಣಿ (Kiara Advani) ಅವರು ಗೆಲುವಿನ ಖುಷಿಯಲ್ಲಿ ತೇಲುತ್ತಿದ್ದಾರೆ. ಅವರು ನಟಿಸಿದ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ಯಶಸ್ಸು ಕಾಣುತ್ತಿವೆ. ‘ಶೇರ್ಷಾ’, ‘ಭೂಲ್​ ಭುಲಯ್ಯ 2’ (Bhool Bhulaiyaa 2) ಹಾಗೂ ‘ಜುಗ್​ಜುಗ್​ ಜಿಯೋ’ ಸಿನಿಮಾದಿಂದ ಅವರಿಗೆ ಹ್ಯಾಟ್ರಿಕ್​ ಗೆಲುವು ಸಿಕ್ಕಿದೆ. ‘ಜುಗ್​ಜುಗ್​ ಜಿಯೋ’ ಚಿತ್ರ ವಿಶ್ವಾದ್ಯಂತ 100 ಕೋಟಿ ರೂಪಾಯಿ ಗಳಿಸಿದೆ. ಈ ಸಿನಿಮಾದ ಪ್ರಚಾರದ ಸಲುವಾಗಿ ಅವರು ಅನೇಕ ಕಡೆಗಳಲ್ಲಿ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಅವರು ಕೆಲವು ಇಂಟರೆಸ್ಟಿಂಗ್​ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ‘ಇನ್ನೊಮ್ಮೆ ನಮ್ಮ ಮನೆಗೆ ಬರಬೇಡ’ ಎಂದು ಅವರು ವ್ಯಕ್ತಿಯೊಬ್ಬರಿಗೆ ಖಡಕ್​ ಆಗಿ ಎಚ್ಚರಿಕೆ ನೀಡಿದ ಪ್ರಸಂಗವನ್ನು ಈಗ ನೆನಪು ಮಾಡಿಕೊಂಡಿದ್ದಾರೆ. ಆ ಘಟನೆಯು ತುಂಬ ಭಯಾನಕವಾಗಿತ್ತು ಎಂದು ಕಿಯಾರಾ ಅಡ್ವಾಣಿ ಅವರು ಹೇಳಿದ್ದಾರೆ.

ಕಿಯಾರಾ ಅಡ್ವಾಣಿ ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ. ಸೌತ್​ ಸಿನಿಮಾಗಳಲ್ಲೂ ನಟಿಸಿರುವ ಅವರನ್ನು ಕಂಡರೆ ಕೋಟ್ಯಂತರ ಮಂದಿಗೆ ಅಚ್ಚುಮೆಚ್ಚು. ಹಾಗಂತ ಅಭಿಮಾನದ ಉನ್ಮಾದದಲ್ಲಿ ಏನು ಬೇಕಾದರೂ ಮಾಡಲು ಸಾಧ್ಯವಿಲ್ಲ. ಮುಂಬೈನಲ್ಲಿ ವ್ಯಕ್ತಿಯೊಬ್ಬ ಕಿಯಾರಾ ಅಡ್ವಾಣಿ ಅವರ ಮನೆಗೆ ಏಕಾಏಕಿ ಎಂಟ್ರಿ ನೀಡಿದ್ದ. ಆ ಘಟನೆಯನ್ನು ಅವರು ಈಗ ವಿವರಿಸಿದ್ದಾರೆ.

ಮುಂಬೈನ ಅಪಾರ್ಟ್​ಮೆಂಟ್​ ಒಂದರ ಮೇಲಿನ ಫ್ಲೋರ್​ನಲ್ಲಿ ಕಿಯಾರಾ ಅಡ್ವಾಣಿ ವಾಸವಾಗಿದ್ದಾರೆ. ಆ ಫ್ಲೋರ್​ ತುಂಬ ಎತ್ತರದಲ್ಲಿದೆ. ಅವರನ್ನು ಹುಡುಕಿಕೊಂಡು ಬಂದ ಅಭಿಮಾನಿಯು ಲಿಫ್ಟ್​ ಬಳಸುವ ಬದಲು ಎಲ್ಲ ಮೆಟ್ಟಿಲುಗಳನ್ನು ಹತ್ತಿದ್ದ. ಅದರಿಂದ ಆತ ಸಿಕ್ಕಾಪಟ್ಟೆ ಬಳಲಿ, ಮೈತುಂಬ ಬೆವರುತ್ತಿದ್ದ. ಅಂಥ ಸ್ಥಿತಿಯಲ್ಲಿ ಕಿಯಾರಾ ಮನೆಯ ಬಾಗಿಲು ಬಡಿದಿದ್ದ. ಅದನ್ನು ಕಂಡು ಕಿಯಾರಾ ಅಡ್ವಾಣಿ ಅವರಿಗೆ ಭಯವಾಗಿತ್ತು.

ಇದನ್ನೂ ಓದಿ
Image
‘ವೈಯಕ್ತಿಕ ಜೀವನದಲ್ಲಿ ನಾನು ಖುಷಿಯಾಗಿದ್ದೇನೆ’; ಬ್ರೇಕಪ್​ನಿಂದ ಚೇತರಿಸಿಕೊಂಡ ಕಿಯಾರಾ ಅಡ್ವಾಣಿ
Image
ಪಡ್ಡೆಗಳ ನಿದ್ದೆ ಕದ್ದ ಕಿಯಾರಾ ಅಡ್ವಾಣಿ; ಇಲ್ಲಿದೆ ಫೋಟೋ ಗ್ಯಾಲರಿ
Image
ಕಿಯಾರಾ ಜತೆಗಿನ ಬ್ರೇಕಪ್​ ವದಂತಿಗೆ ತುಪ್ಪ ಸುರಿದ ಸಿದ್ದಾರ್ಥ್​ ಮಲ್ಹೋತ್ರಾ; ಫ್ಯಾನ್ಸ್​ ಊಹಿಸಿದ್ದೇನು?
Image
ಬಾಲಿವುಡ್​ನಲ್ಲಿ ಮತ್ತೊಂದು ಬ್ರೇಕಪ್​; ಸಿದ್ದಾರ್ಥ್​-ಕಿಯಾರಾ ಪ್ರೇಮ್​ ಕಹಾನಿಗೆ ಸ್ಯಾಡ್ ಎಂಡಿಂಗ್

‘ಯಾಕೆ ಹೀಗೆ ಮಾಡಿದೆ?’ ಎಂದು ಅವರು ಅಭಿಮಾನಿಗೆ ಕೇಳಿದಾಗ, ‘ನೀವೆಂದರೆ ನನಗೆ ಎಷ್ಟು ಇಷ್ಟ ಅಂತ ತೋರಿಸಲು ಹೀಗೆ ಮಾಡಿದೆ’ ಎಂದು ಆತ ಉತ್ತರಿಸಿದ್ದ. ‘ಇನ್ನೊಮ್ಮೆ ನಮ್ಮ ಮನೆಗೆ ಬರಬೇಡ’ ಎಂದು ವಾರ್ನಿಂಗ್​ ನೀಡಿ ಆತನನ್ನು ಕಳಿಸಿದ್ದ ಘಟನೆಯನ್ನು ಕಿಯಾರಾ ಅಡ್ವಾಣಿ ಈಗ ನೆನಪಿಸಿಕೊಂಡಿದ್ದಾರೆ.

‘ಆತ ಒಳ್ಳೆಯ ವ್ಯಕ್ತಿ ಆಗಿದ್ದ’ ಎಂದು ಕೂಡ ಕಿಯಾರಾ ಅಡ್ವಾಣಿ ಹೇಳಿದ್ದಾರೆ. ಸದ್ಯ ಅವರ ಕೈಯಲ್ಲಿ ಹಲವು ಆಫರ್​ಗಳಿವೆ. ರಾಮ್​ ಚರಣ್​ ಅವರ ಮುಂದಿನ ಚಿತ್ರಕ್ಕೆ ಅವರು ನಾಯಕಿ ಆಗಿದ್ದಾರೆ. ಸಿದ್ದಾರ್ಥ್​ ಮಲ್ಹೋತ್ರಾ ಜೊತೆಗಿನ ಲವ್​ ಮತ್ತು ಬ್ರೇಕಪ್​ ಗಾಸಿಪ್​ನ ಕಾರಣದಿಂದಲೂ ಅವರು ಇತ್ತೀಚೆಗೆ ಹೆಚ್ಚು ಸುದ್ದಿ ಆಗಿದ್ದಾರೆ.

ಇದನ್ನೂ ಓದಿ: Kiara Advani: ಹ್ಯಾಟ್ರಿಕ್​ ಗೆಲುವು ಪಡೆದ ಕಿಯಾರಾ ಅಡ್ವಾಣಿ; ಬಾಲಿವುಡ್​ನಲ್ಲಿ ಮೈಲೇಜ್​ ಹೆಚ್ಚಿಸಿಕೊಂಡ ಬೆಡಗಿ

‘ವೈಯಕ್ತಿಕ ಜೀವನದಲ್ಲಿ ನಾನು ಖುಷಿಯಾಗಿದ್ದೇನೆ’; ಬ್ರೇಕಪ್​ನಿಂದ ಚೇತರಿಸಿಕೊಂಡ ಕಿಯಾರಾ ಅಡ್ವಾಣಿ

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ