AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯ ನಾಯಿಗೆ ಶಾರುಖ್ ಖಾನ್ ಎಂದು ಹೆಸರು ಇಟ್ಟಿದ್ದ ಆಮಿರ್ ಖಾನ್

ಈಗ ಆಮಿರ್ ಖಾನ್ ಮತ್ತು ಶಾರುಖ್ ಖಾನ್ ಅವರು ಬೆಸ್ಟ್ ಫ್ರೆಂಡ್ಸ್ ಆಗಿದ್ದಾರೆ. ಆದರೆ ಮೊದಲು ಹಾಗಿರಲಿಲ್ಲ. ಒಂದು ಕಾಲದಲ್ಲಿ ಆಮಿರ್ ಖಾನ್ ಬಗ್ಗೆ ಶಾರುಖ್ ಖಾನ್ ಅವರಿಗೆ ಅಸಮಾಧಾನ ಇತ್ತು. ಫ್ಯಾನ್ಸ್ ಕೂಡ ಗರಂ ಆಗಿದ್ದರು. ಆಮಿರ್ ಖಾನ್ ಅವರು ನಾಯಿಗೆ ಶಾರುಖ್ ಖಾನ್ ಎಂದು ಹೆಸರು ಇಟ್ಟಿದ್ದು ವಿವಾದಕ್ಕೆ ಕಾರಣ ಆಗಿತ್ತು.

ಮನೆಯ ನಾಯಿಗೆ ಶಾರುಖ್ ಖಾನ್ ಎಂದು ಹೆಸರು ಇಟ್ಟಿದ್ದ ಆಮಿರ್ ಖಾನ್
Shah Rukh Khan, Aamir Khan
ಮದನ್​ ಕುಮಾರ್​
|

Updated on: Jul 02, 2025 | 8:53 AM

Share

ಸಲ್ಮಾನ್ ಖಾನ್, ಆಮಿರ್ ಖಾನ್, ಶಾರುಖ್ ಖಾನ್ (Shah Rukh Khan) ನಡುವೆ ಉತ್ತಮವಾದ ಸ್ನೇಹ ಇದೆ. ಹಲವು ವರ್ಷಗಳಿಂದ ಅವರೆಲ್ಲ ಸ್ನೇಹಿತರಾಗಿದ್ದಾರೆ. ಈ ಮೂವರ ನಡುವೆ ಸ್ಪರ್ಧೆ ಕೂಡ ಇದೆ. ಆರಂಭದ ದಿನಗಳಲ್ಲಿ ಕೆಲವು ವಿವಾದಗಳನ್ನು ಕೂಡ ಮಾಡಿಕೊಂಡಿದ್ದರು. ಈಗ ಯಾವುದೇ ಕಿರಿಕ್ ಇಲ್ಲದೇ ಆರಾಮಾಗಿ ಇದ್ದಾರೆ. ಆದರೆ ಹಳೇ ದಿನಗಳ ವಿವಾದ ಆಗಾಗ ನೆನಪಾಗುತ್ತಾ ಇರುತ್ತದೆ. ‘ಸಿತಾರೆ ಜಮೀನ್ ಪರ್’ (Sitaare Zameen Par) ಸಿನಿಮಾದ ಗೆಲುವಿನ ಖುಷಿಯಲ್ಲಿ ಇರುವ ಆಮಿರ್ ಖಾನ್ (Aamir Khan) ಅವರು ಶಾರುಖ್ ಖಾನ್ ಜೊತೆಗಿನ ವಿವಾದಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅಭಿಮಾನಿಗಳಿಗೆ ಒಂದು ಕಹಿ ಘಟನೆ ನೆನಪಾಗಿದೆ.

ಬಹಳ ವರ್ಷಗಳ ಹಿಂದೆ ಆಮಿರ್ ಖಾನ್ ಅವರು ತಮ್ಮ ಮನೆಯ ನಾಯಿಗೆ ಶಾರುಖ್ ಖಾನ್ ಎಂದು ಹೆಸರು ಇಟ್ಟಿದ್ದರು! ಈ ವಿಷಯ ಸಿಕ್ಕಾಪಟ್ಟೆ ವಿವಾದಕ್ಕೆ ಕಾರಣ ಆಗಿತ್ತು. ಆಮಿರ್ ಖಾನ್ ಅವರ ಈ ವರ್ತನೆಯಿಂದ ಶಾರುಖ್ ಖಾನ್ ಅವರ ಅಭಿಮಾನಿಗಳಿಗೆ ಮತ್ತು ಆಪ್ತರಿಗೆ ತುಂಬಾ ನೋವಾಗಿತ್ತು. ಆ ಸಮಯದಲ್ಲಿ ಆಮಿರ್ ಖಾನ್ ಮತ್ತು ಶಾರುಖ್ ಖಾನ್ ನಡುವೆ ಮುನಿಸು ಸೃಷ್ಟಿ ಆಗಿತ್ತು.

2010ರ ಸಮಯದಲ್ಲಿ ಆಮಿರ್ ಖಾನ್ ಅವರು ಬ್ಲಾಗ್ ಬರೆಯುತ್ತಿದ್ದರು. ‘ಶಾರುಖ್ ನನ್ನ ಕಾಲು ನೆಕ್ಕುತ್ತಿದ್ದಾನೆ. ನಾನು ಅವನಿಗೆ ಬಿಸ್ಕೆಟ್ ತಿನಿಸುತ್ತಿದ್ದೇನೆ. ಇದಕ್ಕಿಂತ ಇನ್ನೇನು ಬೇಕು ನನಗೆ’ ಎಂದು ಆಮಿರ್ ಖಾನ್ ಬರೆದಿದ್ದರು. ಇದರಿಂದ ವಿವಾದ ಶುರುವಾಗಿತ್ತು. ಇಂಥ ವರ್ತನೆ ತೋರಿಸಿದಕ್ಕೆ ಅನೇಕರು ಅವರನ್ನು ಟೀಕೆ ಮಾಡಿದ್ದರು. ಬಳಿಕ ಆಮಿರ್ ಖಾನ್​ಗೆ ತಮ್ಮ ತಪ್ಪಿನ ಅರಿವಾಯಿತು.

ಇದನ್ನೂ ಓದಿ
Image
ಸಿನಿಮಾಗಳನ್ನು ಬಿಟ್ಟು ವಾಚ್‌ಮ್ಯಾನ್ ಆದ ನಟ; ಈ ಪರಿಸ್ಥಿತಿ ಯಾರಿಗೂ ಬರಬಾರದು
Image
ದಕ್ಷಿಣದ ನಿರ್ಮಾಪಕರ ನೋಡಿ ಕಲಿಯಿರಿ: ಸ್ಟಾರ್ ನಟ ಟಾಂಗ್
Image
ಬಾಲಿವುಡ್ ಹೀರೋಗಳ ಬಣ್ಣ ಬಯಲು ಮಾಡಿದ ಸೋನು ಸೂದ್
Image
‘ಬಾಲಿವುಡ್ ಸಿನಿಮಾಗಳು ಭಾರತವನ್ನು ಕೆಟ್ಟದಾಗಿ ತೋರಿಸಿವೆ’; ರಿಷಬ್ ಶೆಟ್ಟಿ

ನಂತರ ಈ ಕುರಿತು ‘ಆಪ್​ ಕಿ ಅದಾಲತ್’ ಕಾರ್ಯಕ್ರಮದಲ್ಲಿ ಆಮಿರ್ ಖಾನ್ ಅವರು ಮಾತನಾಡಿದರು. ಆಮಿರ್ ಖಾನ್ ಅವರು ಆ ನಾಯಿಯನ್ನು ಬೇರೆಯವರಿಂದ ಖರೀದಿಸಿದ್ದರು. ಆ ಮಾಲಿಕರು ನಾಯಿಗೆ ಆ ರೀತಿ ಹೆಸರು ಇಟ್ಟಿದ್ದರು. ಈ ಎಲ್ಲ ಘಟನೆಯನ್ನು ಅವರು ತಮಾಷೆಯಾಗಿ ವಿವರಿಸಿದ್ದರು ಕೂಡ ಅಭಿಮಾನಿಗಳು ಗರಂ ಆಗಿದ್ದರು. ಆದ್ದರಿಂದ ಆಮಿರ್ ಖಾನ್ ಅವರು ಶಾರುಖ್ ಖಾನ್ ಅವರನ್ನು ಭೇಟಿ ಮಾಡಿ ಕ್ಷಮೆ ಕೇಳಿದ್ದರು. ಅಲ್ಲದೇ ಶಾರುಖ್ ಮಕ್ಕಳಾದ ಆರ್ಯನ್ ಖಾನ್ ಹಾಗೂ ಸುಹಾನಾ ಖಾನ್ ಬಳಿಯೂ ಕ್ಷಮೆ ಕೇಳಿದ್ದರು.

ಇದನ್ನೂ ಓದಿ: ರಾಷ್ಟ್ರಪತಿಗೆ ‘ಸಿತಾರೆ ಜಮೀನ್ ಪರ್’ ಸಿನಿಮಾ ತೋರಿಸಿದ ಆಮಿರ್ ಖಾನ್

ಹೀಗೆ ಪ್ರಾರಂಭದ ದಿನಗಳಲ್ಲಿ ಆಮಿರ್ ಖಾನ್ ಮತ್ತು ಶಾರುಖ್ ಖಾನ್ ಅವರು ಪರಸ್ಪರ ಕಮೆಂಟ್ ಮಾಡಿಕೊಳ್ಳುತ್ತಿದ್ದರು. ‘ನಾನು ನನ್ನ ಸಂದರ್ಶನಗಳಲ್ಲಿ ಬೇರೆಯವರ ಬಗ್ಗೆ ಮಾತನಾಡುವುದಿಲ್ಲ’ ಎಂದು ಆಮಿರ್ ಖಾನ್ ಹೇಳಿದರು. ಯಾವುದೇ ಪ್ರಶಸ್ತಿ ಪ್ರದಾನ ಸಮಾರಂಭಗಳಿಗೆ ಆಮಿರ್ ಖಾನ್ ಹೋಗುವುದಿಲ್ಲ. ಆದರೆ ಅನೇಕ ಅವಾರ್ಡ್​ ಫಂಕ್ಷನ್​ಗಳಲ್ಲಿ ಶಾರುಖ್ ಖಾನ್ ಅವರು ಆಮಿರ್ ಖಾನ್ ಬಗ್ಗೆ ಲೇವಡಿ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು