AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಟಿ ವೇಳೆ ಜಗಳ: ಅಕ್ಷಯ್ ಕುಮಾರ್ ಹೊಡೆತಕ್ಕೆ ಪ್ರಜ್ಞೆ ತಪ್ಪಿ ಬಿದ್ದ ವ್ಯಕ್ತಿಗೆ ಏನಾಯ್ತು?

ಅಕ್ಷಯ್ ಕುಮಾರ್ ಹೊಡೆದ ಒಂದೇ ಏಟಿಗೆ ಆ ವ್ಯಕ್ತಿ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಿದ್ದ. ಆ ಕ್ಷಣ ಎಲ್ಲರಿಗೂ ಗಾಬರಿ ಆಗಿತ್ತು. ಹಲವು ವರ್ಷಗಳ ಹಿಂದೆ ನಡೆದ ಕಹಿ ಘಟನೆಯನ್ನು ಅಕ್ಷಯ್ ಕುಮಾರ್ ಅವರು ಈಗ ನೆನಪಿಸಿಕೊಂಡಿದ್ದಾರೆ. ಆ ಸಂದರ್ಭದಲ್ಲಿ ಅಕ್ಷಯ್ ಕುಮಾರ್ ಅವರಿಗೆ ಸಖತ್ ಭಯ ಆಗಿತ್ತು.

ಪಾರ್ಟಿ ವೇಳೆ ಜಗಳ: ಅಕ್ಷಯ್ ಕುಮಾರ್ ಹೊಡೆತಕ್ಕೆ ಪ್ರಜ್ಞೆ ತಪ್ಪಿ ಬಿದ್ದ ವ್ಯಕ್ತಿಗೆ ಏನಾಯ್ತು?
Akshay Kumar
ಮದನ್​ ಕುಮಾರ್​
|

Updated on: Feb 15, 2026 | 11:36 AM

Share

ನಟ ಅಕ್ಷಯ್ ಕುಮಾರ್ (Akshay Kumar) ಅವರು ಕಳೆದ ಮೂರು ದಶಕಗಳಿಂದ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗಿನ ಒಂದು ಕಾರ್ಯಕ್ರಮದಲ್ಲಿ ಅವರು ಕೆಲವು ಇಂಟರೆಸ್ಟಿಂಗ್ ವಿಷಯ ಹಂಚಿಕೊಂಡಿದ್ದಾರೆ. ಸ್ವಲ್ಪ ಹೆಚ್ಚು-ಕಡಿಮೆ ಆಗಿದ್ದರೂ ಅಕ್ಷಯ್ ಕುಮಾರ್ ಅವರ ಜೀವನದಲ್ಲಿ ದೊಡ್ಡ ದುರಂತ ನಡೆದುಹೋಗುತ್ತಿತ್ತು. ಪಾರ್ಟಿಯಲ್ಲಿ ನಡೆದ ಒಂದು ಜಗಳದಿಂದ ವ್ಯಕ್ತಿಯೊಬ್ಬನ ಪ್ರಾಣವೇ ಹೋಗುವ ಸಾಧ್ಯತೆ ಇತ್ತು. ಆ ದಿನವನ್ನು ಅಕ್ಷಯ್ ಕುಮಾರ್ ಅವರು ಈಗ ನೆನಪಿಸಿಕೊಂಡಿದ್ದಾರೆ.

ಇದು ಹಲವು ವರ್ಷಗಳ ಹಿಂದೆ ನಡೆದ ಘಟನೆ. ಹೈಪ್ರೊಫೈಲ್ ಪಾರ್ಟಿಯೊಂದರಲ್ಲಿ ಅಕ್ಷಯ್ ಕುಮಾರ್ ಅವರು ಸ್ನೇಹಿತರ ಜೊತೆ ಭಾಗಿ ಆಗಿದ್ದರು. ಆಗ ಅಲ್ಲಿಗೆ ಬಂದಿದ್ದ ವ್ಯಕ್ತಿಯೊಬ್ಬನು ಕಿರಿಕ್ ಶುರು ಮಾಡಿದ್ದ. ಅಕ್ಷಯ್ ಕುಮಾರ್ ಸ್ನೇಹಿತರ ಮೇಲೆ ಆ ವ್ಯಕ್ತಿ ಕೈ ಮಾಡಲು ಆರಂಭಿಸಿದ್ದ. ಅದರಿಂದ ಅಕ್ಷಯ್ ಕುಮಾರ್ ಅವರಿಗೆ ಕೋಪ ಬಂದಿತ್ತು.

ಕುಡಿದು ಜಗಳ ಮಾಡುತ್ತಿದ್ದ ಆ ವ್ಯಕ್ತಿಗೆ ಅಕ್ಷಯ್ ಕುಮಾರ್ ಅವರು ಹಲವು ಬಾರಿ ಎಚ್ಚರಿಕೆ ನೀಡಿದರು. ಎಷ್ಟು ಸಲ ವಾರ್ನಿಂಗ್ ಕೊಟ್ಟರೂ ಕೂಡ ಆತ ತನ್ನ ವರ್ತನೆ ನಿಲ್ಲಿಸಲೇ ಇಲ್ಲ. ಆಗ ಅಕ್ಷಯ್ ಕುಮಾರ್ ಅವರಿಗೆ ಪಿತ್ತ ನೆತ್ತಿಗೇರಿತು. ಜೋರಾಗಿ ಆತನ ಕೆನ್ನೆಗೆ ಬಾರಿಸಿದರು. ಕೂಡಲೇ ಅವನು ಪ್ರಜ್ಞೆ ತಪ್ಪಿ ಕೆಳಗೆ ಬಿದ್ದ! ಆತ ಬದುಕುತ್ತಾನೋ ಇಲ್ಲವೋ ಎಂದು ಅಕ್ಷಯ್ ಕುಮಾರ್ ಅವರಿಗೆ ಚಿಂತೆ ಶುರು ಆಯಿತು.

ಆ ಕ್ಷಣದಲ್ಲಿ ಅಕ್ಷಯ್ ಕುಮಾರ್ ಅವರಿಗೆ ಹತ್ತಾರು ಆಲೋಚನೆ ಬಂದಿತ್ತು. ಆ ಘಟನೆಯಿಂದ ತನ್ನ ಕರಿಯರ್ ಮುಗಿದೇ ಹೋಯಿತು ಎಂದು ಅವರು ಭಾವಿಸಿದ್ದರು. ಅದೃಷ್ಟವಶಾತ್, ಸ್ವಲ್ಪ ಹೊತ್ತಿನ ಬಳಿಕ ಆ ವ್ಯಕ್ತಿಗೆ ಪ್ರಜ್ಞೆ ಬಂತು. ಹಾಗಾಗಿ ಅಕ್ಷಯ್ ಕುಮಾರ್ ಬಚಾವ್ ಆದರು. ಒಂದು ವೇಳೆ ಇಂದು ಅದೇ ರೀತಿ ಜಗಳ ನಡೆದರೆ ತಾವು ಆ ರೀತಿ ಪ್ರತಿಕ್ರಿಯಿಸಲ್ಲ ಎಂದು ಅಕ್ಷಯ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಅಪಘಾತಕ್ಕೆ ಒಳಗಾದ ಅಕ್ಷಯ್ ಕುಮಾರ್ ಭದ್ರತಾ ಸಿಬ್ಬಂದಿ ಕಾರು; ನಟ ಜಸ್ಟ್ ಪಾರು

ಸಿನಿಮಾ ವಿಚಾರಕ್ಕೆ ಬರೋದಾದರೆ, ಬ್ಯಾಕ್ ಟು ಬ್ಯಾಕ್ ಪ್ರಾಜೆಕ್ಟ್​​ಗಳಲ್ಲಿ ಅಕ್ಷಯ್ ಕುಮಾರ್ ಅವರು ಬ್ಯುಸಿ ಆಗಿದ್ದಾರೆ. ಅವರು ನಟಿಸಿದ ‘ಭೂತ್ ಬಂಗ್ಲ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಅದಲ್ಲದೇ, ‘ವೆಲ್​ಕಮ್ ಟು ದಿ ಜಂಗಲ್’ ಮತ್ತು ‘ಹೈವಾನ್’ ಸಿನಿಮಾಗಳಲ್ಲೂ ಅಕ್ಷಯ್ ಕುಮಾರ್ ಅವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ
30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ
ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರದ ಮಾತು
ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರದ ಮಾತು
ಬಾಲ್ಯದ ದಿನಗಳಲ್ಲಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿಎಂ!
ಬಾಲ್ಯದ ದಿನಗಳಲ್ಲಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿಎಂ!
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು