AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲತಾಜೀ ಇಲ್ಲದೇ ನಾನಿಲ್ಲ’ ಎಂದು ಹೇಳಿದ್ದ ಬಪ್ಪಿ ಲಹಿರಿ; 10 ದಿನದ ಅಂತರದಲ್ಲಿ ಇಬ್ಬರೂ ವಿಧಿವಶ

ಲತಾ ಮಂಗೇಶ್ಕರ್​ ಮತ್ತು ಬಪ್ಪಿ ಲಹಿರಿ ಅವರ ನಡುವೆ ಆಪ್ತ ಒಡನಾಟವಿತ್ತು. ಆ ಕುರಿತು ಬಪ್ಪಿ ಅವರು ಸಂದರ್ಶನವೊಂದರಲ್ಲಿ ಮಾತನಾಡಿದ್ದರು. ಇವರಿಬ್ಬರನ್ನೂ ಕಳೆದುಕೊಂಡು ಭಾರತೀಯ ಚಿತ್ರರಂಗ ಬಡವಾಗಿದೆ.

‘ಲತಾಜೀ ಇಲ್ಲದೇ ನಾನಿಲ್ಲ’ ಎಂದು ಹೇಳಿದ್ದ ಬಪ್ಪಿ ಲಹಿರಿ; 10 ದಿನದ ಅಂತರದಲ್ಲಿ ಇಬ್ಬರೂ ವಿಧಿವಶ
ಬಪ್ಪಿ ಲಹಿರಿ, ಲತಾ ಮಂಗೇಶ್ಕರ್
Follow us
TV9 Web
| Updated By: ಮದನ್​ ಕುಮಾರ್​

Updated on: Feb 16, 2022 | 1:18 PM

ಹಿಂದಿ ಚಿತ್ರರಂಗಕ್ಕೆ ಪದೇಪದೇ ಕಹಿ ಸುದ್ದಿ ಕೇಳಿಬರುತ್ತಿದೆ. ಸೆಲೆಬ್ರಿಟಿಗಳ ನಿಧನದಿಂದ ಬಾಲಿವುಡ್​ ಮಂಕಾಗಿದೆ. ಕೆಲವೇ ದಿನಗಳ ಹಿಂದೆ ಖ್ಯಾತ ಗಾಯಕಿ ಲತಾ ಮಂಗೇಶ್ಕರ್​ (Lata Mangeshkar) ಅವರ ಅಗಲಿಕೆಯಿಂದ ತೀವ್ರ ನೋವುಂಟಾಗಿತ್ತು. ಈಗ ಜನಪ್ರಿಯ ಸಂಗೀತ ನಿರ್ದೇಶಕ ಬಪ್ಪಿ ಲಹಿರಿ (Bappi Lahiri) ಅವರು ಇಹಲೋಕ ತ್ಯಜಿಸಿದ್ದಾರೆ. ಇಂದು (ಫೆ.16) ಅವರು ಕೊನೆಯುಸಿರೆಳೆದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ಬಗೆಯ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಬಪ್ಪಿ ಲಹಿರಿ ಮುಂಬೈನಲ್ಲಿ ಮೃತರಾದರು. ಅವರ ನಿಧನಕ್ಕೆ (Bappi Lahiri Death) ಭಾರತೀಯ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಬಪ್ಪಿ ಲಹಿರಿ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು ಮತ್ತು ಆಪ್ತರು ಪ್ರಾರ್ಥಿಸುತ್ತಿದ್ದಾರೆ. ಬಪ್ಪಿ ಲಹಿರಿ ಮತ್ತು ಲತಾ ಮಂಗೇಶ್ಕರ್​ ನಡುವೆ ಆಪ್ತವಾದ ಒಡನಾಟ ಇತ್ತು. ಹಲವು ದಶಕಗಳಿಂದ ಅವರಿಬ್ಬರೂ ಪರಸ್ಪರ ಆತ್ಮೀಯರಾಗಿದ್ದರು. ‘ಲತಾಜೀ ಇಲ್ಲದೇ ನಾನಿಲ್ಲ’ ಎಂದು ಹಲವು ವರ್ಷಗಳ ಹಿಂದೆಯೇ ಬಪ್ಪಿ ಲಹಿರಿ ಹೇಳಿದ್ದರು. ಲತಾ ಮಂಗೇಶ್ಕರ್​ ನಿಧನರಾಗಿ 10 ದಿನ ಕಳೆಯುವುದರಲ್ಲಿ ಬಪ್ಪಿ ಲಹಿರಿ ಕೂಡ ಇಹಲೋಕ ತ್ಯಜಿಸಿರುವುದು ನಿಜಕ್ಕೂ ಕಾಕತಾಳೀಯವೇ ಸರಿ.

2012ರಲ್ಲಿ ‘ಇ ಟೈಮ್ಸ್​’ಗೆ ನೀಡಿದ ಸಂದರ್ಶನದಲ್ಲಿ ಬಪ್ಪಿ ಲಹಿರಿ ಅವರು ಈ ಮಾತನ್ನು ಹೇಳಿದ್ದರು. ಲತಾ ಮಂಗೇಶ್ಕರ್​ ಜೊತೆ ತಮಗೆ ಇರುವ ಒಡನಾಟ ಎಂಥದ್ದು ಎಂಬುದನ್ನು ಅವರು ವಿವರಿಸಿದ್ದರು. ‘ನಾನು ನಾಲ್ಕು ವರ್ಷದ ಬಾಲಕನಾಗಿದ್ದಾಗ ಲತಾಜೀ ನಮ್ಮ ಮನೆಗೆ ಬಂದು ನನಗೆ ಆಶೀರ್ವಾದ ಮಾಡಿದ್ದರು. ಅವರ ತೊಡೆ ಮೇಲೆ ನಾನು ಕುಳಿತಿರುವ ಫೋಟೋ ಈಗಲೂ ನನ್ನ ಬಳಿ ಇದೆ. ಬಾಂಗ್ಲಾದಲ್ಲಿ ಖ್ಯಾತ ಸಂಗೀತ ನಿರ್ದೇಶಕರಾಗಿದ್ದ ನನ್ನ ತಂದೆ ಅಪರೇಶ್​​ ಲಹಿರಿ ಅವರಿಗಾಗಿ ಲತಾಜೀ ಅನೇಕ ಗೀತೆಗಳನ್ನು ಹಾಡಿದ್ದರು’ ಎಂಬುದನ್ನು ಬಪ್ಪಿ ಲಹಿರಿ ನೆನಪು ಮಾಡಿಕೊಂಡಿದ್ದರು.

‘ಆ ಕಾಲದಿಂದಲೂ ಲತಾಜೀ ಅವರು ನನಗೆ ಬೆಂಬಲ ನೀಡುತ್ತ ಬಂದಿದ್ದಾರೆ. ಬಂಗಾಲಿ ಚಿತ್ರಕ್ಕೆ ನಾನು ಮೊದಲ ಬಾರಿಗೆ ಸಂಗೀತ ನಿರ್ದೇಶನ ಮಾಡಿದಾಗ ಅವರು ನನಗೆ ಹಾಡಿದ್ದರು. ಅವರಿಲ್ಲದೇ ಇದ್ದಿದ್ದರೆ ಇತರರ ಪೈಪೋಟಿಯ ಎದುರು ನಾನು ಉಳಿದುಕೊಳ್ಳಲು ಆಗುತ್ತಿರಲಿಲ್ಲ’ ಎಂದು ಬಪ್ಪಿ ಲಹಿರಿ ಹೇಳಿದ್ದರು.

ಆಮಿರ್ ಖಾನ್​ ತಂದೆ ತಾಹೀರ್​ ಹುಸೇನ್​ ನಿರ್ದೇಶನ ಮಾಡಿದ್ದ ‘ಝಕ್ಮೀ’ ಚಿತ್ರದಿಂದ ಬಪ್ಪಿ ಲಹಿರಿ ಅವರಿಗೆ ಬಾಲಿವುಡ್​ನಲ್ಲಿ ಮೊದಲ ಯಶಸ್ಸು ಸಿಕ್ಕಿತ್ತು. ಆ ಚಿತ್ರದಲ್ಲಿಯೂ ಲತಾ ಮಂಗೇಶ್ಕರ್​ ಹಾಡಿದ್ದ ‘ಆವೋ ತುಮೆ ಚಾಂದ್​ ಪೇ ಲೇ ಜಾಯೇ..’ ಹಾಗೂ ‘ಅಭಿ ಅಭಿ ಥಿ ದುಷ್ಮನಿ..’ ಗೀತೆಗಳು ಸೂಪರ್​ ಹಿಟ್​ ಆಗಿದ್ದವು. ಆ ಮೂಲಕ ಬಾಲಿವುಡ್​ನಲ್ಲಿ ಬಪ್ಪಿ ಲಹಿರಿ ಅವರು ನೆಲೆ ಕಂಡುಕೊಳ್ಳಲು ಲತಾ ಅವರ ಹಾಡುಗಳು ಸಹಕಾರಿ ಆಗಿದ್ದವು.

ಗಾಯಕನಾಗಿ, ಸಂಗೀತ ನಿರ್ದೇಶಕನಾಗಿ ಮಾತ್ರವಲ್ಲದೆ ರಾಜಕಾರಣಿ ಆಗಿಯೂ ಬಪ್ಪಿ ಲಹಿರಿ ಗುರುತಿಸಿಕೊಂಡಿದ್ದರು. ಚಿತ್ರರಂಗಕ್ಕೆ ಹಲವಾರು ಸೂಪರ್​ ಹಿಟ್​ ಗೀತೆಗಳನ್ನು ನೀಡಿದ್ದ ಅವರ ಕೊಡುಗೆ ಅಪಾರ. ‘ಕೃಷ್ಣ ನೀ ಬೇಗನೆ ಬಾರೋ’, ‘ಆಫ್ರಿಕಾದಲ್ಲಿ ಶೀಲಾ’, ‘ಪೊಲೀಸ್​ ಮತ್ತು ದಾದಾ’ ಮುಂತಾದ ಕನ್ನಡ ಸಿನಿಮಾಗಳಿಗೂ ಬಪ್ಪಿ ಲಹಿರಿ ಸಂಗೀತ ನಿರ್ದೇಶನ ಮಾಡಿದ್ದರು.

ಇದನ್ನೂ ಓದಿ:

Bappi Lahiri: ಚಿತ್ರರಂಗದ ದಿಗ್ಗಜರೊಂದಿಗೆ ಕೆಲಸ ಮಾಡಿದ್ದ ಬಪ್ಪಿ ಲಹಿರಿ; ಇಲ್ಲಿವೆ ಅಪರೂಪದ ಫೋಟೋಗಳು

Bappi Lahiri: ಸ್ಯಾಂಡಲ್​ವುಡ್​ನಲ್ಲೂ ಗುರುತಿಸಿಕೊಂಡಿದ್ದ ಖ್ಯಾತ ಸಂಗೀತ ನಿರ್ದೇಶಕ, ಗಾಯಕ ಬಪ್ಪಿ ಲಹಿರಿ ಇನ್ನಿಲ್ಲ

ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?