AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಂಡಿಯಾಸ್ ಗಾಟ್ ಲೇಟೆಂಟ್’ ಪುನರಾರಂಭ ಯಾವಾಗ? ಸಮಯ್ ರೈನಾ ಉತ್ತರವೇನು?

Samay Raina: ಸಮಯ್ ರೈನಾ ಅವರ 'ಇಂಡಿಯಾಸ್ ಗಾಟ್ ಲೇಟೆಂಟ್' ಯೂಟ್ಯೂಬ್ ಶೋ ವಿವಾದದ ನಂತರ ಅಮಾನತುಗೊಂಡಿದೆ. ರಣ್​ವೀರ್ ಅಲಾಹಾಬಾದಿಯಾ ವಿವಾದಾಸ್ಪದ ಪ್ರಶ್ನೆಗಳಿಂದಾಗಿ ಈ ಶೋ ನಿಷೇಧಕ್ಕೆ ಒಳಗಾಯಿತು. ಈಗ ಸಮಯ್ ರೈನಾ ಅವರು ಅಂತರರಾಷ್ಟ್ರೀಯ ಪ್ರವಾಸದಲ್ಲಿದ್ದಾರೆ. ಜೂನ್ 5 ರಿಂದ ಜುಲೈ 20 ರವರೆಗೆ ಯುರೋಪ್, ಯುಕೆ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನಲ್ಲಿ ಪ್ರದರ್ಶನ ನೀಡಲಿದ್ದಾರೆ.

‘ಇಂಡಿಯಾಸ್ ಗಾಟ್ ಲೇಟೆಂಟ್’ ಪುನರಾರಂಭ ಯಾವಾಗ? ಸಮಯ್ ರೈನಾ ಉತ್ತರವೇನು?
Samay Raina
 ಶ್ರೀಲಕ್ಷ್ಮೀ ಎಚ್
| Edited By: |

Updated on: May 14, 2025 | 6:25 PM

Share

ಸಮಯ್ ರೈನಾ (Samay Raina) ಅವರು ಯೂಟ್ಯೂಬ್​ನಲ್ಲಿ ‘ಇಂಡಿಯಾಸ್ ಗಾಟ್ ಲೇಟೆಂಟ್’ ಹೆಸರಿನ ಶೋ ಮಾಡುತ್ತಿದ್ದರು. ಈ ಸ್ಟ್ಯಾಂಡಪ್ ಕಾಮಿಡಿಯನ್ ಮಾಡಿಕೊಂಡ ವಿವಾದ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದ್ದು ಗೊತ್ತೇ ಇದೆ. ಈ ವಿಚಾರಕ್ಕೆ ಸಂಬಂಧಿಸಿ ಕೇಸ್ ಕೂಡ ದಾಖಲಾಗಿದೆ ಅನ್ನೋದು ಹೊಸ ಸುದ್ದಿ ಏನೂ ಅಲ್ಲ. ಪಾಲಕರ ಲೈಂಗಿಕ ವಿಚಾರ ಮಾತನಾಡಿದ್ದು ವಿವಾದಕ್ಕೆ ಕಾರಣ ಆಗಿತ್ತು. ಈ ಶೋ ಕೂಡ ಬಂದ್ ಆಗಿತ್ತು. ಈಗ ಈ ಶೋ ಯಾವಾಗ ಮತ್ತೆ ಆರಂಭ ಆಗಲಿದೆ ಎಂಬ ಪ್ರಶ್ನೆ ಸಮಯ್ ಎದುರು ಬಂದಿದೆ.

ರಣವೀರ್ ಅಲಾಹಾಬಾದಿಯಾ ಅವರು ಸಮಯ್ ರೈನಾ ಶೋಗೆ ಬಂದಿದ್ದರು. ಈ ವೇಳೆ ಮಾತಿನ ಭರದಲ್ಲಿ ಅವರು ಏನೇನೋ ಮಾತನಾಡಿದ್ದರು. ತಂದೆ ತಾಯಿ ಲೈಂಗಿಕತೆ ಮಾತನಾಡಿದ್ದು ಸರಿ ಅಲ್ಲ ಎಂಬುದು ಅನೇಕ ಅಭಿಪ್ರಾಯ ಆಗಿತ್ತು. ಆ ಬಳಿಕ ಶೋಗೆ ಬ್ಯಾನ್ ಬೀಳುವ ಭಯ ಕಾಡಿತು. ಹೀಗಾಗಿ, ಈ ಶೋನ ಅಷ್ಟೂ ವಿಡಿಯೋನ ಸಮಯ್ ಅವರು ತೆಗೆದು ಹಾಕಿದ್ದಾರೆ. ಈಗ ಮತ್ತೆ ಶೋ ಯಾವಾಗ ಬರುತ್ತದೆ ಅನ್ನೋದು ಸದ್ಯದ ಪ್ರಶ್ನೆ.

ಸಮಯ್ ರೈನಾ ಇತ್ತೀಚೆಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರು. ಆಗ ಅವರಿಗೆ, ‘ಶೋ ವಾಪಾಸ್ ಯಾವಾಗ ಬರುತ್ತದೆ’ ಎಂದು ಕೇಳಲಾಯಿತು. ಅವರು ನಕ್ಕಿ ಸುಮ್ಮನೆ ಹೋಗಿದ್ದಾರೆ. ಅವರು ಈ ಪ್ರಶ್ನೆಗೆ ಉತ್ತರ ನೀಡಬೇಕಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಅವರು ಈ ಬಗ್ಗೆ ಯೋಚಿಸಿದ್ದಾರೋ ಅಥವಾ ಇಲ್ಲವೋ ಎಂಬುದು ಕೂಡ ಇನ್ನೂ ತಿಳಿದು ಬಂದಿಲ್ಲ.

ಇದನ್ನೂ ಓದಿ:ಕಾಮಿಡಿಯನ್ ಸಮಯ್ ರೈನಾ ಬಳಿ ಆಟೋಗ್ರಾಫ್ ಕೇಳಿದ ಅಮಿತಾಭ್; ಇದರ ಹಿಂದಿನ ಕಥೆ ಏನು?

ರಣವೀರ್ ಹೇಳಿದ್ದು ಏನು?

ಶೋನಲ್ಲಿ ಮಾತನಾಡಿದ್ದ ರಣವೀರ್, ‘ನಿಮ್ಮ ಪಾಲಕರು ಲೈಂಗಿಕ ಕ್ರಿಯೆ ನಡೆಸುವುದನ್ನು ನಿತ್ಯವೂ ನೋಡುತ್ತಾ ಇರುತ್ತೀರಾ ಅಥವಾ ಅವರ ಜೊತೆ ಸೇರಿ ಅದನ್ನು ನಿಲ್ಲಿಸುತ್ತೀರಾ’ ಎಂದು ಕೇಳಿದ್ದರು. ಇದು ಗಂಭೀರ ರೂಪ ಪಡೆದು ಅವರ ವಿರುದ್ಧ ಎಫ್​ಐಆರ್ ಕೂಡ ದಾಖಲು ಆಯಿತು.

ಸಮಯ್ ಕಂಬ್ಯಾಕ್

ಸಮಯ್ ಕಂಬ್ಯಾಕ್​ಗೆ ರೆಡಿ ಆಗಿದ್ದಾರೆ. ಹೊಸ ಅಂತಾರಾಷ್ಟ್ರೀಯ ಟೂರ ಆಯೋಜನೆ ಮಾಡುತ್ತಿದ್ದಾರೆ. ಯುರೋಪ್, ಯುಕೆ, ಆಸ್ಟ್ರೇಲಿಯಾ, ನ್ಯೂಜಿಲೆಂಡ್​ಗೆ ಅವರು ತೆರಳುತ್ತಿದ್ದಾರೆ. ಜೂನ್ 5ರಿಂದ ಆರಂಭ ಆಗಿ ಜುಲೈ 20ರವರೆಗೆ ಶೋ ಇರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ