AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಪ್​ ಸೀನ್​ ವಿಚಾರಕ್ಕೆ ಇಡೀ ಚಿತ್ರತಂಡದ ವಿರೋಧ ಕಟ್ಟಿಕೊಂಡಿದ್ದ ಜಯಾ ಬಚ್ಚನ್; ನಂತರ ಏನಾಯ್ತು?

ಜಯಾ ಬಚ್ಚನ್​ ತೀರ್ಮಾನದಿಂದ ನಿರ್ದೇಶಕರು ಗರಂ ಆದರು. ನಟಿಯ ವಿರುದ್ಧ ಕಲಾವಿದರ ಸಂಘಕ್ಕೆ ದೂರು ನೀಡುವುದಾಗಿಯೂ ನಿರ್ಮಾಪಕರು ಪಟ್ಟು ಹಿಡಿದಿದ್ದರು.

ರೇಪ್​ ಸೀನ್​ ವಿಚಾರಕ್ಕೆ ಇಡೀ ಚಿತ್ರತಂಡದ ವಿರೋಧ ಕಟ್ಟಿಕೊಂಡಿದ್ದ ಜಯಾ ಬಚ್ಚನ್; ನಂತರ ಏನಾಯ್ತು?
‘ಏಕ್​ ನಝರ್​’ ಪೋಸ್ಟರ್​
ಮದನ್​ ಕುಮಾರ್​
|

Updated on:Apr 10, 2023 | 3:19 PM

Share

​ಭಾರತೀಯ ಚಿತ್ರರಂಗದ ಖ್ಯಾತ ನಟಿ ಜಯಾ ಬಚ್ಚನ್ (Jaya Bachchan)​ ಅವರಿಗೆ ಏಪ್ರಿಲ್​ 9ರಂದು ಜನ್ಮದಿನದ ಸಂಭ್ರಮ. ಆ ಪ್ರಯುಕ್ತ ಅಭಿಮಾನಿಗಳು ನಟಿಯ ಹಳೇ ದಿನಗಳನ್ನು ಮೆಲುಕು ಹಾಕಿದ್ದಾರೆ. ಮದುವೆಗೂ ಮುನ್ನ ಅಮಿತಾಭ್​ ಬಚ್ಚನ್​ (Amitabh Bachchan) ಮತ್ತು ಜಯಾ ಅವರು ‘ಏಕ್​ ನಝರ್​’ (Ek Nazar) ಸಿನಿಮಾದಲ್ಲಿ ಜೊತೆಯಾಗಿ ನಟಿಸಿದ್ದರು. ಆ ಸಿನಿಮಾದ ಕಥೆಯಲ್ಲಿ ಖಳನಾಯಕನು ಜಯಾ ಅವರ ಬಟ್ಟೆ ಹರಿದು, ಅತ್ಯಾಚ್ಯಾರ ಮಾಡುವಂತಹ ಸನ್ನಿವೇಶ ಇತ್ತು. ಆದರೆ ಬಟ್ಟೆ ಹರಿದುಕೊಂಡು ನಟಿಸಲು ಜಯಾ ಒಪ್ಪಲೇ ಇಲ್ಲ. ಈ ಘಟನೆಯಿಂದಾಗಿ ಅವರು ಇಡೀ ಚಿತ್ರತಂಡದ ವಿರೋಧ ಕಟ್ಟಿಕೊಳ್ಳಬೇಕಾಯಿತು. ಅಮಿತಾಭ್​ ಬಚ್ಚನ್​ ಅವರು ಸಂಧಾನಕ್ಕೆ ನಿಂತರೂ ಕೂಡ ಜಯಾ ಅದಕ್ಕೆಲ್ಲ ಒಪ್ಪಲೇ ಇಲ್ಲ. ಆ ಘಟನೆಯನ್ನು ಈ ಹಿಂದಿನ ಸಂದರ್ಶನವೊಂದರಲ್ಲಿ ಜಯಾ ಬಚ್ಚನ್​ ಅವರು ಹೇಳಿಕೊಂಡಿದ್ದರು.

ಜಯಾ ಬಚ್ಚನ್​ ಅವರದ್ದು ನೇರ ಮತ್ತು ನಿಷ್ಠುರವಾದ ವ್ಯಕ್ತಿತ್ವ. ತಮ್ಮ ನಿಲುವುಗಳ ವಿಚಾರದಲ್ಲಿ ಅವರು ಎಂದಿಗೂ ರಾಜಿ ಆಗುವವರಲ್ಲ. ಅದು 1972 ಸಮಯ. ‘ಏಕ್​ ನಜರ್​’ ಶೂಟಿಂಗ್​ ನಡೆಯುತ್ತಿದ್ದಾಗ ಅತ್ಯಾಚಾರದ ಸನ್ನಿವೇಶದಲ್ಲಿ ಬಟ್ಟೆ ಹರಿದುಕೊಂಡು ನಟಿಸಲು ಜಯಾ ನಿರಾಕರಿಸಿದರು. ಅದು ನಿರ್ದೇಶಕರ ಮತ್ತು ನಿರ್ಮಾಪಕರ ಕೋಪಕ್ಕೆ ಕಾರಣ ಆಯಿತು. ಜಯಾ ವಿರುದ್ಧ ಕಲಾವಿದರ ಸಂಘಕ್ಕೆ ದೂರು ನೀಡುವುದಾಗಿಯೂ ನಿರ್ಮಾಪಕರು ಪಟ್ಟು ಹಿಡಿದಿದ್ದರು. ಆಗಲೂ ಜಯಾ ಬಚ್ಚನ್​ ಅವರು ರಾಜಿ ಆಗಲೇ ಇಲ್ಲ.

ಇದನ್ನೂ ಓದಿ: ‘ಕೌನ್ ಬನೇಗಾ ಕರೋಡ್​ಪತಿ’ ಕಾರ್ಯಕ್ರಮಕ್ಕೆ ಜಯಾ ಬಚ್ಚನ್ ಎಂಟ್ರಿ; ಕಣ್ಣೀರು ಹಾಕಿದ ಅಮಿತಾಭ್  

ಇದನ್ನೂ ಓದಿ
Image
ಸಿದ್ದಗಂಗಾ ಶ್ರೀಗಳ ಪಾತ್ರದಲ್ಲಿ ಅಮಿತಾಭ್ ಬಚ್ಚನ್​?; ಸಿದ್ಧವಾಗುತ್ತಿದೆ ಮಿನಿ ಸಿನಿ ಸೀರಿಸ್​
Image
ಅಮಿತಾಭ್​ ಬಚ್ಚನ್​ ಸಿನಿಮಾಗೆ ತಡೆಕೋರಿ ಅರ್ಜಿ ಸಲ್ಲಿಸಿದ ವ್ಯಕ್ತಿಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್​
Image
79ರ ಪ್ರಾಯದ ಅಮಿತಾಭ್​ ಆರೋಗ್ಯದ ಬಗ್ಗೆ ಮೂಡಿದೆ ಆತಂಕ; ಒಂದೇ ಟ್ವೀಟ್​ನಿಂದ ಗಾಬರಿಗೊಳಿಸಿದ ಬಿಗ್​ ಬಿ
Image
ಅಮಿತಾಭ್​ ಬಚ್ಚನ್​ ವ್ಯಕ್ತಿತ್ವ ಎಂಥದ್ದು? ಇಂಚಿಂಚು ವಿವರಿಸಿದ ರಶ್ಮಿಕಾ ಮಂದಣ್ಣ

ಈ ಜಟಾಪಟಿಯಿಂದಾಗಿ ಎರಡು ದಿನಗಳ ಕಾಲ ಶೂಟಿಂಗ್​ ನಿಂತಿತು. ಚಿತ್ರದ ನಾಯಕ ಅಮಿತಾಭ ಬಚ್ಚನ್​ ಅವರು ಆಗ ಮಾತುಕತೆಗೆ ಮುಂದಾದರು. ‘ಸ್ಕ್ರಿಪ್ಟ್​ನಲ್ಲಿ ಸನ್ನಿವೇಶ ಮತ್ತು ಪಾತ್ರವನ್ನು ಆ ರೀತಿ ಬರೆಯಲಾಗಿದೆ ಎಂದಮೇಲೆ ನೀವು ಹಾಗೆ ನಟಿಸಲೇಬೇಕಲ್ಲವೇ’ ಎಂದು ಅಮಿತಾಭ್​ ಬಚ್ಚನ್​ ಅವರು ಪ್ರಶ್ನಿಸಿದರು. ಆದರೂ ಕೂಡ ಜಯಾ ಒಪ್ಪಲೇ ಇಲ್ಲ.

ಇದನ್ನೂ ಓದಿ: ಮಾಸ್ಕ್​ ತೆಗೆಯಬೇಕು ಎಂದು ಜಯಾ ಬಚ್ಚನ್​ಗೆ ಒತ್ತಾಯ ಮಾಡಿದ ಕಾಜೋಲ್​; ನೆಟ್ಟಿಗರ​ ಪ್ರತಿಕ್ರಿಯೆ ಏನು?

ಎಕ್ಸ್​ಪೋಸ್​ ಮಾಡುವಂತಹ ಸನ್ನಿವೇಶಗಳಿಗೂ ಜಯಾ ಅವರು ನೋ ಎನ್ನುತ್ತಿದ್ದರು. ತಾವು ಮಧ್ಯಮ ವರ್ಗದಿಂದ ಬಂದಿದ್ದರಿಂದಲೇ ಈ ಮನಸ್ಥಿತಿ ರೂಢಿ ಆಗಿರಬಹುದು ಎಂದು ಅವರು ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ‘ಏಕ್​ ನಝರ್​’ ಸಿನಿಮಾ ಬಳಿಕ 1973ರಲ್ಲಿ ಜಯಾ ಮತ್ತು ಅಮಿತಾಭ್​ ಬಚ್ಚನ್​ ಅವರು ‘ಝಂಜೀರ್​’ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದರು. ಅದೇ ವರ್ಷ ಜೂನ್​ 3ರಂದು ಅವರಿಬ್ಬರು ಹಸೆಮಣೆ ಏರಿದರು. 50ಕ್ಕೂ ಅಧಿಕ ಸಿನಿಮಾಗಳಲ್ಲಿ ಜಯಾ ಬಚ್ಚನ್​ ಅವರು ನಟಿಸಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:19 pm, Mon, 10 April 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ