AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಮಗ ಡ್ರಗ್ಸ್​ ಸೇವಿಸಲಿ, ಹುಡುಗಿಯರ ಹಿಂದೆ ಹೋಗಲಿ’ ಎಂದಿದ್ದ ಶಾರುಖ್​; ಇಲ್ಲಿದೆ ಶಾಕಿಂಗ್​ ವಿಡಿಯೋ​

ತಮ್ಮ ಪುತ್ರ ಆರ್ಯನ್​ ಖಾನ್​ ಡ್ರಗ್ಸ್​ ಸೇವಿಸಲಿ, ಮನಬಂದಷ್ಟು ಸಿಗರೇಟ್​ ಸೇದಲಿ, ಬೇಕಾದರೆ ಹುಡುಗಿಯರ ಹಿಂದೆಯೂ ಹೋಗಲಿ ಎಂದು ಶಾರುಖ್​ ಖಾನ್​ ಹೇಳಿರುವ ವಿಡಿಯೋ ಈಗ ವೈರಲ್​ ಆಗುತ್ತಿದೆ. ಅದನ್ನು ಕಂಡು ಜನರು ಖಾರವಾಗಿ ಟೀಕೆ ಮಾಡುತ್ತಿದ್ದಾರೆ.

‘ನನ್ನ ಮಗ ಡ್ರಗ್ಸ್​ ಸೇವಿಸಲಿ, ಹುಡುಗಿಯರ ಹಿಂದೆ ಹೋಗಲಿ’ ಎಂದಿದ್ದ ಶಾರುಖ್​; ಇಲ್ಲಿದೆ ಶಾಕಿಂಗ್​ ವಿಡಿಯೋ​
ಆರ್ಯನ್​ ಖಾನ್​, ಶಾರುಖ್​ ಖಾನ್​
TV9 Web
| Edited By: |

Updated on:Oct 04, 2021 | 9:03 AM

Share

ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಅ.2ರ ರಾತ್ರಿ ರೇವ್​ ಪಾರ್ಟಿ ಆಯೋಜಿಸಲಾಗಿತ್ತು. ಅದರಲ್ಲಿ ಬಾಲಿವುಡ್​ನ ಸ್ಟಾರ್​ ನಟ ಶಾರುಖ್​ ಖಾನ್ ಪುತ್ರ ಆರ್ಯನ್​ ಖಾನ್​ ಕೂಡ ಭಾಗಿ ಆಗಿದ್ದರು. ಹಾಗಾಗಿ ಅವರನ್ನು ಎನ್​ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಘಟನೆಯಿಂದಾಗಿ ಶಾರುಖ್​ ಕುಟುಂಬಕ್ಕೆ ಸಂಕಷ್ಟ ಎದುರಾಗಿದೆ. ಅಚ್ಚರಿ ಏನೆಂದರೆ, ಹಲವು ವರ್ಷಗಳ ಹಿಂದೆಯೇ ಶಾರುಖ್​ ಖಾನ್​ ಅವರು ಮಗನ ಬಗ್ಗೆ ಮಾತನಾಡಿದ್ದರು. ತಮ್ಮ ಪುತ್ರ ಡ್ರಗ್ಸ್​ ಸೇವಿಸಲಿ, ಹುಡುಗಿಯರ ಹಿಂದೆ ಬೇಕಾದರೂ ಹೋಗಲಿ ಎಂದು ಅವರು ಹೇಳಿರುವ ವಿಡಿಯೋ ಈಗ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

ಅದು 1997ರಲ್ಲಿ ಶಾರುಖ್​ ಖಾನ್​ ಮತ್ತು ಗೌರಿ ಖಾನ್​ ಜೊತೆಯಾಗಿ ನೀಡಿದ್ದ ಸಂದರ್ಶನ. ಅದರಲ್ಲಿ ಅವರು ತಮ್ಮ ಪುತ್ರ ಆರ್ಯನ್​ ಖಾನ್​ ಬಗ್ಗೆ ಮಾತನಾಡಿದ್ದರು. ‘ಆರ್ಯನ್​ಗೆ ನಾನು ಹೇಳಿಬಿಟ್ಟಿದ್ದೇನೆ. ಅವನು ಹುಡುಗಿಯರ ಹಿಂದೆ ಹೋಗಬಹುದು. ಎಷ್ಟು ಬೇಕಾದರೂ ಸಿಗರೇಟ್ ಸೇದಬಹುದು. ಡ್ರಗ್ಸ್​ ಸೇವಿಸಬಹುದು ಮತ್ತು ಸೆ*ಕ್ಸ್​ ಕೂಡ ಮಾಡಬಹುದು. ನಾನು ಏನೆಲ್ಲ ಮಾಡಿಲ್ಲವೋ ಅದನ್ನೆಲ್ಲ ಆರ್ಯನ್​ ಮಾಡಬಹುದು. ಚಿಕ್ಕವಯಸ್ಸಿನಲ್ಲೇ ಶುರುಮಾಡಲಿ. ಲೈಫ್​ ಎಂಜಾಯ್​ ಮಾಡಲಿ’ ಎಂದು ಶಾರುಖ್​ ಹೇಳಿದ್ದರು.

ಪಕ್ಕದಲ್ಲೇ ಕುಳಿತು ಇದನ್ನೆಲ್ಲ ಕೇಳಿಸಿಕೊಂಡಿದ್ದ ಗೌರಿ ಖಾನ್​ ಕಿಸಿಕಿಸಿ ನಕ್ಕಿದ್ದರು. ಆ ವಿಡಿಯೋ ಈಗ ಸಖತ್​ ವೈರಲ್​ ಆಗುತ್ತಿದೆ. ಅದನ್ನು ಕಂಡು ಜನರು ಖಾರವಾಗಿ ಟೀಕೆ ಮಾಡುತ್ತಿದ್ದಾರೆ. ಹೀಗೆ ಬೆಳೆಸಿದ್ದರ ಪರಿಣಾಮವಾಗಿಯೇ ಆರ್ಯನ್ ಖಾನ್​ ಇಂದು ಹಾದಿ ತಪ್ಪಿದ್ದಾರೆ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ.

ಅಂದಹಾಗೆ, ಈ ಎಲ್ಲ ಮಾತುಗಳನ್ನು ಶಾರುಖ್​ ಖಾನ್​ ಅವರು ತಮಾಷೆಗೆ ಹೇಳಿರಬಹುದು. ಆದರೆ ಅದೆಲ್ಲವೂ ಇಂದು ನಿಜವಾಗಿದೆ. ಹಾಗಾಗಿ ಶಾರುಖ್​ ಅವರನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡಲಾಗುತ್ತಿದೆ. ಈಗ ಆರ್ಯನ್​ ಖಾನ್​ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿಗಾಗಿ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ:

ಶಾರುಖ್​ ಪತ್ನಿ ಗೌರಿ ಖಾನ್​ಗೂ ಅಂಟಿತ್ತು ಗಾಂಜಾ ಕಳಂಕ; ಏರ್​ಪೋರ್ಟ್​ನಲ್ಲಿ ನಡೆದ ಆ ಘಟನೆ ನಿಜವೇ?

ಡ್ರಗ್ಸ್​ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶಾರುಖ್​ ಪುತ್ರನ ಹಿನ್ನೆಲೆ ಏನು? ಇಲ್ಲಿದೆ ಆರ್ಯನ್​ ಖಾನ್​ ಇತಿಹಾಸ

Published On - 9:02 am, Mon, 4 October 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್