‘ನನ್ನ ಮಗ ಡ್ರಗ್ಸ್​ ಸೇವಿಸಲಿ, ಹುಡುಗಿಯರ ಹಿಂದೆ ಹೋಗಲಿ’ ಎಂದಿದ್ದ ಶಾರುಖ್​; ಇಲ್ಲಿದೆ ಶಾಕಿಂಗ್​ ವಿಡಿಯೋ​

ತಮ್ಮ ಪುತ್ರ ಆರ್ಯನ್​ ಖಾನ್​ ಡ್ರಗ್ಸ್​ ಸೇವಿಸಲಿ, ಮನಬಂದಷ್ಟು ಸಿಗರೇಟ್​ ಸೇದಲಿ, ಬೇಕಾದರೆ ಹುಡುಗಿಯರ ಹಿಂದೆಯೂ ಹೋಗಲಿ ಎಂದು ಶಾರುಖ್​ ಖಾನ್​ ಹೇಳಿರುವ ವಿಡಿಯೋ ಈಗ ವೈರಲ್​ ಆಗುತ್ತಿದೆ. ಅದನ್ನು ಕಂಡು ಜನರು ಖಾರವಾಗಿ ಟೀಕೆ ಮಾಡುತ್ತಿದ್ದಾರೆ.

‘ನನ್ನ ಮಗ ಡ್ರಗ್ಸ್​ ಸೇವಿಸಲಿ, ಹುಡುಗಿಯರ ಹಿಂದೆ ಹೋಗಲಿ’ ಎಂದಿದ್ದ ಶಾರುಖ್​; ಇಲ್ಲಿದೆ ಶಾಕಿಂಗ್​ ವಿಡಿಯೋ​
ಆರ್ಯನ್​ ಖಾನ್​, ಶಾರುಖ್​ ಖಾನ್​
Follow us
| Updated By: ಮದನ್​ ಕುಮಾರ್​

Updated on:Oct 04, 2021 | 9:03 AM

ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಅ.2ರ ರಾತ್ರಿ ರೇವ್​ ಪಾರ್ಟಿ ಆಯೋಜಿಸಲಾಗಿತ್ತು. ಅದರಲ್ಲಿ ಬಾಲಿವುಡ್​ನ ಸ್ಟಾರ್​ ನಟ ಶಾರುಖ್​ ಖಾನ್ ಪುತ್ರ ಆರ್ಯನ್​ ಖಾನ್​ ಕೂಡ ಭಾಗಿ ಆಗಿದ್ದರು. ಹಾಗಾಗಿ ಅವರನ್ನು ಎನ್​ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಘಟನೆಯಿಂದಾಗಿ ಶಾರುಖ್​ ಕುಟುಂಬಕ್ಕೆ ಸಂಕಷ್ಟ ಎದುರಾಗಿದೆ. ಅಚ್ಚರಿ ಏನೆಂದರೆ, ಹಲವು ವರ್ಷಗಳ ಹಿಂದೆಯೇ ಶಾರುಖ್​ ಖಾನ್​ ಅವರು ಮಗನ ಬಗ್ಗೆ ಮಾತನಾಡಿದ್ದರು. ತಮ್ಮ ಪುತ್ರ ಡ್ರಗ್ಸ್​ ಸೇವಿಸಲಿ, ಹುಡುಗಿಯರ ಹಿಂದೆ ಬೇಕಾದರೂ ಹೋಗಲಿ ಎಂದು ಅವರು ಹೇಳಿರುವ ವಿಡಿಯೋ ಈಗ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

ಅದು 1997ರಲ್ಲಿ ಶಾರುಖ್​ ಖಾನ್​ ಮತ್ತು ಗೌರಿ ಖಾನ್​ ಜೊತೆಯಾಗಿ ನೀಡಿದ್ದ ಸಂದರ್ಶನ. ಅದರಲ್ಲಿ ಅವರು ತಮ್ಮ ಪುತ್ರ ಆರ್ಯನ್​ ಖಾನ್​ ಬಗ್ಗೆ ಮಾತನಾಡಿದ್ದರು. ‘ಆರ್ಯನ್​ಗೆ ನಾನು ಹೇಳಿಬಿಟ್ಟಿದ್ದೇನೆ. ಅವನು ಹುಡುಗಿಯರ ಹಿಂದೆ ಹೋಗಬಹುದು. ಎಷ್ಟು ಬೇಕಾದರೂ ಸಿಗರೇಟ್ ಸೇದಬಹುದು. ಡ್ರಗ್ಸ್​ ಸೇವಿಸಬಹುದು ಮತ್ತು ಸೆ*ಕ್ಸ್​ ಕೂಡ ಮಾಡಬಹುದು. ನಾನು ಏನೆಲ್ಲ ಮಾಡಿಲ್ಲವೋ ಅದನ್ನೆಲ್ಲ ಆರ್ಯನ್​ ಮಾಡಬಹುದು. ಚಿಕ್ಕವಯಸ್ಸಿನಲ್ಲೇ ಶುರುಮಾಡಲಿ. ಲೈಫ್​ ಎಂಜಾಯ್​ ಮಾಡಲಿ’ ಎಂದು ಶಾರುಖ್​ ಹೇಳಿದ್ದರು.

ಪಕ್ಕದಲ್ಲೇ ಕುಳಿತು ಇದನ್ನೆಲ್ಲ ಕೇಳಿಸಿಕೊಂಡಿದ್ದ ಗೌರಿ ಖಾನ್​ ಕಿಸಿಕಿಸಿ ನಕ್ಕಿದ್ದರು. ಆ ವಿಡಿಯೋ ಈಗ ಸಖತ್​ ವೈರಲ್​ ಆಗುತ್ತಿದೆ. ಅದನ್ನು ಕಂಡು ಜನರು ಖಾರವಾಗಿ ಟೀಕೆ ಮಾಡುತ್ತಿದ್ದಾರೆ. ಹೀಗೆ ಬೆಳೆಸಿದ್ದರ ಪರಿಣಾಮವಾಗಿಯೇ ಆರ್ಯನ್ ಖಾನ್​ ಇಂದು ಹಾದಿ ತಪ್ಪಿದ್ದಾರೆ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ.

ಅಂದಹಾಗೆ, ಈ ಎಲ್ಲ ಮಾತುಗಳನ್ನು ಶಾರುಖ್​ ಖಾನ್​ ಅವರು ತಮಾಷೆಗೆ ಹೇಳಿರಬಹುದು. ಆದರೆ ಅದೆಲ್ಲವೂ ಇಂದು ನಿಜವಾಗಿದೆ. ಹಾಗಾಗಿ ಶಾರುಖ್​ ಅವರನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡಲಾಗುತ್ತಿದೆ. ಈಗ ಆರ್ಯನ್​ ಖಾನ್​ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿಗಾಗಿ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ:

ಶಾರುಖ್​ ಪತ್ನಿ ಗೌರಿ ಖಾನ್​ಗೂ ಅಂಟಿತ್ತು ಗಾಂಜಾ ಕಳಂಕ; ಏರ್​ಪೋರ್ಟ್​ನಲ್ಲಿ ನಡೆದ ಆ ಘಟನೆ ನಿಜವೇ?

ಡ್ರಗ್ಸ್​ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶಾರುಖ್​ ಪುತ್ರನ ಹಿನ್ನೆಲೆ ಏನು? ಇಲ್ಲಿದೆ ಆರ್ಯನ್​ ಖಾನ್​ ಇತಿಹಾಸ

Published On - 9:02 am, Mon, 4 October 21

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ