AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೊನಾಲಿ ಬೇಂದ್ರೆಗೆ ರಾತ್ರಿ ಕರೆ ಮಾಡಿ ‘ಓಡಿ ಹೋಗಿ ಮದ್ವೆ ಆಗೋಣ ಬಾ’ ಎಂದಿದ್ರಾ ಸುನೀಲ್​ ಶೆಟ್ಟಿ? ಇಲ್ಲಿದೆ ಅಸಲಿ ವಿಷಯ

ಆರಂಭದಲ್ಲಿ ಸುನೀಲ್​ ಶೆಟ್ಟಿ ಜೊತೆ ಕೇಳಿಬಂದ ಗಾಸಿಪ್​ಗಳಿಗೆ ಸೊನಾಲಿ ಬೇಂದ್ರೆ ತಲೆ ಕೆಡಿಸಿಕೊಳ್ಳುತ್ತಿರಲಿಲ್ಲ. ಆದರೆ ನಂತರದಲ್ಲಿ ಅವರ ಖಾಸಗಿ ಜೀವನದ ಮೇಲೆ ಅದು ಪರಿಣಾಮ ಬೀರಲು ಆರಂಭಿಸಿತು.

ಸೊನಾಲಿ ಬೇಂದ್ರೆಗೆ ರಾತ್ರಿ ಕರೆ ಮಾಡಿ ‘ಓಡಿ ಹೋಗಿ ಮದ್ವೆ ಆಗೋಣ ಬಾ’ ಎಂದಿದ್ರಾ ಸುನೀಲ್​ ಶೆಟ್ಟಿ? ಇಲ್ಲಿದೆ ಅಸಲಿ ವಿಷಯ
ಸುನೀಲ್​ ಶೆಟ್ಟಿ - ಸೊನಾಲಿ ಬೇಂದ್ರೆ
TV9 Web
| Edited By: |

Updated on: Aug 21, 2021 | 8:21 AM

Share

ಚಿತ್ರರಂಗದಲ್ಲಿನ ಗಾಸಿಪ್​ಗಳು ಯಾವ ಹಂತಕ್ಕೆ ಬೇಕಿದ್ದರೂ ತಲುಪುತ್ತವೆ. ಕೆಲವು ಸೆಲೆಬ್ರಿಟಿಗಳು ತಮ್ಮ ಬಗ್ಗೆ ಕೇಳಿಬಂದ ಗಾಸಿಪ್​ಗೆ ಹೆಚ್ಚೇನೂ ಪ್ರತಿಕ್ರಿಯಿಸದೇ ಸುಮ್ಮನೆ ನಕ್ಕು ಮುಂದೆ ಸಾಗುತ್ತಾರೆ. ಆದರೆ ಇನ್ನೂ ಕೆಲವು ಸ್ಟಾರ್​​ಗಳಿಗೆ ಗಾಸಿಪ್​ಗಳಿಂದ ತೀವ್ರ ತೊಂದರೆ ಉಂಟಾಗುವ ಪ್ರಸಂಗ ಎದುರಾಗುತ್ತದೆ. ಒಂದು ಕಾಲದಲ್ಲಿ ಬಾಲಿವುಡ್​ನ ಟಾಪ್​ ನಟಿಯಾಗಿದ್ದ ಸೊನಾಲಿ ಬೇಂದ್ರೆ (Sonali Bendre) ಅವರು ನೆನಪಿಸಿಕೊಂಡ ಅಂಥ ಒಂದು ಘಟನೆಯ ವಿವರ ಇಲ್ಲಿದೆ. ಹಲವು ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿದ್ದ ಸೊನಾಲಿ ಬೇಂದ್ರೆ ಮತ್ತು ಸುನೀಲ್​ ಶೆಟ್ಟಿ (Suniel Shetty) ನಡುವೆ 90ರ ದಶಕದಲ್ಲಿ ಸಿಕ್ಕಾಪಟ್ಟೆ ಗುಸುಗುಸು ಕೇಳಿಬರುತ್ತಿತ್ತು.

ಆರಂಭದಲ್ಲಿ ಸೊನಾಲಿ ಬೇಂದ್ರೆ ಅವರು ಗಾಸಿಪ್​ಗಳಿಗೆ ತಲೆ ಕೆಡಿಸಿಕೊಳ್ಳುತ್ತಿರಲಿಲ್ಲ. ಆದರೆ ನಂತರದಲ್ಲಿ ಅವರ ಖಾಸಗಿ ಜೀವನದ ಮೇಲೆ ಅದು ಪರಿಣಾಮ ಬೀರಲು ಆರಂಭಿಸಿತು. ಎಷ್ಟರಮಟ್ಟಿಗೆಂದರೆ, ಅಪರಿಚಿತ ವ್ಯಕ್ತಿಯೊಬ್ಬ ಮಧ್ಯರಾತ್ರಿ ಅವರ ಮನೆಗೆ ಕರೆ ಮಾಡಿ ತಾನು ಸುನೀಲ್ ಶೆಟ್ಟಿ ಎಂದು ಹೇಳಿಕೊಂಡಿದ್ದ. ಅಲ್ಲದೆ, ‘ಓಡಿ ಹೋಗಿ ಮದುವೆ ಆಗೋಣ ಬಾ’ ಎಂದು ಆಹ್ವಾನ ಕೂಡ ನೀಡಿದ್ದನಂತೆ. ಈ ಘಟನೆ ಸೊನಾಲಿಗೆ ನಿಜಕ್ಕೂ ಶಾಕಿಂಗ್​ ಆಗಿತ್ತು. ಕರೆ ಮಾಡಿದ ವ್ಯಕ್ತಿ ಸುನೀಲ್​ ಶೆಟ್ಟಿ ಅಲ್ಲ ಎಂಬುದು ಅವರಿಗೆ ಕ್ಷಣಾರ್ಧಲ್ಲೇ ಗೊತ್ತಾಗಿತ್ತು.

‘ನನಗೆ ಆಗ ಇನ್ನೂ ಮದುವೆ ಆಗಿರಲಿಲ್ಲ. ಹಾಗಾಗಿ ಎಷ್ಟೇ ಗಾಸಿಪ್​ಗಳು ಹರಿದಾಡಿದರೂ ನಾನು ಯಾರಿಗೂ ಉತ್ತರ ನೀಡಬೇಕಿರಲಿಲ್ಲ. ಆದರೆ ವಿವಾಹಿತನಾಗಿದ್ದ ಸುನೀಲ್​ ಶೆಟ್ಟಿ ಅವರಿಗೆ ಎಷ್ಟು ತೊಂದರೆ ಆಗಿರಬಹುದು ಅಂತ ನಾನು ಯೋಚಿಸುತ್ತಿದ್ದೆ. ಅದರ ಬಗ್ಗೆ ನಾನು ಅವರ ಜೊತೆ ಚರ್ಚೆ ಕೂಡ ಮಾಡಲಿಲ್ಲ’ ಎಂದು ಸೊನಾಲಿ ಬೇಂದ್ರೆ ಹೇಳಿದ್ದಾರೆ.

ಸೊನಾಲಿ ಬೇಂದ್ರೆ ಸಂಬಂಧಿಕರು ಸಹ ಮನೆಗೆ ಬಂದು ಅಸಂಬದ್ಧ ಮಾತುಗಳನ್ನು ಆಡುತ್ತಿದ್ದರು. ‘ಈಗ ನಿಮಗೆ ಬೇಕಾದಷ್ಟು ಹಣ ಸಿಗುತ್ತಿದೆ. ನಿಮ್ಮ ಮಗಳು ಯಾವ ಹೀರೋ ಜೊತೆ ಏನೇ ಮಾಡಿದರೂ ನಿಮಗೆ ಚಿಂತೆ ಇಲ್ಲ’ ಎಂದು ಸಂಬಂಧಿಕರು ನೇರವಾಗಿ ಮಾತನಾಡಿಕೊಂಡಿದ್ದು ಸೊನಾಲಿ ಬೇರೆ ಮನಸ್ಸಿನ ಮೇಲೆ ತೀವ್ರ ಪರಿಣಾಮ ಬೀರಿತ್ತು. 2004ರ ಬಳಿಕ ಸೊನಾಲಿ ಬೇಂದ್ರ ಮುಖ್ಯಪಾತ್ರಗಳಲ್ಲಿ ನಟಿಸಲೇ ಇಲ್ಲ. 2018ರಲ್ಲಿ ಅವರು ಕ್ಯಾನ್ಸರ್​ನಿಂದ ಬಳಲುತ್ತಿರುವುದು ತಿಳಿದುಬಂತು. 2016ರವರೆಗೂ ಅವರು ಟಿವಿ ಶೋಗಳಿಗೆ ನಿರ್ಣಾಯಕಿಯಾಗಿ ಕೆಲಸ ಮಾಡಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಬಣ್ಣದ ಲೋಕದಿಂದ ಅಂತರ ಕಾಪಾಡಿಕೊಂಡಿದ್ದಾರೆ.

ಇದನ್ನೂ ಓದಿ:

ಬಾಯ್​ಫ್ರೆಂಡ್​ ರಾಹುಲ್​ ಜತೆ ಫೋಟೋ ಹಂಚಿಕೊಂಡ ಆಥಿಯಾ; ಇದು ನಿಜ ಎಂದ ಸುನೀಲ್​ ಶೆಟ್ಟಿ

‘ನಾಲ್ಕಲ್ಲ ನಲವತ್ತು ಬಾರಿ ಮದುವೆ ಆಗುತ್ತೇನೆ’; ಬಿಗ್​ ಬಾಸ್​ ಸ್ಪರ್ಧಿಯ ಖಡಕ್​ ಮಾತು

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ