AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ 2’ ಕತೆ ನಡೆಯುವುದು ಪಾಕಿಸ್ತಾನದಲ್ಲಿ, ಆದರೆ ಚಿತ್ರೀಕರಣ ಆಗಿದ್ದೆಲ್ಲಿ?

Dhurandhar 2 movie shooting: ‘ಧುರಂಧರ್ 2’ ಸಿನಿಮಾ ಭಾರತದ ಸೈನಿಕನೊಬ್ಬ ಗೂಢಚಾರಿಯಾಗಿ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಉಗ್ರರ ವಿರುದ್ಧ ಏಕಾಂಗಿಯಾಗಿ ಹೋರಾಡುವ ಕತೆ ಹೊಂದಿದೆ. ಸಹಜವಾಗಿಯೇ ಸಿನಿಮಾದ ಇಡೀ ಕತೆ ನಡೆಯುವುದು ಪಾಕಿಸ್ತಾನದಲ್ಲಿಯೇ. ಅದರಲ್ಲೂ ಪಾಕಿಸ್ತಾನದ ಕರಾಚಿಯ ಲಯಾರಿ ಎಂಬ ಸ್ಥಳದಲ್ಲಿ. ಸಿನಿಮಾ ನೋಡಿದವರು, ನಿರ್ದೇಶಕ ಆದಿತ್ಯ ಧರ್, ಪಾಕಿಸ್ತಾನವನ್ನು ಇರುವ ಹಾಗೆಯೇ ತೋರಿಸಿದ್ದಾರೆ ಎನ್ನುತ್ತಿದ್ದಾರೆ. ಸಿನಿಮಾದ ಕತೆ ನಡೆಯುವುದು ಪಾಕಿಸ್ತಾನದಲ್ಲಿ ಆದರೆ ಸಿನಿಮಾ ಚಿತ್ರೀಕರಣ ಆಗಿರುವುದು ಎಲ್ಲಿ?

‘ಧುರಂಧರ್ 2’ ಕತೆ ನಡೆಯುವುದು ಪಾಕಿಸ್ತಾನದಲ್ಲಿ, ಆದರೆ ಚಿತ್ರೀಕರಣ ಆಗಿದ್ದೆಲ್ಲಿ?
Dhurandhar 2
ಮಂಜುನಾಥ ಸಿ.
|

Updated on: Mar 22, 2026 | 7:10 PM

Share

ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ (Dhurandahr 2) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸುತ್ತಿದೆ. ಆದಿತ್ಯ ಧರ್ ನಿರ್ದೇಶಿಸಿರುವ ಈ ಸಿನಿಮಾ ಭಾರತದ ಸೈನಿಕನೊಬ್ಬ ಗೂಢಚಾರಿಯಾಗಿ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಉಗ್ರರ ವಿರುದ್ಧ ಏಕಾಂಗಿಯಾಗಿ ಹೋರಾಡುವ ಕತೆ ಹೊಂದಿದೆ. ಸಹಜವಾಗಿಯೇ ಸಿನಿಮಾದ ಇಡೀ ಕತೆ ನಡೆಯುವುದು ಪಾಕಿಸ್ತಾನದಲ್ಲಿಯೇ. ಅದರಲ್ಲೂ ಪಾಕಿಸ್ತಾನದ ಕರಾಚಿಯ ಲಯಾರಿ ಎಂಬ ಸ್ಥಳದಲ್ಲಿ. ಸಿನಿಮಾ ನೋಡಿದವರು, ನಿರ್ದೇಶಕ ಆದಿತ್ಯ ಧರ್, ಪಾಕಿಸ್ತಾನವನ್ನು ಇರುವ ಹಾಗೆಯೇ ತೋರಿಸಿದ್ದಾರೆ ಎನ್ನುತ್ತಿದ್ದಾರೆ. ಸಿನಿಮಾದ ಕತೆ ನಡೆಯುವುದು ಪಾಕಿಸ್ತಾನದಲ್ಲಿ ಆದರೆ ಸಿನಿಮಾ ಚಿತ್ರೀಕರಣ ಆಗಿರುವುದು ಎಲ್ಲಿ?

ಎಲ್ಲರಿಗೂ ಗೊತ್ತಿರುವಂತೆ ಪಾಕಿಸ್ತಾನದಲ್ಲಿ ಭಾರತದ ಸಿನಿಮಾ ಚಿತ್ರೀಕರಣಕ್ಕೆ ಅವಕಾಶ, ಅನುಮತಿ ನೀಡಲಾಗುವುದಿಲ್ಲ. ಅಲ್ಲದೆ ಭದ್ರತಾ ಸಮಸ್ಯೆಯೂ ಇದ್ದೇ ಇರುತ್ತದೆ. ಇದೇ ಕಾರಣಕ್ಕೆ ನಿರ್ದೇಶಕ ಆದಿತ್ಯ ಧರ್ ಅವರು ಸಿನಿಮಾದ ಚಿತ್ರೀಕರಣವನ್ನು ಬೇರೆ ಬೇರೆ ಕಡೆಗಳಲ್ಲಿ ಮಾಡಿದ್ದಾರೆ. ವಿಶೇಷವಾಗಿ ಭಾರತದ ಕೆಲವು ಭಾಗಗಳು ಹಾಗೂ ಥೈಲೆಂಡ್​​ಗಳಲ್ಲಿ ಸಿನಿಮಾದ ಚಿತ್ರೀಕರಣ ಮಾಡಲಾಗಿದೆ. ಅದರಲ್ಲೂ ಭಾರತದಲ್ಲಿ ಸಿನಿಮಾದ ಚಿತ್ರೀಕರಣ ಮಾಡುವಾಗ ಕೆಲವು ಸಮಸ್ಯೆಗಳನ್ನು ಸಹ ಚಿತ್ರತಂಡ ಎದುರಿಸಿದ್ದಿದೆ.

ಚಿತ್ರದ ಪ್ರಮುಖ ಭಾಗಗಳನ್ನು ಪಂಜಾಬ್‌ನ ಲುಧಿಯಾನದ ಸಮೀಪವಿರುವ ಖೇರಾ ಗ್ರಾಮದಲ್ಲಿ ಚಿತ್ರೀಕರಿಸಲಾಗಿದೆ. ಇಲ್ಲಿನ ಕೆಲವು ಗಲ್ಲಿಗಳನ್ನು ಪಾಕಿಸ್ತಾನದ ‘ಲ್ಯಾರಿ’ ಪ್ರದೇಶದಂತೆ ಕಾಣುವಂತೆ ಸೆಟ್ ಹಾಕಲಾಗಿತ್ತು. ಚಿತ್ರೀಕರಣಕ್ಕಾಗಿ ಇಲ್ಲಿ ಪಾಕಿಸ್ತಾನಿ ಧ್ವಜಗಳನ್ನು ಹಾಕಿದಾಗ ಸ್ಥಳೀಯರಲ್ಲಿ ಕುತೂಹಲ ಮತ್ತು ಸ್ವಲ್ಪ ಗೊಂದಲವೂ ಉಂಟಾಗಿತ್ತು. ಕೆಲವರು ಪ್ರಶ್ನೆ ಸಹ ಮಾಡಿದ್ದರಂತೆ. ಅಲ್ಲದೆ, ಅಮೃತಸರದ ಸುವರ್ಣ ಮಂದಿರ ಮತ್ತು ಲುಧಿಯಾನದ ಸಾಹ್ನೆವಾಲ್ ವಿಮಾನ ನಿಲ್ದಾಣದಲ್ಲೂ ಚಿತ್ರೀಕರಣ ನಡೆದಿದೆ.

ಪಾಕಿಸ್ತಾನದ ಕರಾಚಿಯ ಕೆಲವು ದೃಶ್ಯಗಳನ್ನು ಮತ್ತು ಚಿತ್ರದ ಸಿನಿಮಾದ ಸಾಹಸ ಮತ್ತು ಕೆಲ ಚೇಸ್ ದೃಶ್ಯಗಳನ್ನು ಥೈಲ್ಯಾಂಡ್‌ನಲ್ಲಿ ಚಿತ್ರೀಕರಿಸಲಾಗಿದೆ. ಮುಂಬೈನ ಫಿಲ್ಮಿಸ್ಟಾನ್ ಸ್ಟುಡಿಯೋ ಮತ್ತು ಮಡ್ ಐಲ್ಯಾಂಡ್‌ನಲ್ಲಿ ಚಿತ್ರದ ಒಳಾಂಗಣ ಹಾಗೂ ಕೆಲವು ಕರಾವಳಿ ತೀರದ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. ದೋಂಬಿವಲಿ-ಮಂಕೋಲಿ ಸೇತುವೆಯ ಮೇಲೂ ಸಾಹಸ ದೃಶ್ಯಗಳ ಚಿತ್ರೀಕರಣ ನಡೆದಿದೆ. ಚಿತ್ರದ ಕೆಲವು ಸಸ್ಪೆನ್ಸ್ ದೃಶ್ಯಗಳಿಗಾಗಿ ಲಡಾಖ್‌ನ ಹಿಮಪರ್ವತಗಳು ಮತ್ತು ಹಿಮಾಚಲ ಪ್ರದೇಶದ ಕಸೌಲಿ ಎಂಬ ಸುಂದರ ಪ್ರದೇಶಗಳನ್ನು ಬಳಸಿಕೊಳ್ಳಲಾಗಿದೆ.

ಇದನ್ನೂ ಓದಿ:‘ನಾನು ಮೋದಿಯ ಹೆಮ್ಮೆಯ ಅಂಧಭಕ್ತೆ’: ‘ಧುರಂಧರ್ 2’ ನೋಡಿ ಹೇಳಿಕೆ ನೀಡಿದ ನಟಿ ರೇಣು ದೇಸಾಯಿ

ನಿರ್ದೇಶಕ ಆದಿತ್ಯ ಧರ್ ಅವರು ಪಾಕಿಸ್ತಾನಕ್ಕೆ ಹೋಗದೆ ಪಾಕಿಸ್ತಾನವನ್ನು ಸೃಷ್ಟಿ ಮಾಡಿದ್ದಾರೆ. ಮಾರ್ಚ್ 19ರಂದು ಬಿಡುಗಡೆ ಆಗಿರುವ ಈ ಸಿನಿಮಾ ಹಿಂದಿ ಮಾತ್ರವಲ್ಲದೆ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲೂ ತೆರೆ ಕಂಡಿದ್ದು. ಬಾಕ್ಸ್ ಆಫೀಸ್​​ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ರಣವೀರ್ ಸಿಂಗ್ ಅವರು ‘ಜಸ್ಕಿರತ್ ಸಿಂಗ್ ರಂಗಿ’ ಅಲಿಯಾಸ್ ಹಮ್ಜಾ ಅಲಿ ಮಜಾರಿ ಎಂಬ ಗೂಢಚಾರಿಯ ಪಾತ್ರದಲ್ಲಿ ಮಿಂಚಿದ್ದಾರೆ. ಅವರ ಜೊತೆಗೆ ಸಂಜಯ್ ದತ್ (ಚೌಧರಿ ಅಸ್ಲಂ), ಅರ್ಜುನ್ ರಾಂಪಾಲ್ (ಮೇಜರ್ ಇಕ್ಬಾಲ್), ಆರ್ ಮಾಧವನ್ (ಅಜಯ್ ಸನ್ಯಾಲ್) ಮತ್ತು ಅಕ್ಷಯ್ ಖನ್ನಾ (ರಹಮಾನ್ ಡಕೈತ್) ಪ್ರಮುಖ ಪಾತ್ರಗಳಲ್ಲಿದ್ದಾರೆ. ಈ ಚಿತ್ರವು 3 ಗಂಟೆ 49 ನಿಮಿಷಗಳಷ್ಟು ದೀರ್ಘವಾಗಿದ್ದು, ಇತ್ತೀಚಿನ ವರ್ಷಗಳ ಅತ್ಯಂತ ದೊಡ್ಡ ಸಾಹಸಮಯ ಚಿತ್ರಗಳಲ್ಲಿ ಒಂದೆನಿಸಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು
ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು
ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂ. ಹಣ ಜಪ್ತಿ!
ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂ. ಹಣ ಜಪ್ತಿ!