AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​​ಸಿಬಿ ಮ್ಯಾಚ್​​ಗಳಲ್ಲಿ ಸದಾ ಅನುಷ್ಕಾ ಶರ್ಮಾ ಪಕ್ಕ ಕೂರುವ ಈ ಸುಂದರಿ ಯಾರು?

ಅನುಷ್ಕಾ ಶರ್ಮಾ ಪಕ್ಕ ಕುಳಿತಿರುವ ಹುಡುಗಿ ಯಾರು ಎಂಬುದನ್ನು ಪತ್ತೆ ಹಚ್ಚಲು ಅನೇಕರು ಎಐ ಟೂಲ್​​​ಗಳನ್ನು ಬಳಕೆ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದರು. ಈ ವೇಳೆ ಅನೇಕರಿಗೆ ತಪ್ಪು ಮಾಹಿತಿ ಸಿಕ್ಕಿದೆ. ಅನುಷ್ಕಾ ಶರ್ಮಾ ಅವರ ಅತ್ತಿಗೆ ಭಾವನಾ ಕೊಹ್ಲಿ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು ಹರ್ಭಜನ್ ಸಿಂಗ್ ಪತ್ನಿ ಗೀತಾ ಬಸ್ರಾ ಎಂದಿದ್ದಾರೆ.

ಆರ್​​ಸಿಬಿ ಮ್ಯಾಚ್​​ಗಳಲ್ಲಿ ಸದಾ ಅನುಷ್ಕಾ ಶರ್ಮಾ ಪಕ್ಕ ಕೂರುವ ಈ ಸುಂದರಿ ಯಾರು?
ಅನುಷ್ಕಾ
ರಾಜೇಶ್ ದುಗ್ಗುಮನೆ
|

Updated on:Apr 07, 2026 | 7:26 AM

Share

ಸದ್ಯ ಐಪಿಎಲ್ ಹವಾ ಜೋರಾಗಿದೆ. ಆರ್​​ಸಿಬಿ ಒಳ್ಳೆಯ ಪರ್ಫಾರ್ಮೆನ್ಸ್ ನೀಡುತ್ತಿದ್ದು, ಆಡಿದ ಎರಡು ಪಂದ್ಯಗಳ ಪೈಕಿ ಎರಡೂ ಮ್ಯಾಚ್ ಗೆದ್ದಿದೆ. ಆರ್​​​ಸಿಬಿ ಮ್ಯಾಚ್ ನೋಡಲು ನಟಿ ಅನುಷ್ಕಾ ಶರ್ಮಾ ಆಗಮಿಸುತ್ತಿದ್ದಾರೆ. ಆರ್​​ಸಿಬಿಯ ಎರಡೂ ಪಂದ್ಯಗಳು ಬೆಂಗಳೂರಿನಲ್ಲಿ ನಡೆದಿದ್ದವು. ಹೀಗಾಗಿ, ಅನುಷ್ಕಾ ಶರ್ಮಾ ಅವರು ಬೆಂಗಳೂರಿಗೆ ಬಂದಿದ್ದರು. ಪ್ರತಿ ಪಂದ್ಯದಲ್ಲೂ ಅವರ ಪಕ್ಕ  ಓರ್ವ ಸುಂದರಿ ಕುಳಿತಿರುತ್ತಾರೆ. ಅವರು ಯಾರು ಎನ್ನುವ ಹುಡುಕಾಟ ನಡೆದಿದೆ.

ಅನುಷ್ಕಾ ಶರ್ಮಾ ಪಕ್ಕ ಕುಳಿತಿರುವ ಹುಡುಗಿ ಯಾರು ಎಂಬುದನ್ನು ಪತ್ತೆ ಹಚ್ಚಲು ಅನೇಕರು ಎಐ ಟೂಲ್​​​ಗಳನ್ನು ಬಳಕೆ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದರು. ಈ ವೇಳೆ ಅನೇಕರಿಗೆ ತಪ್ಪು ಮಾಹಿತಿ ಸಿಕ್ಕಿದೆ. ಅನುಷ್ಕಾ ಶರ್ಮಾ ಅವರ ಅತ್ತಿಗೆ ಭಾವನಾ ಕೊಹ್ಲಿ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು ಹರ್ಭಜನ್ ಸಿಂಗ್ ಪತ್ನಿ ಗೀತಾ ಬಸ್ರಾ ಎಂದಿದ್ದಾರೆ. ಆದರೆ, ಇದು ಯಾವುದೂ ನಿಜವಲ್ಲ.

ಅನುಷ್ಕಾ ಶರ್ಮಾ ಪಕ್ಕದಲ್ಲಿ ಕೂರುವು ಮಹಿಳೆಯ ಹೆಸರು ಮಾಳವಿಕಾ ನಾಯಕ್. ಅವರು ಅನುಷ್ಕಾ ಶರ್ಮಾ ಅವರ ಬೆಸ್ಟ್ ಫ್ರೆಂಡ್. ಕೊಹ್ಲಿ ಅವರಿಗೂ ತುಂಬಾನೇ ಆಪ್ತರು. ಹೀಗಾಗಿ, ಅನುಷ್ಕಾ ಮ್ಯಾಚ್ ನೋಡಲು ತಮ್ಮ ಗೆಳತಿ ಜೊತೆ ಆಗಮಿಸುತ್ತಾರೆ. ಕೆಲವೊಮ್ಮೆ ಇಬ್ಬರೂ ಪತಿಯ ಜೊತೆ ಡಬಲ್ ಡೇಟ್​​ಗೆ ಹೋದ ಉದಾಹರಣೆಯೂ ಇದೆ.

ಇದನ್ನೂ ಓದಿ: ಅನುಷ್ಕಾ ಶರ್ಮಾ ‘ಚಾಕಡ್ ಎಕ್ಸ್​ಪ್ರೆಸ್’ ಸಿನಿಮಾ ಕತೆ ಏನಾಯ್ತು?

ಆರ್​​ಸಿಬಿ ಹಾಗೂ ಚೆನ್ನೈ ಮ್ಯಾಚ್​ನಲ್ಲಿ ಮಾಳವಿಕಾ ಹಾಗೂ ಅನುಷ್ಕಾ ಆರ್​​​ಸಿಬಿಗೆ ಚಿಯರ್ ಮಾಡುತ್ತಿರುವ ಫೋಟೋ ಗಮನ ಸೆಳೆದಿದೆ. ಮಾಳವಿಕಾ ಅವರು ಚಿತ್ರರಂಗದ ಜೊತೆ ಯಾವುದೇ ನಂಟು ಹೊಂದಿಲ್ಲ. ಅವರ ಲಿಂಕ್ಡಿನ್ ಪ್ರಾಫೈಲ್ ಪ್ರಕಾರ ಅವರು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಅಲ್ಲಿ ಎಂಬಿಎ ಪದವಿ ಪಡೆದಿದ್ದಾರೆ. ಅವರು ಈಗ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಬೆಂಗಳೂರು ಮೂಲದವರು. ಅವರ ಪತಿ ನಿಖಿಲ್ ಸೋಸಲೆ ಆರ್​​ಸಿಬಿ ತಂಡದ ಮಾಜಿ ಮಾಲಿಕತ್ವ ಕಂಪನಿ ಡಿಯಾಜಿಯೋದಲ್ಲಿ ಕೆಲಸ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:04 am, Tue, 7 April 26

Follow Us
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ