AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿದ 7.7 ಅಡಿ ಎತ್ತರದ ನಟ; 5 ದಿನಕ್ಕೆ 322 ಕೋಟಿ ರೂ. ಕಲೆಕ್ಷನ್​

6 ಅಡಿ ಎತ್ತರ ಇರುವ ಸಿನಿಮಾ ನಟರು ಹೆಮ್ಮೆಯಿಂದ ಬೀಗುತ್ತಾರೆ. ಅಂಥವರ ನಡುವೆ ಈಗ ಇಲ್ಲೋರ್ವ ನಟ ಬರೋಬ್ಬರಿ 7.7 ಅಡಿ ಎತ್ತರ ಇದ್ದಾರೆ. ಅವರ ಮುಂದೆ ಬಾಲಿವುಡ್​ ಸ್ಟಾರ್​ ಹೀರೋಗಳು ತುಂಬ ಸಣ್ಣಗೆ ಕಾಣುತ್ತಾರೆ. ಈ ನಟನ ಹೊಸ ಸಿನಿಮಾ ಧೂಳೆಬ್ಬಿಸುತ್ತಿದೆ. 5 ದಿನಕ್ಕೆ ಬರೋಬ್ಬರಿ 322 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಯಾರು ಈ ನಟ? ಇಲ್ಲಿದೆ ಮಾಹಿತಿ..

ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿದ 7.7 ಅಡಿ ಎತ್ತರದ ನಟ; 5 ದಿನಕ್ಕೆ 322 ಕೋಟಿ ರೂ. ಕಲೆಕ್ಷನ್​
ಸುನಿಲ್​ ಕುಮಾರ್​ ಜೊತೆ ತಮನ್ನಾ ಭಾಟಿಯಾ, ರಾಜ್​ಕುಮಾರ್​ ರಾವ್
ಮದನ್​ ಕುಮಾರ್​
|

Updated on: Aug 20, 2024 | 9:58 PM

Share

ಬಾಲಿವುಡ್​ನಲ್ಲಿ ‘ಸ್ತ್ರೀ 2’ ಸಿನಿಮಾಗೆ ಭರ್ಜರಿ ಕಲೆಕ್ಷನ್​ ಆಗುತ್ತಿದೆ. ಎಲ್ಲೆಲ್ಲೂ ಈ ಸಿನಿಮಾದ ಬಗ್ಗೆಯೇ ಮಾತು ಕೇಳಿಬರುತ್ತಿದೆ. ಹಾರರ್​ ಕಹಾನಿ ಇರುವ ಈ ಚಿತ್ರದಲ್ಲಿ ಶ್ರದ್ಧಾ ಕಪೂರ್​, ರಾಜ್​ಕುಮಾರ್​ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಅಷ್ಟೇ ಅಲ್ಲದೇ, 7.7 ಅಡಿ ಎತ್ತರ ಇರುವ ಕಲಾವಿದರೊಬ್ಬರು ಸಹ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಅವರ ಹೆಸರು ಸುನಿಲ್​ ಕುಮಾರ್​. ಇವರ ಪಕ್ಕ ನಿಂತರೆ 6 ಅಡಿ ಹೀರೋಗಳು ಕೂಡ ಸಣ್ಣಗೆ ಕಾಣಿಸುತ್ತಾರೆ! ‘ಸ್ತ್ರೀ 2’ ಸಿನಿಮಾ ಬಿಡುಗಡೆ ಆದ ನಂತರ ಸುನಿಲ್​ ಕುಮಾರ್​ ಅವರ ಖ್ಯಾತಿ ಹೆಚ್ಚಾಗಿದೆ. ಅವರ ಫೋಟೋಗಳು ವೈರಲ್​ ಆಗುತ್ತಿವೆ.

‘ಸ್ತ್ರೀ 2’ ಸಿನಿಮಾದಲ್ಲಿ ಸರ್ಕಟಾ ಎಂಬ ಪಾತ್ರ ಹೈಲೈಟ್​ ಆಗಿದೆ. ಆ ಪಾತ್ರದಲ್ಲಿ ಸುನಿಲ್​ ಕುಮಾರ್​ ಅಭಿನಯಿಸಿದ್ದಾರೆ. ಅವರ ಎತ್ತರದ ನಿಲುವು ಕಂಡು ಎಲ್ಲರಿಗೂ ಅಚ್ಚರಿ ಆಗುತ್ತಿದೆ. ‘ಸ್ತ್ರೀ 2’ ಸಿನಿಮಾದಲ್ಲಿ ಸರ್ಕಟಾ ಪಾತ್ರವನ್ನು ಮಾಡಿದವರು ಯಾರು ಎಂದು ಪ್ರೇಕ್ಷಕರು ಇಂಟರ್​ನೆಟ್​ನಲ್ಲಿ ಹೆಚ್ಚಿನ ಮಾಹಿತಿ ಹುಡುಕುತ್ತಿದ್ದಾರೆ. ಅಷ್ಟರಮಟ್ಟಿಗೆ ಸುನಿಲ್​ ಕುಮಾರ್​ ಸೆನ್ಸೇಷನ್​ ಸೃಷ್ಟಿ ಮಾಡಿದ್ದಾರೆ.

ಸುನಿಲ್​ ಕುಮಾರ್​ ಅವರನ್ನು ‘ದಿ ಗ್ರೇಟ್​ ಖಲಿ ಆಫ್​ ಜಮ್ಮು’ ಎಂದು ಕರೆಯುತ್ತಾರೆ. ‘ದಿ ಗ್ರೇಟ್​ ಅಂಗಾರ’ ಎಂಬುದು ಸುನಿಲ್​ ಕುಮಾರ್​ ಅವರ ರಿಂಗ್​ ನೇಮ್​. ಅವರು 7.7 ಅಡಿ ಎತ್ತರ ಇದ್ದಾರೆ ಎಂಬ ಕಾರಣದಿಂದೇ ಅವರಿಗೆ ‘ಸ್ತ್ರೀ 2’ ಸಿನಿಮಾದಲ್ಲಿ ಪಾತ್ರ ಮಾಡುವ ಅವಕಾಶ ಸಿಕ್ಕಿತು. ಈ ಚಿತ್ರದಲ್ಲಿ ಸರ್ಕಟಾ ಎಂಬ ಪಾತ್ರಕ್ಕಾಗಿ ಸುನಿಲ್​ ಕುಮಾರ್ ಅವರ ದೇಹವನ್ನು ಒರಿಜಿನಲ್​ ಆಗಿ ಚಿತ್ರೀಕರಿಸಲಾಗಿದ್ದು, ಮುಖವನ್ನು ಗ್ರಾಫಿಕ್ಸ್​ ಮೂಲಕ ಸೃಷ್ಟಿಸಲಾಗಿದೆ.

ಇದನ್ನೂ ಓದಿ: ‘ಸ್ತ್ರೀ 2’ನಲ್ಲಿ ಅತಿಥಿ ಪಾತ್ರ ಮಾಡಿದ ವರುಣ್ ಧವನ್​ಗೆ ಭರ್ಜರಿ ಸಂಭಾವನೆ; ಉಳಿದವರ ರೆಮ್ಯುನರೇಷನ್ ಎಷ್ಟು?

ಆಗಸ್ಟ್​ 15ರಂದು ‘ಸ್ತ್ರೀ 2’ ಸಿನಿಮಾ ಬಿಡುಗಡೆ ಆಯಿತು. ‘ಖೇಲ್​ ಖೇಲ್​ ಮೇ’ ಹಾಗೂ ‘ವೇದಾ’ ಸಿನಿಮಾಗಳಿಗೆ ‘ಸ್ತ್ರೀ 2’ ಚಿತ್ರ ಭರ್ಜರಿ ಪೈಪೋಟಿ ನೀಡಿದೆ. ಹಾರರ್​ ಪ್ರಿಯರು ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ವಿಶ್ವಾದ್ಯಂತ 5 ದಿನಕ್ಕೆ 322 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ ಎಂಬುದು ವಿಶೇಷ. ಹಲವು ಕಡೆಗಳಲ್ಲಿ ಈ ಸಿನಿಮಾ ಅತ್ಯುತ್ತಮವಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಯಶಸ್ಸಿನಿಂದ ಸುನಿಲ್​ ಕುಮಾರ್​ ಅವರ ಜನಪ್ರಿಯತೆ ಜಾಸ್ತಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ