AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಾರ್ ನಟಿಯರ ಜೊತೆ ‘ತುಂಬಾಡ್ 2’ ಚಿತ್ರತಂಡದ ಮಾತುಕಥೆ; ಹೆಚ್ಚಾಗಿದೆ ನಿರೀಕ್ಷೆ

ಬಹುನಿರೀಕ್ಷಿತ ‘ತುಂಬಾಡ್ 2’ ಸಿನಿಮಾಗಾಗಿ ಸ್ಟಾರ್ ನಟಿಯರ ಆಯ್ಕೆ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಇದು ಚಿತ್ರದ ಮೇಲಿನ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ. 2027ರ ಡಿಸೆಂಬರ್ 3ರಂದು ಈ ಸಿನಿಮಾ ತೆರೆಗೆ ಬರಲಿದೆ. ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟ ನವಾಜುದ್ದೀನ್ ಸಿದ್ಧಿಕಿ ಅವರು ನಟಿಸುತ್ತಿದ್ದಾರೆ.

ಸ್ಟಾರ್ ನಟಿಯರ ಜೊತೆ ‘ತುಂಬಾಡ್ 2’ ಚಿತ್ರತಂಡದ ಮಾತುಕಥೆ; ಹೆಚ್ಚಾಗಿದೆ ನಿರೀಕ್ಷೆ
Katrina Kaif, Priyanka Chopra, Nayanthara, Alia Bhatt
ಮದನ್​ ಕುಮಾರ್​
|

Updated on: May 01, 2026 | 4:21 PM

Share

2018ರಲ್ಲಿ ಬಿಡುಗಡೆಯಾದ ‘ತುಂಬಾಡ್’ (Tumbbad) ಸಿನಿಮಾ ಬಾಲಿವುಡ್ ಚಿತ್ರರಂಗದಲ್ಲೇ ಒಂದು ವಿಶಿಷ್ಟ ಪ್ರಯೋಗವಾಗಿತ್ತು. ರಾಹಿ ಅನಿಲ್ ಬಾರ್ವೆ ಮತ್ತು ಆನಂದ್ ಗಾಂಧಿ ನಿರ್ದೇಶನದ ಈ ಜಾನಪದ ಹಿನ್ನೆಲೆಯ ಹಾರರ್ ಥ್ರಿಲ್ಲರ್ ಸಿನಿಮಾ ಮೊದಲು ಬಿಡುಗಡೆಯಾದಾಗ ಬಾಕ್ಸ್ ಆಫೀಸ್‌ನಲ್ಲಿ ಅಷ್ಟಾಗಿ ಸದ್ದು ಮಾಡಿರಲಿಲ್ಲ. ಆದರೆ, 2024ರಲ್ಲಿ ಮರು ಬಿಡುಗಡೆ ಆದಾಗ ಈ ಸಿನಿಮಾ ದಾಖಲೆ ಮಟ್ಟದ ಕಲೆಕ್ಷನ್ ಮಾಡಿ ಎಲ್ಲರನ್ನೂ ಅಚ್ಚರಿಗೊಳಿಸಿತು. ಈ ಭರ್ಜರಿ ಯಶಸ್ಸಿನ ಬೆನ್ನಲ್ಲೇ ಈಗ ಚಿತ್ರತಂಡ ಸೀಕ್ವೆಲ್ (Tumbbad 2) ತಯಾರಿಗೆ ಸಜ್ಜಾಗಿದೆ.

‘ತುಂಬಾಡ್’ ಮೊದಲ ಭಾಗದಲ್ಲಿ ಬಹುತೇಕ ಹೊಸ ಮುಖಗಳೇ ಕಾಣಿಸಿಕೊಂಡಿದ್ದವು. ಆದರೆ ಎರಡನೇ ಭಾಗದ ಮೇಲೆ ನಿರೀಕ್ಷೆಗಳು ಹೆಚ್ಚಿರುವುದರಿಂದ, ಈ ಬಾರಿ ದೊಡ್ಡ ತಾರಾಗಣವನ್ನು ಕರೆತರಲು ನಿರ್ಮಾಪಕರು ನಿರ್ಧರಿಸಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ಚಿತ್ರದ ಪ್ರಮುಖ ಪಾತ್ರಕ್ಕಾಗಿ ಬಾಲಿವುಡ್‌ನ ಟಾಪ್ ನಟಿಯರಾದ ಪ್ರಿಯಾಂಕಾ ಚೋಪ್ರಾ, ಕತ್ರಿನಾ ಕೈಫ್, ಆಲಿಯಾ ಭಟ್ ಅಥವಾ ದಕ್ಷಿಣದ ಲೇಡಿ ಸೂಪರ್ ಸ್ಟಾರ್ ನಯನತಾರಾ ಅವರ ಹೆಸರುಗಳನ್ನು ಪರಿಗಣಿಸಲಾಗುತ್ತಿದೆ ಎನ್ನಲಾಗಿದೆ.

ಈ ಸ್ಟಾರ್ ನಟಿಯರಲ್ಲಿ ಯಾರಾದರೂ ಒಬ್ಬರು ಚಿತ್ರತಂಡಕ್ಕೆ ಸೇರಿದರೆ, ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ದೊಡ್ಡ ಕ್ರೇಜ್ ಸೃಷ್ಟಿಸುವುದರಲ್ಲಿ ಸಂಶಯವಿಲ್ಲ. ಆದರೆ ಈ ನಾಲ್ವರಲ್ಲಿ ಯಾರು ಈ ಚಾನ್ಸ್ ಗಿಟ್ಟಿಸಿಕೊಳ್ಳಲಿದ್ದಾರೆ ಎಂಬುದು ಇನ್ನು ಕುತೂಹಲವಾಗಿಯೇ ಉಳಿದಿದೆ. ಈಗಾಗಲೇ ಸೀಕ್ವೆಲ್‌ನಲ್ಲಿ ಪ್ರತಿಭಾವಂತ ನಟ ನವಾಜುದ್ದೀನ್ ಸಿದ್ದಿಕಿ ಅವರು ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿರುವುದು ಖಚಿತವಾಗಿದೆ.

ಮೊದಲ ಭಾಗದ ಚಿತ್ರಕಥೆಯಲ್ಲಿ ಕೆಲಸ ಮಾಡಿದ್ದ ಆದೇಶ್ ಪ್ರಸಾದ್ ಈ ಬಾರಿ ಸೀಕ್ವೆಲ್ ಅನ್ನು ನಿರ್ದೇಶಿಸಲಿದ್ದಾರೆ. ‘ಮೊದಲ ಭಾಗದ ಆತ್ಮ ಮತ್ತು ಕಥೆಯ ಮೂಲವನ್ನು ಹಾಗೆಯೇ ಉಳಿಸಿಕೊಂಡು, ಸೀಕ್ವೆಲ್ ಅನ್ನು ಮತ್ತಷ್ಟು ರೋಚಕವಾಗಿ ಮತ್ತು ಭಯಾನಕವಾಗಿ ರೂಪಿಸಲಾಗುವುದು’ ಎಂದು ಅವರು ಭರವಸೆ ನೀಡಿದ್ದಾರೆ. ಆ ಕಾರಣದಿಂದಾಗಿ ‘ತುಂಬಾಡ್ 2’ ಮೇಲೆ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ: ಬರ್ತಿದೆ ‘ತುಂಬಾಡ್ 2’ ಸಿನಿಮಾ; ಖಳನಾಗಿ ಅಕ್ಷಯ್ ಖನ್ನಾ ಎಂಟ್ರಿ?

ಒಟ್ಟಿನಲ್ಲಿ, ‘ತುಂಬಾಡ್’ ಸೀಕ್ವೆಲ್ ದೊಡ್ಡ ಕ್ಯಾನ್ವಾಸ್‌ನಲ್ಲಿ ನಿರ್ಮಾಣವಾಗುತ್ತಿದ್ದು, ಯಾವ ನಟಿ ಈ ಹಾರರ್ ಲೋಕಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಸದ್ಯಕ್ಕೆ ಈ ಸ್ಟಾರ್ ನಟಿಯರ ಆಯ್ಕೆ ಪ್ರಕ್ರಿಯೆ ಚಾಲ್ತಿಯಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್