AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಶ್ವರ್ಯಾ ಕೋರಿಕೆ ಮೇರೆಗೆ ‘ವಿಚ್ಛೇದನ’ ಪೋಸ್ಟ್​ನ ಲೈಕ್ ಮಾಡಿದ್ದ ಅಭಿಷೇಕ್

ಇತ್ತೀಚೆಗೆ ಹೀನಾ ಖಂಡೇವಾಲ ಅವರು ವಿಚ್ಛೇದನದ ಬಗ್ಗೆ ಲೇಖನ ಬರೆದಿದ್ದರು. ಇದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು. ಈ ಪೋಸ್ಟ್​ನ ಐಶ್ವರ್ಯಾ ರೈ ಬಚ್ಚನ್ ಅವರು ಲೈಕ್ ಮಾಡಿದ್ದರು. ಇವರು ವಿಚ್ಛೇದನ ಪಡೆಯುತ್ತಿರುವುದರಿಂದಲೇ ಈ ರೀತಿಯಲ್ಲಿ ಲೈಕ್ ಒತ್ತಿದ್ದಾರೆ ಎಂದು ಅನೇಕರು ಮಾತನಾಡಿಕೊಂಡಿದ್ದರು.

ಐಶ್ವರ್ಯಾ ಕೋರಿಕೆ ಮೇರೆಗೆ ‘ವಿಚ್ಛೇದನ’ ಪೋಸ್ಟ್​ನ ಲೈಕ್ ಮಾಡಿದ್ದ ಅಭಿಷೇಕ್
ಐಶ್ವರ್ಯಾ ಕೋರಿಕೆ ಮೇರೆಗೆ ‘ವಿಚ್ಛೇದನ’ ಪೋಸ್ಟ್​ನ ಲೈಕ್ ಮಾಡಿದ್ದ ಅಭಿಷೇಕ್
ರಾಜೇಶ್ ದುಗ್ಗುಮನೆ
|

Updated on: Jul 23, 2024 | 9:34 AM

Share

ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಮದುವೆಗೆ ಐಶ್ವರ್ಯಾ ರೈ ಹಾಗೂ ಅಭಿಷೇಕ್ ಬಚ್ಚನ್ ಬೇರೆ ಬೇರೆ ಆಗಿ ಬಂದಾಗಿನಿಂದಲೂ ಇವರ ವಿಚ್ಛೇದನ ವಿಚಾರ ಚರ್ಚೆಯಲ್ಲಿ ಇದೆ. ಹೀಗಿರುವಾಗಲೇ ಅಭಿಷೇಕ್ ಬಚ್ಚನ್ ಅವರು ‘ವಿಚ್ಛೇದನ ಯಾರಿಗೂ ಸುಲಭವಲ್ಲ’ ಎನ್ನುವ ಪೋಸ್ಟ್​ನ ಲೈಕ್ ಮಾಡಿದ್ದರು. ಇದು ಸಾಕಷ್ಟು ಚರ್ಚೆ ಆಗಿತ್ತು. ವಿಚ್ಛೇದನ ವಿಚಾರ ಚರ್ಚೆಯಲ್ಲಿರುವುದಕ್ಕೂ ಅಭಿಷೇಕ್ ಈ ಫೋಟೋ ಲೈಕ್ ಮಾಡಿರುವದಕ್ಕೂ ನಂಟು ಕಲ್ಪಿಸಲಾಗಿತ್ತು. ಇದಕ್ಕೆ ಕಾರಣ ರಿವೀಲ್ ಆಗಿದೆ.

ಇತ್ತೀಚೆಗೆ ಹೀನಾ ಖಂಡೇವಾಲ ಅವರು ಲೇಖನ ಒಂದನ್ನು ಬರೆದಿದ್ದರು. ಈ ಲೇಖನ ವಿಚ್ಛೇದನದ ಬಗ್ಗೆ ಇತ್ತು. ಇದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು. ಈ ಪೋಸ್ಟ್​ನ ಐಶ್ವರ್ಯಾ ರೈ ಬಚ್ಚನ್ ಅವರು ಲೈಕ್ ಮಾಡಿದ್ದರು. ಇವರು ವಿಚ್ಛೇದನ ಪಡೆಯುತ್ತಿರುವುದರಿಂದಲೇ ಈ ರೀತಿಯಲ್ಲಿ ಲೈಕ್ ಒತ್ತಿದ್ದಾರೆ ಎಂದು ಅನೇಕರು ಮಾತನಾಡಿಕೊಂಡಿದ್ದರು. ಆದರೆ, ಅಸಲಿ ವಿಚಾರ ಬೇರೆಯದೇ ಇದೆ. ಐಶ್ವರ್ಯಾ ಅವರ ಫ್ರೆಂಡ್ ಝೈರತ್ ಮಾರ್ಕರ್ ಅವರು ಈ ಆರ್ಟಿಕಲ್​ಗೆ ಕೊಡುಗೆ ನೀಡಿದ್ದಾರೆ. ಪತ್ನಿಯ ಗೆಳೆಯನಿಗೆ ಸಹಾಯ ಆಗಲಿ ಎನ್ನುವ ಕಾರಣಕ್ಕೆ ಅವರು ಲೈಕ್ ಒತ್ತಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆದಿದೆ. ‘ಪತ್ನಿಗೆ ಸಹಾಯ ಆಗಲಿ ಎಂದು ಅಭಿಷೇಕ್ ಬಚ್ಚನ್ ಪೋಸ್ಟ್​ಗೆ ಲೈಕ್ ಒತ್ತಿದ್ದಾರೆ. ಆದರೆ, ಇದನ್ನು ಬೇರೆ ರೀತಿಯೇ ಬಣ್ಣಿಸಲಾಗಿದೆ. ಈಗ ಟ್ವಿಸ್ಟ್ ಹೇಗಿದೆ’ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿ ಚರ್ಚೆ ನಡೆಯುತ್ತಿದೆ.

ತಮ್ಮ ಪೋಸ್ಟ್ ಈ ರೀತಿಯಲ್ಲಿ ವೈರಲ್ ಆಗಿರುವುದಕ್ಕೆ ಹೀನಾ ಖಂಡೇವಾಲ ಅವರು ಅಸಮಾಧಾನ ಹೊರಹಾಕಿದ್ದಾರೆ. ‘ನನಗೆ ಆ ವ್ಯಕ್ತಿ (ಅಭಿಷೇಕ್ ಬಚ್ಚನ್) ಜೊತೆ ಅಷ್ಟಾಗಿ ಪರಿಚಯ ಇಲ್ಲ. ಆದರೆ, ಒಂದು ಲೈಕ್ ಎಲ್ಲವನ್ನೂ ಬದಲಿಸಿತು. ಅವರಿಗೆ ತಮ್ಮನ್ನು ಸಮರ್ಥಿಸಿಕೊಳ್ಳಲು ನನ್ನ ಅಗತ್ಯ ಇಲ್ಲ. ಆದರೆ, ನನ್ನ ಪೋಸ್ಟ್ ಈ ರೀತಿಯಲ್ಲಿ ಹೈಲೈಟ್ ಆಯಿತಲ್ಲ ಎನ್ನುವ ಬೇಸರ ನನಗೆ ಇದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಉಚಿತ ಟೀ, ಸಮೋಸಾ ಕೊಡ್ತೀವಿ, ಸಿನಿಮಾ ನೋಡೋಕೆ ಬನ್ನಿ’: ಅಕ್ಷಯ್​ ಕುಮಾರ್​ ಚಿತ್ರಕ್ಕೆ ಹೀನಾಯ ಸ್ಥಿತಿ

‘ಈ ಫೋಟೋಗೆ ಸಾಲಕಷ್ಟು ಲೈಕ್ಸ್​ಗಳು ಸಿಕ್ಕಿವೆ. ಈ ಫೋಟೋನ ಲೈಕ್ ಮಾಡದೆ ಇದ್ದವರು ಕೂಡ ನನ್ನ ಬಳಿ ಬಂದು ಲೇಖನದ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ’ ಎಂದು ಹೀನಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ