AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ಪ್ರೀ ವೆಡ್ಡಿಂಗ್​ಗೆ ಕರಣ್ ಜೋಹರ್ ಗೈರಾಗಿದ್ದೇಕೆ? ಇಲ್ಲಿದೆ ಕಾರಣ

Karan Johar: ಬಾಲಿವುಡ್​ನ ಎಲ್ಲ ಮದುವೆಗಳಿಗೂ ಹಾಜರಿ ಹಾಕುವ ಖಾಯಂ ಅತಿಥಿ ಕರಣ್ ಜೋಹರ್ ಅನಂತ್ ಅಂಬಾನಿ-ರಾಧಿಕಾರ ಪ್ರೀ ವೆಡ್ಡಿಂಗ್​ಗೆ ಹಾಜರಾಗಿರಲಿಲ್ಲ ಏಕೆ?

ಅಂಬಾನಿ ಪ್ರೀ ವೆಡ್ಡಿಂಗ್​ಗೆ ಕರಣ್ ಜೋಹರ್ ಗೈರಾಗಿದ್ದೇಕೆ? ಇಲ್ಲಿದೆ ಕಾರಣ
ಮಂಜುನಾಥ ಸಿ.
|

Updated on: Mar 07, 2024 | 6:34 PM

Share

ಕರಣ್ ಜೋಹರ್ (Karan Johar) ಬಾಲಿವುಡ್​ನಲ್ಲಿ (Bollywood) ಬಹುತೇಕ ಎಲ್ಲರಿಗೂ ಅತ್ಯಂತ ಖಾಸಾ ವ್ಯಕ್ತಿ. ಬಾಲಿವುಡ್​ನ ಯಾವುದೇ ಸೆಲೆಬ್ರಿಟಿಗಳ ವಿವಾಹವಾದರು ಕರಣ್ ಜೋಹರ್​ಗೆ ಆಹ್ವಾನವಿದ್ದೇ ಇರುತ್ತದೆ. ಕರಣ್ ಜೋಹರ್ ಮದುವೆಗೆ ಹಾಜರಾಗುವುದು ಸಹ ಖಾಯಂ. ಕರಣ್ ಜೋಹರ್-ಮನೀಷ್ ಮಲ್ಹೋತ್ರಾ ಬಾಲಿವುಡ್ ಮದುವೆಗಳ ಖಾಯಂ ಅತಿಥಿಗಳೆಂದು ಮೀಮ್​ ಗಳು ಆಗಾಗ್ಗೆ ಹರಿದಾಡುತ್ತಿರುತ್ತವೆ. ಆದರೆ ಇಡೀ ಬಾಲಿವುಡ್ ಹಾಜರಿ ಹಾಕಿದ್ದ ಅನಂತ್ ಅಂಬಾನಿ-ರಾಧಿಕಾರ ಪ್ರೀ ವೆಡ್ಡಿಂಗ್​ ಕಾರ್ಯಕ್ರಮಕ್ಕೆ ಕರಣ್ ಜೋಹರ್ ಗೈರಾಗಿದ್ದು ಹಲವರಿಗೆ ಆಶ್ಚರ್ಯ ತರಿಸಿದೆ. ಆದರೆ ಕರಣ್ ಗೈರಾಗಿದ್ದಕ್ಕೆ ಕಾರಣವಿದೆ.

ಕರಣ್ ಜೋಹರ್​ಗೆ ಸಹ ಅನಂತ್-ರಾಧಿಕಾರ ಪ್ರೀ ವೆಡ್ಡಿಂಗ್​ಗೆ ಆಹ್ವಾನ ನೀಡಲಾಗಿತ್ತು. ಕರಣ್ ಜೋಹರ್ ಸಹ ಉತ್ಸುಕತೆಯಿಂದ ಪ್ರೀ ವೆಡ್ಡಿಂಗ್​ಗೆ ಹಾಜರಾಗಲು ತಯಾರಿ ಆರಂಭಿಸಿದ್ದರು. ಪ್ರೀ ವೆಡ್ಡಿಂಗ್​ಗಾಗಿ ವಿಶೇಷ ಧಿರಿಸುಗಳನ್ನು ಗೆಳೆಯ ಮನೀಷ್ ಮಲ್ಹೋತ್ರಾ ಇಂದ ಡಿಸೈನ್ ಸಹ ಮಾಡಿಸಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಕರಣ್​ ಜೋಹರ್​ಗೆ ಅನಾರೋಗ್ಯ ಉಂಟಾದ ಕಾರಣ ಅವರು ಪ್ರೀ ವೆಡ್ಡಿಂಗ್ ಕಾರ್ಯಕ್ರಮದಿಂದ ದೂರ ಉಳಿದರು.

ಇದನ್ನೂ ಓದಿ:ದೀಪಿಕಾ ಪಡುಕೋಣೆಗಾಗಿ ಬಿಗ್ ಬಜೆಟ್ ಚಿತ್ರ ಹೋಲ್ಡ್ ಮಾಡಿದ ಕರಣ್ ಜೋಹರ್

ಕರಣ್ ಜೋಹರ್​ಗೆ ವೈರಲ್ ಜ್ವರ, ನೆಗಡಿ ಮತ್ತು ಗಂಟಲು ನೋವುಗಳು ಕಾಣಿಸಿಕೊಂಡ ಕಾರಣ, ಇತರೆ ಅತಿಥಿಗಳಿಗೆ ಸಮಸ್ಯೆ ಆಗಬಾರದೆಂಬ ಕಾರಣಕ್ಕೆ ಕರಣ್ ಜೋಹರ್ ಪ್ರೀ ವೆಡ್ಡಿಂಗ್​ಗೆ ಹೋಗದಿರಲು ನಿರ್ಧರಿಸಿ ಮನೆಯಲ್ಲಿಯೇ ಉಳಿದು ವಿಶ್ರಾಂತಿ ಪಡೆದುಕೊಂಡರು. ತಮ್ಮ ಗೆಳೆಯರಿಂದ ಪ್ರೀ ವೆಡ್ಡಿಂಗ್ ಸಂಭ್ರಮದ ಬಗ್ಗೆ ಕೇಳಿ ತಿಳಿದುಕೊಂಡರಂತೆ. ಅಲ್ಲದೆ, ಅನಂತ್ ಹಾಗೂ ರಾಧಿಕಾರ ವಿಡಿಯೋವನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡು ಭಾವಪೂರ್ಣ ಸಂದೇಶವನ್ನು ಸಹ ಕರಣ್ ಬರೆದುಕೊಂಡಿದ್ದಾರೆ.

ಆದರೆ ಕರಣ್ ಜೋಹರ್​ರ ಆಪ್ತ ಗೆಳೆಯ, ಬಾಲಿವುಡ್ ಮದುವೆಗಳ ಖಾಯಂ ಅತಿಥಿ, ಜನಪ್ರಿಯ ವಸ್ತ್ರ ವಿನ್ಯಾಸಕ ಮನೀಷ್ ಮಲ್ಹೋತ್ರಾ ಪ್ರೀ ವೆಡ್ಡಿಂಗ್​ಗೆ ಹಾಜರಾಗಿದ್ದರು. ವೇದಿಕೆ ಏರಿ ಕರೀನಾ ಕಪೂರ್, ಸಾರಾ ಅಲಿ ಖಾನ್ ಇನ್ನಿತರೆ ನಟಿಯರೊಡನೆ ಸಖತ್ ಸ್ಟೆಪ್ ಸಹ ಹಾಕಿದರು. ಅನಂತ್ ಹಾಗೂ ರಾಧಿಕಾರ ಮದುವೆ ಕಾರ್ಯಕ್ರಮ ಜೂನ್ ತಿಂಗಳಲ್ಲಿ ನಡೆಯಲಿದ್ದು, ಆಗ ಬಾಲಿವುಡ್​ನ ಅತಿಥಿಗಳ ಜೊತೆಗೆ ದೇಶದ ಅಗ್ರಗಣ್ಯ ರಾಜಕಾರಣಿಗಳು, ಉದ್ಯಮಿಗಳು ಇನ್ನೂ ಹಲವರು ಭಾಗಿಯಾಗಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್