AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ಪ್ರೀ ವೆಡ್ಡಿಂಗ್​ಗೆ ಕರಣ್ ಜೋಹರ್ ಗೈರಾಗಿದ್ದೇಕೆ? ಇಲ್ಲಿದೆ ಕಾರಣ

Karan Johar: ಬಾಲಿವುಡ್​ನ ಎಲ್ಲ ಮದುವೆಗಳಿಗೂ ಹಾಜರಿ ಹಾಕುವ ಖಾಯಂ ಅತಿಥಿ ಕರಣ್ ಜೋಹರ್ ಅನಂತ್ ಅಂಬಾನಿ-ರಾಧಿಕಾರ ಪ್ರೀ ವೆಡ್ಡಿಂಗ್​ಗೆ ಹಾಜರಾಗಿರಲಿಲ್ಲ ಏಕೆ?

ಅಂಬಾನಿ ಪ್ರೀ ವೆಡ್ಡಿಂಗ್​ಗೆ ಕರಣ್ ಜೋಹರ್ ಗೈರಾಗಿದ್ದೇಕೆ? ಇಲ್ಲಿದೆ ಕಾರಣ
ಮಂಜುನಾಥ ಸಿ.
|

Updated on: Mar 07, 2024 | 6:34 PM

Share

ಕರಣ್ ಜೋಹರ್ (Karan Johar) ಬಾಲಿವುಡ್​ನಲ್ಲಿ (Bollywood) ಬಹುತೇಕ ಎಲ್ಲರಿಗೂ ಅತ್ಯಂತ ಖಾಸಾ ವ್ಯಕ್ತಿ. ಬಾಲಿವುಡ್​ನ ಯಾವುದೇ ಸೆಲೆಬ್ರಿಟಿಗಳ ವಿವಾಹವಾದರು ಕರಣ್ ಜೋಹರ್​ಗೆ ಆಹ್ವಾನವಿದ್ದೇ ಇರುತ್ತದೆ. ಕರಣ್ ಜೋಹರ್ ಮದುವೆಗೆ ಹಾಜರಾಗುವುದು ಸಹ ಖಾಯಂ. ಕರಣ್ ಜೋಹರ್-ಮನೀಷ್ ಮಲ್ಹೋತ್ರಾ ಬಾಲಿವುಡ್ ಮದುವೆಗಳ ಖಾಯಂ ಅತಿಥಿಗಳೆಂದು ಮೀಮ್​ ಗಳು ಆಗಾಗ್ಗೆ ಹರಿದಾಡುತ್ತಿರುತ್ತವೆ. ಆದರೆ ಇಡೀ ಬಾಲಿವುಡ್ ಹಾಜರಿ ಹಾಕಿದ್ದ ಅನಂತ್ ಅಂಬಾನಿ-ರಾಧಿಕಾರ ಪ್ರೀ ವೆಡ್ಡಿಂಗ್​ ಕಾರ್ಯಕ್ರಮಕ್ಕೆ ಕರಣ್ ಜೋಹರ್ ಗೈರಾಗಿದ್ದು ಹಲವರಿಗೆ ಆಶ್ಚರ್ಯ ತರಿಸಿದೆ. ಆದರೆ ಕರಣ್ ಗೈರಾಗಿದ್ದಕ್ಕೆ ಕಾರಣವಿದೆ.

ಕರಣ್ ಜೋಹರ್​ಗೆ ಸಹ ಅನಂತ್-ರಾಧಿಕಾರ ಪ್ರೀ ವೆಡ್ಡಿಂಗ್​ಗೆ ಆಹ್ವಾನ ನೀಡಲಾಗಿತ್ತು. ಕರಣ್ ಜೋಹರ್ ಸಹ ಉತ್ಸುಕತೆಯಿಂದ ಪ್ರೀ ವೆಡ್ಡಿಂಗ್​ಗೆ ಹಾಜರಾಗಲು ತಯಾರಿ ಆರಂಭಿಸಿದ್ದರು. ಪ್ರೀ ವೆಡ್ಡಿಂಗ್​ಗಾಗಿ ವಿಶೇಷ ಧಿರಿಸುಗಳನ್ನು ಗೆಳೆಯ ಮನೀಷ್ ಮಲ್ಹೋತ್ರಾ ಇಂದ ಡಿಸೈನ್ ಸಹ ಮಾಡಿಸಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಕರಣ್​ ಜೋಹರ್​ಗೆ ಅನಾರೋಗ್ಯ ಉಂಟಾದ ಕಾರಣ ಅವರು ಪ್ರೀ ವೆಡ್ಡಿಂಗ್ ಕಾರ್ಯಕ್ರಮದಿಂದ ದೂರ ಉಳಿದರು.

ಇದನ್ನೂ ಓದಿ:ದೀಪಿಕಾ ಪಡುಕೋಣೆಗಾಗಿ ಬಿಗ್ ಬಜೆಟ್ ಚಿತ್ರ ಹೋಲ್ಡ್ ಮಾಡಿದ ಕರಣ್ ಜೋಹರ್

ಕರಣ್ ಜೋಹರ್​ಗೆ ವೈರಲ್ ಜ್ವರ, ನೆಗಡಿ ಮತ್ತು ಗಂಟಲು ನೋವುಗಳು ಕಾಣಿಸಿಕೊಂಡ ಕಾರಣ, ಇತರೆ ಅತಿಥಿಗಳಿಗೆ ಸಮಸ್ಯೆ ಆಗಬಾರದೆಂಬ ಕಾರಣಕ್ಕೆ ಕರಣ್ ಜೋಹರ್ ಪ್ರೀ ವೆಡ್ಡಿಂಗ್​ಗೆ ಹೋಗದಿರಲು ನಿರ್ಧರಿಸಿ ಮನೆಯಲ್ಲಿಯೇ ಉಳಿದು ವಿಶ್ರಾಂತಿ ಪಡೆದುಕೊಂಡರು. ತಮ್ಮ ಗೆಳೆಯರಿಂದ ಪ್ರೀ ವೆಡ್ಡಿಂಗ್ ಸಂಭ್ರಮದ ಬಗ್ಗೆ ಕೇಳಿ ತಿಳಿದುಕೊಂಡರಂತೆ. ಅಲ್ಲದೆ, ಅನಂತ್ ಹಾಗೂ ರಾಧಿಕಾರ ವಿಡಿಯೋವನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡು ಭಾವಪೂರ್ಣ ಸಂದೇಶವನ್ನು ಸಹ ಕರಣ್ ಬರೆದುಕೊಂಡಿದ್ದಾರೆ.

ಆದರೆ ಕರಣ್ ಜೋಹರ್​ರ ಆಪ್ತ ಗೆಳೆಯ, ಬಾಲಿವುಡ್ ಮದುವೆಗಳ ಖಾಯಂ ಅತಿಥಿ, ಜನಪ್ರಿಯ ವಸ್ತ್ರ ವಿನ್ಯಾಸಕ ಮನೀಷ್ ಮಲ್ಹೋತ್ರಾ ಪ್ರೀ ವೆಡ್ಡಿಂಗ್​ಗೆ ಹಾಜರಾಗಿದ್ದರು. ವೇದಿಕೆ ಏರಿ ಕರೀನಾ ಕಪೂರ್, ಸಾರಾ ಅಲಿ ಖಾನ್ ಇನ್ನಿತರೆ ನಟಿಯರೊಡನೆ ಸಖತ್ ಸ್ಟೆಪ್ ಸಹ ಹಾಕಿದರು. ಅನಂತ್ ಹಾಗೂ ರಾಧಿಕಾರ ಮದುವೆ ಕಾರ್ಯಕ್ರಮ ಜೂನ್ ತಿಂಗಳಲ್ಲಿ ನಡೆಯಲಿದ್ದು, ಆಗ ಬಾಲಿವುಡ್​ನ ಅತಿಥಿಗಳ ಜೊತೆಗೆ ದೇಶದ ಅಗ್ರಗಣ್ಯ ರಾಜಕಾರಣಿಗಳು, ಉದ್ಯಮಿಗಳು ಇನ್ನೂ ಹಲವರು ಭಾಗಿಯಾಗಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ