AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ಪ್ರೀ ವೆಡ್ಡಿಂಗ್​ಗೆ ಕರಣ್ ಜೋಹರ್ ಗೈರಾಗಿದ್ದೇಕೆ? ಇಲ್ಲಿದೆ ಕಾರಣ

Karan Johar: ಬಾಲಿವುಡ್​ನ ಎಲ್ಲ ಮದುವೆಗಳಿಗೂ ಹಾಜರಿ ಹಾಕುವ ಖಾಯಂ ಅತಿಥಿ ಕರಣ್ ಜೋಹರ್ ಅನಂತ್ ಅಂಬಾನಿ-ರಾಧಿಕಾರ ಪ್ರೀ ವೆಡ್ಡಿಂಗ್​ಗೆ ಹಾಜರಾಗಿರಲಿಲ್ಲ ಏಕೆ?

ಅಂಬಾನಿ ಪ್ರೀ ವೆಡ್ಡಿಂಗ್​ಗೆ ಕರಣ್ ಜೋಹರ್ ಗೈರಾಗಿದ್ದೇಕೆ? ಇಲ್ಲಿದೆ ಕಾರಣ
ಮಂಜುನಾಥ ಸಿ.
|

Updated on: Mar 07, 2024 | 6:34 PM

Share

ಕರಣ್ ಜೋಹರ್ (Karan Johar) ಬಾಲಿವುಡ್​ನಲ್ಲಿ (Bollywood) ಬಹುತೇಕ ಎಲ್ಲರಿಗೂ ಅತ್ಯಂತ ಖಾಸಾ ವ್ಯಕ್ತಿ. ಬಾಲಿವುಡ್​ನ ಯಾವುದೇ ಸೆಲೆಬ್ರಿಟಿಗಳ ವಿವಾಹವಾದರು ಕರಣ್ ಜೋಹರ್​ಗೆ ಆಹ್ವಾನವಿದ್ದೇ ಇರುತ್ತದೆ. ಕರಣ್ ಜೋಹರ್ ಮದುವೆಗೆ ಹಾಜರಾಗುವುದು ಸಹ ಖಾಯಂ. ಕರಣ್ ಜೋಹರ್-ಮನೀಷ್ ಮಲ್ಹೋತ್ರಾ ಬಾಲಿವುಡ್ ಮದುವೆಗಳ ಖಾಯಂ ಅತಿಥಿಗಳೆಂದು ಮೀಮ್​ ಗಳು ಆಗಾಗ್ಗೆ ಹರಿದಾಡುತ್ತಿರುತ್ತವೆ. ಆದರೆ ಇಡೀ ಬಾಲಿವುಡ್ ಹಾಜರಿ ಹಾಕಿದ್ದ ಅನಂತ್ ಅಂಬಾನಿ-ರಾಧಿಕಾರ ಪ್ರೀ ವೆಡ್ಡಿಂಗ್​ ಕಾರ್ಯಕ್ರಮಕ್ಕೆ ಕರಣ್ ಜೋಹರ್ ಗೈರಾಗಿದ್ದು ಹಲವರಿಗೆ ಆಶ್ಚರ್ಯ ತರಿಸಿದೆ. ಆದರೆ ಕರಣ್ ಗೈರಾಗಿದ್ದಕ್ಕೆ ಕಾರಣವಿದೆ.

ಕರಣ್ ಜೋಹರ್​ಗೆ ಸಹ ಅನಂತ್-ರಾಧಿಕಾರ ಪ್ರೀ ವೆಡ್ಡಿಂಗ್​ಗೆ ಆಹ್ವಾನ ನೀಡಲಾಗಿತ್ತು. ಕರಣ್ ಜೋಹರ್ ಸಹ ಉತ್ಸುಕತೆಯಿಂದ ಪ್ರೀ ವೆಡ್ಡಿಂಗ್​ಗೆ ಹಾಜರಾಗಲು ತಯಾರಿ ಆರಂಭಿಸಿದ್ದರು. ಪ್ರೀ ವೆಡ್ಡಿಂಗ್​ಗಾಗಿ ವಿಶೇಷ ಧಿರಿಸುಗಳನ್ನು ಗೆಳೆಯ ಮನೀಷ್ ಮಲ್ಹೋತ್ರಾ ಇಂದ ಡಿಸೈನ್ ಸಹ ಮಾಡಿಸಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಕರಣ್​ ಜೋಹರ್​ಗೆ ಅನಾರೋಗ್ಯ ಉಂಟಾದ ಕಾರಣ ಅವರು ಪ್ರೀ ವೆಡ್ಡಿಂಗ್ ಕಾರ್ಯಕ್ರಮದಿಂದ ದೂರ ಉಳಿದರು.

ಇದನ್ನೂ ಓದಿ:ದೀಪಿಕಾ ಪಡುಕೋಣೆಗಾಗಿ ಬಿಗ್ ಬಜೆಟ್ ಚಿತ್ರ ಹೋಲ್ಡ್ ಮಾಡಿದ ಕರಣ್ ಜೋಹರ್

ಕರಣ್ ಜೋಹರ್​ಗೆ ವೈರಲ್ ಜ್ವರ, ನೆಗಡಿ ಮತ್ತು ಗಂಟಲು ನೋವುಗಳು ಕಾಣಿಸಿಕೊಂಡ ಕಾರಣ, ಇತರೆ ಅತಿಥಿಗಳಿಗೆ ಸಮಸ್ಯೆ ಆಗಬಾರದೆಂಬ ಕಾರಣಕ್ಕೆ ಕರಣ್ ಜೋಹರ್ ಪ್ರೀ ವೆಡ್ಡಿಂಗ್​ಗೆ ಹೋಗದಿರಲು ನಿರ್ಧರಿಸಿ ಮನೆಯಲ್ಲಿಯೇ ಉಳಿದು ವಿಶ್ರಾಂತಿ ಪಡೆದುಕೊಂಡರು. ತಮ್ಮ ಗೆಳೆಯರಿಂದ ಪ್ರೀ ವೆಡ್ಡಿಂಗ್ ಸಂಭ್ರಮದ ಬಗ್ಗೆ ಕೇಳಿ ತಿಳಿದುಕೊಂಡರಂತೆ. ಅಲ್ಲದೆ, ಅನಂತ್ ಹಾಗೂ ರಾಧಿಕಾರ ವಿಡಿಯೋವನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡು ಭಾವಪೂರ್ಣ ಸಂದೇಶವನ್ನು ಸಹ ಕರಣ್ ಬರೆದುಕೊಂಡಿದ್ದಾರೆ.

ಆದರೆ ಕರಣ್ ಜೋಹರ್​ರ ಆಪ್ತ ಗೆಳೆಯ, ಬಾಲಿವುಡ್ ಮದುವೆಗಳ ಖಾಯಂ ಅತಿಥಿ, ಜನಪ್ರಿಯ ವಸ್ತ್ರ ವಿನ್ಯಾಸಕ ಮನೀಷ್ ಮಲ್ಹೋತ್ರಾ ಪ್ರೀ ವೆಡ್ಡಿಂಗ್​ಗೆ ಹಾಜರಾಗಿದ್ದರು. ವೇದಿಕೆ ಏರಿ ಕರೀನಾ ಕಪೂರ್, ಸಾರಾ ಅಲಿ ಖಾನ್ ಇನ್ನಿತರೆ ನಟಿಯರೊಡನೆ ಸಖತ್ ಸ್ಟೆಪ್ ಸಹ ಹಾಕಿದರು. ಅನಂತ್ ಹಾಗೂ ರಾಧಿಕಾರ ಮದುವೆ ಕಾರ್ಯಕ್ರಮ ಜೂನ್ ತಿಂಗಳಲ್ಲಿ ನಡೆಯಲಿದ್ದು, ಆಗ ಬಾಲಿವುಡ್​ನ ಅತಿಥಿಗಳ ಜೊತೆಗೆ ದೇಶದ ಅಗ್ರಗಣ್ಯ ರಾಜಕಾರಣಿಗಳು, ಉದ್ಯಮಿಗಳು ಇನ್ನೂ ಹಲವರು ಭಾಗಿಯಾಗಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ