Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರ್ದಿಕ್ ಪಾಂಡ್ಯ ಸ್ವಾರ್ಥ ಗುಣದಿಂದ ಬೇಸತ್ತು ವಿಚ್ಛೇದನ ನೀಡಿದ್ರಾ ನತಾಶಾ?

Hardik Pandya: ಹಾರ್ದಿಕ್ ಪಾಂಡ್ಯಾ ಮತ್ತು ನತಾಶಾ ಸ್ಟಾಂಕೊವಿಕ್ ಪರಸ್ಪರ ದೂರಾಗಿದ್ದಾರೆ. ಅಂದಹಾಗೆ ನತಾಶಾ, ಹಾರ್ದಿಕ್​ಗೆ ವಿಚ್ಛೇದನ ನೀಡಲು ಕಾರಣವೇನು?

ಹಾರ್ದಿಕ್ ಪಾಂಡ್ಯ ಸ್ವಾರ್ಥ ಗುಣದಿಂದ ಬೇಸತ್ತು ವಿಚ್ಛೇದನ ನೀಡಿದ್ರಾ ನತಾಶಾ?
Follow us
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.

Updated on:Aug 24, 2024 | 8:37 PM

ಹಾರ್ದಿಕ್ ಪಾಂಡ್ಯಾ ಹಾಗೂ ನತಾಶಾ ಮದುವೆ ಆದಾಗಿನಿಂದಲೂ ಸುದ್ದಿಯಲ್ಲಿ ಇದ್ದಾರೆ. ಮಗು ಹೊಂದಿದ ಬಳಿಕ ಇವರು ಮದುವೆ ಆಗುವ ನಿರ್ಧಾರ ತೆಗೆದುಕೊಂಡಿದ್ದರು. ಈಗ ಇಬ್ಬರೂ ಬೇರೆ ಆಗಿದ್ದಾರೆ. ಇವರು ಬೇರೆ ಆಗಿದ್ದು ಏಕೆ ಎನ್ನುವ ಪ್ರಶ್ನೆ ಅನೇಕರಿಗೆ ಇತ್ತು. ಇದಕ್ಕೆ ಉತ್ತರ ಸಿಕ್ಕಿದೆ. ಹಾರ್ದಿಕ್ ಪಾಂಡ್ಯ ಅವರ ಸ್ವಾರ್ಥ ತನವೇ ಇವರು ಬೇರೆ ಆಗಲು ಕಾರಣ ಎಂದು ಹೇಳಲಾಗುತ್ತಿದೆ. ಸದ್ಯ ಈ ಬಗ್ಗೆ ಕೆಲವು ಕಡೆಗಳಲ್ಲಿ ವರದಿಗಳು ಹರಿದಾಡಿವೆ. ಆದರೆ, ದಂಪತಿ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ನತಾಶಾ ಹಾಗೂ ಹಾರ್ದಿಕ್ ನಾಲ್ಕು ವರ್ಷಗಳ ಕಾಲ ಒಟ್ಟಿಗೆ ಇದ್ದರು. ಇವರಿಗೆ ಅಗಸ್ತ್ಯ ಹೆಸರಿನ ಮಗ ಕೂಡ ಇದ್ದಾನೆ. ಮಗುವಿನ ಸಂಪೂರ್ಣ ಜವಾಬ್ದಾರಿಯನ್ನು ನತಾಶಾ ತೆಗೆದುಕೊಂಡಿದ್ದಾರೆ. ಈಗ ಅವರು ತಮ್ಮ ಹುಟ್ಟೂರಾದ ಸೈಬೀರಿಯಾಗೆ ತೆರಳಿದ್ದಾರೆ. ಈ ಮಧ್ಯೆ ಇವರ ವಿಚ್ಛೇದನಕ್ಕೆ ಕಾರಣ ಏನು ಎನ್ನುವ ಕುರಿತು ಚರ್ಚೆಗಳು ನಡೆಯುತ್ತಿವೆ.

ಹಾರ್ದಿಕ್ ಪಾಂಡ್ಯ ಯಾವಾಗಲೂ ತಮ್ಮ ಬಗ್ಗೆ ಮಾತ್ರ ಯೋಚಿಸುತ್ತಿದ್ದರು. ಹಾರ್ದಿಕ್ ನಡೆದುಕೊಳ್ಳುತ್ತಿದ್ದನ್ನು ತಡೆದುಕೊಳ್ಳಲು ನತಾಶಾಗೆ ಸಾಧ್ಯವೇ ಆಗುತ್ತಿರಲಿಲ್ಲವಂತೆ. ಇಬ್ಬರ ಮಧ್ಯೆ ಸಾಕಷ್ಟು ಗ್ಯಾಪ್ ಇದೆ ಎಂಬುದು ಅವರ ಅರಿವಿಗೆ ಬಂದಿತ್ತು. ಹಾರ್ದಿಕ್ ಜೊತೆ ಹೊಂದಿಕೆ ಮಾಡಿಕೊಂಡು ಹೋಗಲು ಅವರು ಪ್ರಯತ್ನಿಸಿದ್ದರು. ಆದರೆ, ಸಾಧ್ಯವಾಗಿಲ್ಲ. ಒಂದು ಹಂತಕ್ಕೆ ಹೋದ ಬಳಿಕ ನತಾಶಾ ಎಲ್ಲವನ್ನೂ ಬಿಟ್ಟು ಸಾಗಲು ನಿರ್ಧರಿಸಿದರಂತೆ.

ಇದನ್ನೂ ಓದಿ:ಹಾರ್ದಿಕ್ ಜೊತೆ ಡೇಟಿಂಗ್ ಆರಂಭಿಸಿದ ಈ ಯುವತಿ ಯಾರು?

ಮದುವೆ ಆಗಿ ನಂತರ ಗಂಡನ ತೊರೆಯೋದು ದೊಡ್ಡ ನಿರ್ಧಾರ. ಇದಕ್ಕೂ ಮೊದಲು ಸಾಕಷ್ಟು ಯೋಚನೆ ಮಾಡಬೇಕಾಗುತ್ತದೆ. ಆ ಯೋಚನೆಯನ್ನು ನತಾಶಾ ಯೋಚಿಸಿ ತೆಗೆದುಕೊಂಡಿದ್ದಾರಂತೆ. ಒಮ್ಮೆ ತೆಗೆದುಕೊಂಡ ನಿರ್ಧಾರದಿಂದ ಹಿಂದೆ ಸರಿಯದೇ ಇರಲು ಅವರು ನಿರ್ಧರಿಸಿದರು. ನತಾಶಾಗೆ ಇದು ತುಂಬಾನೇ ನೋವು ನೀಡಿತ್ತು ಎನ್ನಲಾಗಿದೆ. ಯಾವಾಗಲೂ ದುಃಖದಲ್ಲಿ ಇರುವುದಕ್ಕಿಂತ ಬೇರೆ ಆಗೋದೇ ಉತ್ತಮ ಎಂದು ಅವರು ನಿರ್ಧರಿಸಿದ್ದರು.

ನತಾಶಾ ಹಾಗೂ ಹಾರ್ದಿಕ್ ಮೇ 2020ರಲ್ಲಿ ಎಂಗೇಜ್ಮೆಂಟ್ ಮಾಡಿಕೊಂಡರು. 2023ರ ಫೆಬ್ರವರಿಯಲ್ಲಿ ಹಿಂದೂ ಹಾಗೂ ಕ್ರೈಸ್ತ ಸಮುದಾಯದ ರೀತಿ ಮದುವೆ ಆದರು. ಈ ವರ್ಷ ಜುಲೈನಲ್ಲಿ ಬೇರೆ ಆಗುವ ನಿರ್ಧಾರ ತೆಗೆದುಕೊಂಡರು. ಸದ್ಯ ಹಾರ್ದಿಕ್ ಟೀಂ ಇಂಡಿಯಾ ಪರ ಆಟ ಆಡುತ್ತಿದ್ದಾರೆ. ನತಾಶಾ ಅವರು ಭಾರತದ ಕೆಲ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದರು. ಅವರು ಮಾಡೆಲ್ ಕೂಡ ಹೌದು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:11 pm, Sat, 24 August 24

ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ