AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ಪ್ರೀ ವೆಡ್ಡಿಂಗ್ ಸಂಭ್ರಮಕ್ಕೆ ಪ್ರಿಯಾಂಕಾ ಚೋಪ್ರಾ ಬರಲಿಲ್ಲ ಏಕೆ?

Priyanka Chopra: ಅನಂತ್ ಅಂಬಾನಿ-ರಾಧಿಕಾ ಅವರ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಹಲವು ಬಾಲಿವುಡ್ ತಾರೆಯರು ಭಾಗಿಯಾಗಿದ್ದಾರೆ. ಆದರೆ ಪ್ರಿಯಾಂಕಾ ಚೋಪ್ರಾ ಗೈರಾಗಿದ್ದಾರೆ. ಕಾರಣವೇನು?

ಅಂಬಾನಿ ಪ್ರೀ ವೆಡ್ಡಿಂಗ್ ಸಂಭ್ರಮಕ್ಕೆ ಪ್ರಿಯಾಂಕಾ ಚೋಪ್ರಾ ಬರಲಿಲ್ಲ ಏಕೆ?
ಮಂಜುನಾಥ ಸಿ.
|

Updated on: Mar 05, 2024 | 1:49 PM

Share

ಅನಂತ್ ಅಂಬಾನಿ-ರಾಧಿಕಾರ (Anant Ambani) ಪ್ರೀ ವೆಡ್ಡಿಂಗ್ ಸಂಭ್ರಮ ಜೋರಾಗಿ ನಡೆಯುತ್ತಿದೆ. ಬಾಲಿವುಡ್​ ಸೂಪರ್​ಸ್ಟಾರ್​ಗಳೆಲ್ಲ ಶೂಟಿಂಗ್​ಗೆ ರಜೆ ಹಾಕಿ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಖಾನ್​ಗಳು, ಕಪೂರ್​ಗಳು ಅಂಬಾನಿ ಪುತ್ರನ ಪ್ರೀ ವೆಡ್ಡಿಂಗ್​ನಲ್ಲಿ ಕುಣಿದು ಕುಪ್ಪಳಿಸುತ್ತಿದ್ದಾರೆ. ಹಲವು ತಾರೆಯರು ಕಾರ್ಯಕ್ರಮಕ್ಕೆ ಬಂದಿದ್ದಾರೆ ಆದರೆ ಪ್ರಿಯಾಂಕಾ ಚೋಪ್ರಾ (Priyanka Chopra) ಮಾತ್ರ ಯಾಕೋ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಪ್ರಿಯಾಂಕಾ ಚೋಪ್ರಾ ಅನಂತ್-ರಾಧಿಕಾರ ಪ್ರೀ ವೆಡ್ಡಿಂಗ್ ಕಾರ್ಯಕ್ರಮಕ್ಕೆ ಏಕೆ ಬಂದಿಲ್ಲ ಎಂಬ ಅಭಿಮಾನಿಗಳಿಗೆ ಕುತೂಹಲ ಉಂಟಾಗಿದೆ.

ಕೆಲ ತಿಂಗಳ ಹಿಂದೆ ನಡೆದಿದ್ದ ನೀತಾ ಅಂಬಾನಿಯ ಜಿಯೋ ಕಲ್ಚರಲ್ ಸೆಂಟರ್ ಉದ್ಘಾಟನೆಗೆ ಪ್ರಿಯಾಂಕಾ ಚೋಪ್ರಾ ಆಗಮಿಸಿದ್ದರು. ಆ ಕಾರ್ಯಕ್ರಮಕ್ಕೆ ಹಲವು ಬಾಲಿವುಡ್ ತಾರೆಯರು, ಕೆಲ ಹಾಲಿವುಡ್ ತಾರೆಯರು ಸಹ ಆಗಮಿಸಿದ್ದರು. ಆ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಚೋಪ್ರಾ ಸಖತ್ ಆಗಿ ಮಿಂಚಿದ್ದರು. ಹಾಗಾಗಿ ಪ್ರೀ ವೆಡ್ಡಿಂಗ್​ಗೆ ಸಹ ಪ್ರಿಯಾಂಕಾ ಚೋಪ್ರಾ ಆಗಮಿಸುತ್ತಾರೆ ಎನ್ನಲಾಗಿತ್ತು. ಆದರೆ ಪ್ರಿಯಾಂಕಾ ಪ್ರೀ ವೆಡ್ಡಿಂಗ್​ಗೆ ಗೈರಾಗಿದ್ದಾರೆ. ಆದರೆ ಅದಕ್ಕೆ ಕಾರಣವಿದೆ.

ಇದನ್ನೂ ಓದಿ: ಆಸ್ಕರ್​ಗೆ ನಾಮಿನೇಟ್ ಆಗಿರುವ ಭಾರತೀಯ ಡಾಕ್ಯುಮೆಂಟರಿಗೆ ಪ್ರಿಯಾಂಕಾ ಚೋಪ್ರಾ ಬೆಂಬಲ

ಪ್ರಿಯಾಂಕಾ ಚೋಪ್ರಾ ತಮ್ಮ ಹೊಸ ಹಾಲಿವುಡ್ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಚಿತ್ರೀಕರಣದ ಶೆಡ್ಯೂಲ್ ಮೊದಲೇ ನಿಗದಿಯಾಗಿದ್ದ ಕಾರಣ ಪ್ರಿಯಾಂಕಾ ಚೋಪ್ರಾ ಪ್ರೀ ವೆಡ್ಡಿಂಗ್ ಕಾರ್ಯಕ್ರಮಕ್ಕೆ ಆಗಮಿಸಿಲ್ಲ. ಪ್ರಿಯಾಂಕಾ ಚೋಪ್ರಾ ಪ್ರಸ್ತುತ ಹಾಲಿವುಡ್ ಸಿನಿಮಾ ‘ಹೆಡ್ಸ್ ಆಫ್ ಸ್ಟೇಟ್’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಆಕ್ಷನ್ ಸಿನಿಮಾ ಇದಾಗಿದ್ದು, ಪ್ರಿಯಾಂಕಾ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರೀಕರಣ ಇರುವ ಕಾರಣದಿಂದಲೇ ಪ್ರಿಯಾಂಕಾ ಚೋಪ್ರಾ ಅನಂತ್-ರಾಧಿಕಾ ಪ್ರೀ ವೆಡ್ಡಿಂಗ್​ಗೆ ಬಂದಿಲ್ಲ.

ಆದರೆ ಪ್ರಿಯಾಂಕಾರ ತಾಯಿ ಮಧು ಚೋಪ್ರಾ, ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪ್ರಿಯಾಂಕಾ ಚೋಪ್ರಾ, ಪ್ರೀ ವೆಡ್ಡಿಂಗ್​ಗೆ ಬರದೇ ಇರುವ ಬಗ್ಗೆ ಪಾಪರಾಟ್ಜಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಮಧು ಚೋಪ್ರಾ, ‘ಬರ್ತಾಳೆ, ಪ್ರಿಯಾಂಕಾ ಚೋಪ್ರಾ ಬಂದೇ ಬರ್ತಾಳೆ’ ಎಂದಷ್ಟೆ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?