AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ಪ್ರೀ ವೆಡ್ಡಿಂಗ್ ಸಂಭ್ರಮಕ್ಕೆ ಪ್ರಿಯಾಂಕಾ ಚೋಪ್ರಾ ಬರಲಿಲ್ಲ ಏಕೆ?

Priyanka Chopra: ಅನಂತ್ ಅಂಬಾನಿ-ರಾಧಿಕಾ ಅವರ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಹಲವು ಬಾಲಿವುಡ್ ತಾರೆಯರು ಭಾಗಿಯಾಗಿದ್ದಾರೆ. ಆದರೆ ಪ್ರಿಯಾಂಕಾ ಚೋಪ್ರಾ ಗೈರಾಗಿದ್ದಾರೆ. ಕಾರಣವೇನು?

ಅಂಬಾನಿ ಪ್ರೀ ವೆಡ್ಡಿಂಗ್ ಸಂಭ್ರಮಕ್ಕೆ ಪ್ರಿಯಾಂಕಾ ಚೋಪ್ರಾ ಬರಲಿಲ್ಲ ಏಕೆ?
ಮಂಜುನಾಥ ಸಿ.
|

Updated on: Mar 05, 2024 | 1:49 PM

Share

ಅನಂತ್ ಅಂಬಾನಿ-ರಾಧಿಕಾರ (Anant Ambani) ಪ್ರೀ ವೆಡ್ಡಿಂಗ್ ಸಂಭ್ರಮ ಜೋರಾಗಿ ನಡೆಯುತ್ತಿದೆ. ಬಾಲಿವುಡ್​ ಸೂಪರ್​ಸ್ಟಾರ್​ಗಳೆಲ್ಲ ಶೂಟಿಂಗ್​ಗೆ ರಜೆ ಹಾಕಿ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಖಾನ್​ಗಳು, ಕಪೂರ್​ಗಳು ಅಂಬಾನಿ ಪುತ್ರನ ಪ್ರೀ ವೆಡ್ಡಿಂಗ್​ನಲ್ಲಿ ಕುಣಿದು ಕುಪ್ಪಳಿಸುತ್ತಿದ್ದಾರೆ. ಹಲವು ತಾರೆಯರು ಕಾರ್ಯಕ್ರಮಕ್ಕೆ ಬಂದಿದ್ದಾರೆ ಆದರೆ ಪ್ರಿಯಾಂಕಾ ಚೋಪ್ರಾ (Priyanka Chopra) ಮಾತ್ರ ಯಾಕೋ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಪ್ರಿಯಾಂಕಾ ಚೋಪ್ರಾ ಅನಂತ್-ರಾಧಿಕಾರ ಪ್ರೀ ವೆಡ್ಡಿಂಗ್ ಕಾರ್ಯಕ್ರಮಕ್ಕೆ ಏಕೆ ಬಂದಿಲ್ಲ ಎಂಬ ಅಭಿಮಾನಿಗಳಿಗೆ ಕುತೂಹಲ ಉಂಟಾಗಿದೆ.

ಕೆಲ ತಿಂಗಳ ಹಿಂದೆ ನಡೆದಿದ್ದ ನೀತಾ ಅಂಬಾನಿಯ ಜಿಯೋ ಕಲ್ಚರಲ್ ಸೆಂಟರ್ ಉದ್ಘಾಟನೆಗೆ ಪ್ರಿಯಾಂಕಾ ಚೋಪ್ರಾ ಆಗಮಿಸಿದ್ದರು. ಆ ಕಾರ್ಯಕ್ರಮಕ್ಕೆ ಹಲವು ಬಾಲಿವುಡ್ ತಾರೆಯರು, ಕೆಲ ಹಾಲಿವುಡ್ ತಾರೆಯರು ಸಹ ಆಗಮಿಸಿದ್ದರು. ಆ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಚೋಪ್ರಾ ಸಖತ್ ಆಗಿ ಮಿಂಚಿದ್ದರು. ಹಾಗಾಗಿ ಪ್ರೀ ವೆಡ್ಡಿಂಗ್​ಗೆ ಸಹ ಪ್ರಿಯಾಂಕಾ ಚೋಪ್ರಾ ಆಗಮಿಸುತ್ತಾರೆ ಎನ್ನಲಾಗಿತ್ತು. ಆದರೆ ಪ್ರಿಯಾಂಕಾ ಪ್ರೀ ವೆಡ್ಡಿಂಗ್​ಗೆ ಗೈರಾಗಿದ್ದಾರೆ. ಆದರೆ ಅದಕ್ಕೆ ಕಾರಣವಿದೆ.

ಇದನ್ನೂ ಓದಿ: ಆಸ್ಕರ್​ಗೆ ನಾಮಿನೇಟ್ ಆಗಿರುವ ಭಾರತೀಯ ಡಾಕ್ಯುಮೆಂಟರಿಗೆ ಪ್ರಿಯಾಂಕಾ ಚೋಪ್ರಾ ಬೆಂಬಲ

ಪ್ರಿಯಾಂಕಾ ಚೋಪ್ರಾ ತಮ್ಮ ಹೊಸ ಹಾಲಿವುಡ್ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಚಿತ್ರೀಕರಣದ ಶೆಡ್ಯೂಲ್ ಮೊದಲೇ ನಿಗದಿಯಾಗಿದ್ದ ಕಾರಣ ಪ್ರಿಯಾಂಕಾ ಚೋಪ್ರಾ ಪ್ರೀ ವೆಡ್ಡಿಂಗ್ ಕಾರ್ಯಕ್ರಮಕ್ಕೆ ಆಗಮಿಸಿಲ್ಲ. ಪ್ರಿಯಾಂಕಾ ಚೋಪ್ರಾ ಪ್ರಸ್ತುತ ಹಾಲಿವುಡ್ ಸಿನಿಮಾ ‘ಹೆಡ್ಸ್ ಆಫ್ ಸ್ಟೇಟ್’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಆಕ್ಷನ್ ಸಿನಿಮಾ ಇದಾಗಿದ್ದು, ಪ್ರಿಯಾಂಕಾ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರೀಕರಣ ಇರುವ ಕಾರಣದಿಂದಲೇ ಪ್ರಿಯಾಂಕಾ ಚೋಪ್ರಾ ಅನಂತ್-ರಾಧಿಕಾ ಪ್ರೀ ವೆಡ್ಡಿಂಗ್​ಗೆ ಬಂದಿಲ್ಲ.

ಆದರೆ ಪ್ರಿಯಾಂಕಾರ ತಾಯಿ ಮಧು ಚೋಪ್ರಾ, ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪ್ರಿಯಾಂಕಾ ಚೋಪ್ರಾ, ಪ್ರೀ ವೆಡ್ಡಿಂಗ್​ಗೆ ಬರದೇ ಇರುವ ಬಗ್ಗೆ ಪಾಪರಾಟ್ಜಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಮಧು ಚೋಪ್ರಾ, ‘ಬರ್ತಾಳೆ, ಪ್ರಿಯಾಂಕಾ ಚೋಪ್ರಾ ಬಂದೇ ಬರ್ತಾಳೆ’ ಎಂದಷ್ಟೆ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ