AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮನ್ನಾ ಬೇಡವೇ ಬೇಡ ಎಂದಿದ್ದ ‘ಧುರಂಧರ್’ ನಿರ್ದೇಶಕ ಕಾರಣ ಏನು?

Tamannah Bhatia missed Dhurandhar: ‘ಧರುಂಧರ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸುತ್ತಿದೆ. ಸಿನಿಮಾನಲ್ಲಿ ನಟಿಸಿರುವ ಎಲ್ಲ ನಟ-ನಟಿಯರಿಗೆ ಒಳ್ಳೆಯ ಗುರುತು ಗೌರವ ದೊರೆಯುತ್ತಿದೆ. ಇದೇ ಸಿನಿಮಾನಲ್ಲಿ ಖ್ಯಾತ ನಟಿ ತಮನ್ನಾ ಭಾಟಿಯಾ ಸಹ ನಟಿಸಬೇಕಿತ್ತಂತೆ. ಆದರೆ ನಿರ್ದೇಶಕ ಆದಿತ್ಯ ಅವರು ಯಾವುದೇ ಕಾರಣಕ್ಕೆ ತಮನ್ನಾ ಬೇಡ ಅಂದುಬಿಟ್ಟರಂತೆ. ಕಾರಣ ಏನು ಗೊತ್ತೆ?

ತಮನ್ನಾ ಬೇಡವೇ ಬೇಡ ಎಂದಿದ್ದ ‘ಧುರಂಧರ್’ ನಿರ್ದೇಶಕ ಕಾರಣ ಏನು?
Dhurandhar Tamannah
ಮಂಜುನಾಥ ಸಿ.
|

Updated on: Dec 27, 2025 | 2:10 PM

Share

ರಣ್ವೀರ್ ಸಿಂಗ್ ನಟನೆಯ ‘ಧುರಂಧರ್’ (Dhurandhar) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಬಿರುಗಾಳಿ ಎಬ್ಬಿಸಿದೆ. ಸಿನಿಮಾ ಬಿಡುಗಡೆ ಆದ ಕೇವಲ 21 ದಿಗಳಲ್ಲಿ 1000 ಕೋಟಿ ಕಲೆಕ್ಷನ್ ದಾಟಿದೆ. ಗಮನಿಸಬೇಕಾದ ಅಂಶವೆಂದರೆ ‘ಧುರಂಧರ್’ ಪ್ಯಾನ್ ಇಂಡಿಯಾ ಸಿನಿಮಾ ಸಹ ಅಲ್ಲ. ಹಿಂದಿ ಹೊರತಾಗಿ ಬೇರೆ ಯಾವ ಭಾಷೆಯಲ್ಲಿಯೂ ಬಿಡುಗಡೆ ಆಗಿಲ್ಲ. ಹಾಗಿದ್ದರೂ ಸಹ ಗಳಿಕೆಯಲ್ಲಿ ಹೊಸ ಮೈಲಿಗಲ್ಲುಗಳನ್ನು ದಾಟುತ್ತಾ ಸಾಗುತ್ತಿದೆ. ಸಿನಿಮಾನಲ್ಲಿ ನಟಿಸಿರುವ ನಟ-ನಟಿಯರು, ಕೆಲಸ ಮಾಡಿರುವ ತಂತ್ರಜ್ಙರಿಗೆ ಒಳ್ಳೆಯ ಗುರುತು, ಗೌರವ ಸಿಗುತ್ತಿದೆ. ಅಂದಹಾಗೆ ನಟಿ ತಮನ್ನಾ ಭಾಟಿಯಾ ಸಹ ‘ಧುರಂಧರ್’ ಸಿನಿಮಾನಲ್ಲಿ ನಟಿಸಬೇಕಿತ್ತು, ಆದರೆ ನಿರ್ದೇಶಕ ಆದಿತ್ಯ ಧರ್ ಕಡ್ಡಾಯವಾಗಿ ತಮನ್ನಾ ಬೇಡವೇ ಬೇಡ ಎಂದುಬಿಟ್ಟರಂತೆ. ಕಾರಣ ಏನು?

‘ಧುರಂಧರ್’ ಸಿನಿಮಾನಲ್ಲಿ ‘ಶರಾರತ್’ ಹೆಸರಿನ ಹಾಡೊಂದಿದೆ. ಆ ಹಾಡಿಗೆ ವಿಜಯ್ ಗಂಗೂಲಿ ಅವರು ನೃತ್ಯ ನಿರ್ದೇಶನ ಮಾಡಿದ್ದಾರೆ. ‘ಶರಾರತ್’ ಹಾಡು ಕೇಳಿದ ಕೂಡಲೇ ಈ ಹಾಡಿಗೆ ತಮನ್ನಾ ಭಾಟಿಯಾ ಡ್ಯಾನ್ಸ್ ಮಾಡಿದರೆ ಬಹಳ ಚೆನ್ನಾಗಿ ಇರುತ್ತದೆ ಎಂದು ವಿಜಯ್ ಗಂಗೂಲಿ ಅವರಿಗೆ ಅನಿಸಿತಂತೆ. ಇದೇ ವಿಷಯವನ್ನು ನಿರ್ದೇಶಕ ಆದಿತ್ಯ ಧರ್ ಬಳಿ ವಿಜಯ್ ಹೇಳಿಕೊಂಡಿದ್ದಾರೆ. ಆದರೆ ಆದಿತ್ಯ ಅವರು ಕೂಡಲೇ ‘ತಮನ್ನಾ ಬೇಡ’ ಎಂದು ಬಿಟ್ಟರಂತೆ.

ಆದಿತ್ಯ ಅವರು ತಮನ್ನಾ ಅವರನ್ನು ನಿರಾಕರಿಸಲು ಯಾವುದೇ ವೈಯಕ್ತಿಕ ಕಾರಣ ಇಲ್ಲ. ಆದಿತ್ಯ ಅವರ ಅಭಿಪ್ರಾಯದಂತೆ, ತಮನ್ನಾ ಭಾಟಿಯಾ ಬಹಳ ಜನಪ್ರಿಯ ನಟಿ, ಅವರು ಸಿನಿಮಾದ ಹಾಡೊಂದರಲ್ಲಿ ಕಾಣಿಸಿಕೊಂಡರೆ ಆ ಹಾಡು ಹಿಟ್ ಆಗುತ್ತದೆ, ಆ ಹಾಡಿಗಾಗಿ ಜನ ಸಿನಿಮಾಕ್ಕೆ ಬರುವುದು ಸಹ ಇದೆ, ಆದರೆ ಹಾಗೆ ಆಗುವುದು ಆದಿತ್ಯಗೆ ಇಷ್ಟವಿರಲಿಲ್ಲವಂತೆ. ‘ಶರಾರತ್’ ಹಾಡು ಸಿನಿಮಾದಿಂದ ಪ್ರತ್ಯೇಕವಾಗಿದೆ, ಅದೊಂದು ‘ಸೇರಿಸಲಾಗಿರುವ ಐಟಂ ಹಾಡು’ ಎನಿಸಬಾರದು ಎಂಬುದು ಅವರ ಆಲೋಚನೆ ಆಗಿತ್ತಂತೆ.

ಇದನ್ನೂ ಓದಿ:‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ

ತಮನ್ನಾ ಆ ಹಾಡಿನಲ್ಲಿ ನಟಿಸಿದರೆ ಜನ ಕತೆಗಿಂತಲೂ ಹಾಡಿಗೆ ಪ್ರತ್ಯೇಕ ಪ್ರಾಮುಖ್ಯತೆ ನೀಡುತ್ತಾರೆ. ಹಾಡಿನ ಸುತ್ತ ನಡೆಯುತ್ತಿರುವ ಕತೆಗೇ ಜನ ಮಹತ್ವ ನೀಡಬೇಕು, ಹಾಡು ಕತೆಯಿಂದ ಪ್ರತ್ಯೇಕವಾಗಬಾರದು ಎಂಬ ಕಾರಣಕ್ಕೆ ತಮನ್ನಾರನ್ನು ಹಾಕಿಕೊಳ್ಳಲಿಲ್ಲವಂತೆ, ಬದಲಿಗೆ ‘ಶರಾರತ್’ ಹಾಡಿನಲ್ಲಿ ಇಬ್ಬರು ನಟಿಯರನ್ನು ಹಾಕಿಕೊಂಡಿದ್ದಾರೆ. ಅದು ಸಹ ಆದಿತ್ಯ ಅವರದ್ದೇ ಐಡಿಯಾ ಅಂತೆ, ಇಬ್ಬರು ನಟಿಯರು ಇದ್ದರೆ ಒಬ್ಬರ ಮೇಲೆ ಪ್ರೇಕ್ಷಕರ ಗಮನ ನಿಲ್ಲುವುದಿಲ್ಲ ಎಂಬುದು ಅವರ ಆಲೋಚನೆ ಆಗಿತ್ತಂತೆ.

‘ಧುರಂಧರ್’ ಸಿನಿಮಾನಲ್ಲಿ ರಣ್ವೀರ್ ಸಿಂಗ್, ಗೂಢಚಾರಿಯ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾನಲ್ಲಿ ಅಕ್ಷಯ್ ಕುಮಾರ್, ಅರ್ಜುನ್ ರಾಮ್​​ಪಾಲ್, ಸಂಜಯ್ ದತ್, ಮಾಧವನ್ ಅವರುಗಳು ನಟಿಸಿದ್ದಾರೆ. ಸಿನಿಮಾದ ನಾಯಕಿಯಾಗಿ ಸಾರಾ ಅರ್ಜುನ್ ನಟಿಸಿದ್ದಾರೆ. ಸಿನಿಮಾದ ಸೀಕ್ವೆಲ್ ಮೇ ತಿಂಗಳಲ್ಲಿ ಬಿಡುಗಡೆ ಆಗಲಿದೆ.

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ