AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್’ ಸಿನಿಮಾದ ವಿಲನ್ ಮುಸ್ಲಿಂ ಯಾಕೆ? ನಿರ್ದೇಶಕ ಸಂದೀಪ್ ಕೊಟ್ಟ ಉತ್ತರ

Animal: ‘ಅನಿಮಲ್’ ಸಿನಿಮಾ ಟೀಕೆ, ವಿಮರ್ಶೆಗಳಿಗೆ ಒಳಗಾಗಿಯೂ ಭಾರಿ ದೊಡ್ಡ ಹಿಟ್ ಆಗಿದೆ. ಪುರುಷಾಹಂಕಾರ, ಸ್ತ್ರೀದ್ವೇಷವನ್ನು ಪ್ರಮೋಟ್ ಮಾಡಲಾಗಿದೆ ಎಂಬ ಆರೋಪ ಸಿನಿಮಾದ ಮೇಲಿದೆ. ಜೊತೆಗೆ ಸಿನಿಮಾದ ವಿಲನ್ ಅನ್ನು ಮುಸ್ಲಿಂ ವ್ಯಕ್ತಿಯನ್ನಾಗಿಸುವ ಮೂಲಕ ಮುಸ್ಲೀಮರನ್ನು ಕೆಟ್ಟದಾಗಿ ಬಿಂಬಿಸುವ ಪ್ರಯತ್ನ ಮಾಡಲಾಗಿದೆ ಎನ್ನಲಾಗಿದೆ. ಈ ಬಗ್ಗೆ ನಿರ್ದೇಶಕ ಸಂದೀಪ್ ಪ್ರತಿಕ್ರಿಯಿಸಿದ್ದಾರೆ.

‘ಅನಿಮಲ್’ ಸಿನಿಮಾದ ವಿಲನ್ ಮುಸ್ಲಿಂ ಯಾಕೆ? ನಿರ್ದೇಶಕ ಸಂದೀಪ್ ಕೊಟ್ಟ ಉತ್ತರ
ಅನಿಮಲ್
ಮಂಜುನಾಥ ಸಿ.
|

Updated on: Dec 22, 2023 | 6:00 PM

Share

ರಣ್​ಬೀರ್ ಕಪೂರ್ (Ranbir Kapoor)-ರಶ್ಮಿಕಾ ಮಂದಣ್ಣ (Rashmika Mandanna) ನಟಿಸಿ ಸಂದೀಪ್ ರೆಡ್ಡಿ ವಂಗಾ ನಿರ್ದೇಶನ ಮಾಡಿರುವ ‘ಅನಿಮಲ್’ ಸಿನಿಮಾ ದೊಡ್ಡ ಹಿಟ್ ಎನಿಸಿಕೊಂಡಿದೆ. ಸಿನಿಮಾ ಬಗ್ಗೆ ಹಲವು ಪ್ರಶ್ನೆಗಳು, ಟೀಕೆಗಳು ಎದ್ದಿವೆಯಾದರೂ ದೊಡ್ಡ ಪ್ರಮಾಣದ ಜನರಿಗೆ ಸಿನಿಮಾ ಇಷ್ಟವಾಗಿದೆ ಎಂಬುದಕ್ಕೆ ಅದರ ಬಾಕ್ಸ್ ಆಫೀಸ್ ಕಲೆಕ್ಷನ್ ಸಾಕ್ಷಿ. ‘ಅನಿಮಲ್’ ಸಿನಿಮಾದಲ್ಲಿ ಹಿಂಸೆ ಹೆಚ್ಚಿದೆ, ಮಹಿಳೆಯರ ಬಗ್ಗೆ ಅಗೌರವವಿದೆ, ಪುರುಷ ಅಹಂಕಾರವನ್ನು ಮೆರೆಸಲಾಗದೆ, ಮಹಿಳಾ ದೌರ್ಜನ್ಯವನ್ನು ಪ್ರಮೋಟ್ ಮಾಡುತ್ತಿದೆ ಎಂಬ ಹಲವು ಆರೋಪಗಳು ಸಿನಿಮಾ ಮೇಲಿವೆ. ಇದರ ಜೊತೆಗೆ ಸಿನಿಮಾದಲ್ಲಿ ವಿಲನ್ ಅನ್ನು ಮುಸ್ಲಿಂ ವ್ಯಕ್ತಿಯಾಗಿ ಮಾಡಿ, ಮುಸ್ಲೀಮರು ಕೆಟ್ಟವರು ಎಂದು ಬಿಂಬಿಸುವ ಪ್ರಯತ್ನವನ್ನು ನಿರ್ದೇಶಕ ಮಾಡಿದ್ದಾರೆ ಎಂದು ಸಹ ಆರೋಪಿಸಲಾಗಿದೆ. ಈ ಬಗ್ಗೆ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಉತ್ತರ ನೀಡಿದ್ದಾರೆ.

ಸಿನಿಮಾದಲ್ಲಿ ಖಳನಾಯಕನನ್ನು ಮುಸ್ಲಿಂ ವ್ಯಕ್ತಿ ಮಾಡಿರುವುದಕ್ಕೆ ಕಾರಣವಿದೆ. ನಾವು ಸಮಾಜದಲ್ಲಿ ನೋಡುತ್ತಿರುತ್ತೇವೆ, ಜನ ಕ್ರಿಶ್ಚಿಯಾನಿಟಿಗೆ, ಇಸ್ಲಾಂಗೆ ಮತಾಂತರವಾಗುವುದು ಆದರೆ ಹಿಂದೂ ಧರ್ಮಕ್ಕೆ ಮತಾಂತರ ಆಗುವುದು ಕಡಿಮೆ. ಅಲ್ಲದೆ ಇಸ್ಲಾಂನಲ್ಲಿ ಬಹುಪತ್ನಿತ್ವಕ್ಕೆ ಅವಕಾಶ ಇದೆ. ಹೀಗಿರುವಾಗ ಇದೇ ಕಾರಣಕ್ಕೆ ಒಂದೇ ಮುಖಚರ್ಯೆ ಇರದ ಹಲವು ನಟರನ್ನು ಖಳನಟನ ಪಾತ್ರದ ಭಾವ-ಭಾಮೈದರಾಗಿ ತೋರಿಸಬಹುದು ಎಂಬ ಕಾರಣಕ್ಕೆ ನಾನು ವಿಲನ್ ಅನ್ನು ಮುಸ್ಲಿಂ ವ್ಯಕ್ತಿ ಮಾಡಿದೆ. ಅದರ ಹೊರತಾಗಿ ಮುಸ್ಲೀಮ್ ವ್ಯಕ್ತಿಗಳನ್ನು ಕೆಟ್ಟದಾಗಿ ಬಿಂಬಿಸುವ ಕಾರಣದಿಂದ ಅಲ್ಲ ಎಂದಿದ್ದಾರೆ.

ಸಿನಿಮಾದಲ್ಲಿ ರಶ್ಮಿಕಾ ಹಾಗೂ ರಣ್​ಬೀರ್ ಪಾತ್ರಗಳು ಅಂತರ್ಜಾತೀಯ ವಿವಾಹ ಆಗುವ ಬಗ್ಗೆಯೂ ಕೆಲವರು ಅಪಸ್ವರ ಎತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂದೀಪ್ ರೆಡ್ಡಿ ವಂಗಾ, ‘‘ದೆಹಲಿಯಲ್ಲಿ ಹಲವು ತಮಿಳು ಹಾಗೂ ತೆಲುಗು ಕುಟುಂಬಗಳು ನೆಲೆಗೊಂಡಿರುವುದನ್ನು ನಾನು ನೋಡಿದ್ದೇನೆ. ಅಲ್ಲದೆ ವೈಯಕ್ತಿಕವಾಗಿ ನನಗೂ ಅಂತರ್​ ಧರ್ಮೀಯ, ಅಂತರ್ ಜಾತೀಯ ವಿವಾಹಗಳ ಬಗ್ಗೆ ಒಲವಿದೆ ಹಾಗಾಗಿ ಕತೆಯನ್ನು ಹಾಗೆ ಮಾಡಿದ್ದೇನೆ’’ ಎಂದಿದ್ದಾರೆ.

ಇದನ್ನೂ ಓದಿ:ತಣ್ಣಗಾಯ್ತು ‘ಅನಿಮಲ್​’ ಅಬ್ಬರ; ಸಾವಿರ ಕೋಟಿ ರೂಪಾಯಿ ಗಳಿಸುವ ಆಸೆ ಈಡೇರಲೇ ಇಲ್ಲ

ಆ ಸಿನಿಮಾದಲ್ಲಿ ಕುಟುಂಬ ಸದಸ್ಯರ ಎದುರೇ ರಣ್​ಬೀರ್ ಹಾಗೂ ರಶ್ಮಿಕಾ ಗಾಢವಾಗಿ ಚುಂಬಿಸುವ ದೃಶ್ಯವೂ ಇದೆ. ಈ ಬಗ್ಗೆ ಮಾತನಾಡಿರುವ ಸಂದೀಪ್ ರೆಡ್ಡಿ ವಂಗಾ, ‘‘ಆ ಸೀನ್​ ಬರುವಾಗ ಹಿನ್ನೆಲೆಯಲ್ಲಿ ರಾಕ್ ಸಂಗೀತ ಕೇಳುತ್ತಿರುತ್ತದೆ. ಆ ಸಂಗೀತದಲ್ಲಿ ಒಂದು ರೀತಿಯ ಡೋಂಟ್ ಕೇರ್ ಭಾವವಿದೆ. ಎರಡೂ ಪಾತ್ರಗಳು ಪರಸ್ಪರ ಮುತ್ತಿಡುವ ಮೂಲಕ ತಮ್ಮ ಸಿಟ್ಟನ್ನು ವ್ಯಕ್ತಗೊಳಿಸುತ್ತಿದ್ದಾರೆ. ನಿಮ್ಮನ್ನು ನಾವು ಕೇರ್ ಮಾಡುವುದಿಲ್ಲ ಎನ್ನುವ ಭಾವವೂ ಆ ಮುತ್ತಿನಲ್ಲಿದೆ’’ ಎಂದಿದ್ದಾರೆ.

‘ಅನಿಮಲ್’ ಸಿನಿಮಾ ಡಿಸೆಂಬರ್ 1 ರಂದು ಬಿಡುಗಡೆ ಆಗಿತ್ತು. ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ, ತೃಪ್ತಿ ದಿಮ್ರಿ ನಾಯಕಿಯರಾಗಿ ನಟಿಸಿದ್ದಾರೆ. ಅನಿಲ್ ಕಪೂರ್, ಶಕ್ತಿ ಕಪೂರ್ ಸೇರಿದಂತೆ ಇತರೆ ಕೆಲವು ಹಿರಿಯ ನಟರು ಸಹ ಇದ್ದಾರೆ. ಸಿನಿಮಾವು ವಿಮರ್ಶೆ, ಟೀಕೆಗಳ ನಡುವೆಯೂ ಭಾರಿ ದೊಡ್ಡ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು