Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಲ್ಲೇ ಹೆದರಿಲ್ಲ, ಅಲ್ಲೇಕೆ ಭಯ ಬೀಳಲಿ?’; ಪಾಕ್​ ನೆಲದಲ್ಲೇ ಅಲ್ಲಿಯವರನ್ನು ಬೈದ ಬಗ್ಗೆ ಜಾವೇದ್ ಅಖ್ತರ್ ಮಾತು

ಕಾರ್ಯಕ್ರಮ ಒಂದಕ್ಕಾಗಿ ಪಾಕಿಸ್ತಾನದ ಲಾಹೋರ್​​ಗೆ ತೆರಳಿದ್ದ ಜಾವೇದ್ ಅವರು, ಪಾಕಿಸ್ತಾನಕ್ಕೆ ಬೈದಿದ್ದರು. ಇದಕ್ಕೆ ಪಾಕ್​ನ ಅನೇಕ ಸೆಲೆಬ್ರಿಟಿಗಳು ಕಿಡಿಕಾರಿದ್ದಾರೆ. ‘ಅವರಿಗೆ ಇಲ್ಲಿಗೆ ಬರೋಕೆ ವೀಸಾ ಕೊಟ್ಟಿದ್ದು ಯಾರು’ ಎಂದು ಪ್ರಶ್ನಿಸಲಾಗಿತ್ತು.   

‘ಇಲ್ಲೇ ಹೆದರಿಲ್ಲ, ಅಲ್ಲೇಕೆ ಭಯ ಬೀಳಲಿ?’; ಪಾಕ್​ ನೆಲದಲ್ಲೇ ಅಲ್ಲಿಯವರನ್ನು ಬೈದ ಬಗ್ಗೆ ಜಾವೇದ್ ಅಖ್ತರ್ ಮಾತು
ಜಾವೇದ್
Follow us
ರಾಜೇಶ್ ದುಗ್ಗುಮನೆ
|

Updated on: Feb 25, 2023 | 12:59 PM

ಗೀತ ಸಾಹಿತಿ ಜಾವೇದ್ ಅಖ್ತರ್ (Javed Akhtar) ಅವರು ತಮ್ಮ ನೇರ ನುಡಿಗಳಿಂದಲೇ ಫೇಮಸ್ ಆದವರು. ಅವರು ಇತ್ತೀಚೆಗೆ ಸಾಕಷ್ಟು ಸುದ್ದಿ ಆಗುತ್ತಿದ್ದಾರೆ. ಪಾಕಿಸ್ತಾನಕ್ಕೆ ತೆರಳಿ ಓಪನ್ ವೇದಿಕೆ ಮೇಲೆ ಪಾಕಿಸ್ತಾನದವರನ್ನು, ಉಗ್ರರಿಗೆ ಪಾಕಿಸ್ತಾನ ನೀಡುವ ಬೆಂಬಲವನ್ನು ಖಂಡಿಸಿದ್ದರು. ಈ ಹೇಳಿಕೆಗೆ ಭಾರತದವರಿಂದ ಭರ್ಜರಿ ಬೆಂಬಲ ಸಿಕ್ಕಿತ್ತು. ಈ ವಿಚಾರದ ಬಗ್ಗೆ ಜಾವೇದ್ ಅಖ್ತರ್ ಮಾತನಾಡಿದ್ದಾರೆ. ‘ಸತ್ಯ ಹೇಳೋಕೆ ನಾವೇಕೆ ಹೆದರಬೇಕು’ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಕಾರ್ಯಕ್ರಮ ಒಂದಕ್ಕಾಗಿ ಪಾಕಿಸ್ತಾನದ ಲಾಹೋರ್​​ಗೆ ತೆರಳಿದ್ದ ಜಾವೇದ್ ಅವರು, ‘ಮುಂಬೈ ದಾಳಿ ಹೇಗಾಯ್ತು ಎಂದು ನೋಡಿದ್ದೇವೆ. ಆ ಉಗ್ರರು ನಾರ್ವೆಯಿಂದಲೋ, ಈಜಿಪ್ಟ್​ನಿಂದಲೋ ಬಂದವರಲ್ಲ. ಪಾಕಿಸ್ತಾನದಿಂದಲೇ ಬಂದವರು. ಈಗಲೂ ಅವರು ಆರಾಮವಾಗಿ ಓಡಾಡಿಕೊಂಡಿದ್ದಾರೆ’ ಎಂದು ನೇರ ಮಾತುಗಳಲ್ಲಿ ಹೇಳಿದ್ದರು. ಇದಕ್ಕೆ ಪಾಕ್​ನ ಅನೇಕ ಸೆಲೆಬ್ರಿಟಿಗಳು ಕಿಡಿಕಾರಿದ್ದಾರೆ. ‘ಅವರಿಗೆ ಇಲ್ಲಿಗೆ ಬರೋಕೆ ವೀಸಾ ಕೊಟ್ಟಿದ್ದು ಯಾರು’ ಎಂದು ಪ್ರಶ್ನಿಸಲಾಗಿತ್ತು.

ಈ ಬಗ್ಗೆ ಎಬಿಪಿ ಕಾರ್ಯಕ್ರಮದಲ್ಲಿ ಮಾತನಾಡಿರುವ ಜಾವೇದ್ ಅವರು, ‘ನನ್ನ ಹೇಳಿಕೆ ದೊಡ್ಡ ಮಟ್ಟದಲ್ಲಿ ಚರ್ಚೆ ಆಯಿತು. ನಾನು ಅಲ್ಲಿಗೆ ಹೋಗಲೇ ಬಾರದಿತ್ತು ಎಂದೆಲ್ಲ ಅನಿಸಿತು. ಆದರೆ, ಇಲ್ಲಿಗೆ ಬಂದಮೇಲೆ ನನಗೆ ಮೂರನೇ ವಿಶ್ವ ಯುದ್ಧ ಗೆದ್ದಂತೆ ಅನಿಸಿತು. ಜನರಿಂದ, ಮಾಧ್ಯಮಗಳಿಂದ ಸಾಕಷ್ಟು ಪ್ರತಿಕ್ರಿಯೆ ಬಂದಿದ್ದವು. ನಾನು ಅಷ್ಟನ್ನು ಹೇಳಲೇಬೆಕಿತ್ತು. ನಾನು ಸುಮ್ಮನಿರಬೇಕಿತ್ತೇ?’ ಎಂದು ಪ್ರಶ್ನೆ ಮಾಡಿದ್ದಾರೆ ಅವರು.

‘ನನಗೆ ಗೊತ್ತು ಆ ರಾಷ್ಟ್ರದವರು ನನ್ನ ಮೇಲೆ ದ್ವೇಷ ಕಾರುತ್ತಿದ್ದಾರೆ. ನನ್ನ ದೇಶದಲ್ಲಿ ಇದ್ದುಕೊಂಡು ಈ ರೀತಿ ಹೇಳಿಕೆಯನ್ನು ನಾನು ಕೊಡಬಹುದು ಎಂದಾದರೆ ಎರಡು ದಿನಕ್ಕೋಸ್ಕರ ತೆರಳುವ ದೇಶದಲ್ಲಿದ್ದು ಈ ರೀತಿಯ ಹೇಳಿಕೆಯನ್ನು ನೀಡಲು ಭಯ ಏಕೆ? ನನಗೆ ಇಲ್ಲೇ ಭಯ ಇಲ್ಲ ಎಂದರೆ ಅಲ್ಲೇಕೆ ಭಯ ಬೀಳಲಿ’ ಎಂದು ಜಾವೇದ್ ಅಖ್ತರ್ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Emergency: ಇಂದಿರಾ ಗಾಂಧಿ ಕುರಿತು ಸಿನಿಮಾ ಮಾಡಲು ಆಸ್ತಿ ಅಡವಿಟ್ಟ ಕಂಗನಾ ರಣಾವತ್​

ಲಾಹೋರ್​​ಗೆ ಭೇಟಿ ನೀಡಿದ್ದ ಜಾವೇದ್

ಜಾವೇದ್ ಅವರು ಲಾಹೋರ್​ಗೆ ಭೇಟಿ ನೀಡಿದಾಗ ಮುಂಬೈ ದಾಳಿಯ ಬಗ್ಗೆ ಮಾತನಾಡಿದ್ದರು. ಇದರ ಜೊತೆಗೆ ಕಲಾವಿದರು ಕಾರ್ಯಕ್ರಮ ನೀಡುವ ಬಗ್ಗೆ ಮಾತನಾಡಿದ್ದರು. ‘ಪಾಕಿಸ್ತಾನದ ಗಾಯಕರಾದ ನುಸ್ರತ್ ಮತ್ತು ಮೆಹದಿ ಹಸನ್ ಅವರು ಭಾರತದಲ್ಲಿ ದೊಡ್ಡ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಆದರೆ, ಲತಾ ಮಂಗೇಶ್ಕರ್ ಅವರಿಗೋಸ್ಕರ ನಿಮ್ಮ ದೇಶ ಯಾವತ್ತಾದರೂ ಕಾರ್ಯಕ್ರಮ ಆಯೋಜಿಸಿತ್ತಾ?’ ಎಂದು ಕೂಡ ಜಾವೇದ್ ಅಖ್ತರ್ ಪ್ರಶ್ನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ