AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾವಣನ ಪಾತ್ರ ಮಾಡಲು ಒಪ್ಪಿದ್ದೇಕೆ ಯಶ್, ನಿರ್ದೇಶಕರು ಕೊಟ್ಟರು ಉತ್ತರ

Yash movie: ‘ರಾಮಾಯಣ’ ಸಿನಿಮಾಕ್ಕೆ ವಿಶ್ವದರ್ಜೆಯ ವಿಎಫ್​​ಎಕ್ಸ್ ತಂತ್ರಜ್ಞಾನ ಬಳಸಲಾಗಿದೆ. ಸಿನಿಮಾವನ್ನು ಐಮ್ಯಾಕ್ಸ್ ಗಾಗಿ ವಿಶೇಷವಾಗಿ ಚಿತ್ರೀಕರಿಸಲಾಗಿದೆ. ಸಿನಿಮಾನಲ್ಲಿ ರಣ್​​ಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿಯೂ ಹಾಗೂ ರಾವಣನಾಗಿ ನಟ ಯಶ್ ನಟಿಸಿದ್ದಾರೆ. ಆದರೆ ‘ಕೆಜಿಎಫ್’, ‘ಕೆಜಿಎಫ್ 2’ ಸಿನಿಮಾದಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ಯಶ್, ರಾವಣನಂಥಹಾ ವಿಲನ್ ಪಾತ್ರದಲ್ಲಿ ನಟಿಸಲು ಒಪ್ಪಿದ್ದೇಕೆ? ನಿರ್ದೇಶಕ ನಿತೀಶ್ ತಿವಾರಿ ಉತ್ತರ ನೀಡಿದ್ದಾರೆ.

ರಾವಣನ ಪಾತ್ರ ಮಾಡಲು ಒಪ್ಪಿದ್ದೇಕೆ ಯಶ್, ನಿರ್ದೇಶಕರು ಕೊಟ್ಟರು ಉತ್ತರ
Yash Ramayana
ಮಂಜುನಾಥ ಸಿ.
|

Updated on: Apr 07, 2026 | 6:07 PM

Share

ರಣ್​​ಬೀರ್ ಕಪೂರ್ (Ranbir Kapoor), ಯಶ್ ಮತ್ತು ಸಾಯಿ ಪಲ್ಲವಿ ನಟಿಸುತ್ತಿರುವ ‘ರಾಮಾಯಣ’ ಸಿನಿಮಾ ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್​ನ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ಎರಡು ಭಾಗಗಳ ನಿರ್ಮಾಣಕ್ಕೆ ಸುಮಾರು 4000 ಕೋಟಿ ಬಜೆಟ್ ಮೀಸಲಿಡಲಾಗಿದೆಯಂತೆ. ಸಿನಿಮಾಕ್ಕೆ ವಿಶ್ವದರ್ಜೆಯ ವಿಎಫ್​​ಎಕ್ಸ್ ತಂತ್ರಜ್ಞಾನ ಬಳಸಲಾಗಿದೆ. ಸಿನಿಮಾವನ್ನು ಐಮ್ಯಾಕ್ಸ್ ಗಾಗಿ ವಿಶೇಷವಾಗಿ ಚಿತ್ರೀಕರಿಸಲಾಗಿದೆ. ಸಿನಿಮಾನಲ್ಲಿ ರಣ್​​ಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿಯೂ ಹಾಗೂ ರಾವಣನಾಗಿ ನಟ ಯಶ್ ನಟಿಸಿದ್ದಾರೆ. ಆದರೆ ‘ಕೆಜಿಎಫ್’, ‘ಕೆಜಿಎಫ್ 2’ ಸಿನಿಮಾದಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ಯಶ್, ರಾವಣನಂಥಹಾ ವಿಲನ್ ಪಾತ್ರದಲ್ಲಿ ನಟಿಸಲು ಒಪ್ಪಿದ್ದೇಕೆ? ನಿರ್ದೇಶಕ ನಿತೀಶ್ ತಿವಾರಿ ಉತ್ತರ ನೀಡಿದ್ದಾರೆ.

ಇತ್ತೀಚೆಗೆ ನೀಡಿರುವ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿರುವ ನಿರ್ದೇಶಕ ನಿತೀಶ್ ತಿವಾರಿ, ‘ರಾವಣನದ್ದು ಬಹಳ ಸಂಕೀರ್ಣವಾದ ವ್ಯಕ್ತಿತ್ವ. ಆತನನ್ನು ಕೇವಲ ಒಬ್ಬ ‘ವಿಲನ್’ ಆಗಿಯೇ ನೋಡಲಾಗಿದೆ. ಆದರೆ ಆತ ಜ್ಞಾನವಂತನಾಗಿದ್ದ, ಸಂಗೀತಗಾರನಾಗಿದ್ದ, ವೈದ್ಯ ಜ್ಞಾನ ಪಾರಂಗತನಾಗಿದ್ದ, ಎಲ್ಲಕ್ಕಿಂತಲೂ ಮಿಗಿಲಾಗಿ ಆತ ಮಹಾನ್ ಶಿವಭಕ್ತನಾಗಿದ್ದ. ನಾವು ರಾವಣನನ್ನು ಒಬ್ಬ ದುಷ್ಟ ಎಂದು ಚಿತ್ರಿಸದೆ ಆತನ ಗುಣ-ಅವಗುಣ ಎರಡನ್ನು ತೋರಿಸಲಿದ್ದೇವೆ, ಇಂಥಹಾ ಪಾತ್ರ ಮಾಡಲು ದೊಡ್ಡ ಸ್ಟಾರ್​ಡಮ್ ಮತ್ತು ಕಾನ್ಫಡೆನ್ಸ್ ಇರುವ ಯಶ್ ಅವರಿಂದಲೇ ಸಾಧ್ಯ’ ಎಂದಿದ್ದಾರೆ.

ಇದನ್ನೂ ಓದಿ:ಯಶ್ ‘ರಾಮಾಯಣ’ ಟೀಸರ್ ನೋಡಿ ಮಹೇಶ್ ಬಾಬು ಅಭಿಮಾನಿಗಳಿಗೆ ಹೊಟ್ಟೆಕಿಚ್ಚು?

ರಾವಣನ ಪಾತ್ರ ಸಂಕೀರ್ಣವಾಗಿರುವ ಕಾರಣ ಯಾರೆಂದರು ಅವರು ಆ ಪಾತ್ರದಲ್ಲಿ ನಟಿಸುವುದು ನನಗೆ ಇಷ್ಟವಿರಲಿಲ್ಲ. ನಾವು ರಾವಣನನ್ನು ತೋರಿಸುವ ರೀತಿ ಇಷ್ಟವಾಗಿಯೇ ಯಶ್ ಅವರು ಆ ಪಾತ್ರವನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೆ, ಕತೆ ಕೇಳಿದ ಬಳಿಕ ಸ್ವತಃ ರಣ್​​ಬೀರ್ ಕಪೂರ್ ಅವರು ಸಹ, ‘ನಾವು ನೋಡಿರುವ ‘ರಾಮಾಯಣ’ಗಳಲ್ಲಿಯೇ ಅತ್ಯಂತ ಭಿನ್ನವಾಗಿ ರಾವಣನ ಪಾತ್ರವನ್ನು ಈ ಸಿನಿಮಾನಲ್ಲಿ ಡಿಸೈನ್ ಮಾಡಲಾಗಿದೆ’ ಎಂದು ಮೆಚ್ಚಿಕೊಂಡಿದ್ದಾಗಿಯೂ ಸಹ ನಿತೇಶ್ ತಿವಾರಿ ಹೇಳಿದ್ದಾರೆ.

ಯಶ್ ಅವರು ರಾವಣನ ಪಾತ್ರದಲ್ಲಿ ನಟಿಸುತ್ತಿರುವುದು ಮಾತ್ರವೇ ಅಲ್ಲದೆ ಸಿನಿಮಾದ ಸಹ ನಿರ್ಮಾಪಕ ಸಹ ಆಗಿದ್ದಾರೆ. ಸಿನಿಮಾನಲ್ಲಿ ರಣ್​ಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ, ಸನ್ನಿ ಡಿಯೋಲ್ ಹನುಮಂತನಾಗಿ, ಕಾಜಲ್ ಅಗರ್ವಾಲ್ ಮಂಡೋದರಿಯಾಗಿ, ರವಿ ದುಬೆ ಲಕ್ಷ್ಮಣನಾಗಿ, ರಕುಲ್ ಪ್ರೀತ್ ಸಿಂಗ್ ಶೂರ್ಪಣಕಿ ಆಗಿ, ಲಾರಾ ದತ್ತ ಕೈಕೆಯಾಗಿ, ಕುನಾಲ್ ಕಪೂರ್ ಇಂದ್ರನ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಸಿನಿಮಾಕ್ಕೆ ಆಸ್ಕರ್ ವಿಜೇತರಾಗಿರುವ ಎಆರ್ ರೆಹಮಾನ್ ಮತ್ತು ಹಾನ್ಸ್ ಜೀಮರ್ ಅವರುಗಳು ಸಂಗೀತ ನೀಡಿದ್ದಾರೆ. ಸಿನಿಮಾ ಇದೇ ದೀಪಾವಳಿಗೆ ಬಿಡುಗಡೆ ಆಗಲಿದೆ. ಸಿನಿಮಾದ ಎರಡನೇ ಭಾಗ ಮುಂದಿನ ವರ್ಷ ದೀಪಾವಳಿಗೆ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
Video: ಆನೇಕಲ್ ದೊಡ್ಡಕೆರೆಯಲ್ಲಿ ಬೀಡುಬಿಟ್ಟ ಗಜಪಡೆ
Video: ಆನೇಕಲ್ ದೊಡ್ಡಕೆರೆಯಲ್ಲಿ ಬೀಡುಬಿಟ್ಟ ಗಜಪಡೆ
ಇಂಡಕ್ಷನ್​ಗೆ ಡಿಮಾಂಡ್: ಪೀಣ್ಯದಲ್ಲಿ ಉತ್ಪಾದನೆ ಹೆಚ್ಚಳ, ಸಿಬ್ಬಂದಿಗೆ ಓಟಿ!
ಇಂಡಕ್ಷನ್​ಗೆ ಡಿಮಾಂಡ್: ಪೀಣ್ಯದಲ್ಲಿ ಉತ್ಪಾದನೆ ಹೆಚ್ಚಳ, ಸಿಬ್ಬಂದಿಗೆ ಓಟಿ!
ಹೆಲ್ಮೆಟ್ ಧರಿಸಿ ಬಂದು ಗ್ಯಾಸ್ ಸಿಲಿಂಡರ್ ಎಗರಿಸಿದ ಚಾಲಾಕಿ ಕಳ್ಳ!
ಹೆಲ್ಮೆಟ್ ಧರಿಸಿ ಬಂದು ಗ್ಯಾಸ್ ಸಿಲಿಂಡರ್ ಎಗರಿಸಿದ ಚಾಲಾಕಿ ಕಳ್ಳ!
120 ಅಡಿ ಎತ್ತರದ ಹಾಲುಗಂಬ ಏರಿ ಸಾಹಸ ಮೆರೆದ 62ರ ವ್ಯಕ್ತಿ! ವಿಡಿಯೋ ನೋಡಿ
120 ಅಡಿ ಎತ್ತರದ ಹಾಲುಗಂಬ ಏರಿ ಸಾಹಸ ಮೆರೆದ 62ರ ವ್ಯಕ್ತಿ! ವಿಡಿಯೋ ನೋಡಿ
ಅಮೆರಿಕದ ಪನಾಮ ಸೇತುವೆ ಮೇಲೆ ಮೂರು ಇಂಧನ ಟ್ಯಾಂಕರ್​ಗಳ ಸ್ಫೋಟ
ಅಮೆರಿಕದ ಪನಾಮ ಸೇತುವೆ ಮೇಲೆ ಮೂರು ಇಂಧನ ಟ್ಯಾಂಕರ್​ಗಳ ಸ್ಫೋಟ