Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಸಿನಿಮಾದಲ್ಲಿ ನಟಿಸ್ತಾರಾ ಆಮಿರ್ ಖಾನ್? ನೀಡಿದ ಉತ್ತರವೇನು?

Aamir Khan: ನಟ ಆಮಿರ್ ಖಾನ್​ಗೆ ಬೆಂಗಳೂರಿನೊಟ್ಟಿಗೆ ಉತ್ತಮ ಬಂಧವಿದೆ. ಕನ್ನಡದಲ್ಲಿ ನಟಿಸುವ ಅವಕಾಶ ಸಿಕ್ಕರೆ ನಟಿಸುತ್ತೀರಾ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ್ದಾರೆ ಆಮಿರ್ ಖಾನ್.

ಕನ್ನಡ ಸಿನಿಮಾದಲ್ಲಿ ನಟಿಸ್ತಾರಾ ಆಮಿರ್ ಖಾನ್? ನೀಡಿದ ಉತ್ತರವೇನು?
Follow us
ಮಂಜುನಾಥ ಸಿ.
|

Updated on: Feb 13, 2024 | 10:38 PM

ಬಾಲಿವುಡ್ ಸ್ಟಾರ್ ನಟ ಆಮಿರ್ ಖಾನ್ (Aamir Khan) ಬೆಂಗಳೂರಿಗೆ ಬಂದಿದ್ದಾರೆ. ಅವರ ಮಾಜಿ ಪತ್ನಿ ಕಿರಣ್ ರಾವ್ ನಿರ್ದೇಶನ ಮಾಡಿರುವ ತಮ್ಮ ನಿರ್ಮಾಣ ಸಂಸ್ಥೆ ಮೂಲಕ ನಿರ್ಮಾಣವಾಗಿರುವ ‘ಲಾಪತಾ ಲೇಡೀಸ್’ ಸಿನಿಮಾದ ಪ್ರೀಮಿಯರ್ ಶೋಗಾಗಿ ಅವರು ನಗರಕ್ಕೆ ಬಂದಿದ್ದರು. ಸಿನಿಮಾದ ಪ್ರೀಮಿಯರ್ ಶೋ ಬಳಿಕ ಮಾಧ್ಯಮಗಳೊಟ್ಟಿಗೆ ಪ್ರಶ್ನೋತ್ತರ ಸೆಷನ್ ಅನ್ನೂ ಸಹ ಆಮಿರ್ ಖಾನ್ ನಡೆಸಿದರು. ಈ ವೇಳೆ ಆಮಿರ್ ಖಾನ್​ಗೆ ಕನ್ನಡ ಚಿತ್ರರಂಗ, ಬೆಂಗಳೂರಿನೊಟ್ಟಿಗೆ ನಂಟು ಹೀಗೆ ಹಲವು ವಿಷಯಗಳ ಬಗ್ಗೆ ಕೇಳಲಾಯ್ತು.

ಆಮಿರ್ ಖಾನ್​ಗೂ ಬೆಂಗಳೂರಿಗೂ ವಿಶೇಷ ನಂಟಿದೆ. ಆಮಿರ್ ಖಾನ್ ವೃತ್ತಿ ಜೀವನದ ಅತ್ಯುತ್ತಮ ಸಿನಿಮಾಗಳಲ್ಲಿ ಒಂದಾಗಿರುವ ‘3 ಇಡಿಯಟ್ಸ್’ ಚಿತ್ರೀಕರಣ ನಡೆದಿರುವುದು ಬೆಂಗಳೂರಿನ ಐಐಎಂನಲ್ಲಿ. ಅದರ ಜೊತೆಗೆ ಬೆಂಗಳೂರಿನಲ್ಲಿ ಸಾಕಷ್ಟು ಗೆಳೆಯರನ್ನೂ ಸಹ ಆಮಿರ್ ಖಾನ್ ಹೊಂದಿದ್ದಾರೆ. ಕನ್ನಡ ಚಿತ್ರರಂಗದ ಬಗ್ಗೆಯೂ ಸಾಕಷ್ಟು ಮಾಹಿತಿ ಆಮಿರ್ ಖಾನ್ ಬಳಿ ಇದೆ.

ಅವಕಾಶ ಸಿಕ್ಕರೆ ಕನ್ನಡ ಸಿನಿಮಾದಲ್ಲಿ ನಟಿಸುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಆಮಿರ್ ಖಾನ್, ‘ಕನ್ನಡ ಸಿನಿಮಾಗಳ ಅವಕಾಶ ಬಂದರೆ ನಟಿಸುವೆ ಆದರೆ ನನ್ನದೊಂದು ಸಮಸ್ಯೆ ಇದೆ, ನನಗೆ ಯಾವ ಭಾಷೆ ಬರುತ್ತದೆಯೋ ಆ ಭಾಷೆಯಲ್ಲಿ ಮಾತ್ರ ನಟಿಸಲು ಕಂಫರ್ಟ್ ಅನಿಸುತ್ತದೆ. ನನಗೆ ಹಿಂದಿ, ಇಂಗ್ಲೀಷ್ ಹಾಗೂ ಮರಾಠಿ ಚೆನ್ನಾಗಿ ಬರುತ್ತದೆ. ಆದರೆ ಕನ್ನಡ ಭಾಷೆ ಬರುವುದಿಲ್ಲ. ಅವಕಾಶ ಸಿಕ್ಕರೆ ನೋಡೋಣ’ ಎಂದಿದ್ದಾರೆ.

ಇದನ್ನೂ ಓದಿ:ಮುಗಿಯಿತು ಮಗಳ ಮದುವೆ ಸಂಭ್ರಮ; ಮಗನ ಚಿತ್ರಕ್ಕಾಗಿ ಜಪಾನ್​ಗೆ ತೆರಳಲಿದ್ದಾರೆ ಆಮಿರ್ ಖಾನ್?

ಬೆಂಗಳೂರಿನ ಐಐಎಂ ಬಗ್ಗೆ ಮಾತನಾಡಿರುವ ಆಮಿರ್ ಖಾನ್, ‘ಐಐಎಂ ಜೊತೆಗೆ ನನಗೆ ಬಹಳ ಹಳೆಯ ನಂಟಿದೆ. ಬೆಂಗಳೂರಿನಲ್ಲಿ ನಮ್ಮ ಸಿನಿಮಾದ ಪ್ರೀಮಿಯರ್ ಮಾಡೋಣ ಅಂದುಕೊಂಡಾಗ ನನಗೆ ಮೊದಲು ನೆನಪು ಬಂದಿದ್ದು ಐಐಎಂ. ನಮ್ಮದು ಸಣ್ಣ ಸಿನಿಮಾ, ಬಾಯಿ ಪ್ರಚಾರವೇ ನಮ್ಮ ಸಿನಿಮಾಕ್ಕೆ ಒಳ್ಳೆಯ ಪ್ರಚಾರ ಎಂದು ಭಾವಿಸಿ ನಾವು ನಗರದಿಂದ ನಗರಕ್ಕೆ ಪಯಣಿಸುತ್ತಾ ನಮ್ಮ ಸಿನಿಮಾ ಪ್ರದರ್ಶಿಸುತ್ತಿದ್ದೇವೆ, ಹಾಗೆ ಬೆಂಗಳೂರಿನಲ್ಲಿ ಐಐಎಂ ನಲ್ಲಿ ನಾವು ಸಿನಿಮಾ ಪ್ರದರ್ಶಿಸಿದ್ದೇವೆ’ ಎಂದರು ಆಮಿರ್ ಖಾನ್.

ಆಮಿರ್ ಖಾನ್, ಕಿರಣ್ ರಾವ್ ಹಾಗೂ ಜೋತಿ ದೇಶಪಾಂಡೆ ಒಟ್ಟಿಗೆ ಸೇರಿ ‘ಲಾಪತಾ ಲೇಡೀಸ್’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಸಿನಿಮಾದಲ್ಲಿ ಯುವಕನ ಪತ್ನಿಯೊಬ್ಬಳು ನಾಪತ್ತೆಯಾಗಿ ಆ ಸ್ಥಾನಕ್ಕೆ ಬೇರೊಬ್ಬ ಯುವತಿ ಬಂದಿದ್ದಾಳೆ. ಈಗ ಕಳೆದು ಹೋಗಿರುವ ಪತ್ನಿಯನ್ನು ಯುವಕ ಹೇಗೆ ಹುಡುಕುತ್ತಾನೆ. ಜೊತೆಗೆ ಬಂದಿರುವ ಬೇರೆ ಪತ್ನಿ ಯಾರು? ಇದು ಕಥೆಯ ಎಳೆ. ಸಿನಿಮಾ ಪ್ರೀಮಿಯರ್ ಶೋಗಳು ನಡೆದಿದ್ದು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ