AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ಮಗ ಅಕಾಯ್​ಗೆ ನೇರವಾಗಿ ಸಿಗುತ್ತಾ ಬ್ರಿಟಿಷ್ ನಾಗರಿಕತ್ವ? ಇಲ್ಲಿದೆ ಉತ್ತರ

ಖ್ಯಾತ ನಟಿ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟರ್​ ವಿರಾಟ್ ಕೊಹ್ಲಿ ಅವರು ತಮಗೆ ಗಂಡು ಮಗು ಜನಿಸಿರುವ ವಿಚಾರವನ್ನು ರಿವೀಲ್ ಮಾಡಿದ್ದಾರೆ. ಅನುಷ್ಕಾ ಅವರು ಮಗುವಿಗೆ ಜನ್ಮ ನೀಡಿದ್ದು ಇಂಗ್ಲೆಂಡ್​ನಲ್ಲಿ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಚರ್ಚೆ ಆಗುತ್ತಿದೆ. ಅಕಾಯ್​ಗೆ ನೇರವಾಗಿ ಬ್ರಿಟಿಷ್ ನಾಗರಿಕತ್ವ ಸಿಗುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ಇದು ಎಷ್ಟು ನಿಜ?

ಅನುಷ್ಕಾ ಮಗ ಅಕಾಯ್​ಗೆ ನೇರವಾಗಿ ಸಿಗುತ್ತಾ ಬ್ರಿಟಿಷ್ ನಾಗರಿಕತ್ವ? ಇಲ್ಲಿದೆ ಉತ್ತರ
ವಿರಾಟ್​ ಕೊಹ್ಲಿ, ಅನುಷ್ಕಾ ಶರ್ಮಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Feb 23, 2024 | 1:38 PM

Share

ನಟಿ ಅನುಷ್ಕಾ ಶರ್ಮಾ ಹಾಗೂ ಕ್ರಿಕೆಟರ್ ವಿರಾಟ್ ಕೊಹ್ಲಿ (Virat Kohli) ದಂಪತಿಗೆ ಇತ್ತೀಚೆಗೆ ಗಂಡು ಮಗು ಜನಿಸಿದೆ. ಈ ಮೂಲಕ ದಂಪತಿ ಎರಡು ಮಕ್ಕಳ ಪಾಲಕರಾಗಿದ್ದಾರೆ. ವಮಿಕಾಗೆ ಈಗಾಗಲೇ ಮೂರು ವರ್ಷ ತುಂಬಿದೆ. ಈ ಬೆನ್ನಲ್ಲೇ ಮತ್ತೊಂದು ಮಗುವಿನ ಜನನ ಆಗಿರುವುದು ಅಭಿಮಾನಿಗಳ ಖುಷಿ ಹೆಚ್ಚಿದೆ. ಇತ್ತೀಚೆಗೆ ಅನುಷ್ಕಾ ಶರ್ಮಾ (Anushka Sharma) ಹಾಗೂ ವಿರಾಟ್ ಕೊಹ್ಲಿ ಅವರು ತಮಗೆ ಗಂಡು ಮಗು ಹುಟ್ಟಿರುವ ವಿಚಾರ ರಿವೀಲ್ ಮಾಡಿದ್ದಾರೆ. ಅನುಷ್ಕಾಗೆ ಮಗು ಜನಿಸಿದ್ದು ಇಂಗ್ಲೆಂಡ್​ನಲ್ಲಿ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಆಗುತ್ತಿದೆ. ಅಕಾಯ್​ಗೆ ನೇರವಾಗಿ ಬ್ರಿಟಿಷ್ ನಾಗರಿಕತ್ವ (British citizenship) ಸಿಗಲಿದೆ ಎಂದು ಹೇಳಲಾಗುತ್ತಿದೆ. ಹಾಗಾದರೆ ಇದು ಎಷ್ಟು ನಿಜ? ಅಸಲಿಗೆ ಅಕಾಯ್​ಗೆ ಬ್ರಿಟಿಷ್ ನಾಗರಿಕತ್ವ ಸಿಗಬಹುದೇ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಅನುಷ್ಕಾ ಹಾಗೂ ವಿರಾಟ್ ದಂಪತಿ ಕೆಲವು ವಾರಗಳಿಂದ ಇಂಗ್ಲೆಂಡ್​ನಲ್ಲಿ ಉಳಿದುಕೊಂಡಿದ್ದರು. ಅಕಾಯ್ ಇಂಗ್ಲೆಂಡ್​ನಲ್ಲಿ ಜನಿಸಿದರೂ ನೇರವಾಗಿ ಆತನಿಗೆ ಬ್ರಿಟಿಷ್ ಸಿಟಿಜನ್​ಶಿಪ್ ಸಿಗುವುದಿಲ್ಲ. ಅಲ್ಲಿನ ನಿಯಮಗಳ ಪ್ರಕಾರ ತಂದೆ ಅಥವಾ ತಾಯಿಯಲ್ಲಿ ಒಬ್ಬರು ಇಂಗ್ಲೆಂಡ್​ನವರಾಗಿರಬೇಕು ಅಥವಾ ಬಹಳ ಸಮಯದಿಂದ ಇಂಗ್ಲೆಂಡ್​ನಲ್ಲಿ ಸೆಟಲ್ ಆಗಿರಬೇಕು. ಹಾಗಿದ್ದಾಗ ಮಾತ್ರ ಮಗುವಿಗೆ ಅಲ್ಲಿನ ನಾಗರಿಕತ್ವ ಸಿಗಲು ಸಾಧ್ಯ. ವಿರಾಟ್ ಹಾಗೂ ಅನುಷ್ಕಾ ಇಬ್ಬರೂ ಭಾರತೀಯ ಪ್ರಜೆಗಳು. ಹೀಗಾಗಿ, ಅಕಾಯ್ ಬ್ರಿಟಿಷ್ ನಾಗರಿಕತ್ವ ಪಡೆಯಲು ಆಸಕ್ತಿ ತೋರಿಸುವುದು ಅನುಮಾನವೇ. ಹೀಗಾಗಿ ಆತನೂ ಭಾರತೀಯನೇ ಆಗಲಿದ್ದಾನೆ.

ಇದನ್ನೂ ಓದಿ: ಅನುಷ್ಕಾ ಶರ್ಮಾ ತಮ್ಮನ ಜತೆ ಬ್ರೇಕಪ್: ಈಗ ತೃಪ್ತಿ ಸುತ್ತಾಡುತ್ತಿರುವುದು ಯಾರ ಜೊತೆ?

ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇತ್ತೀಚೆಗೆ ಈ ಸಿಹಿ ಸುದ್ದಿ ಘೋಷಣೆ ಮಾಡಿದರು. ಕರೀನಾ ಕಪೂರ್ ಖಾನ್, ಆಲಿಯಾ ಭಟ್, ರಣವೀರ್ ಸಿಂಗ್, ಮೀರಾ ಕಪೂರ್, ಅಯುಷ್ಮಾನ್ ಖುರಾನಾ ಸೇರಿ ಅನೇಕ ಸೆಲೆಬ್ರಿಟಿಗಳು ಈ ದಂಪತಿಗೆ ಶುಭ ಕೋರಿದ್ದಾರೆ. ವಮಿಕಾ ಜನಿಸಿದ ಬಳಿಕ ಆಕೆಯ ಫೋಟೋ ಕ್ಲಿಕ್ ಮಾಡದಂತೆ ಕೊಹ್ಲಿ ಹಾಗೂ ಅನುಷ್ಕಾ ಕೋರಿಕೊಂಡಿದ್ದಾರೆ. ಅವರ ಮಾತಿಗೆ ಮಾಧ್ಯಮದವರು ಹಾಗೂ ಪಾಪರಾಜಿಗಳು ಗೌರವ ನೀಡಿದ್ದಾರೆ. ಹೀಗಾಗಿ, ಅಧಿಕೃತವಾಗಿ ವಮಿಕಾ ಮುಖ ಇನ್ನೂ ರಿವೀಲ್ ಆಗಿಲ್ಲ. ಅವಳು 2021ರಲ್ಲಿ ಜನಿಸಿದ್ದಾಳೆ. ಈಗ ಅವರು ಮಗನ ಮುಖವನ್ನು ರಿವೀಲ್ ಮಾಡುವುದು ಅನುಮಾನವೇ.

ಅನುಷ್ಕಾ ಶರ್ಮಾ ಅವರು ನಟನೆಗೆ ಕಂಬ್ಯಾಕ್ ಮಾಡೋದು ಯಾವಾಗ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. 2018ರಲ್ಲಿ ರಿಲೀಸ್ ಆದ ‘ಜೀರೋ’ ಸಿನಿಮಾ ಬಳಿಕ ಅವರ ನಟನೆಯ ಯಾವುದೇ ಚಿತ್ರ ರಿಲೀಸ್ ಆಗಿಲ್ಲ. ಅವರು ‘ಚಕ್ದಾ ಎಕ್ಸ್​ಪ್ರೆಸ್’ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಸಿನಿಮಾ ಕೆಲಸಗಳು ವಿಳಂಬ ಆಗಿದೆ. ಸಿನಿಮಾದ ಶೂಟಿಂಗ್ 2022ರಲ್ಲೇ ಪೂರ್ಣಗೊಂಡಿದೆ ಎನ್ನಲಾಗಿದೆ. ಆದರೆ, ಚಿತ್ರದ ರಿಲೀಸ್ ಬಗ್ಗೆ ತಂಡದ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ