Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ಮಗ ಅಕಾಯ್​ಗೆ ನೇರವಾಗಿ ಸಿಗುತ್ತಾ ಬ್ರಿಟಿಷ್ ನಾಗರಿಕತ್ವ? ಇಲ್ಲಿದೆ ಉತ್ತರ

ಖ್ಯಾತ ನಟಿ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟರ್​ ವಿರಾಟ್ ಕೊಹ್ಲಿ ಅವರು ತಮಗೆ ಗಂಡು ಮಗು ಜನಿಸಿರುವ ವಿಚಾರವನ್ನು ರಿವೀಲ್ ಮಾಡಿದ್ದಾರೆ. ಅನುಷ್ಕಾ ಅವರು ಮಗುವಿಗೆ ಜನ್ಮ ನೀಡಿದ್ದು ಇಂಗ್ಲೆಂಡ್​ನಲ್ಲಿ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಚರ್ಚೆ ಆಗುತ್ತಿದೆ. ಅಕಾಯ್​ಗೆ ನೇರವಾಗಿ ಬ್ರಿಟಿಷ್ ನಾಗರಿಕತ್ವ ಸಿಗುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ಇದು ಎಷ್ಟು ನಿಜ?

ಅನುಷ್ಕಾ ಮಗ ಅಕಾಯ್​ಗೆ ನೇರವಾಗಿ ಸಿಗುತ್ತಾ ಬ್ರಿಟಿಷ್ ನಾಗರಿಕತ್ವ? ಇಲ್ಲಿದೆ ಉತ್ತರ
ವಿರಾಟ್​ ಕೊಹ್ಲಿ, ಅನುಷ್ಕಾ ಶರ್ಮಾ
Follow us
 ಶ್ರೀಲಕ್ಷ್ಮೀ ಎಚ್
| Updated By: ಮದನ್​ ಕುಮಾರ್​

Updated on: Feb 23, 2024 | 1:38 PM

ನಟಿ ಅನುಷ್ಕಾ ಶರ್ಮಾ ಹಾಗೂ ಕ್ರಿಕೆಟರ್ ವಿರಾಟ್ ಕೊಹ್ಲಿ (Virat Kohli) ದಂಪತಿಗೆ ಇತ್ತೀಚೆಗೆ ಗಂಡು ಮಗು ಜನಿಸಿದೆ. ಈ ಮೂಲಕ ದಂಪತಿ ಎರಡು ಮಕ್ಕಳ ಪಾಲಕರಾಗಿದ್ದಾರೆ. ವಮಿಕಾಗೆ ಈಗಾಗಲೇ ಮೂರು ವರ್ಷ ತುಂಬಿದೆ. ಈ ಬೆನ್ನಲ್ಲೇ ಮತ್ತೊಂದು ಮಗುವಿನ ಜನನ ಆಗಿರುವುದು ಅಭಿಮಾನಿಗಳ ಖುಷಿ ಹೆಚ್ಚಿದೆ. ಇತ್ತೀಚೆಗೆ ಅನುಷ್ಕಾ ಶರ್ಮಾ (Anushka Sharma) ಹಾಗೂ ವಿರಾಟ್ ಕೊಹ್ಲಿ ಅವರು ತಮಗೆ ಗಂಡು ಮಗು ಹುಟ್ಟಿರುವ ವಿಚಾರ ರಿವೀಲ್ ಮಾಡಿದ್ದಾರೆ. ಅನುಷ್ಕಾಗೆ ಮಗು ಜನಿಸಿದ್ದು ಇಂಗ್ಲೆಂಡ್​ನಲ್ಲಿ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಆಗುತ್ತಿದೆ. ಅಕಾಯ್​ಗೆ ನೇರವಾಗಿ ಬ್ರಿಟಿಷ್ ನಾಗರಿಕತ್ವ (British citizenship) ಸಿಗಲಿದೆ ಎಂದು ಹೇಳಲಾಗುತ್ತಿದೆ. ಹಾಗಾದರೆ ಇದು ಎಷ್ಟು ನಿಜ? ಅಸಲಿಗೆ ಅಕಾಯ್​ಗೆ ಬ್ರಿಟಿಷ್ ನಾಗರಿಕತ್ವ ಸಿಗಬಹುದೇ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಅನುಷ್ಕಾ ಹಾಗೂ ವಿರಾಟ್ ದಂಪತಿ ಕೆಲವು ವಾರಗಳಿಂದ ಇಂಗ್ಲೆಂಡ್​ನಲ್ಲಿ ಉಳಿದುಕೊಂಡಿದ್ದರು. ಅಕಾಯ್ ಇಂಗ್ಲೆಂಡ್​ನಲ್ಲಿ ಜನಿಸಿದರೂ ನೇರವಾಗಿ ಆತನಿಗೆ ಬ್ರಿಟಿಷ್ ಸಿಟಿಜನ್​ಶಿಪ್ ಸಿಗುವುದಿಲ್ಲ. ಅಲ್ಲಿನ ನಿಯಮಗಳ ಪ್ರಕಾರ ತಂದೆ ಅಥವಾ ತಾಯಿಯಲ್ಲಿ ಒಬ್ಬರು ಇಂಗ್ಲೆಂಡ್​ನವರಾಗಿರಬೇಕು ಅಥವಾ ಬಹಳ ಸಮಯದಿಂದ ಇಂಗ್ಲೆಂಡ್​ನಲ್ಲಿ ಸೆಟಲ್ ಆಗಿರಬೇಕು. ಹಾಗಿದ್ದಾಗ ಮಾತ್ರ ಮಗುವಿಗೆ ಅಲ್ಲಿನ ನಾಗರಿಕತ್ವ ಸಿಗಲು ಸಾಧ್ಯ. ವಿರಾಟ್ ಹಾಗೂ ಅನುಷ್ಕಾ ಇಬ್ಬರೂ ಭಾರತೀಯ ಪ್ರಜೆಗಳು. ಹೀಗಾಗಿ, ಅಕಾಯ್ ಬ್ರಿಟಿಷ್ ನಾಗರಿಕತ್ವ ಪಡೆಯಲು ಆಸಕ್ತಿ ತೋರಿಸುವುದು ಅನುಮಾನವೇ. ಹೀಗಾಗಿ ಆತನೂ ಭಾರತೀಯನೇ ಆಗಲಿದ್ದಾನೆ.

ಇದನ್ನೂ ಓದಿ: ಅನುಷ್ಕಾ ಶರ್ಮಾ ತಮ್ಮನ ಜತೆ ಬ್ರೇಕಪ್: ಈಗ ತೃಪ್ತಿ ಸುತ್ತಾಡುತ್ತಿರುವುದು ಯಾರ ಜೊತೆ?

ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇತ್ತೀಚೆಗೆ ಈ ಸಿಹಿ ಸುದ್ದಿ ಘೋಷಣೆ ಮಾಡಿದರು. ಕರೀನಾ ಕಪೂರ್ ಖಾನ್, ಆಲಿಯಾ ಭಟ್, ರಣವೀರ್ ಸಿಂಗ್, ಮೀರಾ ಕಪೂರ್, ಅಯುಷ್ಮಾನ್ ಖುರಾನಾ ಸೇರಿ ಅನೇಕ ಸೆಲೆಬ್ರಿಟಿಗಳು ಈ ದಂಪತಿಗೆ ಶುಭ ಕೋರಿದ್ದಾರೆ. ವಮಿಕಾ ಜನಿಸಿದ ಬಳಿಕ ಆಕೆಯ ಫೋಟೋ ಕ್ಲಿಕ್ ಮಾಡದಂತೆ ಕೊಹ್ಲಿ ಹಾಗೂ ಅನುಷ್ಕಾ ಕೋರಿಕೊಂಡಿದ್ದಾರೆ. ಅವರ ಮಾತಿಗೆ ಮಾಧ್ಯಮದವರು ಹಾಗೂ ಪಾಪರಾಜಿಗಳು ಗೌರವ ನೀಡಿದ್ದಾರೆ. ಹೀಗಾಗಿ, ಅಧಿಕೃತವಾಗಿ ವಮಿಕಾ ಮುಖ ಇನ್ನೂ ರಿವೀಲ್ ಆಗಿಲ್ಲ. ಅವಳು 2021ರಲ್ಲಿ ಜನಿಸಿದ್ದಾಳೆ. ಈಗ ಅವರು ಮಗನ ಮುಖವನ್ನು ರಿವೀಲ್ ಮಾಡುವುದು ಅನುಮಾನವೇ.

ಅನುಷ್ಕಾ ಶರ್ಮಾ ಅವರು ನಟನೆಗೆ ಕಂಬ್ಯಾಕ್ ಮಾಡೋದು ಯಾವಾಗ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. 2018ರಲ್ಲಿ ರಿಲೀಸ್ ಆದ ‘ಜೀರೋ’ ಸಿನಿಮಾ ಬಳಿಕ ಅವರ ನಟನೆಯ ಯಾವುದೇ ಚಿತ್ರ ರಿಲೀಸ್ ಆಗಿಲ್ಲ. ಅವರು ‘ಚಕ್ದಾ ಎಕ್ಸ್​ಪ್ರೆಸ್’ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಸಿನಿಮಾ ಕೆಲಸಗಳು ವಿಳಂಬ ಆಗಿದೆ. ಸಿನಿಮಾದ ಶೂಟಿಂಗ್ 2022ರಲ್ಲೇ ಪೂರ್ಣಗೊಂಡಿದೆ ಎನ್ನಲಾಗಿದೆ. ಆದರೆ, ಚಿತ್ರದ ರಿಲೀಸ್ ಬಗ್ಗೆ ತಂಡದ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮಂತ್ರಾಲಯದಲ್ಲಿ 6 ದಿನಗಳ ಕಾಲ ಶ್ರೀ ರಾಘವೇಂದ್ರ ಸ್ವಾಮಿಗಳ ಗುರು ವೈಭವೋತ್ಸವ
ಮಂತ್ರಾಲಯದಲ್ಲಿ 6 ದಿನಗಳ ಕಾಲ ಶ್ರೀ ರಾಘವೇಂದ್ರ ಸ್ವಾಮಿಗಳ ಗುರು ವೈಭವೋತ್ಸವ