AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೇಕಪ್​ನಲ್ಲಿ ಕೊನೆ ಆಯ್ತು ಅರ್ಜುನ್ ಕಪೂರ್-ಮಲೈಕಾ ಅರೋರಾ ಸಂಬಂಧ? ಸಾಕ್ಷಿ ತಂದ ಅಭಿಮಾನಿಗಳು

Arjun-Malaika: ವಯಸ್ಸಿನ ಅಂತರದ ನಡುವೆಯೂ ಪರಸ್ಪರ ಒಟ್ಟಿಗೆ ಬಾಳುತ್ತಿದ್ದ ಅರ್ಜುನ್ ಕಪೂರ್ ಹಾಗೂ ಮಲೈಕಾ ಅರೋರ ಬ್ರೇಕ್ ಅಪ್ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ನೆಟ್ಟಿಗರು ಸಾಕ್ಷ್ಯವನ್ನೂ ನೀಡಿದ್ದಾರೆ.

ಬ್ರೇಕಪ್​ನಲ್ಲಿ ಕೊನೆ ಆಯ್ತು ಅರ್ಜುನ್ ಕಪೂರ್-ಮಲೈಕಾ ಅರೋರಾ ಸಂಬಂಧ? ಸಾಕ್ಷಿ ತಂದ ಅಭಿಮಾನಿಗಳು
ಅರ್ಜುನ್-ಮಲೈಕಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 19, 2023 | 5:43 PM

Share

ನಟ ಅರ್ಜುನ್ ಕಪೂರ್ (Arjun Kapoor) ಹಾಗೂ ನಟಿ ಮಲೈಕಾ ಅರೋರಾ (Malaika Arora) ಅವರು ಹಲವು ವರ್ಷಗಳಿಂದ ಪ್ರಿತಿಸುತ್ತಿದ್ದಾರೆ. ಇವರ ಜೋಡಿಯನ್ನು ನೋಡಿ ಅನೇಕರು ನಕ್ಕಿದ್ದಾರೆ. ಇದಕ್ಕೆ ಕಾರಣ ವಯಸ್ಸಿನ ಅಂತರ. ಅರ್ಜುನ್ ಕಪೂರ್​ಗಿಂತ ಮಲೈಕಾ 11 ವರ್ಷ ದೊಡ್ಡವರು. ಈ ವಯಸ್ಸಿನ ಅಂತರ ಇವರ ಪ್ರೀತಿಗೆ ಅಡ್ಡಿ ಉಂಟು ಮಾಡಿಲ್ಲ. ಇಷ್ಟು ದಿನ ಹಾಯಾಗಿ ಸುತ್ತಾಡಿಕೊಂಡಿದ್ದ ಈ ಜೋಡಿ ಈಗ ಬೇರೆ ಆಗಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಸದ್ಯ ಈ ವಿಚಾರ ಕೇಳಿ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಅರ್ಜುನ್ ಕಪೂರ್ ವಯಸ್ಸು 38. ಮಲೈಕಾಗೆ 49 ವರ್ಷ. ಅರ್ಜುನ್ ಹಾಗೂ ಮಲೈಕಾ ಶೀಘ್ರದಲ್ಲೇ ಮದುವೆ ಆಗುತ್ತಾರೆ ಎಂದು ಕೂಡ ಹೇಳಲಾಗಿತ್ತು. ಆದರೆ, ಇವರು ಮದುವೆ ವಿಚಾರದಲ್ಲಿ ಸೈಲೆಂಟ್ ಆಗಿದ್ದಾರೆ. ಈ ಜೋಡಿ ಅನೇಕರು ಟೀಕೆ ಮಾಡಿದ್ದರು. ಆದರೆ, ಈ ಟ್ರೋಲ್​ಗಳಿಗೆ ಇವರು ಹೆಚ್ಚು ತಲೆಕೆಡಿಸಿಕೊಂಡವರಲ್ಲ. ಈಗ ಇಬ್ಬರೂ ಬೇರೆ ಆಗಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ.

ಅಷ್ಟಕ್ಕೂ ಬ್ರೇಕಪ್ ಸುದ್ದಿ ಹುಟ್ಟಿಕೊಳ್ಳಲು ಕಾರಣವೇನು? ಅದಕ್ಕೂ ಉತ್ತರ ಇದೆ. ಅರ್ಜುನ್ ಕಪೂರ್ ಹಾಗೂ ಮಲೈಕಾ ಎಲ್ಲಿಗೇ ತೆರಳಿದರೂ ಒಟ್ಟಾಗಿ ಹೋಗುತ್ತಿದ್ದರು. ಆದರೆ, ಇತ್ತೀಚೆಗೆ ಅರ್ಜುನ್ ಕಪೂರ್ ಅವರು ಸೋಲೋ ಟ್ರಿಪ್​ನ ಫೋಟೋ ಹಂಚಿಕೊಂಡಿದ್ದಾರೆ. ಇದು ಸಾಕಷ್ಟು ಅನುಮಾನ ಮೂಡಿಸಿದೆ. ಇವರದ್ದು ಬ್ರೇಕಪ್ ಆಗಿದೆ ಎಂದೆಲ್ಲ ಮಾತನಾಡಿಕೊಳ್ಳಲಾಗುತ್ತಿದೆ. ಇನ್ನು, ಎಪಿ ದಿಲ್ಲೋನ್ ಇತ್ತೀಚೆಗೆ ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿಯಲ್ಲಿ ಮಲೈಕಾ ಹಾಜರಿ ಹಾಕಿದ್ದರು. ಆದರೆ, ಅರ್ಜುನ್ ಕಪೂರ್ ಕಂಡಿಲ್ಲ. ಇದು ಇವರ ಬ್ರೇಕಪ್ ವಿಚಾರ ಹುಟ್ಟಿಕೊಳ್ಳಲು ಪ್ರಮುಖ ಕಾರಣ.

ಇದನ್ನೂ ಓದಿ:Arjun Kapoor: ಮಲೈಕಾ ಅರೋರಾ ಪ್ರೆಗ್ನೆಂಟ್​ ಅಂತ ಸುಳ್ಳು ಸುದ್ದಿ ಹಬ್ಬಿಸಿದವರಿಗೆ ಖಡಕ್​ ಪ್ರತಿಕ್ರಿಯೆ ನೀಡಿದ ಅರ್ಜುನ್​ ಕಪೂರ್

ಈ ರೀತಿಯ ವದಂತಿಗಳು ಈ ಮೊದಲು ಕೂಡ ಹುಟ್ಟಿಕೊಂಡಿತ್ತು. ಆದರೆ, ಈ ಜೋಡಿ ನಕ್ಕು ಸುಮ್ಮನಾಗಿತ್ತು. ಈಗಲೂ ಅವರು ಹಾಗೆಯೇ ಮಾಡಿದ್ದಾರೆ ಎನ್ನುವ ಮಾತೂ ಇದೆ. ‘ಇಬ್ಬರೂ ಚೆನ್ನಾಗಿದ್ದಾರೆ. ಸೋಲೋ ಟ್ರಿಪ್ ತೆರಳಬೇಕು ಎಂಬುದು ಅರ್ಜುನ್ ಕಪೂರ್ ಆಸೆ ಆಗಿತ್ತು. ಅದನ್ನು ಅವರು ಪೂರೈಸಿಕೊಂಡಿದ್ದಾರೆ ಅಷ್ಟೇ. ಇವರ ಸಂಬಂಧ ಹಾಳಾಗಿಲ್ಲ’ ಎಂದು ಅರ್ಜುನ್ ಆಪ್ತರು ಹೇಳಿರುವುದಾಗಿಯೂ ವರದಿ ಆಗಿದೆ.

ಸದ್ಯ ಈ ವದಂತಿ ಕಾಡ್ಗಿಚ್ಚಿನಂತೆ ಹಬ್ಬುತ್ತಿದೆ. ಅರ್ಜುನ್ ಕಪೂರ್ ಹಾಗೂ ಮಲೈಕಾ ಸಾರ್ವಜನಿಕವಾಗಿ ಒಟ್ಟಾಗಿ ಕಾಣಿಸಿಕೊಂಡರೆ ಈ ಸುದ್ದಿಗೆ ಬ್ರೇಕ್ ಬೀಳಲಿದೆ. ಅರ್ಜುನ್ ಕಪೂರ್ ಅವರು ಸಾಲು ಸಾಲು ಫ್ಲಾಪ್ ಸಿನಿಮಾ ಕೊಟ್ಟಿದ್ದಾರೆ. ಸಿನಿಮಾ ಆಯ್ಕೆಯಲ್ಲಿ ಅವರು ಚ್ಯೂಸಿ ಆಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ