AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಾಯಣ ಕಥೆ ಆಧಾರಿತ ಸಿನಿಮಾದಲ್ಲಿ ಬಾಬಿ ಡಿಯೋಲ್​ಗೆ ಕುಂಭಕರ್ಣನ ಪಾತ್ರ?

ರಾಮಾಯಣದ ಪ್ರತಿ ಪಾತ್ರಕ್ಕೂ ತೂಕವಿದೆ. ರಣಬೀರ್​ ಕಪೂರ್​ ಅವರು ರಾಮನ ಪಾತ್ರ ಮಾಡುತ್ತಾರೆ ಹಾಗೂ ಸೀತೆಯಾಗಿ ಸಾಯಿ ಪಲ್ಲವಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ನಡುವೆ ಕೆಲವು ಮಾಧ್ಯಮಗಳು ಕುಂಭಕರ್ಣನ ಪಾತ್ರದ ಬಗ್ಗೆ ಸುದ್ದಿ ಮಾಡಿವೆ. ಈ ಪಾತ್ರವನ್ನು ಬಾಬಿ ಡಿಯೋಲ್​ಗೆ ನೀಡಲಾಗುವುದು ಎಂದು ವರದಿ ಆಗಿದೆ.

ರಾಮಾಯಣ ಕಥೆ ಆಧಾರಿತ ಸಿನಿಮಾದಲ್ಲಿ ಬಾಬಿ ಡಿಯೋಲ್​ಗೆ ಕುಂಭಕರ್ಣನ ಪಾತ್ರ?
ಬಾಬಿ ಡಿಯೋಲ್​
ಮದನ್​ ಕುಮಾರ್​
| Edited By: |

Updated on:Feb 14, 2024 | 3:00 PM

Share

ನಟ ಬಾಬಿ ಡಿಯೋಲ್​ (Bobby Deol) ಅವರು ‘ಅನಿಮಲ್​’ ಸಿನಿಮಾ ಮೂಲಕ ಗೆಲುವಿನ ಟ್ರ್ಯಾಕ್​ಗೆ ಮರಳಿದ್ದಾರೆ. ಅವರು ಮಾಡಿದ ಅಬ್ರಾರ್​ ಹಖ್​ ಎಂಬ ಪಾತ್ರ ತುಂಬ ಫೇಮಸ್​ ಆಗಿದೆ. ಅವರ ಎಂಟ್ರಿ ಸೀನ್​ ನೋಡಿ ಫ್ಯಾನ್ಸ್​ ಖುಷಿ ಆಗಿದ್ದಾರೆ. ಈ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಬಾಬಿ ಡಿಯೋಲ್​ ಅವರ ಬೇಡಿಕೆ ಹೆಚ್ಚಾಗಿದೆ. ದೊಡ್ಡ ದೊಡ್ಡ ಸಿನಿಮಾಗಳಿಂದ ಅವರಿಗೆ ಆಫರ್​ ಬರುತ್ತಿದೆ. ರಾಮಾಯಣದ (Ramayan) ಕಥೆಯನ್ನು ಆಧರಿಸಿ ನಿರ್ದೇಶಕ ನಿತೇಶ್​ ತಿವಾರಿ ಮಾಡಲಿರುವ ಸಿನಿಮಾದಲ್ಲಿ ಬಾಬಿ ಡಿಯೋಲ್​ ಅವರು ಕುಂಭಕರ್ಣನ (Kumbhakarna) ಪಾತ್ರ ಮಾಡಲಿದ್ದಾರೆ ಎಂಬ ಗಾಸಿಪ್​ ಹಬ್ಬಿದೆ.

ರಾಮಾಯಣದಲ್ಲಿ ಪ್ರತಿ ಪಾತ್ರಕ್ಕೂ ತೂಕವಿದೆ. ರಣಬೀರ್​ ಕಪೂರ್​ ಅವರು ರಾಮನ ಪಾತ್ರ ಮಾಡುತ್ತಾರೆ ಹಾಗೂ ಸೀತೆಯಾಗಿ ಸಾಯಿ ಪಲ್ಲವಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾವಣನ ಪಾತ್ರ ಮಾಡಲು ‘ರಾಕಿಂಗ್​ ಸ್ಟಾರ್​’ ಯಶ್​ಗೆ ಆಫರ್​ ನೀಡಲಾಗಿದೆ ಎಂಬ ಮಾತು ಕೂಡ ಕೇಳಿಬರುತ್ತಿದೆ. ಈ ನಡುವೆ ಕೆಲವು ಮಾಧ್ಯಮಗಳು ಕುಂಭಕರ್ಣನ ಪಾತ್ರದ ಬಗ್ಗೆ ಸುದ್ದಿ ಮಾಡಿವೆ. ಈ ಪಾತ್ರವನ್ನು ಬಾಬಿ ಡಿಯೋಲ್​ಗೆ ನೀಡಲಾಗುವುದು ಎಂದು ವರದಿ ಆಗಿದೆ.

ಇದನ್ನೂ ಓದಿ:  ‘ಅನಿಮಲ್​’ ಸೂಪರ್​ ಹಿಟ್​ ಆದ ಬಳಿಕ ಹೆಚ್ಚಿದೆ ಬಾಬಿ ಡಿಯೋಲ್​ ಬೇಡಿಕೆ

ಈ ಮಾಹಿತಿ ಬಗ್ಗೆ ಯಾರೂ ಕೂಡ ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಎಲ್ಲವೂ ಅಂತೆ-ಕಂತೆಗಳ ಹಂತದಲ್ಲಿದೆ. ಚಿತ್ರತಂಡದವರು ಬಾಬಿ ಡಿಯೋಲ್​ ಜೊತೆ ಆ ರೀತಿಯ ಯಾವುದೇ ಮಾತುಕತೆ ಕೂಡ ನಡೆಸಿಲ್ಲ ಎಂದು ನಟನ ಆಪ್ತರು ಮತ್ತೊಂದು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವುದಾಗಿಯೂ ಸುದ್ದಿ ಪ್ರಕಟ ಆಗಿದೆ. ಹಾಗಾಗಿ, ಯಾವುದನ್ನು ನಂಬುವುದು? ಯಾವುದನ್ನು ಬಿಡೋದು ಎಂಬ ಗೊಂದಲ ಅಭಿಮಾನಿಗಳಿಗೆ ಉಂಟಾಗಿದೆ.

ಇದನ್ನೂ ಓದಿ: ‘ಅನಿಮಲ್​’ ಚಿತ್ರದಲ್ಲಿ ಕ್ರೂರಿಯಾದ ಬಾಬಿ ಡಿಯೋಲ್​ ನಿಜ ಜೀವನದಲ್ಲಿ ಎಷ್ಟು ಸ್ವೀಟ್​ ನೋಡಿ..

ನಟಿ ಲಾರಾ ದತ್ತ ಅವರು ಕೈಕೇಯಿ ಪಾತ್ರ ಮಾಡುತ್ತಾರೆ. ಸನ್ನಿ ಡಿಯೋಲ್​ ಅವರು ಹನುಮಂತನಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಕೂಡ ಕೆಲವು ಕಡೆ ಸುದ್ದಿ ಆಗಿದೆ. ಚಿತ್ರತಂಡದ ಕಡೆಯಿಂದ ಯಾವುದೂ ಅಧಿಕೃತವಾಗಿಲ್ಲ. ‘ದಂಗಲ್​’ ಸಿನಿಮಾದಿಂದ ನಿರ್ದೇಶಕ ನಿತೇಶ್​ ತಿವಾರಿ ಭಾರಿ ಜನಪ್ರಿಯತೆ ಪಡೆದುಕೊಂಡಿದ್ದಾರೆ. ಈಗ ಅವರು ರಾಮಾಯಣ ಸಿನಿಮಾವನ್ನು ಯಾವ ರೀತಿ ಕಟ್ಟಿಕೊಡುತ್ತಾರೆ ಎಂಬುದನ್ನು ಕಾದುನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:14 am, Wed, 17 January 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?