AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಾಯಣ ಕಥೆ ಆಧಾರಿತ ಸಿನಿಮಾದಲ್ಲಿ ಬಾಬಿ ಡಿಯೋಲ್​ಗೆ ಕುಂಭಕರ್ಣನ ಪಾತ್ರ?

ರಾಮಾಯಣದ ಪ್ರತಿ ಪಾತ್ರಕ್ಕೂ ತೂಕವಿದೆ. ರಣಬೀರ್​ ಕಪೂರ್​ ಅವರು ರಾಮನ ಪಾತ್ರ ಮಾಡುತ್ತಾರೆ ಹಾಗೂ ಸೀತೆಯಾಗಿ ಸಾಯಿ ಪಲ್ಲವಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ನಡುವೆ ಕೆಲವು ಮಾಧ್ಯಮಗಳು ಕುಂಭಕರ್ಣನ ಪಾತ್ರದ ಬಗ್ಗೆ ಸುದ್ದಿ ಮಾಡಿವೆ. ಈ ಪಾತ್ರವನ್ನು ಬಾಬಿ ಡಿಯೋಲ್​ಗೆ ನೀಡಲಾಗುವುದು ಎಂದು ವರದಿ ಆಗಿದೆ.

ರಾಮಾಯಣ ಕಥೆ ಆಧಾರಿತ ಸಿನಿಮಾದಲ್ಲಿ ಬಾಬಿ ಡಿಯೋಲ್​ಗೆ ಕುಂಭಕರ್ಣನ ಪಾತ್ರ?
ಬಾಬಿ ಡಿಯೋಲ್​
ಮದನ್​ ಕುಮಾರ್​
| Edited By: |

Updated on:Feb 14, 2024 | 3:00 PM

Share

ನಟ ಬಾಬಿ ಡಿಯೋಲ್​ (Bobby Deol) ಅವರು ‘ಅನಿಮಲ್​’ ಸಿನಿಮಾ ಮೂಲಕ ಗೆಲುವಿನ ಟ್ರ್ಯಾಕ್​ಗೆ ಮರಳಿದ್ದಾರೆ. ಅವರು ಮಾಡಿದ ಅಬ್ರಾರ್​ ಹಖ್​ ಎಂಬ ಪಾತ್ರ ತುಂಬ ಫೇಮಸ್​ ಆಗಿದೆ. ಅವರ ಎಂಟ್ರಿ ಸೀನ್​ ನೋಡಿ ಫ್ಯಾನ್ಸ್​ ಖುಷಿ ಆಗಿದ್ದಾರೆ. ಈ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಬಾಬಿ ಡಿಯೋಲ್​ ಅವರ ಬೇಡಿಕೆ ಹೆಚ್ಚಾಗಿದೆ. ದೊಡ್ಡ ದೊಡ್ಡ ಸಿನಿಮಾಗಳಿಂದ ಅವರಿಗೆ ಆಫರ್​ ಬರುತ್ತಿದೆ. ರಾಮಾಯಣದ (Ramayan) ಕಥೆಯನ್ನು ಆಧರಿಸಿ ನಿರ್ದೇಶಕ ನಿತೇಶ್​ ತಿವಾರಿ ಮಾಡಲಿರುವ ಸಿನಿಮಾದಲ್ಲಿ ಬಾಬಿ ಡಿಯೋಲ್​ ಅವರು ಕುಂಭಕರ್ಣನ (Kumbhakarna) ಪಾತ್ರ ಮಾಡಲಿದ್ದಾರೆ ಎಂಬ ಗಾಸಿಪ್​ ಹಬ್ಬಿದೆ.

ರಾಮಾಯಣದಲ್ಲಿ ಪ್ರತಿ ಪಾತ್ರಕ್ಕೂ ತೂಕವಿದೆ. ರಣಬೀರ್​ ಕಪೂರ್​ ಅವರು ರಾಮನ ಪಾತ್ರ ಮಾಡುತ್ತಾರೆ ಹಾಗೂ ಸೀತೆಯಾಗಿ ಸಾಯಿ ಪಲ್ಲವಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾವಣನ ಪಾತ್ರ ಮಾಡಲು ‘ರಾಕಿಂಗ್​ ಸ್ಟಾರ್​’ ಯಶ್​ಗೆ ಆಫರ್​ ನೀಡಲಾಗಿದೆ ಎಂಬ ಮಾತು ಕೂಡ ಕೇಳಿಬರುತ್ತಿದೆ. ಈ ನಡುವೆ ಕೆಲವು ಮಾಧ್ಯಮಗಳು ಕುಂಭಕರ್ಣನ ಪಾತ್ರದ ಬಗ್ಗೆ ಸುದ್ದಿ ಮಾಡಿವೆ. ಈ ಪಾತ್ರವನ್ನು ಬಾಬಿ ಡಿಯೋಲ್​ಗೆ ನೀಡಲಾಗುವುದು ಎಂದು ವರದಿ ಆಗಿದೆ.

ಇದನ್ನೂ ಓದಿ:  ‘ಅನಿಮಲ್​’ ಸೂಪರ್​ ಹಿಟ್​ ಆದ ಬಳಿಕ ಹೆಚ್ಚಿದೆ ಬಾಬಿ ಡಿಯೋಲ್​ ಬೇಡಿಕೆ

ಈ ಮಾಹಿತಿ ಬಗ್ಗೆ ಯಾರೂ ಕೂಡ ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಎಲ್ಲವೂ ಅಂತೆ-ಕಂತೆಗಳ ಹಂತದಲ್ಲಿದೆ. ಚಿತ್ರತಂಡದವರು ಬಾಬಿ ಡಿಯೋಲ್​ ಜೊತೆ ಆ ರೀತಿಯ ಯಾವುದೇ ಮಾತುಕತೆ ಕೂಡ ನಡೆಸಿಲ್ಲ ಎಂದು ನಟನ ಆಪ್ತರು ಮತ್ತೊಂದು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವುದಾಗಿಯೂ ಸುದ್ದಿ ಪ್ರಕಟ ಆಗಿದೆ. ಹಾಗಾಗಿ, ಯಾವುದನ್ನು ನಂಬುವುದು? ಯಾವುದನ್ನು ಬಿಡೋದು ಎಂಬ ಗೊಂದಲ ಅಭಿಮಾನಿಗಳಿಗೆ ಉಂಟಾಗಿದೆ.

ಇದನ್ನೂ ಓದಿ: ‘ಅನಿಮಲ್​’ ಚಿತ್ರದಲ್ಲಿ ಕ್ರೂರಿಯಾದ ಬಾಬಿ ಡಿಯೋಲ್​ ನಿಜ ಜೀವನದಲ್ಲಿ ಎಷ್ಟು ಸ್ವೀಟ್​ ನೋಡಿ..

ನಟಿ ಲಾರಾ ದತ್ತ ಅವರು ಕೈಕೇಯಿ ಪಾತ್ರ ಮಾಡುತ್ತಾರೆ. ಸನ್ನಿ ಡಿಯೋಲ್​ ಅವರು ಹನುಮಂತನಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಕೂಡ ಕೆಲವು ಕಡೆ ಸುದ್ದಿ ಆಗಿದೆ. ಚಿತ್ರತಂಡದ ಕಡೆಯಿಂದ ಯಾವುದೂ ಅಧಿಕೃತವಾಗಿಲ್ಲ. ‘ದಂಗಲ್​’ ಸಿನಿಮಾದಿಂದ ನಿರ್ದೇಶಕ ನಿತೇಶ್​ ತಿವಾರಿ ಭಾರಿ ಜನಪ್ರಿಯತೆ ಪಡೆದುಕೊಂಡಿದ್ದಾರೆ. ಈಗ ಅವರು ರಾಮಾಯಣ ಸಿನಿಮಾವನ್ನು ಯಾವ ರೀತಿ ಕಟ್ಟಿಕೊಡುತ್ತಾರೆ ಎಂಬುದನ್ನು ಕಾದುನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:14 am, Wed, 17 January 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್