ರಾಮಾಯಣ ಕಥೆ ಆಧಾರಿತ ಸಿನಿಮಾದಲ್ಲಿ ಬಾಬಿ ಡಿಯೋಲ್​ಗೆ ಕುಂಭಕರ್ಣನ ಪಾತ್ರ?

ರಾಮಾಯಣದ ಪ್ರತಿ ಪಾತ್ರಕ್ಕೂ ತೂಕವಿದೆ. ರಣಬೀರ್​ ಕಪೂರ್​ ಅವರು ರಾಮನ ಪಾತ್ರ ಮಾಡುತ್ತಾರೆ ಹಾಗೂ ಸೀತೆಯಾಗಿ ಸಾಯಿ ಪಲ್ಲವಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ನಡುವೆ ಕೆಲವು ಮಾಧ್ಯಮಗಳು ಕುಂಭಕರ್ಣನ ಪಾತ್ರದ ಬಗ್ಗೆ ಸುದ್ದಿ ಮಾಡಿವೆ. ಈ ಪಾತ್ರವನ್ನು ಬಾಬಿ ಡಿಯೋಲ್​ಗೆ ನೀಡಲಾಗುವುದು ಎಂದು ವರದಿ ಆಗಿದೆ.

ರಾಮಾಯಣ ಕಥೆ ಆಧಾರಿತ ಸಿನಿಮಾದಲ್ಲಿ ಬಾಬಿ ಡಿಯೋಲ್​ಗೆ ಕುಂಭಕರ್ಣನ ಪಾತ್ರ?
ಬಾಬಿ ಡಿಯೋಲ್​
Follow us
| Updated By: Digi Tech Desk

Updated on:Feb 14, 2024 | 3:00 PM

ನಟ ಬಾಬಿ ಡಿಯೋಲ್​ (Bobby Deol) ಅವರು ‘ಅನಿಮಲ್​’ ಸಿನಿಮಾ ಮೂಲಕ ಗೆಲುವಿನ ಟ್ರ್ಯಾಕ್​ಗೆ ಮರಳಿದ್ದಾರೆ. ಅವರು ಮಾಡಿದ ಅಬ್ರಾರ್​ ಹಖ್​ ಎಂಬ ಪಾತ್ರ ತುಂಬ ಫೇಮಸ್​ ಆಗಿದೆ. ಅವರ ಎಂಟ್ರಿ ಸೀನ್​ ನೋಡಿ ಫ್ಯಾನ್ಸ್​ ಖುಷಿ ಆಗಿದ್ದಾರೆ. ಈ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಬಾಬಿ ಡಿಯೋಲ್​ ಅವರ ಬೇಡಿಕೆ ಹೆಚ್ಚಾಗಿದೆ. ದೊಡ್ಡ ದೊಡ್ಡ ಸಿನಿಮಾಗಳಿಂದ ಅವರಿಗೆ ಆಫರ್​ ಬರುತ್ತಿದೆ. ರಾಮಾಯಣದ (Ramayan) ಕಥೆಯನ್ನು ಆಧರಿಸಿ ನಿರ್ದೇಶಕ ನಿತೇಶ್​ ತಿವಾರಿ ಮಾಡಲಿರುವ ಸಿನಿಮಾದಲ್ಲಿ ಬಾಬಿ ಡಿಯೋಲ್​ ಅವರು ಕುಂಭಕರ್ಣನ (Kumbhakarna) ಪಾತ್ರ ಮಾಡಲಿದ್ದಾರೆ ಎಂಬ ಗಾಸಿಪ್​ ಹಬ್ಬಿದೆ.

ರಾಮಾಯಣದಲ್ಲಿ ಪ್ರತಿ ಪಾತ್ರಕ್ಕೂ ತೂಕವಿದೆ. ರಣಬೀರ್​ ಕಪೂರ್​ ಅವರು ರಾಮನ ಪಾತ್ರ ಮಾಡುತ್ತಾರೆ ಹಾಗೂ ಸೀತೆಯಾಗಿ ಸಾಯಿ ಪಲ್ಲವಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾವಣನ ಪಾತ್ರ ಮಾಡಲು ‘ರಾಕಿಂಗ್​ ಸ್ಟಾರ್​’ ಯಶ್​ಗೆ ಆಫರ್​ ನೀಡಲಾಗಿದೆ ಎಂಬ ಮಾತು ಕೂಡ ಕೇಳಿಬರುತ್ತಿದೆ. ಈ ನಡುವೆ ಕೆಲವು ಮಾಧ್ಯಮಗಳು ಕುಂಭಕರ್ಣನ ಪಾತ್ರದ ಬಗ್ಗೆ ಸುದ್ದಿ ಮಾಡಿವೆ. ಈ ಪಾತ್ರವನ್ನು ಬಾಬಿ ಡಿಯೋಲ್​ಗೆ ನೀಡಲಾಗುವುದು ಎಂದು ವರದಿ ಆಗಿದೆ.

ಇದನ್ನೂ ಓದಿ:  ‘ಅನಿಮಲ್​’ ಸೂಪರ್​ ಹಿಟ್​ ಆದ ಬಳಿಕ ಹೆಚ್ಚಿದೆ ಬಾಬಿ ಡಿಯೋಲ್​ ಬೇಡಿಕೆ

ಈ ಮಾಹಿತಿ ಬಗ್ಗೆ ಯಾರೂ ಕೂಡ ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಎಲ್ಲವೂ ಅಂತೆ-ಕಂತೆಗಳ ಹಂತದಲ್ಲಿದೆ. ಚಿತ್ರತಂಡದವರು ಬಾಬಿ ಡಿಯೋಲ್​ ಜೊತೆ ಆ ರೀತಿಯ ಯಾವುದೇ ಮಾತುಕತೆ ಕೂಡ ನಡೆಸಿಲ್ಲ ಎಂದು ನಟನ ಆಪ್ತರು ಮತ್ತೊಂದು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವುದಾಗಿಯೂ ಸುದ್ದಿ ಪ್ರಕಟ ಆಗಿದೆ. ಹಾಗಾಗಿ, ಯಾವುದನ್ನು ನಂಬುವುದು? ಯಾವುದನ್ನು ಬಿಡೋದು ಎಂಬ ಗೊಂದಲ ಅಭಿಮಾನಿಗಳಿಗೆ ಉಂಟಾಗಿದೆ.

ಇದನ್ನೂ ಓದಿ: ‘ಅನಿಮಲ್​’ ಚಿತ್ರದಲ್ಲಿ ಕ್ರೂರಿಯಾದ ಬಾಬಿ ಡಿಯೋಲ್​ ನಿಜ ಜೀವನದಲ್ಲಿ ಎಷ್ಟು ಸ್ವೀಟ್​ ನೋಡಿ..

ನಟಿ ಲಾರಾ ದತ್ತ ಅವರು ಕೈಕೇಯಿ ಪಾತ್ರ ಮಾಡುತ್ತಾರೆ. ಸನ್ನಿ ಡಿಯೋಲ್​ ಅವರು ಹನುಮಂತನಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಕೂಡ ಕೆಲವು ಕಡೆ ಸುದ್ದಿ ಆಗಿದೆ. ಚಿತ್ರತಂಡದ ಕಡೆಯಿಂದ ಯಾವುದೂ ಅಧಿಕೃತವಾಗಿಲ್ಲ. ‘ದಂಗಲ್​’ ಸಿನಿಮಾದಿಂದ ನಿರ್ದೇಶಕ ನಿತೇಶ್​ ತಿವಾರಿ ಭಾರಿ ಜನಪ್ರಿಯತೆ ಪಡೆದುಕೊಂಡಿದ್ದಾರೆ. ಈಗ ಅವರು ರಾಮಾಯಣ ಸಿನಿಮಾವನ್ನು ಯಾವ ರೀತಿ ಕಟ್ಟಿಕೊಡುತ್ತಾರೆ ಎಂಬುದನ್ನು ಕಾದುನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:14 am, Wed, 17 January 24

ತಾಜಾ ಸುದ್ದಿ
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ